Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಪಂದ್ಯ ಸೋತ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ದಂಡ..!

IPL 2022: ಕೊನೆಯ ಓವರ್‌ನಲ್ಲಿ ಜೇಸನ್ ಹೋಲ್ಡರ್ ಎರಡು ಸಿಕ್ಸರ್‌ಗಳನ್ನು ಬಾರಿಸಿದರೂ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 8 ವಿಕೆಟ್‌ಗೆ 163 ರನ್‌ಗಳಿಸಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 18 ರನ್​ಗಳಿಂದ ಜಯ ಸಾಧಿಸಿತು.

KL Rahul: ಪಂದ್ಯ ಸೋತ ಬೆನ್ನಲ್ಲೇ ಕೆಎಲ್ ರಾಹುಲ್​ಗೆ ದಂಡ..!
KL Rahul
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 20, 2022 | 2:49 PM

IPL 2022: ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್​ಗೆ (KL Rahul) ಸೋಲಿನ ಬೆನ್ನಲ್ಲೇ ಮತ್ತೊಂದು ಆಘಾತ ಎದುರಾಗಿದೆ. ಐಪಿಎಲ್​ನ 31ನೇ ಪಂದ್ಯದಲ್ಲಿ ಲಕ್ನೋ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 18 ರನ್‌ಗಳಿಂದ ಸೋಲಿಸಿತು. ಇದಾದ ಬಳಿಕ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಹುಲ್​ಗೆ ಪಂದ್ಯ ಶುಲ್ಕದ ಶೇ.20ರಷ್ಟು ದಂಡ ವಿಧಿಸಲಾಗಿದೆ. ಐಪಿಎಲ್ ನ ನೀತಿ ಸಂಹಿತೆಯ ಲೆವೆಲ್-1ರ ಅಡಿಯಲ್ಲಿ ರಾಹುಲ್ ತಪ್ಪು ಒಪ್ಪಿಕೊಂಡು ತಮಗೆ ವಿಧಿಸಿದ್ದ ದಂಡವನ್ನೂ ಒಪ್ಪಿಕೊಂಡಿದ್ದಾರೆ. ಕೆಎಲ್ ರಾಹುಲ್ ಹೊರತಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ಆಲ್ ರೌಂಡರ್ ಮಾರ್ಕಸ್ ಸ್ಟೊಯಿನಿಸ್ ಕೂಡ ವಾಗ್ದಂಡನೆಗೆ ಗುರಿಯಾಗಿದ್ದಾರೆ.

ಮಾರ್ಕಸ್ ಸ್ಟೊಯಿನಿಸ್ ಕೂಡ ಲೆವೆಲ್-1ರ ಅಡಿಯಲ್ಲಿನ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. ಈ ಪಂದ್ಯದಲ್ಲಿ, ಜೋಶ್ ಹ್ಯಾಝಲ್‌ವುಡ್ ಎಸೆತದಲ್ಲಿ ಸ್ಟೊಯಿನಿಸ್ ಬೌಲ್ಡ್ ಆಗಿದ್ದರು. ಆದರೆ ಇದಕ್ಕೂ ಮುನ್ನ ವೈಡ್ ವಿಷಯವಾಗಿ ಅವರು ಅಂಪೈರ್ ವಿರುದ್ಧ ವಾಗ್ದಾಳಿ ನಡೆಸಿದರು. ಅವರ ಮಾತುಗಳು ಸ್ಟಂಪ್ ಮೈಕ್ರೊಫೋನ್‌ನಲ್ಲಿ ದಾಖಲಾಗಿವೆ.

ಹ್ಯಾಝಲ್ ವುಡ್ ಅವರ ಹಿಂದಿನ ಬಾಲ್ ಅನ್ನು ವೈಡ್ ಎಂದು ಘೋಷಿಸದಿರುವ ಅಂಪೈರ್ ಕ್ರಿಸ್ ಗಫ್ನಿ ನಿರ್ಧಾರ ಸ್ಟೊಯಿನಿಸ್ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಣಿಸಿರುವ ಮ್ಯಾಚ್ ರೆಫರಿ ಸ್ಟೊಯಿನಿಸ್ ಅವರನ್ನು ವಾಗ್ದಂಡನೆಗೆ ಗುರಿಪಡಿಸಿದ್ದಾರೆ. ಈ ವೇಳೆ ಮಾಡಿರುವ ತಪ್ಪನ್ನು ಮಾರ್ಕಸ್ ಸ್ಟೊಯಿನಿಸ್ ಒಪ್ಪಿಕೊಂಡಿದ್ದಾರೆ.

ಸ್ಟೊಯಿನಿಸ್ ವಿಕೆಟ್ ಸಿಗುತ್ತಿದ್ದಂತೆ ಈ ಪಂದ್ಯದಲ್ಲಿ ಆರ್​ಸಿಬಿ ಗೆಲುವನ್ನು ಖಚಿತಪಡಿಸಿತು. ಇದಾಗ್ಯೂ ಕೊನೆಯ ಓವರ್‌ನಲ್ಲಿ ಜೇಸನ್ ಹೋಲ್ಡರ್ ಎರಡು ಸಿಕ್ಸರ್‌ಗಳನ್ನು ಬಾರಿಸಿದರೂ ಅಂತಿಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಅನ್ನು 8 ವಿಕೆಟ್‌ಗೆ 163 ರನ್‌ಗಳಿಸಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 18 ರನ್​ಗಳಿಂದ ಜಯ ಸಾಧಿಸಿತು.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್
ಮರಾಠಿಯಲ್ಲಿ ಮಾತಾಡಿರುವ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಕೇಳಬೇಕು: ಪ್ರವೀಣ್