AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

IPL 2022 RCB Team: RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್.

IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
RCB
TV9 Web
| Edited By: |

Updated on: May 14, 2022 | 2:54 PM

Share

IPL 2022: ಐಪಿಎಲ್​ನ​ 60ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್​ ವಿರುದ್ದ ಆರ್​ಸಿಬಿ (RCB vs PBKS) ತಂಡ 54 ರನ್​ಗಳಿಂದ ಹೀನಾಯವಾಗಿ ಸೋತಿದೆ. ಈ ಸೋಲಿಗೆ ಪ್ರಮುಖ ಕಾರಣ ಆರ್​ಸಿಬಿ ತಂಡದ ವೇಗಿಗಳ ಕಳಪೆ ಬೌಲಿಂಗ್. ಏಕೆಂದರೆ ಪವರ್​ಪ್ಲೇನಲ್ಲಿ ಆರ್​ಸಿಬಿ ಬೌಲರ್​ಗಳು ನೀಡಿದ್ದು ಬರೋಬ್ಬರಿ 83 ರನ್​ಗಳು. ಅದೇ ಪಂಜಾಬ್ ಕಿಂಗ್ಸ್ ನೀಡಿದ್ದು ಕೇವಲ 44 ರನ್​ ಮಾತ್ರ. ಅದರಲ್ಲೂ ಆರ್​ಸಿಬಿ ತಂಡದ ಇಬ್ಬರು ವೇಗಿಗಳು ದುಬಾರಿಯಾಗಿದ್ದರು. ಏಕೆಂದರೆ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್ (Josh Hazelwood)​ 4 ಓವರ್​ಗಳಲ್ಲಿ ಬರೋಬ್ಬರಿ 64 ರನ್​ ಬಿಟ್ಟುಕೊಟ್ಟಿದ್ದರು. ಮತ್ತೊಂದೆಡೆ ಮೊಹಮ್ಮದ್ ಸಿರಾಜ್ (Mohammed Siraj) 2 ಓವರ್​ನಲ್ಲಿ ನೀಡಿದ್ದು 36 ರನ್​ಗಳು.

ಅಂದರೆ ಮೊಹಮ್ಮದ್ ಸಿರಾಜ್ ಹಾಗೂ ಜೋಶ್ ಹ್ಯಾಝಲ್​ವುಡ್​ 6 ಓವರ್​ಗಳಲ್ಲಿ ನೀಡಿರುವುದು ಬರೋಬ್ಬರಿ 100 ರನ್​ಗಳು. ಈ ಇಬ್ಬರು ಬೌಲರ್​ಗಳು ಹೆಚ್ಚಿನ ರನ್​ ಬಿಟ್ಟು ಕೊಟ್ಟ ಪರಿಣಾಮ ಪಂಜಾಬ್ ಕಿಂಗ್ಸ್​ ದೊಡ್ಡ ಮೊತ್ತಗಳಿಸಿತು. ಏಕೆಂದರೆ ಉಳಿದ 14 ಓವರ್​ಗಳಲ್ಲಿ ಮೂಡಿಬಂದಿದ್ದು 109 ರನ್​ಗಳು ಮಾತ್ರ. ಇಲ್ಲಿ ಜೋಶ್ ಹ್ಯಾಝಲ್​ವುಡ್ ಪ್ರತಿ ಓವರ್​ಗೆ 16 ರನ್​ನಂತೆ ಬಿಟ್ಟು ಕೊಟ್ಟರೆ, ಸಿರಾಜ್ 18 ರನ್​ನಂತೆ 36 ರನ್​ ಹೊಡೆಸಿಕೊಂಡಿದ್ದರು. ಆದರೆ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇನ್ನು ಶಹಬಾಜ್ ಅಹ್ಮದ್ 4 ಓವರ್​ಗಳಲ್ಲಿ 40 ರನ್ ನೀಡಿದರೂ 1 ವಿಕೆಟ್ ಕಬಳಿಸಿದ್ದರು.

ಇನ್ನುಳಿದಂತೆ ವನಿಂದು ಹಸರಂಗ 4 ಓವರ್​ಗಳಲ್ಲಿ 15 ರನ್ ನೀಡಿದ 2 ವಿಕೆಟ್ ಪಡೆದರು. ಹಾಗೆಯೇ ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 34 ರನ್ ನೀಡಿ 4 ವಿಕೆಟ್ ಉರುಳಿಸಿದ್ದರು. ಇನ್ನು ಪಾರ್ಟ್​ ಟೈಮ್ ಸ್ಪಿನ್ನರ್ ಆಗಿ ಕಾಣಿಸಿಕೊಂಡ ಗ್ಲೆನ್ ಮ್ಯಾಕ್ಸ್​ವೆಲ್ 2 ಓವರ್​ಗಳಲ್ಲಿ 17 ರನ್ ನೀಡಿ 1 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ
Image
MS Dhoni: ಸೂಪರ್ ಬೆಡಗಿ ಜೊತೆ ಸಿನಿಮಾ ನಿರ್ಮಿಸಲು ಮುಂದಾದ ಧೋನಿ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!
Image
AB De Villiers: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್: ಮತ್ತೆ ಬರ್ತಾರಂತೆ ABD

ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಜೋಶ ಹ್ಯಾಝಲ್​ವುಡ್​ 36 ಎಸೆತಗಳಲ್ಲಿ 100 ರನ್​ ನೀಡಿದ್ದು ಆರ್​ಸಿಬಿ ಪಾಲಿಗೆ ಮುಳುವಾಯಿತು. ಅದರಂತೆ ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 9 ವಿಕೆಟ್​ ಕಳೆದುಕೊಂಡು 209 ರನ್​ ಕಲೆಹಾಕಿತು. ಆದರೆ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್​ಸಿಬಿ ತಂಡವು ಆರಂಭದಲ್ಲೇ ಒತ್ತಡಕ್ಕೆ ಸಿಲುಕಿತ್ತು. ಮೊದಲ 3 ಓವರ್​ಗಳಲ್ಲಿ ಬಿರುಸಿನ ಬ್ಯಾಟಿಂಗ್ ಮೂಲಕ 33 ರನ್​ಗಳಿಸಿ ಉತ್ತಮ ಆರಂಭ ಪಡೆದರೂ, ಆ ಬಳಿಕ ಬೃಹತ್ ಟಾರ್ಗೆಟ್​ ಅನ್ನು ಚೇಸ್ ಮಾಡಲು ವಿಫಲರಾಗಿ ಆರ್​ಸಿಬಿ ತಂಡವು ಅಂತಿಮವಾಗಿ 54 ರನ್​ಗಳಿಂದ ಸೋಲೊಪ್ಪಿಕೊಂಡಿತು.

RCB ತಂಡ ಹೀಗಿದೆ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ