AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡದಿಂದ ಮಹೇಂದ್ರ ಸಿಂಗ್ ಧೋನಿ ಔಟ್..!

MS Dhoni: ಐಪಿಎಲ್ ರಿಟೈನ್ ನಿಯಮಗಳ ಪ್ರಕಾರ ಒಂದು ಫ್ರಾಂಚೈಸಿಯು ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಬಹುದು. ಹೀಗೆ ಉಳಿಸಿಕೊಂಡ ಆಟಗಾರರಿಗೆ ಕ್ರಮವಾಗಿ ಮೊದಲ ಆಟಗಾರನಿಗೆ 16 ಕೋಟಿ ರೂ., ಎರಡನೇ ಆಟಗಾರನಿಗೆ 12 ಕೋಟಿ ರೂ, ಮೂರನೇ ಆಟಗಾರನಿಗೆ 8 ಕೋಟಿ ರೂ. ಮತ್ತು ನಾಲ್ಕನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕಾಗುತ್ತದೆ.

IPL 2022: CSK ತಂಡದಿಂದ ಮಹೇಂದ್ರ ಸಿಂಗ್ ಧೋನಿ ಔಟ್..!
MS Dhoni
TV9 Web
| Updated By: ಝಾಹಿರ್ ಯೂಸುಫ್|

Updated on: Nov 03, 2021 | 8:43 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 (IPL 2022) ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳಿಗೆ ರಿಟೈನ್ ಪ್ರಕ್ರಿಯೆಯ ರೂಪುರೇಷೆಗಳ ಪಟ್ಟಿಯನ್ನು ಕಳುಹಿಸಲಾಗಿದೆ ಎಂದು ವರದಿಯಾಗಿದೆ. ಇದರ ಬೆನ್ನಲ್ಲೇ ಯಾವ ತಂಡ ಯಾರನ್ನು ಉಳಿಸಿಕೊಳ್ಳಲಿದೆ, ಯಾರನ್ನು ಬಿಡುಗಡೆ ಮಾಡಲಿದೆ ಎಂಬ ಚರ್ಚೆಗಳು ಕೂಡ ಶುರುವಾಗಿದೆ. ಈ ಚರ್ಚೆಯ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK)​ ತಂಡದಿಂದ ಮಹೇಂದ್ರ ಸಿಂಗ್ ಧೋನಿ (MS Dhoni) ರಿಲೀಸ್ ಆಗಲಿದ್ದಾರೆ ಎಂಬ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ.

ಹೌದು, ಧೋನಿ ಮುಂದಿನ ಹರಾಜಿಗಾಗಿ ಹೆಸರು ನೋಂದಾಯಿಸಿಕೊಳ್ಳಲು ಬಯಸಿದ್ದಾರೆ ಎಂದು ಸಿಎಸ್​ಕೆ ತಂಡದ ಮಾಲೀಕರಾದ ಎನ್​. ಶ್ರೀನಿವಾಸನ್ ಅವರು ತಿಳಿಸಿದ್ದಾರೆ. ಧೋನಿ ಸಿಎಸ್​ಕೆ ತಂಡದಲ್ಲಿ ರಿಟೈನ್ ಆಗಲು ಇಚ್ಛಿಸುತ್ತಿಲ್ಲ. ಅವರ ಬದಲಿಗೆ ಇತರೆ ಆಟಗಾರರನ್ನು ಉಳಿಸಿಕೊಳ್ಳಲು ಅವರು ತಿಳಿಸಿದ್ದಾರೆ ಎಂದು ಸಿಎಸ್​ಕೆ ಮಾಲೀಕರು ಬಹಿರಂಗಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಶ್ರೀನಿವಾಸನ್ ಅವರು, “ಎಂಎಸ್ ಧೋನಿ ಅವರು ತುಂಬಾ ನ್ಯಾಯಯುತ ವ್ಯಕ್ತಿ. ಅವರು ಈ ಬಾರಿ ಸಿಎಸ್​ಕೆ ತಂಡದಿಂದ ಹೊರಬರಲು ಬಯಸಿದ್ದಾರೆ. ಏಕೆಂದರೆ ಅವರನ್ನು ಉಳಿಸಿಕೊಂಡರೆ ಸಿಎಸ್‌ಕೆ ತಂಡ ಹೆಚ್ಚಿನ ಮೊತ್ತ ಕಳೆದುಕೊಳ್ಳಲಿದೆ. ಆದರೆ ಹೀಗೆ ಅವರ ಮೇಲೆ ಹೆಚ್ಚಿನ ವ್ಯಯಿಸಲು ಧೋನಿ ಬಯಸುತ್ತಿಲ್ಲ ಎಂದು ಶ್ರೀನಿವಾಸನ್ ತಿಳಿಸಿದ್ದಾರೆ.

ಐಪಿಎಲ್ ರಿಟೈನ್ ನಿಯಮಗಳ ಪ್ರಕಾರ ಒಂದು ಫ್ರಾಂಚೈಸಿಯು ನಾಲ್ಕು ಆಟಗಾರರನ್ನು ಉಳಿಸಿಕೊಳ್ಳಬಹುದು. ಹೀಗೆ ಉಳಿಸಿಕೊಂಡ ಆಟಗಾರರಿಗೆ ಕ್ರಮವಾಗಿ ಮೊದಲ ಆಟಗಾರನಿಗೆ 16 ಕೋಟಿ ರೂ., ಎರಡನೇ ಆಟಗಾರನಿಗೆ 12 ಕೋಟಿ ರೂ, ಮೂರನೇ ಆಟಗಾರನಿಗೆ 8 ಕೋಟಿ ರೂ. ಮತ್ತು ನಾಲ್ಕನೇ ಆಟಗಾರನಿಗೆ 6 ಕೋಟಿ ರೂ. ನೀಡಬೇಕಾಗುತ್ತದೆ.

ಇಲ್ಲಿ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಲು ಸಿಎಸ್‌ಕೆ ನಿರ್ಧರಿಸಿದರೆ, ಧೋನಿಗಾಗಿ 16 ಕೋಟಿ ರೂ.ಗಳನ್ನು ವ್ಯಯಿಸಬೇಕಾಗುತ್ತದೆ. ಹಾಗಾಗಿ ಧೋನಿ ಈ ಮೊತ್ತದಿಂದ ಬೇರೆ ಉತ್ತಮ ಆಟಗಾರರನ್ನು ಉಳಿಸಿಕೊಂಡು ತಂಡವನ್ನು ಬಲಿಷ್ಠ ಮಾಡುವಂತೆ ತಿಳಿಸಿದ್ದಾರೆ. ಅಲ್ಲದೆ ತಾನು ಐಪಿಎಲ್ ಮೆಗಾ ಹರಾಜಿನಲ್ಲಿ ಹೆಸರು ನೊಂದಾಯಿಸಿಕೊಳ್ಳುವುದಾಗಿ ಹೇಳಿದ್ದಾರೆ. ಒಂದು ವೇಳೆ ಧೋನಿ ಸಿಎಸ್​ಕೆ ತಂಡದಿಂದ ಹೊರಬಂದರೆ ಅವರ ಖರೀದಿಗೆ ಭರ್ಜರಿ ಪೈಪೋಟಿ ಕಂಡು ಬರಲಿದೆ. ಇದಾಗ್ಯೂ ಸಿಎಸ್​ಕೆ ತಂಡವೇ ಹೆಚ್ಚಿನ ಮೊತ್ತ ನೀಡಿ ಮಹೇಂದ್ರ ಸಿಂಗ್ ಧೋನಿಯನ್ನು ಮತ್ತೆ ತಂಡಕ್ಕೆ ಸೇರಿಸಿಕೊಳ್ಳುವುದರಲ್ಲಿ ಅನುಮಾನ ಇಲ್ಲ ಎಂದೇ ಹೇಳಬಹುದು.

ಇದನ್ನೂ ಓದಿ: ICC T20 Rankings: ನೂತನ ಟಿ20 ರ‍್ಯಾಂಕಿಂಗ್ ಪ್ರಕಟ: ಎಲ್ಲರನ್ನು ಹಿಂದಿಕ್ಕಿದ ಬಾಬರ್

ಇದನ್ನೂ ಓದಿ: IPL 2022: RCB ಈ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು..!

ಇದನ್ನೂ ಓದಿ: IPL 2022: ನಾಲ್ವರು ಆಟಗಾರರಿಗೆ 42 ಕೋಟಿ ರೂ. ನಿಗದಿ: ಐಪಿಎಲ್ ಹೊಸ ರಿಟೈನ್ ನಿಯಮ

(IPL 2022:  MS Dhoni tells CSK boss N Srinivasan he doesn’t want to be RETAINED)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ