AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuzvendra Chahal: ಚಹಲ್ ಹ್ಯಾಟ್ರಿಕ್ ವಿಕೆಟ್ ತಪ್ಪಿಸಿದ ಕನ್ನಡಿಗ..!

IPL 2022: ಯುಜುವೇಂದ್ರ ಚಹಲ್ ದೀರ್ಘಕಾಲ RCB ತಂಡದ ಭಾಗವಾಗಿದ್ದರು. ಆದರೆ ಈ ಬಾರಿ ರಾಜಸ್ಥಾನ್ ರಾಯಲ್ಸ್ ಅವರನ್ನು ಹರಾಜಿನಲ್ಲಿ ಖರೀದಿಸಿದೆ.

Yuzvendra Chahal: ಚಹಲ್ ಹ್ಯಾಟ್ರಿಕ್ ವಿಕೆಟ್ ತಪ್ಪಿಸಿದ ಕನ್ನಡಿಗ..!
IPL 2022
TV9 Web
| Edited By: |

Updated on: Apr 03, 2022 | 2:31 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2022) ಇದುವರೆಗೆ 20 ಹ್ಯಾಟ್ರಿಕ್ ವಿಕೆಟ್​ಗಳು ಮೂಡಿಬಂದಿವೆ. 2008 ರಲ್ಲಿ ಲಕ್ಷ್ಮೀಪತಿ ಬಾಲಾಜಿ ಹ್ಯಾಟ್ರಿಕ್ ವಿಕೆಟ್ ಪಡೆದರೆ, ಕಳೆದ ಸೀಸನ್​ನಲ್ಲಿ ಹರ್ಷಲ್ ಪಟೇಲ್ ಹ್ಯಾಟ್ರಿಕ್ ವಿಕೆಟ್ ಉರುಳಿಸಿ ಮಿಂಚಿದ್ದರು. ಈ ಬಾರಿ ಕೂಡ ಮೊದಲ ಹ್ಯಾಟ್ರಿಕ್ ವಿಕೆಟ್​ ಯುಜುವೇಂದ್ರ ಚಹಲ್ (Yuzvendra Chahal) ಅವರ ಪಾಲಾಗುತ್ತಿತ್ತು. ಆದರೆ ಸಬ್​ ಫೀಲ್ಡರ್ ಮಾಡಿದ ತಪ್ಪಿನಿಂದಾಗಿ ಚೊಚ್ಚಲ ಬಾರಿಗೆ ಹ್ಯಾಟ್ರಿಕ್ ವಿಕೆಟ್ ಪಡೆಯುವ ಚಹಲ್ ಅವರ ಅವಕಾಶ ಕೈತಪ್ಪಿತು. ಐಪಿಎಲ್​ನ 9ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್​ ಮುಖಾಮುಖಿಯಾಗಿತ್ತು. ಟಾಸ್ ಗೆದ್ದು ಬೌಲಿಂಗ್ ಮುಂಬೈ ಆಯ್ದುಕೊಂಡಿದ್ದರು. ರಾಜಸ್ಥಾನ್ ರಾಯಲ್ಸ್ ಪರ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸುವ ಮೂಲಕ ತಂಡದ ಮೊತ್ತವನ್ನು 193 ಕ್ಕೆ ತಂದು ನಿಲ್ಲಿಸಿದರು. 194 ರನ್​ಗಳ ಟಾರ್ಗೆಟ್ ಪಡೆದ ಮುಂಬೈ ಪರ ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಅರ್ಧಶತಕ ಬಾರಿಸಿ ಮಿಂಚಿದ್ದರು.

ಆದರೆ ರಾಜಸ್ಥಾನ್ ರಾಯಲ್ಸ್ ತಂಡದ ಉತ್ತಮ ಬೌಲಿಂಗ್ ಮುಂದೆ ಮುಂಬೈ ತಂಡದ ಉಳಿದ ಬ್ಯಾಟ್ಸ್​ಮನ್​ಗಳು ರನ್​ಗಳಿಸಲು ಪರದಾಡಿದರು. ಅದರಲ್ಲೂ ಯುಜುವೇಂದ್ರ ಚಹಲ್ ಈ ಬಾರಿ ಕೂಡ ತಮ್ಮ ಸ್ಪಿನ್ ಮೋಡಿ ತೋರಿಸಿದರು. ಚಹಲ್ 4 ಓವರ್‌ಗಳಲ್ಲಿ ಕೇವಲ 26 ರನ್ ನೀಡಿ 2 ವಿಕೆಟ್ ಪಡೆದಿದ್ದರು.

ವಿಶೇಷ ಎಂದರೆ ಚಹಲ್ ಈ ಎರಡು ವಿಕೆಟ್​ಗಳನ್ನು ಬ್ಯಾಕ್ ಟು ಬ್ಯಾಕ್ ಪಡೆದಿದ್ದರು. ಪಂದ್ಯದ 16ನೇ ಓವರ್‌ನ ಮೊದಲ ಎಸೆತದಲ್ಲಿ ಚಹಲ್ ಟಿಮ್ ಡೇವಿಡ್ ಅವರನ್ನು ಔಟ್ ಮಾಡಿದರು. ಎರಡನೇ ಎಸೆತದಲ್ಲಿ ಡೇನಿಯನ್ ಸಾಮ್ಸ್ ಕೂಡ ಔಟಾದರು. ಆ ಬಳಿಕ ಬಂದ ಮುರುಗನ್ ಅಶ್ವಿನ್​ಗೆ ಚಹಲ್ ಗೂಗ್ಲಿ ಎಸೆದರು. ಬ್ಯಾಟ್​ನ​ ಹೊರ ಅಂಚಿಗೆ ತಾಗಿ ಚೆಂಡು ಸ್ಲಿಪ್​ನತ್ತ ಸಾಗಿತು. ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ಕರುಣ್ ನಾಯರ್ ಸುಲಭ ಕ್ಯಾಚ್​ ಅನ್ನು ಕೈಚೆಲ್ಲಿದರು. ಇದರೊಂದಿಗೆ ಚಹಲ್ ಅವರ ಚೊಚ್ಚಲ ಬಾರಿಗೆ ಹ್ಯಾಟ್ರಿಕ್ ವಿಕೆಟ್ ಪಡೆಯುವ ಅವಕಾಶ ಕೂಡ ಕೈತಪ್ಪಿತು.

ವಿಶೇಷ ಎಂದರೆ ಈ ಪಂದ್ಯದಲ್ಲಿ ಕರುಣ್ ನಾಯರ್ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿರಲಿಲ್ಲ. ಬದಲಿ ಫೀಲ್ಡರ್​ ಆಗಿ ಕಾಣಿಸಿಕೊಂಡ ಕರುಣ್ ಹ್ಯಾಟ್ರಿಕ್ ವಿಕೆಟ್​ನ ಕ್ಯಾಚ್ ಕೈಬಿಡುವ ಮೂಲಕ ಚಹಲ್ ಪಾಲಿಗೆ ವಿಲನ್ ಆದರು.

ಯುಜುವೇಂದ್ರ ಚಹಲ್ ದೀರ್ಘಕಾಲ RCB ತಂಡದ ಭಾಗವಾಗಿದ್ದರು. ಆದರೆ ಈ ಬಾರಿ ರಾಜಸ್ಥಾನ್ ರಾಯಲ್ಸ್ ಅವರನ್ನು ಹರಾಜಿನಲ್ಲಿ ಖರೀದಿಸಿದೆ. 31ರ ಹರೆಯದ ಚಹಲ್ ಆರ್​ಆರ್​ ಪರ ಉತ್ತಮ ಆರಂಭ ಪಡೆದಿದ್ದಾರೆ. ಮೊದಲ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧವೂ ಉತ್ತಮ ಬೌಲಿಂಗ್ ಮಾಡಿದ್ದರು. 4 ಓವರ್‌ಗಳಲ್ಲಿ ಕೇವಲ 22 ರನ್ ನೀಡಿ 3 ವಿಕೆಟ್ ಪಡೆದಿದ್ದರು. ಇದೀಗ ಮುಂಬೈ ಇಂಡಿಯನ್ಸ್ ವಿರುದ್ದ 4 ಓವರ್​ಗಳಲ್ಲಿ 26 ರನ್​ ನೀಡಿ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

(IPL 2022: Karun Nair drops catch, denies Yuzvendra Chahal dream hat-trick)

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!