KL Rahul: ಪಂದ್ಯ ಸೋತ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ದಂಡ..!

IPL 2022: ಕೊನೆಯ ಓವರ್‌ನಲ್ಲಿ ಜೇಸನ್ ಹೋಲ್ಡರ್ ಎರಡು ಸಿಕ್ಸರ್‌ಗಳನ್ನು ಬಾರಿಸಿದರೂ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 8 ವಿಕೆಟ್‌ಗೆ 163 ರನ್‌ಗಳಿಸಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 18 ರನ್​ಗಳಿಂದ ಜಯ ಸಾಧಿಸಿತು.

KL Rahul: ಪಂದ್ಯ ಸೋತ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ದಂಡ..!
KL Rahul
Follow us
| Updated By: ಝಾಹಿರ್ ಯೂಸುಫ್

Updated on: Apr 20, 2022 | 2:49 PM

IPL 2022: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್​ಗೆ (KL Rahul) ಸೋಲಿನ ಬೆನ್ನಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಐಪಿಎಲ್​ನ 31ನೇ ಪಂದ್ಯದಲ್ಲಿ ಲಕ್ನೋ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್‌ಗಳಿಂದ ಸೋಲಿಸಿತು. ಇದಾದ ಬಳಿಕ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಹುಲ್​ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ನ ನೀತಿ ಸಂಹಿತೆಯ ಲೆವೆಲ್-1ರ ಅಡಿಯಲ್ಲಿ ರಾಹುಲ್ ತಪ್ಪು ಒಪ್ಪಿಕೊಂಡು ತಮಗೆ ವಿಧಿಸಿದ್ದ ದಂಡವನ್ನೂ ಒಪ್ಪಿಕೊಂಡಿದ್ದಾರೆ. ಕೆಎಲ್ ರಾಹುಲ್ ಹೊರತಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ಆಲ್ ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಕೂಡ ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಮಾರ್ಕಸ್ ಸ್ಟೊಯಿನಿಸ್ ಕೂಡ ಲೆವೆಲ್-1ರ ಅಡಿಯಲ್ಲಿನ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಈ ಪಂದ್ಯದಲ್ಲಿ, ಜೋಶ್ ಹ್ಯಾಝಲ್‌ವುಡ್ ಎಸೆತದಲ್ಲಿ ಸ್ಟೊಯಿನಿಸ್ ಬೌಲ್ಡ್ ಆಗಿದ್ದರು. ಆದರೆ ಇದಕ್ಕೂ ಮುನ್ನ ವೈಡ್ ವಿಷಯವಾಗಿ ಅವರು ಅಂಪೈರ್ ವಿರುದ್ಧ ವಾಗ್ದಾಳಿ ನಡೆಸಿದರು. ಅವರ ಮಾತುಗಳು ಸ್ಟಂಪ್ ಮೈಕ್ರೊಫೋನ್‌ನಲ್ಲಿ ದಾಖಲಾಗಿವೆ.

ಹ್ಯಾಝಲ್ ವುಡ್ ಅವರ ಹಿಂದಿನ ಬಾಲ್ ಅನ್ನು ವೈಡ್ ಎಂದು ಘೋಷಿಸದಿರುವ ಅಂಪೈರ್ ಕ್ರಿಸ್ ಗಫ್ನಿ ನಿರ್ಧಾರ ಸ್ಟೊಯಿನಿಸ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಣಿಸಿರುವ ಮ್ಯಾಚ್ ರೆಫರಿ ಸ್ಟೊಯಿನಿಸ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಿದ್ದಾರೆ. ಈ ವೇಳೆ ಮಾಡಿರುವ ತಪ್ಪನ್ನು ಮಾರ್ಕಸ್ ಸ್ಟೊಯಿನಿಸ್ ಒಪ್ಪಿಕೊಂಡಿದ್ದಾರೆ.

ಸ್ಟೊಯಿನಿಸ್ ವಿಕೆಟ್ ಸಿಗುತ್ತಿದ್ದಂತೆ ಈ ಪಂದ್ಯದಲ್ಲಿ ಆರ್​ಸಿಬಿ ಗೆಲುವನ್ನು ಖಚಿತಪಡಿಸಿತು. ಇದಾಗ್ಯೂ ಕೊನೆಯ ಓವರ್‌ನಲ್ಲಿ ಜೇಸನ್ ಹೋಲ್ಡರ್ ಎರಡು ಸಿಕ್ಸರ್‌ಗಳನ್ನು ಬಾರಿಸಿದರೂ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 8 ವಿಕೆಟ್‌ಗೆ 163 ರನ್‌ಗಳಿಸಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 18 ರನ್​ಗಳಿಂದ ಜಯ ಸಾಧಿಸಿತು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು