AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Matthew Hayden: ಬರೆದಿಟ್ಟುಕೊಳ್ಳಿ, ಈ ನಾಲ್ಕು ತಂಡಗಳೇ ಪ್ಲೇ ಆಫ್ ಆಡುವುದು..!

IPL 2022: ಆಸ್ಟ್ರೇಲಿಯಾ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಐಪಿಎಲ್​ನಲ್ಲಿ ಸಿಎಸ್​ಕೆ ಪರ 32 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 8 ಅರ್ಧಶತಕದೊಂದಿಗೆ ಒಟ್ಟು 1107 ರನ್​ ಕಲೆಹಾಕಿ ಮಿಂಚಿದ್ದಾರೆ.

Matthew Hayden: ಬರೆದಿಟ್ಟುಕೊಳ್ಳಿ, ಈ ನಾಲ್ಕು ತಂಡಗಳೇ ಪ್ಲೇ ಆಫ್ ಆಡುವುದು..!
IPL 2022
TV9 Web
| Edited By: |

Updated on: Mar 28, 2022 | 6:18 PM

Share

ರಂಗೀನ್ ಕ್ರಿಕೆಟ್ ಟೂರ್ನಿ ಐಪಿಎಲ್ ಸೀಸನ್ (IPL 2022) 15 ಶುರುವಾಗಿದೆ. ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್​ ಸಿಎಸ್​ಕೆ (CSK) ತಂಡವು ಸೋಲಿನ ರುಚಿ ನೋಡಿದೆ. ಹಾಗೆಯೇ 2ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ (MI vs DC) ಮಣಿಸಿದೆ. ಹಾಗೆಯೇ 3ನೇ ಪಂದ್ಯದಲ್ಲಿ ಆರ್​ಸಿಬಿ (RCB) ನೀಡಿದ 205 ರನ್​ಗಳನ್ನು ಚೇಸ್ ಮಾಡುವ ಪಂಜಾಬ್ ಕಿಂಗ್ಸ್ (PBKS) ಹೊಸ ಇತಿಹಾಸ ನಿರ್ಮಿಸಿದೆ. ಒಟ್ಟಿನಲ್ಲಿ ಐಪಿಎಲ್​ನ ಆರಂಭದಲ್ಲೇ ಅನಿರೀಕ್ಷಿತ ಫಲಿತಾಂಶಗಳು ಮೂಡಿಬಂದಿವೆ. ಇನ್ನು ಈ ಬಾರಿ ತಂಡಗಳಿರುವಾಗ ಪಾಯಿಂಟ್ ಟೇಬಲ್​ನಲ್ಲೂ ಏರುಪೇರಾಗುವ ಸಾಧ್ಯತೆ ಹೆಚ್ಚು. ಏಕೆಂದರೆ ಈ ಬಾರಿ 10 ತಂಡಗಳು 2 ಗುಂಪುಗಳಾಗಿ ಆಡುತ್ತಿದೆ. ಇದಾಗ್ಯೂ ಪಾಯಿಂಟ್ ಟೇಬಲ್ ಮಾತ್ರ ಈ ಹಿಂದಿನಂತೆ ಇರಲಿದೆ. ಹೀಗಾಗಿ ಅಂತಿಮವಾಗಿ 10 ರಲ್ಲಿ ಮೊದಲ 4 ಸ್ಥಾನಗಳನ್ನು ಪಡೆಯುವ ತಂಡ ಯಾವುದೆಂಬ ಲೆಕ್ಕಚಾರಗಳು ಆರಂಭದಲ್ಲೇ ಶುರುವಾಗಿದೆ. ಅದರಲ್ಲೂ ಆಸ್ಟ್ರೇಲಿಯಾದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಈಗಾಗಲೇ ಈ ಬಾರಿ ಪ್ಲೇ ಆಫ್ ಆಡುವ ನಾಲ್ಕು ತಂಡ ಯಾವುದೆಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮ್ಯಾಥ್ಯೂ ಹೇಡನ್, ನಾನು ಈ ಸಲ ಕೂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಅಗ್ರಸ್ಥಾನದಲ್ಲಿ ನೋಡಲು ಬಯಸುತ್ತೇನೆ. ಹೀಗಾಗಿ ಸಿಎಸ್​ಕೆ ತಂಡವು ಪ್ಲೇಆಫ್​ ಪ್ರವೇಶಿಸುವ ಮೊದಲ ತಂಡವಾಗಿರಲಿದೆ ಎಂದಿದ್ದಾರೆ. ಇನ್ನು ನನ್ನ ಎರಡನೇ ಆಯ್ಕೆ ಡೆಲ್ಲಿ ಕ್ಯಾಪಿಟಲ್ಸ್. ಉತ್ತಮ ಸಮತೋಲನದಿಂದ ಕೂಡಿರುವ ಡೆಲ್ಲಿ ಕೂಡ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಇನ್ನು 3ನೇ ತಂಡವಾಗಿ ಕೊಲ್ಕತ್ತಾ ನೈಟ್ ರೈಡರ್ಸ್ ಪ್ಲೇಆಫ್​ ಪ್ರವೇಶಿಸಲಿದೆ. ಹಾಗೆಯೇ ನಾಲ್ಕನೇ ತಂಡವಾಗಿ ಆರ್​ಸಿಬಿ ಕೂಡ ಈ ಸಲ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಏಕೆಂದರೆ ಈ ಬಾರಿ ಆರ್​ಸಿಬಿ ತಂಡವು ಉತ್ತಮ ಸಮತೋಲನವನ್ನು ಹೊಂದಿದೆ. ಹೀಗಾಗಿ ಈ ನಾಲ್ಕು ತಂಡಗಳು ಪ್ಲೇಆಫ್ ಆಡುವ ವಿಶ್ವಾಸವಿದೆ ಎಂದು ಹೇಡನ್ ತಿಳಿಸಿದ್ದಾರೆ.

ಇದಾಗ್ಯೂ ಈ ಬಾರಿ ಮುಂಬೈ ಇಂಡಿಯನ್ಸ್ ಟಾಪ್- 4 ನಲ್ಲಿ ಅನುಮಾನ ಎಂದಿರುವ ಹೇಡನ್, ನನ್ನ ಪ್ರಕಾರ ಮುಂಬೈ ತಂಡವು ಪ್ಲೇಆಫ್​ ಪ್ರವೇಶಿಸುವ ಡೌಟ್. ಏಕೆಂದರೆ ಈ ಬಾರಿ ಮುಂಬೈ ತಂಡವು ಅಂತಹ ಬಲಿಷ್ಠ ಆಟಗಾರರನ್ನು ಹೊಂದಿಲ್ಲ. ಹೀಗಾಗಿ ಮುಂಬೈ ಇಂಡಿಯನ್ಸ್ ಪ್ಲೇಆಫ್ ಕಾಣಿಸಿಕೊಳ್ಳಲಿದೆ ಎಂದು ಭಾವಿಸುತ್ತಿಲ್ಲ ಎಂದು ಮ್ಯಾಥ್ಯೂ ಹೇಡನ್ ಹೇಳಿದ್ದಾರೆ.

ಈ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ ಎಂದು ಮ್ಯಾಥ್ಯೂ ಹೇಡನ್ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ ಮಾಜಿ ಆರಂಭಿಕ ಆಟಗಾರ ಮ್ಯಾಥ್ಯೂ ಹೇಡನ್ ಐಪಿಎಲ್​ನಲ್ಲಿ ಸಿಎಸ್​ಕೆ ಪರ 32 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 8 ಅರ್ಧಶತಕದೊಂದಿಗೆ ಒಟ್ಟು 1107 ರನ್​ ಕಲೆಹಾಕಿ ಮಿಂಚಿದ್ದಾರೆ. 2008 ರಿಂದ 2010 ರವರೆಗೆ ಸಿಎಸ್​ಕೆ ಪರ ಆಡಿದ್ದ ಹೇಡನ್, ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿಯೂ ಪ್ರಮುಖ ಪಾತ್ರವಹಿಸಿದ್ದರು.

2010ರಲ್ಲಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಸಿಎಸ್​ಕೆ ತಂಡ ಹೀಗಿತ್ತು:

ಮಹೇಂದ್ರ ಸಿಂಗ್ ಧೋನಿ (ನಾಯಕ) ಅನಿರುಧ್ ಶ್ರೀಕಾಂತ್, ಮ್ಯಾಥ್ಯೂ ಹೇಡನ್ , ಶಾದಾಬ್ ಜಕಾತಿ , ರವಿಚಂದ್ರನ್ ಅಶ್ವಿನ್ , ಅಲ್ಬಿ ಮೊರ್ಕೆಲ್ , ಎಸ್ ಬದ್ರಿನಾಥ್ , ಸುರೇಶ್ ರೈನಾ , ಮುರಳಿ ವಿಜಯ್, ಡೌಗ್ ಬೋಲಿಂಜರ್ , ಮುತ್ತಯ್ಯ ಮುರಳೀಧರನ್

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

(IPL 2022: Matthew Hayden Predict Top 4 Teams To Qualify For Playoffs)

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?