AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ

IPL 2022: ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು.

IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ
rasikh salam
TV9 Web
| Edited By: |

Updated on: Apr 07, 2022 | 3:43 PM

Share

ಐಪಿಎಲ್​ ಸೀಸನ್ 15 ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಉತ್ತಮ ಪ್ರದರ್ಶನ ಮುಂದುವರೆಸಿದೆ. ಇದುವರೆಗೆ 3 ಪಂದ್ಯಗಳಲ್ಲಿ 2ರಲ್ಲಿ ಗೆಲುವು ದಾಖಲಿಸಿ ಗಮನ ಸೆಳೆದಿದ್ದಾರೆ. ಅದರಲ್ಲೂ ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಇದಲ್ಲದೆ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ರಾಸಿಖ್ ಸಲಾಮ್ ದಾರ್ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ರಾಸಿಖ್ ಈ ಬಾರಿ ಕೆಕೆಆರ್ ತಂಡದಲ್ಲಿದ್ದಾರೆ. ವಿಶೇಷ ಎಂದರೆ 22 ವರ್ಷ ರಾಸಿಖ್ ಬರೋಬ್ಬರಿ 3 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಜಮ್ಮು-ಕಾಶ್ಮೀರದ ಯುವ ವೇಗಿ ಈ ಹಿಂದೆ ಬ್ಯಾನ್ ಆಗಿದ್ದರು.

2019 ರಲ್ಲಿ ಜನನ ಪ್ರಮಾಣಪತ್ರದಲ್ಲಿ ಮೋಸ ಮಾಡಿದ ಪ್ರಕರಣದಲ್ಲಿ ಬಿಸಿಸಿಐ ರಾಸಿಖ್ ಸಲಾಮ್ ದಾರ್ ಅವರನ್ನು 2 ವರ್ಷಗಳ ಕಾಲ ನಿಷೇಧಿಸಿತ್ತು. ಅಲ್ಲದೆ ಅಂಡರ್-19 ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದ ಯುವ ವೇಗಿಯನ್ನು ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಬಿಸಿಸಿಐ ನಿಷೇಧದ ಕಾರಣ ರಾಸಿಖ್ ಆ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

3 ವರ್ಷಗಳ ನಂತರ ಇದೀಗ ರಾಸಿಖ್ ದಾರ್ ಮುಂಬೈ ಇಂಡಿಯನ್ಸ್​ ವಿರುದ್ದ ಪಂದ್ಯ ಆಡಿದ್ದಾರೆ. ಈ ಹಿಂದೆ 2019 ರಲ್ಲಿ ರಾಸಿಖ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಖರೀದಿಸಿತ್ತು. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪದಾರ್ಪಣೆ ಮಾಡಿದ್ದ ಯುವ ವೇಗಿ 4 ಓವರ್‌ಗಳಲ್ಲಿ 42 ರನ್‌ಗಳನ್ನು ನೀಡಿದ್ದರು. ಈ ಬಾರಿ ಕೆಕೆಆರ್ ತಂಡವು 20 ಲಕ್ಷ ರೂ. ಮೂಲಬೆಲೆಗೆ ರಾಸಿಖ್​ರನ್ನು ಖರೀದಿಸಿದೆ.

ಪ್ರಥಮ ದರ್ಜೆಯ 2 ಪಂದ್ಯಗಳಲ್ಲಿ 7 ವಿಕೆಟ್ ಹಾಗೂ ಲಿಸ್ಟ್-ಎ 2 ಪಂದ್ಯಗಳಲ್ಲಿ 3 ವಿಕೆಟ್ ಪಡೆದಿರುವ ರಾಸಿಖ್ ಈ ಹಿಂದೆ ಉದಯೋನ್ಮುಖ ಯುವ ವೇಗಿಯಾಗಿ ಗುರುತಿಸಿಕೊಂಡಿದ್ದರು. ಇದರ ನಡುವೆ 2 ವರ್ಷಗಳ ಬ್ಯಾನ್ ಕಾರಣ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದರು. ಇದೀಗ ಹೊಸ ಇನಿಂಗ್ಸ್ ಆರಂಭಿಸಿರುವ ರಾಸಿಖ್ ಮುಂಬೈ ಇಂಡಿಯನ್ಸ್ ವಿರುದ್ದ 3 ಓವರ್​ ಬೌಲಿಂಗ್ ಮಾಡಿ ಕೇವಲ 18 ರನ್​ ನೀಡಿ ಮಿಂಚಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ