AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಎಲ್ಲರಂಥಲ್ಲ ನಾನು, ನಾಯಕನಾಗಿ ಹಾರ್ದಿಕ್ ಪಾಂಡ್ಯ ಮಹತ್ವದ ನಿರ್ಧಾರ..!

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

IPL 2022: ಎಲ್ಲರಂಥಲ್ಲ ನಾನು, ನಾಯಕನಾಗಿ ಹಾರ್ದಿಕ್ ಪಾಂಡ್ಯ ಮಹತ್ವದ ನಿರ್ಧಾರ..!
Hardik Pandya
TV9 Web
| Edited By: |

Updated on: Apr 23, 2022 | 4:33 PM

Share

IPL 2022: ಐಪಿಎಲ್ ಸೀಸನ್ 15 ನಲ್ಲಿ 34 ಪಂದ್ಯಗಳು ಮುಗಿದಿವೆ. ಇದೀಗ 35ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (GT vs KKR) ತಂಡಗಳು ಮುಖಾಮುಖಿಯಾಗಿದೆ. ವಿಶೇಷ ಎಂದರೆ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇದರೊಂದಿಗೆ ಈ ಬಾರಿಯ ಐಪಿಎಲ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ. ಅಂದರೆ ಕಳೆದ 34 ಪಂದ್ಯಗಳಲ್ಲಿ ಯಾವುದೇ ನಾಯಕ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿರಲಿಲ್ಲ. ಎಲ್ಲಾ ಪಂದ್ಯಗಳಲ್ಲೂ ಟಾಸ್ ಗೆದ್ದ ಕ್ಯಾಪ್ಟನ್​ಗಳು ಮೊದಲು ಬೌಲಿಂಗ್ ಮಾಡಿದ್ದರು.

ಇದೀಗ ಐಪಿಎಲ್​ನ 35ನೇ ಪಂದ್ಯದಲ್ಲಿ ನಾಯಕನೊಬ್ಬ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ಈ ಮೂಲಕ ಹಾರ್ದಿಕ್ ಪಾಂಡ್ಯ ಈ ಬಾರಿಯ ಐಪಿಎಲ್​ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಮೊದಲ ನಾಯಕ ಎನಿಸಿಕೊಂಡಿದ್ದಾರೆ. ಜೊತೆಗೆ ಈ ಬಾರಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ತಂಡ ಎಂಬ ಹೆಗ್ಗಳಿಕೆಗೂ ಗುಜರಾತ್ ಟೈಟನ್ಸ್ ಪಾಲಾಗಿದೆ.

ಇನ್ನು ಈ ಪಂದ್ಯವು ಮಧ್ಯಾಹ್ನ 3.30 ಕ್ಕೆ ಶುರುವಾಗಿರುವ ಕಾರಣ ಪಾಂಡ್ಯ ಮೊದಲು ಬ್ಯಾಟಿಂಗ್​ ಆಯ್ದುಕೊಂಡಿದ್ದಾರೆ. ಏಕೆಂದರೆ ಪಿಚ್ ಮೇಲ್ಮೈ ಫುಲ್ ಡ್ರೈ ಆಗಿದ್ದು, ಇದರಿಂದ ಬ್ಯಾಟಿಂಗ್​ಗೆ ಹೆಚ್ಚಿನ ಅನುಕೂಲವಾಗುವ ನಿರೀಕ್ಷೆಯಲ್ಲಿದ್ದಾರೆ ಪಾಂಡ್ಯ. ಅಲ್ಲದೆ ಉರಿಬಿಸಿಲಿನಲ್ಲಿ ಬೌಲಿಂಗ್ ಮಾಡುವುದರಿಂದ ಆಟಗಾರರು ಆಯಾಸಗೊಳ್ಳುತ್ತಾರೆ. ಹೀಗಾಗಿ ಗುಜರಾತ್ ಟೈಟನ್ಸ್ ಹೊಸ ಪ್ಲ್ಯಾನ್​ನೊಂದಿಗೆ ಕಣಕ್ಕಿಳಿದಿದೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್:

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ರಿಂಕು ಸಿಂಗ್, ಆಂಡ್ರೆ ರಸೆಲ್, ಟಿಮ್ ಸೌಥಿ, ಶಿವಂ ಮಾವಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಶುಭಮನ್ ಗಿಲ್, ಹಾರ್ದಿಕ್ ಪಾಂಡ್ಯ(ನಾಯಕ), ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಅಲ್ಜಾರಿ ಜೋಸೆಫ್, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಶಮಿ

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು