AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ

IPL 2022: ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು.

IPL 2022: 2 ವರ್ಷಗಳ ಬ್ಯಾನ್ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡ ಯುವ ವೇಗಿ
rasikh salam
TV9 Web
| Edited By: |

Updated on: Apr 07, 2022 | 3:43 PM

Share

ಐಪಿಎಲ್​ ಸೀಸನ್ 15 ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಉತ್ತಮ ಪ್ರದರ್ಶನ ಮುಂದುವರೆಸಿದೆ. ಇದುವರೆಗೆ 3 ಪಂದ್ಯಗಳಲ್ಲಿ 2ರಲ್ಲಿ ಗೆಲುವು ದಾಖಲಿಸಿ ಗಮನ ಸೆಳೆದಿದ್ದಾರೆ. ಅದರಲ್ಲೂ ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಜಯ ಸಾಧಿಸಿತ್ತು. ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಪ್ಯಾಟ್ ಕಮಿನ್ಸ್ ಗೆಲುವಿನ ರೂವಾರಿ ಎನಿಸಿಕೊಂಡಿದ್ದರು. ಇದಲ್ಲದೆ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ರಾಸಿಖ್ ಸಲಾಮ್ ದಾರ್ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈ ಹಿಂದೆ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಂಡಿದ್ದ ರಾಸಿಖ್ ಈ ಬಾರಿ ಕೆಕೆಆರ್ ತಂಡದಲ್ಲಿದ್ದಾರೆ. ವಿಶೇಷ ಎಂದರೆ 22 ವರ್ಷ ರಾಸಿಖ್ ಬರೋಬ್ಬರಿ 3 ವರ್ಷಗಳ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಜಮ್ಮು-ಕಾಶ್ಮೀರದ ಯುವ ವೇಗಿ ಈ ಹಿಂದೆ ಬ್ಯಾನ್ ಆಗಿದ್ದರು.

2019 ರಲ್ಲಿ ಜನನ ಪ್ರಮಾಣಪತ್ರದಲ್ಲಿ ಮೋಸ ಮಾಡಿದ ಪ್ರಕರಣದಲ್ಲಿ ಬಿಸಿಸಿಐ ರಾಸಿಖ್ ಸಲಾಮ್ ದಾರ್ ಅವರನ್ನು 2 ವರ್ಷಗಳ ಕಾಲ ನಿಷೇಧಿಸಿತ್ತು. ಅಲ್ಲದೆ ಅಂಡರ್-19 ಭಾರತೀಯ ತಂಡದಲ್ಲಿ ಸ್ಥಾನ ಪಡೆದಿದ್ದ ಯುವ ವೇಗಿಯನ್ನು ಆ ಬಳಿಕ ತಂಡದಿಂದ ಕೈಬಿಡಲಾಗಿತ್ತು. ಬಿಸಿಸಿಐ ನಿಷೇಧದ ಕಾರಣ ರಾಸಿಖ್ ಆ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ.

3 ವರ್ಷಗಳ ನಂತರ ಇದೀಗ ರಾಸಿಖ್ ದಾರ್ ಮುಂಬೈ ಇಂಡಿಯನ್ಸ್​ ವಿರುದ್ದ ಪಂದ್ಯ ಆಡಿದ್ದಾರೆ. ಈ ಹಿಂದೆ 2019 ರಲ್ಲಿ ರಾಸಿಖ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ಖರೀದಿಸಿತ್ತು. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪದಾರ್ಪಣೆ ಮಾಡಿದ್ದ ಯುವ ವೇಗಿ 4 ಓವರ್‌ಗಳಲ್ಲಿ 42 ರನ್‌ಗಳನ್ನು ನೀಡಿದ್ದರು. ಈ ಬಾರಿ ಕೆಕೆಆರ್ ತಂಡವು 20 ಲಕ್ಷ ರೂ. ಮೂಲಬೆಲೆಗೆ ರಾಸಿಖ್​ರನ್ನು ಖರೀದಿಸಿದೆ.

ಪ್ರಥಮ ದರ್ಜೆಯ 2 ಪಂದ್ಯಗಳಲ್ಲಿ 7 ವಿಕೆಟ್ ಹಾಗೂ ಲಿಸ್ಟ್-ಎ 2 ಪಂದ್ಯಗಳಲ್ಲಿ 3 ವಿಕೆಟ್ ಪಡೆದಿರುವ ರಾಸಿಖ್ ಈ ಹಿಂದೆ ಉದಯೋನ್ಮುಖ ಯುವ ವೇಗಿಯಾಗಿ ಗುರುತಿಸಿಕೊಂಡಿದ್ದರು. ಇದರ ನಡುವೆ 2 ವರ್ಷಗಳ ಬ್ಯಾನ್ ಕಾರಣ ಕ್ರಿಕೆಟ್ ಮೈದಾನದಿಂದ ದೂರ ಉಳಿದಿದ್ದರು. ಇದೀಗ ಹೊಸ ಇನಿಂಗ್ಸ್ ಆರಂಭಿಸಿರುವ ರಾಸಿಖ್ ಮುಂಬೈ ಇಂಡಿಯನ್ಸ್ ವಿರುದ್ದ 3 ಓವರ್​ ಬೌಲಿಂಗ್ ಮಾಡಿ ಕೇವಲ 18 ರನ್​ ನೀಡಿ ಮಿಂಚಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ