AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ

IPL 2022: ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು.

IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ
rasikh salam
TV9 Web
| Edited By: |

Updated on: Apr 07, 2022 | 3:43 PM

Share

ಐಪಿಎಲ್​ ಸೀಸನ್ 15 ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಉತ್ತಮ ಪ್ರದರ್ಶನ ಮುಂದುವರೆಸಿದೆ. ಇದುವರೆಗೆ 3 ಪಂದ್ಯಗಳಲ್ಲಿ 2ರಲ್ಲಿ ಗೆಲುವು ದಾಖಲಿಸಿ ಗಮನ ಸೆಳೆದಿದ್ದಾರೆ. ಅದರಲ್ಲೂ ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಇದಲ್ಲದೆ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ರಾಸಿಖ್ ಸಲಾಮ್ ದಾರ್ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ರಾಸಿಖ್ ಈ ಬಾರಿ ಕೆಕೆಆರ್ ತಂಡದಲ್ಲಿದ್ದಾರೆ. ವಿಶೇಷ ಎಂದರೆ 22 ವರ್ಷ ರಾಸಿಖ್ ಬರೋಬ್ಬರಿ 3 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಜಮ್ಮು-ಕಾಶ್ಮೀರದ ಯುವ ವೇಗಿ ಈ ಹಿಂದೆ ಬ್ಯಾನ್ ಆಗಿದ್ದರು.

2019 ರಲ್ಲಿ ಜನನ ಪ್ರಮಾಣಪತ್ರದಲ್ಲಿ ಮೋಸ ಮಾಡಿದ ಪ್ರಕರಣದಲ್ಲಿ ಬಿಸಿಸಿಐ ರಾಸಿಖ್ ಸಲಾಮ್ ದಾರ್ ಅವರನ್ನು 2 ವರ್ಷಗಳ ಕಾಲ ನಿಷೇಧಿಸಿತ್ತು. ಅಲ್ಲದೆ ಅಂಡರ್-19 ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದ ಯುವ ವೇಗಿಯನ್ನು ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಬಿಸಿಸಿಐ ನಿಷೇಧದ ಕಾರಣ ರಾಸಿಖ್ ಆ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

3 ವರ್ಷಗಳ ನಂತರ ಇದೀಗ ರಾಸಿಖ್ ದಾರ್ ಮುಂಬೈ ಇಂಡಿಯನ್ಸ್​ ವಿರುದ್ದ ಪಂದ್ಯ ಆಡಿದ್ದಾರೆ. ಈ ಹಿಂದೆ 2019 ರಲ್ಲಿ ರಾಸಿಖ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಖರೀದಿಸಿತ್ತು. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪದಾರ್ಪಣೆ ಮಾಡಿದ್ದ ಯುವ ವೇಗಿ 4 ಓವರ್‌ಗಳಲ್ಲಿ 42 ರನ್‌ಗಳನ್ನು ನೀಡಿದ್ದರು. ಈ ಬಾರಿ ಕೆಕೆಆರ್ ತಂಡವು 20 ಲಕ್ಷ ರೂ. ಮೂಲಬೆಲೆಗೆ ರಾಸಿಖ್​ರನ್ನು ಖರೀದಿಸಿದೆ.

ಪ್ರಥಮ ದರ್ಜೆಯ 2 ಪಂದ್ಯಗಳಲ್ಲಿ 7 ವಿಕೆಟ್ ಹಾಗೂ ಲಿಸ್ಟ್-ಎ 2 ಪಂದ್ಯಗಳಲ್ಲಿ 3 ವಿಕೆಟ್ ಪಡೆದಿರುವ ರಾಸಿಖ್ ಈ ಹಿಂದೆ ಉದಯೋನ್ಮುಖ ಯುವ ವೇಗಿಯಾಗಿ ಗುರುತಿಸಿಕೊಂಡಿದ್ದರು. ಇದರ ನಡುವೆ 2 ವರ್ಷಗಳ ಬ್ಯಾನ್ ಕಾರಣ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದರು. ಇದೀಗ ಹೊಸ ಇನಿಂಗ್ಸ್ ಆರಂಭಿಸಿರುವ ರಾಸಿಖ್ ಮುಂಬೈ ಇಂಡಿಯನ್ಸ್ ವಿರುದ್ದ 3 ಓವರ್​ ಬೌಲಿಂಗ್ ಮಾಡಿ ಕೇವಲ 18 ರನ್​ ನೀಡಿ ಮಿಂಚಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?