AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಗುಜರಾತ್ ಟೈಟನ್ಸ್ ಏನನ್ನೂ ಸಾಬೀತುಪಡಿಸಲು ಬಂದಿಲ್ಲ: ಪಾಂಡ್ಯ ಖಡಕ್ ಮಾತು

IPL 2022 Gujarat Titans: ಈ ಸೀಸನ್​ನಲ್ಲಿ ಗುಜರಾತ್ ಟೈಟನ್ಸ್ ಮತ್ತು ಹಾರ್ದಿಕ್ ನಾಯಕನಾಗಿ ಸಾಬೀತುಪಡಿಸಲು ವಿಶೇಷವಾದ ಏನನ್ನೂ ಹೊಂದಿಲ್ಲದಿರಬಹುದು, ಆದರೆ ವೈಯಕ್ತಿಕವಾಗಿ ಭಾರತೀಯ ಆಲ್‌ರೌಂಡರ್​ಗೆ ಅಗ್ನಿಪರೀಕ್ಷೆಯಾಗಿರಲಿದೆ ಈ ಟೂರ್ನಿ.

IPL 2022: ಗುಜರಾತ್ ಟೈಟನ್ಸ್ ಏನನ್ನೂ ಸಾಬೀತುಪಡಿಸಲು ಬಂದಿಲ್ಲ: ಪಾಂಡ್ಯ ಖಡಕ್ ಮಾತು
Hardik Pandya
TV9 Web
| Edited By: |

Updated on: Mar 19, 2022 | 3:33 PM

Share

ಇಂಡಿಯನ್ ಪ್ರೀಮಿಯರ್ ಲೀಗ್ 2022 ಸೀಸನ್‌ನಲ್ಲಿ (IPL 2022) ಹಲವು ಹೊಸತನಗಳಿಗೆ ಸಾಕ್ಷಿಯಾಗಲಿದೆ. ಹೊಸ ತಂಡಗಳು, ಹೊಸ ಸ್ವರೂಪ, ಹೊಸ ನಾಯಕರು ಮತ್ತು ಹೊಸ ಮುಖಗಳು ಹೀಗೆ ಈ ಬಾರಿ ಐಪಿಎಲ್​ನಲ್ಲಿ ಹೊಸ ರಂಗ ಕಾಣಿಸಿಕೊಳ್ಳಲಿದೆ. ಇದಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಹೊಸ ಸೀಸನ್​ ಆರಂಭಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಮತ್ತೊಂದೆಡೆ ಹೊಸ ತಂಡದೊಂದಿಗೆ ನೂತನ ನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ. ಪಾಂಡ್ಯ ಕಳೆದ 7 ವರ್ಷಗಳಿಂದ ಐಪಿಎಲ್‌ನ ಭಾಗವಾಗಿದ್ದರು. ಆದರೆ ಇದೇ ಮೊದಲ ಬಾರಿ ಕ್ಯಾಪ್ಟನ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದೇ ಕಾರಣದಿಂದಾಗಿ ಈ ಬಾರಿ ಗುಜರಾತ್ ಟೈಟನ್ಸ್​ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಹಾರ್ದಿಕ್ ಪಾಂಡ್ಯ ಹೇಗೆ ತಂಡವನ್ನು ಮುನ್ನಡೆಸಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿದೆ. ಆದರೆ ಈ ಬಗ್ಗೆ ಹಾರ್ದಿಕ್ ಪಾಂಡ್ಯ ಮಾತ್ರ ತಲೆ ಕೆಡಿಸಿಕೊಂಡಿಲ್ಲ, ಯಾರಿಗೂ ಏನನ್ನೂ ಸಾಬೀತುಪಡಿಸಲು ತಮ್ಮ ತಂಡ ಇಲ್ಲಿಗೆ ಬಂದಿಲ್ಲ ಎಂದು ನೇರವಾಗಿಯೇ ಪಾಂಡ್ಯ ಹೇಳಿದ್ದಾರೆ.

ಕಳೆದ ವರ್ಷ ಬಿಸಿಸಿಐ ಆಯೋಜಿಸಿದ್ದ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸಿವಿಸಿ ಕ್ಯಾಪಿಟಲ್ಸ್ ಖರೀದಿಸಿತ್ತು. ಇದೀಗ ಗುಜರಾತ್ ತಂಡವು ಚೊಚ್ಚಲ ಐಪಿಎಲ್ ಸೀಸನ್​ ಆಡಲು ಸಜ್ಜಾಗಿದೆ. ಗುಜರಾತ್ ಟೈಟನ್ಸ್ ಹೊರತುಪಡಿಸಿ, ಲಕ್ನೋ ಸೂಪರ್ ಜೈಂಟ್ಸ್ ಕೂಡ ಹೊಸ ತಂಡವಾಗಿದೆ, ಎಲ್​ಎಸ್​ಜಿ ತಂಡದ ನಾಯಕರಾಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅವರು ಈಗಾಗಲೇ ಎರಡು ವರ್ಷಗಳ ಕಾಲ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದಾರೆ. ಹೀಗಾಗಿ ರಾಹುಲ್ ನಾಯಕತ್ವಕ್ಕಿಂತ ಹಾರ್ದಿಕ್ ಪಾಂಡ್ಯ ಅವರ ಕ್ಯಾಪ್ಟನ್ಸಿ ಹೇಗಿರಲಿದೆ ಎಂಬುದು ಚರ್ಚಾ ವಿಷಯವಾಗಿದೆ.

ಯಾವುದಕ್ಕೂ ತಲೆ ಕೆಡಿಸಿಕೊಳ್ಳಲ್ಲ ಎಂದ ಪಾಂಡ್ಯ: ಹಾರ್ದಿಕ್ ಪಾಂಡ್ಯ ಕ್ಯಾಪ್ಟನ್ಸಿ ಬಗ್ಗೆಯಾಗಲಿ, ಜನರ ನಿರೀಕ್ಷೆಯ ಬಗ್ಗೆಯಾಗಲಿ ತಲೆನೇ ಕೆಡಿಸಿಕೊಂಡಿಲ್ವಂತೆ. ಉತ್ತಮ ಕ್ರಿಕೆಟ್ ಆಡುವುದೇ ನಮ್ಮ ತಂಡದ ಗುರಿಯೇ ಹೊರತು, ಯಾರಿಗೂ ಏನನ್ನೂ ಸಾಬೀತುಪಡಿಸುವುದಕ್ಕೆ ನಾವು ಕ್ರಿಕೆಟ್ ಆಡ್ತಿಲ್ಲ ಎಂದು ಪಾಂಡ್ಯ ತಿಳಿಸಿದ್ದಾರೆ.

“ತಂಡದ ಬಗ್ಗೆ ನನಗೆ ತುಂಬಾ ಸಂತೋಷವಾಗಿದೆ. ಇದು ಹೊಸ ತಂಡವಾಗಿದ್ದು, ನಾವು ಯಾರಿಗೂ ಏನನ್ನೂ ಸಾಬೀತುಪಡಿಸಬೇಕಿಲ್ಲ. ಉತ್ತಮ ಕ್ರಿಕೆಟ್ ಆಡಲು ಇಲ್ಲಿಗೆ ಬಂದಿದ್ದೇವೆ. ತಂಡದ ಹೊಂದಾಣಿಕೆ ಉತ್ತಮವಾಗಿದೆ ಮತ್ತು ಆಟಗಾರರು ತಮ್ಮ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಲು ಉತ್ತಮ ವಾತಾವರಣವಿದೆ ಎಂದು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತೇವೆ. ನಮಗೆ ಯಾವುದೇ ರೀತಿಯ ನಿರೀಕ್ಷೆಗಳಿಲ್ಲ. ನಾವು ಸುಧಾರಿಸುವ ತಂಡವಾಗುತ್ತೇವೆ ಎಂದು ಪಾಂಡ್ಯ ತಿಳಿಸಿದ್ದಾರೆ.

ಪಾಂಡ್ಯಗೆ ಅಗ್ನಿ ಪರೀಕ್ಷೆ: ಈ ಸೀಸನ್​ನಲ್ಲಿ ಗುಜರಾತ್ ಟೈಟನ್ಸ್ ಮತ್ತು ಹಾರ್ದಿಕ್ ನಾಯಕನಾಗಿ ಸಾಬೀತುಪಡಿಸಲು ವಿಶೇಷವಾದ ಏನನ್ನೂ ಹೊಂದಿಲ್ಲದಿರಬಹುದು, ಆದರೆ ವೈಯಕ್ತಿಕವಾಗಿ ಭಾರತೀಯ ಆಲ್‌ರೌಂಡರ್​ಗೆ ಅಗ್ನಿಪರೀಕ್ಷೆಯಾಗಿರಲಿದೆ ಈ ಟೂರ್ನಿ. ಏಕೆಂದರೆ ತಮ್ಮ ಫಿಟ್‌ನೆಸ್‌ನಿಂದಾಗಿ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಹಾರ್ದಿಕ್‌ ಪಾಂಡ್ಯ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಬೇಕಾದ್ರೆ ಐಪಿಎಲ್ 2022 ರಲ್ಲಿ ಮಿಂಚಲೇಬೇಕು. ಅದರಲ್ಲೂ ಬೌಲಿಂಗ್ ವಿಷಯದಲ್ಲಿ ಫಿಟ್ನೆಸ್ ಅವರಿಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಹೀಗಾಗಿ ಈ ಬಾರಿಯ ಐಪಿಎಲ್​ ಹಾರ್ದಿಕ್ ಪಾಂಡ್ಯ ಅವರ ಟೀಮ್ ಇಂಡಿಯಾ ಕಂಬ್ಯಾಕ್ ಅನ್ನು ನಿರ್ಧರಿಸಲಿದೆ.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ರಹಮಾನುಲ್ಲಾ ಗುರ್ಬಾಜ್, ವೃದ್ಧಿಮಾನ್ ಸಹಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಾಹುಲ್ ತೆವಾಟಿಯಾ, ಡೊಮಿನಿಕ್ ಡ್ರೇಕ್ಸ್, ರಶೀದ್ ಖಾನ್, ಮೊಹಮ್ಮದ್ ಶಮಿ, ಲಾಕಿ ಫರ್ಗುಸನ್, ಯಶ್ ದಯಾಳ್, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ಅಲ್ಜಾರಿ ಜೋಸೆಫ್, ಪ್ರದೀಪ್ ಸಾಂಗ್ವಾನ್, ಡೇವಿಡ್ ಮಿಲ್ಲರ್, ಮ್ಯಾಥ್ಯೂ ವೇಡ್, ಗುರುಕೀರತ್ ಸಿಂಗ್, ಬಿ ಸಾಯಿ ಸುದರ್ಶನ್.

ಇದನ್ನೂ ಓದಿ: PSL vs IPL Prize Money: ಪಾಕಿಸ್ತಾನ್ ಸೂಪರ್ ಲೀಗ್ ಗೆದ್ರೆ ಸಿಗುವ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!

ಇದನ್ನೂ ಓದಿ: IPL ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಆರೋನ್ ಫಿಂಚ್

(IPL 2022: Gujarat Titans are not here to prove anything to anyone, says captain Hardik Pandya)

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ