AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂಬೈ ಇಂಡಿಯನ್ಸ್ ಪಾಲಿಗೆ ವರವಾದ ಸ್ಟೇಡಿಯಂನಲ್ಲಿನ ಪವರ್ ಕಟ್..!

IPL 2022: ಮೊಯೀನ್ ಅಲಿ ಕೂಡ ಕ್ಯಾಚ್ ನೀಡಿ ಶೂನ್ಯಕ್ಕೆ ಔಟಾದರು. ಆ ಬಳಿಕ ಬಂದ ರಾಬಿನ್ ಉತ್ತಪ್ಪ ಜಸ್​ಪ್ರೀತ್ ಬುಮ್ರಾ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು.

IPL 2022: ಮುಂಬೈ ಇಂಡಿಯನ್ಸ್ ಪಾಲಿಗೆ ವರವಾದ ಸ್ಟೇಡಿಯಂನಲ್ಲಿನ ಪವರ್ ಕಟ್..!
CSK vs MI
TV9 Web
| Edited By: |

Updated on:May 12, 2022 | 8:32 PM

Share

IPL 2022: ವಿಶ್ವದ ಶ್ರೀಮಂತ ಕ್ರಿಕೆಟ್​ ಟೂರ್ನಿ ಐಪಿಎಲ್​ನಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದೆ. ಐಪಿಎಲ್​ನ 59ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಸಿಎಸ್​ಕೆ ಮೊದಲ ಓವರ್​ನ 2ನೇ ಎಸೆತದಲ್ಲೇ ವಿಕೆಟ್ ಕಳೆದುಕೊಂಡಿತು. ಡೇನಿಯಲ್ ಸ್ಯಾಮ್ಸ್ ಎಸೆದ ಎಸೆತವನ್ನು ಗುರುತಿಸುವಲ್ಲಿ ಎಡವಿದ ಡೆವೊನ್ ಕಾನ್ವೆ ಎಲ್​ಬಿಡಬ್ಲ್ಯೂ ಆಗಿದ್ದರು. ಇತ್ತ ಫೀಲ್ಡ್ ಅಂಪೈರ್ ಔಟ್ ನೀಡಿದ್ದರು. ಆದರೆ ಮೂರನೇ ಅಂಪೈರ್​ಗೆ ಮನವಿ ಸಲ್ಲಿಸಲು DRS ಅವಕಾಶ ಇರಲಿಲ್ಲ. ಹೀಗಾಗಿ ಡೆವೊನ್ ಕಾನ್ವೆ ಶೂನ್ಯದೊಂದಿಗೆ ಪೆವಿಲಿಯನ್ ಕಡೆ ಹಿಂತಿರುಗಿದರು.

ಇದರ ಬೆನ್ನಲ್ಲೇ ಮೊಯೀನ್ ಅಲಿ ಕೂಡ ಕ್ಯಾಚ್ ನೀಡಿ ಶೂನ್ಯಕ್ಕೆ ಔಟಾದರು. ಆ ಬಳಿಕ ಬಂದ ರಾಬಿನ್ ಉತ್ತಪ್ಪ ಜಸ್​ಪ್ರೀತ್ ಬುಮ್ರಾ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇತ್ತ ಅಂಪೈರ್ ಔಟ್ ನೀಡಿದ ಪರಿಣಾಮ ಪೆವಿಲಿಯನ್ ಕಡೆ ಮುಖ ಮಾಡಿದರು. ದುರಾದೃಷ್ಟ, ಈ ವೇಳೆ ಕೂಡ ಮೂರನೇ ಅಂಪೈರ್​ಗೆ ಮನವಿ ಸಲ್ಲಿಸಲು DRS ಅವಕಾಶ ಇರಲಿಲ್ಲ.

ವಾಂಖೆಡೆ ಸ್ಟೇಡಿಯಂನಲ್ಲಿ ವಿದ್ಯುತ್ ಕಡಿತದ ಕಾರಣ DRS ತಂತ್ರಜ್ಞಾನ ಬಳಸಲು ಸಾಧ್ಯವಿರಲಿಲ್ಲ. ಹೀಗಾಗಿ ಡೆವೊನ್ ಕಾನ್ವೆ ಹಾಗೂ ರಾಬಿನ್ ಉತ್ತಪ್ಪ ಫೀಲ್ಡ್ ಅಂಪೈರ್ ನೀಡಿದ ತೀರ್ಪಿನಿಂದಾಗಿ ಪೆವಿಲಿಯನ್ ಕಡೆ ಮುಖ ಮಾಡಬೇಕಾಯಿತು. ಇತ್ತ ​ಎರಡು ಎಲ್​ಬಿಡಬ್ಲ್ಯೂ ವಿಕೆಟ್ ಪಡೆಯುವ ಮೂಲಕ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲೇ ಡಿಆರ್​ಎಸ್​ ಅಲಭ್ಯತೆಯ ಸಂಪೂರ್ಣ ಲಾಭ ಪಡೆದರು. ಅಲ್ಲದೆ ಪವರ್​ಪ್ಲೇನಲ್ಲಿ ಕೇವಲ 29 ರನ್​ ನೀಡಿ 5 ವಿಕೆಟ್ ಉರುಳಿಸುವ ಮೂಲಕ ಮುಂಬೈ ಇಂಡಿಯನ್ಸ್ ಆರಂಭಿಕ ಮೇಲುಗೈ ಸಾಧಿಸಿದೆ.

ಇದನ್ನೂ ಓದಿ
Image
MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು , ಮೊಯಿನ್ ಅಲಿ , ಶಿವಂ ದುಬೆ, ಎಂಎಸ್ ಧೋನಿ (ನಾಯಕ), ಡ್ವೇನ್ ಬ್ರಾವೋ , ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ

ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ತಿಲಕ್ ವರ್ಮಾ, ಟ್ರಿಸ್ಟಾನ್ ಸ್ಟಬ್ಸ್, ರಮಣದೀಪ್ ಸಿಂಗ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜಸ್ಪ್ರೀತ್ ಬುಮ್ರಾ , ರಿಲೆ ಮೆರೆಡಿತ್

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:24 pm, Thu, 12 May 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?