AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Mega Auction: ಒಂದು ವಿಕೆಟ್ ಪಡೆಯದ ಬೌಲರ್​ಗೆ 10.75 ಕೋಟಿ ನೀಡಿದ RCB..!

IPL 2022 Mega Auction: ಈ ಹಿಂದೆ ಆರ್​ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ.

IPL 2022 Mega Auction: ಒಂದು ವಿಕೆಟ್ ಪಡೆಯದ ಬೌಲರ್​ಗೆ 10.75 ಕೋಟಿ ನೀಡಿದ RCB..!
RCB
TV9 Web
| Edited By: |

Updated on: Feb 12, 2022 | 4:10 PM

Share

ಐಪಿಎಲ್ ಮೆಗಾ ಹರಾಜಿನಲ್ಲಿ ಆರ್​ಸಿಬಿ ತಂಡವು ಮೂರನೇ ಆಟಗಾರನನ್ನು ಕೂಡ ಖರೀದಿಸಿದೆ. ಅಚ್ಚರಿ ಎಂದರೆ ಕಳೆದ ಸೀಸನ್​ನಲ್ಲಿ ಬದಲಿ ಆಟಗಾರನಾಗಿ ಆರ್​ಸಿಬಿ ತಂಡದಲ್ಲಿ ಸ್ಥಾನ ಪಡೆದಿದ್ದ ಆಟಗಾರನಿಗೆ ಈ ಬಾರಿ 10.75 ಕೋಟಿ ನೀಡಿರುವುದು. ಹೌದು, ಆರ್​ಸಿಬಿ ಮೆಗಾ ಹರಾಜಿನಲ್ಲಿ 10.75 ಕೋಟಿ ರೂ. ನೀಡಿ ಶ್ರೀಲಂಕಾದ ವನಿಂದು ಹಸರಂಗ ಅವರನ್ನು ಆಯ್ಕೆ ಮಾಡಿಕೊಂಡಿದೆ. ಆದರೆ ಇಲ್ಲಿ ಮತ್ತೊಂದು ಅಚ್ಚರಿ ಎಂದರೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ಹಸರಂಗ 2 ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಕಬಳಿಸಿರಲಿಲ್ಲ ಎಂಬುದು. ಅಲ್ಲದೆ 6 ಓವರ್ ಬೌಲ್ ಮಾಡಿ 60 ರನ್​ ಬಿಟ್ಟುಕೊಟ್ಟಿದ್ದರು.

ಇದಾಗ್ಯೂ ಆರ್​ಸಿಬಿ ತಂಡವು ಶ್ರೀಲಂಕಾ ಆಲ್​ರೌಂಡರ್ ಖರೀದಿಗೆ ಬರೋಬ್ಬರಿ 10.75 ಕೋಟಿ ವ್ಯಯಿಸಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಕಳೆದ ಬಾರಿ 32 ವಿಕೆಟ್ ಪಡೆದ ಹರ್ಷಲ್ ಪಟೇಲ್ ಅವರನ್ನು ಕೂಡ ಆರ್​ಸಿಬಿ 10.75 ನೀಡಿ ಈ ಬಾರಿ ಖರೀದಿಸಿದೆ. ಇದೀಗ ಅಷ್ಟೇ ಮೊತ್ತವನ್ನು ಲಂಕಾ ಆಟಗಾರನಿಗೂ ವ್ಯಯಿಸಿದೆ. ಇದಕ್ಕೂ ಮುನ್ನ ಆರ್​ಸಿಬಿ ತಂಡವು ಫಾಫ್ ಡುಪ್ಲೆಸಿಸ್ ಅವರನ್ನು 7 ಕೋಟಿ ರೂ. ನೀಡಿ ಖರೀದಿಸಿದೆ.

ಇಲ್ಲಿ ಮತ್ತೊಂದು ವಿಶೇಷ ಎಂದರೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡ ವಿಶ್ವದ ಅತ್ಯುತ್ತಮ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಅವರನ್ನು ಯಾವುದೇ ತಂಡ ಖರೀದಿಸಿಲ್ಲ. ಕೇವಲ 2 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾರಣಿಸಿಕೊಂಡ ಶಕೀಬ್ ಅನ್​ಸೋಲ್ಡ್ ಆಗಿದ್ದಾರೆ. ಇನ್ನೊಂದೆಡೆ ವನಿಂದು ಹಸರಂಗ ಭರ್ಜರಿ ಮೊತ್ತಕ್ಕೆ ಹರಾಜಾಗುವ ಮೂಲಕ ಗಮನ ಸೆಳೆದಿದ್ದಾರೆ.

ಅದರಂತೆ ಇದೀಗ ಆರ್​ಸಿಬಿ ತಂಡದಲ್ಲಿ 6 ಆಟಗಾರರು ಇದ್ದಾರೆ. ಈ ಹಿಂದೆ ಆರ್​ಸಿಬಿ ತಂಡವು ರಿಟೈನ್ ಆಯ್ಕೆಯ ಮೂಲಕ ಗ್ಲೆನ್ ಮ್ಯಾಕ್ಸ್​ವೆಲ್, ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಿದೆ. ಇದೀಗ ಹರ್ಷಲ್ ಪಟೇಲ್, ವನಿಂದು ಹಸರಂಗ ಹಾಗೂ ಫಾಫ್ ಡುಪ್ಲೆಸಿಸ್ ಕೂಡ ಆರ್​ಸಿಬಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: IPL 2022 auction: ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿರುವ 590 ಆಟಗಾರರ ಹೆಸರು ಇಲ್ಲಿದೆ

ಇದನ್ನೂ ಓದಿ: IPL 2022: ಐಪಿಎಲ್​ ಹರಾಜಿನಲ್ಲಿ ಅತೀ ಹೆಚ್ಚು ಮೊತ್ತ ಖರ್ಚು ಮಾಡಿದ ತಂಡ ಯಾವುದು ಗೊತ್ತಾ?

ಇದನ್ನೂ ಓದಿ: Rohit Sharma: ಸಚಿನ್ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

(IPL 2022 Mega Auction: Wanindu Hasaranga SOLD to RCB)

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್