AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯಾರಾಗಲಿದ್ದಾರೆ RCB ನಾಯಕ?: ಲೀಸ್ಟ್​ನಲ್ಲಿ ಇಶಾನ್ ಕಿಶನ್ ಹೆಸರು..!

IPL 2022 Rcb Captain: ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಆಟಗಾರ ಮಾಜಿ ಎಸ್​ಆರ್​ಹೆಚ್​ ನಾಯಕ ಡೇವಿಡ್ ವಾರ್ನರ್ ಹೆಸರು ಕೂಡ ಇದ್ದು, ಹೀಗಾಗಿ ವಾರ್ನರ್ ಅವರ ಖರೀದಿಗೂ ಆರ್​ಸಿಬಿ ಹೆಚ್ಚಿನ ಆಸಕ್ತಿ ತೋರಲಿದೆ.

IPL 2022: ಯಾರಾಗಲಿದ್ದಾರೆ RCB ನಾಯಕ?: ಲೀಸ್ಟ್​ನಲ್ಲಿ ಇಶಾನ್ ಕಿಶನ್ ಹೆಸರು..!
ishan kishan
Follow us
TV9 Web
| Updated By: ಝಾಹಿರ್ ಯೂಸುಫ್

Updated on: Feb 07, 2022 | 3:40 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜಿಗಾಗಿ ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ತಂಡಗಳು ತಮಗೆ ಬೇಕಾದ ಆಟಗಾರರನ್ನು ಉಳಿಸಿಕೊಂಡು ಹರಾಜಿಗಾಗಿ ಪ್ಲ್ಯಾನ್ ರೂಪಿಸುತ್ತಿದೆ. ಅದರಲ್ಲೂ ಕೆಲ ತಂಡಗಳು ನಾಯಕನ ಆಯ್ಕೆಗಾಗಿ ಕಾರ್ಯತಂತ್ರಗಳನ್ನು ಹೆಣೆಯುತ್ತಿದೆ. ಏಕೆಂದರೆ ಐಪಿಎಲ್​ನಲ್ಲಿನ 10 ತಂಡಗಳ ಪೈಕಿ ಮೂರು ತಂಡಗಳು ಇನ್ನೂ ಕೂಡ ನಾಯಕನನ್ನು ಘೋಷಿಸಿಲ್ಲ. ಅದರಂತೆ ಆರ್​ಸಿಬಿ, ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್​ ಹೊಸ ನಾಯಕನ ಆಯ್ಕೆ ಮಾಡಲಿದೆ. ಅದರಲ್ಲೂ ಸ್ಟಾರ್ ಆಟಗಾರರ ದಂಡೇ ಹೊಂದಿರುವ ಆರ್​ಸಿಬಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ.

ಏಕೆಂದರೆ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಅವರಂತಹ ಪ್ರಸಿದ್ಧ ಆಟಗಾರರಿದ್ದು, ಈ ಆಟಗಾರರನ್ನು ಮುನ್ನಡೆಸುವ ಸಾಮರ್ಥ್ಯವನ್ನು ಹೊಂದಿರುವ ಆಟಗಾರನಿಗೆ ನಾಯಕನ ಪಟ್ಟ ನೀಡಬೇಕಾಗುತ್ತದೆ. ಅದರಂತೆ ಇದೀಗ ಆರ್​ಸಿಬಿ ನಾಯಕನ ಪಟ್ಟಿಯೊಂದು ಸಿದ್ದಪಡಿಸಿದ್ದು, ಇದರಲ್ಲಿ ಐವರು ಆಟಗಾರರನ್ನು ಆಯ್ಕೆ ಮಾಡಲಾಗಿದೆ.

ಈ ಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ನಾಯಕ ಶ್ರೇಯಸ್ ಅಯ್ಯರ್ ಹೆಸರು ಮುಂಚೂಣಿಯಲ್ಲಿದೆ. ಅದರಂತೆ ಮೆಗಾ ಹರಾಜಿನಲ್ಲಿ ಅಯ್ಯರ್ ಖರೀದಿಗೆ ಆರ್​ಸಿಬಿ ಒಲವು ತೋರಬಹುದು. ಇನ್ನು ಈ ಪಟ್ಟಿಯಲ್ಲಿರುವ ಮತ್ತೋರ್ವ ಆಟಗಾರನೆಂದರೆ ವೆಸ್ಟ್ ಇಂಡೀಸ್​ನ ಜೇಸನ್ ಹೋಲ್ಡರ್. ವಿಂಡೀಸ್ ತಂಡದ ಆಲ್​ರೌಂಡರ್ ಆಗಿರುವ ಹೋಲ್ಡರ್ ಈ ಹಿಂದೆ ರಾಷ್ಟ್ರೀಯ ತಂಡದ ನಾಯಕರಾಗಿದ್ದರು. ಹೀಗಾಗಿ ಹೋಲ್ಡರ್ ಅವರನ್ನು ಆರ್​ಸಿಬಿ ನಾಯಕರ ಪಟ್ಟಿಯಲ್ಲಿ ಸೇರಿಸಿಕೊಂಡಿದ್ದಾರೆ.

ಹಾಗೆಯೇ ಈ ಪಟ್ಟಿಯಲ್ಲಿ ಮಾಜಿ ಕೆಕೆಆರ್ ತಂಡದ ನಾಯಕ ಇಂಗ್ಲೆಂಡ್ ಆಟಗಾರ ಇಯಾನ್ ಮೋರ್ಗನ್ ಕೂಡ ಇದ್ದಾರೆ. 2019 ರಲ್ಲಿ ಮೋರ್ಗನ್ ನೇತೃತ್ವದಲ್ಲಿ ಇಂಗ್ಲೆಂಡ್​ ಏಕದಿನ ವಿಶ್ವಕಪ್ ಗೆದ್ದುಕೊಂಡಿತ್ತು. ಅಲ್ಲದೆ ಕಳೆದ ಸೀಸನ್​ನಲ್ಲಿ ಕೆಕೆಆರ್​ ಫೈನಲ್ ಪ್ರವೇಶಿಸಿತ್ತು. ಹೀಗಾಗಿ ಮೋರ್ಗನ್ ಕೂಡ ಆರ್​ಸಿಬಿ ಹಿಟ್​ ಲೀಸ್ಟ್​ನಲ್ಲಿದ್ದಾರೆ.

ಇನ್ನು ಪಟ್ಟಿಯಲ್ಲಿರುವ ಅಚ್ಚರಿಯ ಹೆಸರೆಂದರೆ ಇಶಾನ್ ಕಿಶನ್. ಟೀಮ್ ಇಂಡಿಯಾದ ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಇಶಾನ್ ಕಿಶನ್ ಅವರನ್ನು ಆರ್​ಸಿಬಿ ನಾಯಕರ ಪಟ್ಟಿಯಲ್ಲಿ ಸೇರಿಸಿಕೊಂಡಿದೆ. ಕಿಶನ್ ಈ ಹಿಂದೆ 2016 ರಲ್ಲಿ ಅಂಡರ್​ 19 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಹೀಗಾಗಿ ಯುವ ಆಟಗಾರನನ್ನು ಕೂಡ ಆರ್​ಸಿಬಿ ನಾಯಕರುಗಳ ಪಟ್ಟಿಯಲ್ಲಿ ಸೇರಿಸಿಕೊಂಡಿದೆ.

ಅದೇ ರೀತಿ ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಆಟಗಾರ ಮಾಜಿ ಎಸ್​ಆರ್​ಹೆಚ್​ ನಾಯಕ ಡೇವಿಡ್ ವಾರ್ನರ್ ಹೆಸರು ಕೂಡ ಇದ್ದು, ಹೀಗಾಗಿ ವಾರ್ನರ್ ಅವರ ಖರೀದಿಗೂ ಆರ್​ಸಿಬಿ ಹೆಚ್ಚಿನ ಆಸಕ್ತಿ ತೋರಲಿದೆ. ಏಕೆಂದರೆ 2016 ರಲ್ಲಿ ಎಸ್​ಆರ್​ಹೆಚ್​ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಹಿರಿಮೆ ಡೇವಿಡ್ ವಾರ್ನರ್​ಗೆ ಸಲ್ಲುತ್ತದೆ. ಹೀಗಾಗಿ ಆರ್​ಸಿಬಿ ವಾರ್ನರ್ ಅವರನ್ನು ಖರೀದಿಸಿ ನಾಯಕತ್ವ ನೀಡಿದರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: Yuzvendra Chahal: ವಿಕೆಟ್​ಗಳ ಶತಕ ಪೂರೈಸಿದ ಚಹಾಲ್

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Lata Mangeshkar: ಎಲ್ಲರೂ ಕೈಬಿಟ್ಟಾಗ ಟೀಮ್ ಇಂಡಿಯಾ ಕೈ ಹಿಡಿದಿದ್ದ ಲತಾ ಮಂಗೇಶ್ಕರ್..!

(IPL 2022: ishan kishan in the list of 5 players who can become captain of rcb)

ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್