AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡಕ್ಕೆ ಜೂನಿಯರ್ ಮಾಲಿಂಗ ಎಂಟ್ರಿ

IPL 2022 Matheesha Pathirana: ಪತಿರಾನ ಇನ್ನೂ ಸೀನಿಯರ್ ಮಟ್ಟದಲ್ಲಿ ಹೆಚ್ಚು ಪಂದ್ಯಗಳನ್ನು ಆಡಿಲ್ಲ.ಒಂದು ಲಿಸ್ಟ್ ಎ ಮತ್ತು ಎರಡು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ.

IPL 2022: CSK ತಂಡಕ್ಕೆ ಜೂನಿಯರ್ ಮಾಲಿಂಗ ಎಂಟ್ರಿ
Matheesha Pathirana
TV9 Web
| Updated By: ಝಾಹಿರ್ ಯೂಸುಫ್|

Updated on: Apr 21, 2022 | 3:39 PM

Share

IPL 2022: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತೊಂದು ಹಿನ್ನಡೆ ಅನುಭವಿಸಿದೆ . ತಂಡದ ವೇಗದ ಬೌಲರ್ ಆ್ಯಡಂ ಮಿಲ್ನ್ (Adam Milne) ಟೂರ್ನಿಯಿಂದ ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ಮಿಲ್ನ್ ಬದಲಿಗೆ ಸಿಎಸ್‌ಕೆ ತಂಡವು ಶ್ರೀಲಂಕಾದ ಯುವ ಬೌಲರ್ ಮಥೀಶ ಪತಿರಾನ (Matheesha Pathirana) ಅವರನ್ನು ಆಯ್ಕೆ ಮಾಡಿಕೊಂಡಿದೆ . 19 ವರ್ಷದ ಬಲಗೈ ಮಧ್ಯಮ ವೇಗಿ ಪತಿರಾನ ಅವರ ಬೌಲಿಂಗ್ ಶೈಲಿಯು ಲಸಿತ್ ಮಾಲಿಂಗ ಅವರನ್ನು ಹೋಲುತ್ತದೆ. ಹೀಗಾಗಿ ಮಥೀಶ ಜೂನಿಯರ್ ಮಾಲಿಂಗ ಎಂದೇ ಖ್ಯಾತಿ ಪಡೆದಿದ್ದಾರೆ.

19 ವರ್ಷದೊಳಗಿನವರ 2020ರ ವಿಶ್ವಕಪ್​ ಮತ್ತು 2022 ವಿಶ್ವಕಪ್​ನಲ್ಲಿ ಮಥೀಶಾ ಪತಿರಾನಾ ಶ್ರೀಲಂಕಾ ತಂಡದ ಭಾಗವಾಗಿದ್ದರು. 2022 ರ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ, ಅವರು ನಾಲ್ಕು ಪಂದ್ಯಗಳಲ್ಲಿ 27.28 ಸರಾಸರಿಯಲ್ಲಿ ಏಳು ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು. ಅಲ್ಲದೆ ಅವರ ಎಕನಾಮಿ ರೇಟ್ ಕೇವಲ 6.16 ಆಗಿತ್ತು. ಯಾರ್ಕರ್ ಎಸೆಯುವ ಸಾಮರ್ಥ್ಯ ಹೊಂದಿರುವ ಪತಿರಾನ ಅವರು ಇದೀಗ 20 ಲಕ್ಷ ರೂ.ಗೆ ಸಿಎಸ್​ಕೆ ತಂಡದ ಭಾಗವಾಗಿದ್ದಾರೆ.

ಸಿಎಸ್‌ಕೆ ರಾಡಾರ್‌ನಲ್ಲಿದ್ದ ಪತಿರಾನ: ಪತಿರಾನ ಇನ್ನೂ ಸೀನಿಯರ್ ಮಟ್ಟದಲ್ಲಿ ಹೆಚ್ಚು ಪಂದ್ಯಗಳನ್ನು ಆಡಿಲ್ಲ.ಒಂದು ಲಿಸ್ಟ್ ಎ ಮತ್ತು ಎರಡು ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಇದಾಗ್ಯೂ ಅವರು ಸಿಎಸ್‌ಕೆ ತಂಡದ ರಾಡಾರ್‌ನಲ್ಲಿದ್ದರು. ಈ ಬಾರಿ ಸಿಎಸ್​ಕೆ ತಂಡವು ಮಹೇಶ್ ತೀಕ್ಷಣ ಜೊತೆಗೆ ಪತಿರಾನ ಅವರನ್ನು ಮೀಸಲು ಆಟಗಾರನಾಗಿ ತಮ್ಮೊಂದಿಗೆ ಇಟ್ಟುಕೊಂಡಿತ್ತು. ಇದೀಗ ಆ್ಯಡಂ ಮಿಲ್ನ್ ಹೊರಬೀಳುತ್ತಿದ್ದಂರೆ ಅವಕಾಶ ಸಿಕ್ಕಿದೆ.

ಆ್ಯಡಂ ಮಿಲ್ನ್ ಔಟ್: ಆ್ಯಡಂ ಮಿಲ್ನ್ ನ್ಯೂಜಿಲೆಂಡ್ ತಂಡ ವೇಗದ ಬೌಲರ್. ಈ ಬಾರಿಯ ಐಪಿಎಲ್​ನಲ್ಲಿ KKR ವಿರುದ್ಧದ ಪಂದ್ಯದಲ್ಲಿ, CSK ಪ್ಲೇಯಿಂಗ್ 11 ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಗಾಯಗೊಂಡಿದ್ದ ಮಿಲ್ನ್ ಕೇವಲ 2.3 ಓವರ್ ಬೌಲ್ ಮಾತ್ರ ಮಾಡಿದ್ದರು. ಇದೀಗ ಗಾಯದಿಂದ ಚೇತರಿಸಿಕೊಳ್ಳದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಇದರೊಂದಿಗೆ ಸಿಎಸ್​ಕೆ ತಂಡದಿಂದ ಇಬ್ಬರು ಆಟಗಾರರು ಹೊರಬಿದ್ದಂತಾಗಿದೆ. ಇದಕ್ಕೂ ಮುನ್ನ ದೀಪಕ್ ಚಹರ್ ಗಾಯಗೊಂಡು ಟೂರ್ನಿಯಿಂದ ಹಿಂದೆ ಸರಿದಿದ್ದರು. ಇದಾಗ್ಯೂ ಚಹರ್ ಅವರ ಬದಲಿ ಆಟಗಾರನನ್ನು ಸಿಎಸ್​ಕೆ ಇನ್ನೂ ಕೂಡ ಆಯ್ಕೆ ಮಾಡಿಕೊಂಡಿಲ್ಲ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?