AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡಕ್ಕೆ ಜೂನಿಯರ್ ಮಾಲಿಂಗ ಎಂಟ್ರಿ

IPL 2022 Matheesha Pathirana: ಪತಿರಾನ ಇನ್ನೂ ಸೀನಿಯರ್ ಮಟ್ಟದಲ್ಲಿ ಹೆಚ್ಚು ಪಂದ್ಯಗಳನ್ನು ಆಡಿಲ್ಲ.ಒಂದು ಲಿಸ್ಟ್ ಎ ಮತ್ತು ಎರಡು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ.

IPL 2022: CSK ತಂಡಕ್ಕೆ ಜೂನಿಯರ್ ಮಾಲಿಂಗ ಎಂಟ್ರಿ
Matheesha Pathirana
TV9 Web
| Edited By: |

Updated on: Apr 21, 2022 | 3:39 PM

Share

IPL 2022: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತೊಂದು ಹಿನ್ನಡೆ ಅನುಭವಿಸಿದೆ . ತಂಡದ ವೇಗದ ಬೌಲರ್ ಆ್ಯಡಂ ಮಿಲ್ನ್ (Adam Milne) ಟೂರ್ನಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ಮಿಲ್ನ್ ಬದಲಿಗೆ ಸಿಎಸ್‌ಕೆ ತಂಡವು ಶ್ರೀಲಂಕಾದ ಯುವ ಬೌಲರ್ ಮಥೀಶ ಪತಿರಾನ (Matheesha Pathirana) ಅವರನ್ನು ಆಯ್ಕೆ ಮಾಡಿಕೊಂಡಿದೆ . 19 ವರ್ಷದ ಬಲಗೈ ಮಧ್ಯಮ ವೇಗಿ ಪತಿರಾನ ಅವರ ಬೌಲಿಂಗ್ ಶೈಲಿಯು ಲಸಿತ್ ಮಾಲಿಂಗ ಅವರನ್ನು ಹೋಲುತ್ತದೆ. ಹೀಗಾಗಿ ಮಥೀಶ ಜೂನಿಯರ್ ಮಾಲಿಂಗ ಎಂದೇ ಖ್ಯಾತಿ ಪಡೆದಿದ್ದಾರೆ.

19 ವರ್ಷದೊಳಗಿನವರ 2020ರ ವಿಶ್ವಕಪ್​ ಮತ್ತು 2022 ವಿಶ್ವಕಪ್​ನಲ್ಲಿ ಮಥೀಶಾ ಪತಿರಾನಾ ಶ್ರೀಲಂಕಾ ತಂಡದ ಭಾಗವಾಗಿದ್ದರು. 2022 ರ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ, ಅವರು ನಾಲ್ಕು ಪಂದ್ಯಗಳಲ್ಲಿ 27.28 ಸರಾಸರಿಯಲ್ಲಿ ಏಳು ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಅಲ್ಲದೆ ಅವರ ಎಕನಾಮಿ ರೇಟ್ ಕೇವಲ 6.16 ಆಗಿತ್ತು. ಯಾರ್ಕರ್ ಎಸೆಯುವ ಸಾಮರ್ಥ್ಯ ಹೊಂದಿರುವ ಪತಿರಾನ ಅವರು ಇದೀಗ 20 ಲಕ್ಷ ರೂ.ಗೆ ಸಿಎಸ್​ಕೆ ತಂಡದ ಭಾಗವಾಗಿದ್ದಾರೆ.

ಸಿಎಸ್‌ಕೆ ರಾಡಾರ್‌ನಲ್ಲಿದ್ದ ಪತಿರಾನ: ಪತಿರಾನ ಇನ್ನೂ ಸೀನಿಯರ್ ಮಟ್ಟದಲ್ಲಿ ಹೆಚ್ಚು ಪಂದ್ಯಗಳನ್ನು ಆಡಿಲ್ಲ.ಒಂದು ಲಿಸ್ಟ್ ಎ ಮತ್ತು ಎರಡು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಇದಾಗ್ಯೂ ಅವರು ಸಿಎಸ್‌ಕೆ ತಂಡದ ರಾಡಾರ್‌ನಲ್ಲಿದ್ದರು. ಈ ಬಾರಿ ಸಿಎಸ್​ಕೆ ತಂಡವು ಮಹೇಶ್ ತೀಕ್ಷಣ ಜೊತೆಗೆ ಪತಿರಾನ ಅವರನ್ನು ಮೀಸಲು ಆಟಗಾರನಾಗಿ ತಮ್ಮೊಂದಿಗೆ ಇಟ್ಟುಕೊಂಡಿತ್ತು. ಇದೀಗ ಆ್ಯಡಂ ಮಿಲ್ನ್ ಹೊರಬೀಳುತ್ತಿದ್ದಂರೆ ಅವಕಾಶ ಸಿಕ್ಕಿದೆ.

ಆ್ಯಡಂ ಮಿಲ್ನ್ ಔಟ್: ಆ್ಯಡಂ ಮಿಲ್ನ್ ನ್ಯೂಜಿಲೆಂಡ್ ತಂಡ ವೇಗದ ಬೌಲರ್. ಈ ಬಾರಿಯ ಐಪಿಎಲ್​ನಲ್ಲಿ KKR ವಿರುದ್ಧದ ಪಂದ್ಯದಲ್ಲಿ, CSK ಪ್ಲೇಯಿಂಗ್ 11 ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಗಾಯಗೊಂಡಿದ್ದ ಮಿಲ್ನ್ ಕೇವಲ 2.3 ಓವರ್ ಬೌಲ್ ಮಾತ್ರ ಮಾಡಿದ್ದರು. ಇದೀಗ ಗಾಯದಿಂದ ಚೇತರಿಸಿಕೊಳ್ಳದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಇದರೊಂದಿಗೆ ಸಿಎಸ್​ಕೆ ತಂಡದಿಂದ ಇಬ್ಬರು ಆಟಗಾರರು ಹೊರಬಿದ್ದಂತಾಗಿದೆ. ಇದಕ್ಕೂ ಮುನ್ನ ದೀಪಕ್ ಚಹರ್ ಗಾಯಗೊಂಡು ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದಾಗ್ಯೂ ಚಹರ್ ಅವರ ಬದಲಿ ಆಟಗಾರನನ್ನು ಸಿಎಸ್​ಕೆ ಇನ್ನೂ ಕೂಡ ಆಯ್ಕೆ ಮಾಡಿಕೊಂಡಿಲ್ಲ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು