AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಶತಕ ಸಿಡಿಸಿದ ರಾಹುಲ್​ಗೆ ಬರೋಬ್ಬರಿ 24 ಲಕ್ಷ ರೂ. ಫೈನ್! ಗೆಲುವಿನ ನಡುವೆಯೂ ಲಕ್ನೋ ತಂಡಕ್ಕೆ ದಂಡದ ಬರೆ

IPL 2022: ಈ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್‌ಗಾಗಿ ಲಕ್ನೋ ತಂಡಕ್ಕೆ ದಂಡ ವಿಧಿಸಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಲಕ್ನೋ ನಿಧಾನಗತಿಯ ಓವರ್‌ರೇಟ್‌ಗಾಗಿ ದಂಡವನ್ನು ವಿಧಿಸಲಾಗಿದೆ. ಕಾಕತಾಳೀಯವೆಂದರೆ ಆ ಪೆನಾಲ್ಟಿ ಕೂಡ ಏಪ್ರಿಲ್ 16 ರಂದು ಮುಂಬೈ ವಿರುದ್ಧ ನಡೆದ ಪಂದ್ಯಕ್ಕೆ ವಿಧಿಸಲಾಗಿತ್ತು.

IPL 2022: ಶತಕ ಸಿಡಿಸಿದ ರಾಹುಲ್​ಗೆ ಬರೋಬ್ಬರಿ 24 ಲಕ್ಷ ರೂ. ಫೈನ್! ಗೆಲುವಿನ ನಡುವೆಯೂ ಲಕ್ನೋ ತಂಡಕ್ಕೆ ದಂಡದ ಬರೆ
ಲಕ್ನೋ ಸೂಪರ್ ಜೈಂಟ್ಸ್ ತಂಡ
TV9 Web
| Edited By: |

Updated on: Apr 25, 2022 | 3:27 PM

Share

ಕಳೆದ ರಾತ್ರಿ (ಏ.24) ಐಪಿಎಲ್ 2022 (IPL 2022) ರಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮುಂಬೈ ಇಂಡಿಯನ್ಸ್ (Lucknow Super Giants defeated Mumbai Indians) ತಂಡವನ್ನು 36 ರನ್​ಗಳಿಂದ ಸೋಲಿಸಿತು. ಈ ಗೆಲುವಿನ ಮೂಲಕ 15ನೇ ಆವೃತ್ತಿಯಲ್ಲಿ ಮುಂಬೈಗೆ ತಮ್ಮ ಗೆಲುವಿನ ಖಾತೆಯನ್ನು ತೆರೆಯಲು ಅವಕಾಶ ನೀಡಲಿಲ್ಲ. ಮುಂಬೈಗೆ ಈ ಸೀಸನ್​ನಲ್ಲಿ ಇದು ಸತತ ಎಂಟನೇ ಸೋಲು. ಐದು ಬಾರಿ ವಿಜೇತ ತಂಡ ಮುಂಬೈ ಇನ್ನೂ ತನ್ನ ಮೊದಲ ಗೆಲುವಿಗಾಗಿ ಆತೊರೆಯುತ್ತಿದೆ. ಲಕ್ನೋದ ಈ ಗೆಲುವಿನಲ್ಲಿ ತಂಡದ ನಾಯಕ ಕೆಎಲ್ ರಾಹುಲ್ ಪ್ರಮುಖ ಪಾತ್ರ ವಹಿಸಿದರು. ರಾಹುಲ್ ಮುಂಬೈ ವಿರುದ್ಧ ಅಜೇಯ 103 ರನ್ ಗಳಿಸಿ ತಂಡಕ್ಕೆ ಉತ್ತಮ ಸ್ಕೋರ್ ನೀಡಿದರು. ರಾಹುಲ್ ಶತಕದ ನೆರವಿನಿಂದ ಮೊದಲು ಬ್ಯಾಟ್ ಮಾಡಿದ ಲಕ್ನೋ 20 ಓವರ್​ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿ ಮುಂಬೈ ತಂಡವನ್ನು 132 ರನ್ ಗಳಿಗೆ ಸೀಮಿತಗೊಳಿಸಿತು.

ಆದರೆ ಲಕ್ನೋ ತಂಡಕ್ಕೆ ತನ್ನ ಗೆಲುವಿನ ನಡುವೆಯೂ ಮಂಡಳಿ ದಂಡದ ಬರೆ ಎಳೆದಿದೆ. ನಿಧಾನಗತಿಯ ಓವರ್ ರೇಟ್‌ಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ದಂಡ ವಿಧಿಸಲಾಗಿದೆ. ಐಪಿಎಲ್ ಮಂಡಳಿ ಭಾನುವಾರ ತಡರಾತ್ರಿ ಈ ಮಾಹಿತಿಯನ್ನು ನೀಡಿದೆ. ಏಪ್ರಿಲ್ 24 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್‌ಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಎರಡನೇ ಬಾರಿ ಈ ಕೃತ್ಯ ಈ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್‌ಗಾಗಿ ಲಕ್ನೋ ತಂಡಕ್ಕೆ ದಂಡ ವಿಧಿಸಿರುವುದು ಇದು ಎರಡನೇ ಬಾರಿ. ಇದಕ್ಕೂ ಮೊದಲು, ಲಕ್ನೋ ನಿಧಾನಗತಿಯ ಓವರ್‌ರೇಟ್‌ಗಾಗಿ ದಂಡವನ್ನು ವಿಧಿಸಲಾಗಿತ್ತು. ಕಾಕತಾಳೀಯವೆಂದರೆ ಆ ಪೆನಾಲ್ಟಿ ಕೂಡ ಏಪ್ರಿಲ್ 16 ರಂದು ಮುಂಬೈ ವಿರುದ್ಧ ನಡೆದ ಪಂದ್ಯಕ್ಕೆ ವಿಧಿಸಲಾಗಿತ್ತು. ಆ ಪಂದ್ಯದಲ್ಲೂ ರಾಹುಲ್ ಶತಕ ಸಿಡಿಸಿದ್ದೂ ಇನ್ನೊಂದು ಸೋಜಿಗವಾಗಿತ್ತು.

ಐಪಿಎಲ್ ಮಂಡಳಿಯ ಹೇಳಿಕೆಯ ಪ್ರಕಾರ, “ಈ ತಂಡವು ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಐಪಿಎಲ್ ನೀತಿ ಸಂಹಿತೆಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದೆ. ಲಕ್ನೋ ನಾಯಕ ಕೆಎಲ್ ರಾಹುಲ್ ಅವರಿಗೆ 24 ಲಕ್ಷ ರೂ ದಂಡ ವಿಧಿಸಲಾಗಿದ್ದು, ತಂಡದ ಉಳಿದವರಿಗೆ ರೂ 6 ಲಕ್ಷ ದಂಡ ವಿಧಿಸಲಾಗಿದೆ ಎಂಬುದನ್ನು ಉಲ್ಲೇಖಿಸಿದೆ.

ಪಂದ್ಯ ಹೀಗಿತ್ತು ಮುಂಬೈ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮುಂಬೈ ತಂಡವು ಉತ್ತಮವಾಗಿ ಬೌಲಿಂಗ್ ಮಾಡಿದರೂ ರಾಹುಲ್ ಒಂದು ತುದಿಯಲ್ಲಿ ಭದ್ರವಾಗಿ ಬೇರೂರಿ, ಕೊನೆಯ ಓವರ್‌ನಲ್ಲಿ ಸಿಕ್ಸರ್‌ನೊಂದಿಗೆ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಅವರ ಇನ್ನಿಂಗ್ಸ್‌ನಲ್ಲಿ, ರಾಹುಲ್ 62 ಎಸೆತಗಳನ್ನು ಎದುರಿಸಿ 12 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಇವರನ್ನು ಬಿಟ್ಟರೆ ಬೇರೆ ಯಾವುದೇ ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಗಣನೀಯ ಕೊಡುಗೆ ನೀಡಲು ಸಾಧ್ಯವಾಗಲಿಲ್ಲ. 22 ರನ್ ಗಳಿಸಿದ ಮನೀಶ್ ಪಾಂಡೆ ತಂಡದ ಪರ ಎರಡನೇ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ದೀಪಕ್ ಹೂಡಾ 10 ಮತ್ತು ಆಯುಷ್ ಬಡೋನಿ 14 ರನ್ ಗಳಿಸಿದರು.

ಆದರೆ ಮುಂಬೈ ತಂಡ ಉತ್ತಮ ಆರಂಭದ ಹೊರತಾಗಿತಯೂ ಈ ಗುರಿ ಸಾಧಿಸಲು ಸಾಧ್ಯವಾಗಲಿಲ್ಲ. ಪೂರ್ಣ 20 ಓವರ್‌ಗಳನ್ನು ಆಡಿದ ನಂತರವೂ ಮುಂಬೈಗೆ ಗೆಲುವು ಸಿಗಲಿಲ್ಲ. ರೋಹಿತ್ ಶರ್ಮಾ ತಂಡದ ಪರವಾಗಿ ಹೆಚ್ಚು ರನ್ ಗಳಿಸಿದ ಆಟಗಾರನೆನಿಸಿಕೊಂಡರು. ರೋಹಿತ್ 31 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 39 ರನ್ ಗಳಿಸಿದರು. ತಿಲಕ್ ವರ್ಮಾ 38 ರನ್ ಗಳಿಸಿದರು. ಕೀರಾನ್ ಪೊಲಾರ್ಡ್ 19 ರನ್ ಗಳಿಸಿದರು.

ಇದನ್ನೂ ಓದಿ:IPL 2022: ಕೊನೆಯ ಎಸೆತದಲ್ಲಿ ಗೆಲುವು! ಧೋನಿಯಿಂದಾಗಿ ಐಪಿಎಲ್‌ನಲ್ಲಿ ವಿಶೇಷ ದಾಖಲೆ ಬರೆದ ಸಿಎಸ್​ಕೆ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ