AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GT vs RR Final: ಆರೆಂಜ್ ಕ್ಯಾಪ್ ಜೊತೆಗೆ ಮೋಸ್ಟ್ ವ್ಯಾಲ್ಯುಬಲ್ ಪ್ಲೇಯರ್ ಪ್ರಶಸ್ತಿ ಗೆದ್ದ ಜೋಸ್ ಬಟ್ಲರ್..!

GT vs RR Final: ಆದರೆ ಅಂತಿಮ ಪಂದ್ಯದಲ್ಲಿ ಬಟ್ಲರ್ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಕೇವಲ 35 ಎಸೆತಗಳಲ್ಲಿ 39 ರನ್ ಗಳಿಸಲಷ್ಟೇ ಶಕ್ತರಾದರು. ಅವರ ವೈಫಲ್ಯದ ಪರಿಣಾಮ ರಾಜಸ್ಥಾನದ ಇನ್ನಿಂಗ್ಸ್‌ನ ಮೇಲೂ ಕಾಣಿಸಿಕೊಂಡಿದ್ದು, ತಂಡ ಕೇವಲ 130 ರನ್ ಗಳಿಸಲಷ್ಟೇ ಶಕ್ತವಾಯಿತು.

GT vs RR Final: ಆರೆಂಜ್ ಕ್ಯಾಪ್ ಜೊತೆಗೆ ಮೋಸ್ಟ್ ವ್ಯಾಲ್ಯುಬಲ್ ಪ್ಲೇಯರ್ ಪ್ರಶಸ್ತಿ ಗೆದ್ದ ಜೋಸ್ ಬಟ್ಲರ್..!
ಜೋಸ್ ಬಟ್ಲರ್
TV9 Web
| Edited By: |

Updated on:May 30, 2022 | 2:56 PM

Share

ರಾಜಸ್ಥಾನ್ ರಾಯಲ್ಸ್‌ (Rajasthan Royals)ಗೆ ಐಪಿಎಲ್ 2022 (IPL 2022)ರ ಸೀಸನ್ ಅವಿಸ್ಮರಣೀಯವಾಗಿದೆ. ಸಂಜು ಸ್ಯಾಮ್ಸನ್ (Sanju Samson) ನಾಯಕತ್ವದ ಈ ತಂಡ 14 ವರ್ಷಗಳ ನಂತರ ಫೈನಲ್‌ಗೆ ಲಗ್ಗೆ ಇಟ್ಟಿತ್ತು. ಫೈನಲ್‌ನಲ್ಲಿ ಗುಜರಾತ್‌ ಟೈಟಾನ್ಸ್‌ ವಿರುದ್ಧ ಸೋಲು ಕಂಡರೂ ತಂಡ ಎಲ್ಲರನ್ನೂ ಆಕರ್ಷಿಸಿತು. ಈ ತಂಡದ ಯಶಸ್ಸಿಗೆ ಅನೇಕ ಆಟಗಾರರು ಕೊಡುಗೆ ನೀಡಿದರು, ಆದರೆ ತಂಡದ ಸ್ಫೋಟಕ ಆರಂಭಿಕ ಜೋಸ್ ಬಟ್ಲರ್ (Jos Buttler) ಮುಂಚೂಣಿಯಲ್ಲಿದ್ದರು. ಇಂಗ್ಲೆಂಡಿನ ಈ ಭರ್ಜರಿ ಬ್ಯಾಟ್ಸ್‌ಮನ್‌ಗೆ ಈ ಐಪಿಎಲ್ ಸೀಸನ್ ಪವಾಡದಂತಿತ್ತು. ಋತುವಿನ ಆರಂಭದಿಂದಲೂ ಬಟ್ಲರ್ ಉತ್ತಮ ಪ್ರದರ್ಶನ ತೋರಿಸಿದರು, ಇದು ಋತುವಿನ ಅಂತ್ಯದವರೆಗೂ ಮುಂದುವರೆಯಿತು. ಇದರೊಂದಿಗೆ ಅನೇಕ ದಾಖಲೆಗಳನ್ನು ಮಾಡಿದಲ್ಲದೆ, ಅತಿ ಹೆಚ್ಚು ರನ್‌ಗಳಿಸಿ ಆರೆಂಜ್ ಕ್ಯಾಪ್ ಕೂಡ ಗೆದ್ದರು. ಇದರೊಂದಿಗೆ ಮೋಸ್ಟ್ ವ್ಯಾಲ್ಯುಬಲ್ ಪ್ಲೇಯರ್ ಪ್ರಶಸ್ತಿ ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಐಪಿಎಲ್ 2021 ರ ನಂತರ, ರಾಜಸ್ಥಾನ್ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ಹೊರತುಪಡಿಸಿ ಜೋಸ್ ಬಟ್ಲರ್ ಅವರನ್ನು ಸಹ ಉಳಿಸಿಕೊಂಡಿದೆ. ಇದಕ್ಕೆ ಉತ್ತರಿಸಿದ ಬಟ್ಲರ್ ಅದ್ಭುತ ಬ್ಯಾಟಿಂಗ್ ಮಾಡಿ ತಂಡದ ಯಶಸ್ಸಿಗೆ ದೊಡ್ಡ ಕೊಡುಗೆ ನೀಡಿದರು. ಈ ದಾಖಲೆಯ ಸೀಸನ್​ನಲ್ಲಿ ಬಟ್ಲರ್ 863 ರನ್ ಗಳಿಸಿದರು. ಇದು ವಿರಾಟ್ ಕೊಹ್ಲಿ ಮತ್ತು ಡೇವಿಡ್ ವಾರ್ನರ್ ನಂತರ ಒಂದು ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯಾಗಿದೆ. ಅವರು ಈ ಋತುವಿನಲ್ಲಿ 45 ಸಿಕ್ಸರ್ ಜೊತೆಗೆ 4 ಶತಕಗಳನ್ನು ಬಾರಿಸಿದರು. ಈ ಮೂಲಕ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟಿದರು.

ಇದನ್ನೂ ಓದಿ:IPL 2022 Final: ಐಪಿಎಲ್​ ಫೈನಲ್​ಗೆ ಸಜ್ಜಾಗಿರುವ ನರೇಂದ್ರ ಮೋದಿ ಸ್ಟೇಡಿಯಂನ ವಿಶೇಷತೆಗಳೇನು?

ಇದನ್ನೂ ಓದಿ
Image
GT vs RR, IPL 2022: ಐಪಿಎಲ್ 2022 ಫೈನಲ್ ಪಂದ್ಯ ಫಿಕ್ಸಿಂಗ್?: ಅನುಮಾನ ಹುಟ್ಟುಹಾಕಿದೆ ಫೋಟೋಗಳು ಎಂದ ಫ್ಯಾನ್ಸ್
Image
Hardik Pandya: ಗುಜರಾತ್ ಗೆದ್ದ ತಕ್ಷಣ ಹಾರ್ದಿಕ್ ಪಾಂಡ್ಯ ಬಳಿ ಅಳುತ್ತಾ ಓಡಿ ಬಂದ ನತಾಶ: ವಿಡಿಯೋ

ಬಟ್ಲರ್​ಗೆ ಅತಿ ಹೆಚ್ಚು ಅಂಕ

ಬಟ್ಲರ್ ಅವರ ಈ ಸ್ಮರಣೀಯ ಪ್ರದರ್ಶನವು ಅವರನ್ನು IPL 2022 ರ MVP (Most Valuable Player) ಯನ್ನಾಗಿ ಮಾಡಿತು. IPL ಅಂಕಿಅಂಶಗಳ ಪ್ರಕಾರ, ಜೋಸ್ ಬಟ್ಲರ್ ಈ ಸೀಸನ್​ನಲ್ಲಿ ಅತ್ಯಧಿಕ 387.5 ಅಂಕಗಳನ್ನು ಗಳಿಸಿದರು. ಈ ವೇಳೆ ಅವರು 83 ಬೌಂಡರಿ ಹಾಗೂ 45 ಸಿಕ್ಸರ್‌ ಜೊತೆಗೆ 9 ಕ್ಯಾಚ್‌ಗಳನ್ನು ಸಹ ಹಿಡಿದಿದ್ದಾರೆ. ಇದರ ಆಧಾರದ ಮೇಲೆ ಅವರು ಇತರ ಆಟಗಾರರಿಗಿಂತ ಹೆಚ್ಚು ಅಂಕಗಳನ್ನು ಪಡೆದರು. ಅವರ ಪ್ರದರ್ಶನಕ್ಕಾಗಿ, ಬಟ್ಲರ್ ಮೋಸ್ಟ್ ವ್ಯಾಲ್ಯುಬಲ್ ಪ್ಲೇಯರ್ ಪ್ರಶಸ್ತಿ ಕೂಡ ಪಡೆದರು. ಈ ಪ್ರಶಸ್ತಿ ಜೊತೆಗೆ ಬಟ್ಲರ್​ಗೆ ರೂ 10 ಲಕ್ಷ ಬಹುಮಾನವನ್ನು ಸಹ ನೀಡಲಾಯಿತು. ಗುಜರಾತ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರು ಫೈನಲ್‌ನಲ್ಲಿ ತಮ್ಮ ಪ್ರಬಲ ಪ್ರದರ್ಶನದ ಆಧಾರದ ಮೇಲೆ 284.5 ಅಂಕಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದರು.

ಬಟ್ಲರ್‌ ಫೈನಲ್​ನಲ್ಲಿ ಅಬ್ಬರಿಸಲು ಸಾಧ್ಯವಾಗಲಿಲ್ಲ ಆದರೆ ಅಂತಿಮ ಪಂದ್ಯದಲ್ಲಿ ಬಟ್ಲರ್ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ. ಕೇವಲ 35 ಎಸೆತಗಳಲ್ಲಿ 39 ರನ್ ಗಳಿಸಲಷ್ಟೇ ಶಕ್ತರಾದರು. ಅವರ ವೈಫಲ್ಯದ ಪರಿಣಾಮ ರಾಜಸ್ಥಾನದ ಇನ್ನಿಂಗ್ಸ್‌ನ ಮೇಲೂ ಕಾಣಿಸಿಕೊಂಡಿದ್ದು, ತಂಡ ಕೇವಲ 130 ರನ್ ಗಳಿಸಲಷ್ಟೇ ಶಕ್ತವಾಯಿತು. ಗುಜರಾತ್ 19ನೇ ಓವರ್​ನಲ್ಲಿ ಕೇವಲ 3 ವಿಕೆಟ್ ಕಳೆದುಕೊಂಡು ಪ್ರಶಸ್ತಿ ಗೆದ್ದುಕೊಂಡಿತು. ಬಟ್ಲರ್ ಪ್ರಶಸ್ತಿಯಿಂದ ವಂಚಿತರಾಗಿರಬಹುದು, ಆದರೆ ಅವರು ತಮ್ಮ ಕಡೆಯಿಂದ ಕೊನೆಯವರೆಗೂ ಸಂಪೂರ್ಣ ಎಫರ್ಟ್ ಹಾಕಿದರು. ಬಹುತೇಕ ಪ್ರತಿ ಬ್ಯಾಟಿಂಗ್ ಫಿಗರ್‌ನಲ್ಲಿ ಪ್ರಾಬಲ್ಯ ಸಾಧಿಸಿದರು, ಆದರೆ ಕೊನೆಯಲ್ಲಿ ಟ್ರೋಫಿ ಅವರ ಭಾಗವಾಗಲು ಸಾಧ್ಯವಾಗಲಿಲ್ಲ.

Published On - 2:56 pm, Mon, 30 May 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ