AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಹೊಸ ತಂಡಕ್ಕೆ ಕೆಎಲ್ ರಾಹುಲ್ ನಾಯಕ..?

IPL 2022: ವಿಶೇಷ ಆಯ್ಕೆಗೂ ಮೊತ್ತ ನಿಗದಿ ಮಾಡಲಾಗಿದೆ. ಅದರಂತೆ ಹೊಸ ಫ್ರಾಂಚೈಸಿಗಳು 33 ಕೋಟಿಯೊಳಗೆ ಮೂವರು ಆಟಗಾರರನ್ನು ಆಯ್ಕೆ ಮಾಡಬಹುದು. ಇಲ್ಲಿ ಫ್ರಾಂಚೈಸಿ ಮೊದಲ ಆಟಗಾರನಿಗೆ 15 ಕೋಟಿ, 2ನೇ ಆಟಗಾರನಿಗೆ 11 ಕೋಟಿ ಹಾಗೂ 3ನೇ ಆಟಗಾರನಿಗೆ 7 ಕೋಟಿ ನೀಡಬೇಕಾಗುತ್ತದೆ.

KL Rahul: ಹೊಸ ತಂಡಕ್ಕೆ ಕೆಎಲ್ ರಾಹುಲ್ ನಾಯಕ..?
KL Rahul
TV9 Web
| Edited By: |

Updated on: Dec 01, 2021 | 9:55 PM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022 Mega Auction) ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ಉಳಿಸಿಕೊಂಡಿದೆ. ಇದೀಗ ಸ್ಪೆಷಲ್ ಪಿಕ್ ಆಯ್ಕೆಯ ಮೂವರು ಆಟಗಾರರನ್ನು ಉಳಿಸಿಕೊಳ್ಳಲು ಹೊಸ ಫ್ರಾಂಚೈಸಿಗಳಿಗೆ ಬಿಸಿಸಿಐ ಸೂಚಿಸಿದೆ. ಅಂದರೆ 8 ಫ್ರಾಂಚೈಸಿಗಳು ಬಿಡುಗಡೆ ಮಾಡಿದ ಆಟಗಾರರಿಂದ ಆರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡುವ ಅವಕಾಶ ಲಕ್ನೋ ಹಾಗೂ ಅಹಮದಾಬಾದ್ ಫ್ರಾಂಚೈಸಿಗೆ ಸಿಗಲಿದೆ. ಅದರಂತೆ ಇದೀಗ ರಿಲೀಸ್ ಆಗಿರುವ ಆಟಗಾರರನ್ನು ಹೊಸ ಫ್ರಾಂಚೈಸಿಗಳು ಸಂಪರ್ಕಿಸಲಾರಂಭಿಸಿದ್ದಾರೆ. ಕೆಲ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಫ್ರಾಂಚೈಸಿ ಪಂಜಾಬ್ ಕಿಂಗ್ಸ್​ ತಂಡದ ಮಾಜಿ ನಾಯಕ ಕೆಎಲ್ ರಾಹುಲ್ (KL Rahul) ಅವರನ್ನು ಸಂಪರ್ಕಿಸಿದೆ. ಅಷ್ಟೇ ಅಲ್ಲದೆ ತಂಡದ ನಾಯಕತ್ವ ಹಾಗೂ ಮೊದಲ ಆಯ್ಕೆಯ ಆಫರ್ ನೀಡಿದೆ ಹೇಳಲಾಗಿದೆ.

ಈ ಹಿಂದೆಯೇ ಕೆಎಲ್ ರಾಹುಲ್ ಲಕ್ನೋ ಫ್ರಾಂಚೈಸಿ ಪರ ಆಡಲಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಆ ಸುದ್ದಿಯನ್ನು ಪುಷ್ಠೀಕರಿಸುವಂತೆ ಇದೀಗ ಲಕ್ನೋ ಫ್ರಾಂಚೈಸಿಯೇ ರಾಹುಲ್ ಅವರನ್ನು ಆಯ್ಕೆ ಮಾಡಲು ಮುಂದಾಗಿರುವುದು ವಿಶೇಷ. ಒಟ್ಟು ಮೂವರು ಆಟಗಾರರನ್ನು ಹೊಸ ಫ್ರಾಂಚೈಸಿಗಳಿಗೆ ಮೆಗಾ ಹರಾಜಿಗೂ ಮುನ್ನ ಆಯ್ಕೆ ಮಾಡುವ ಅವಕಾಶವಿದ್ದು, ಅದರಂತೆ ಇಬ್ಬರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರನನ್ನು ಆಯ್ಕೆ ಮಾಡಬಹುದು.

ಇಲ್ಲಿ ವಿಶೇಷ ಆಯ್ಕೆಗೂ ಮೊತ್ತ ನಿಗದಿ ಮಾಡಲಾಗಿದೆ. ಅದರಂತೆ ಹೊಸ ಫ್ರಾಂಚೈಸಿಗಳು 33 ಕೋಟಿಯೊಳಗೆ ಮೂವರು ಆಟಗಾರರನ್ನು ಆಯ್ಕೆ ಮಾಡಬಹುದು. ಹೀಗೆ ಆಯ್ಕೆ ಮಾಡಲಾದ ಮೊದಲ ಆಟಗಾರನಿಗೆ 15 ಕೋಟಿ, 2ನೇ ಆಟಗಾರನಿಗೆ 11 ಕೋಟಿ ಹಾಗೂ 3ನೇ ಆಟಗಾರನಿಗೆ 7 ಕೋಟಿ ನೀಡಬೇಕಾಗುತ್ತದೆ. ಈ ಮೊತ್ತ ನೀಡಿ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು. ಇದೀಗ ಲಕ್ನೋ ಫ್ರಾಂಚೈಸಿ ರಾಹುಲ್ ಅವರನ್ನು ಮೊದಲ ಆಯ್ಕೆಯಾಗಿ ಖರೀದಿಸಲು ಮುಂದಾಗಿದೆ. ಅದರಂತೆ 15 ಕೋಟಿಯೊಂದಿಗೆ ತಂಡದ ನಾಯಕತ್ವದ ಆಫರ್​ ಅನ್ನು ಕೆಎಲ್ ರಾಹುಲ್ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಆಫರ್​ ಅನ್ನು ಕೆಎಲ್ಆರ್​ ಕೂಡ ಒಪ್ಪಿಕೊಳ್ಳುವ ಸಾಧ್ಯತೆಯಿದ್ದು, ಹೀಗಾಗಿ ಲಕ್ನೋ ಫ್ರಾಂಚೈಸಿ ಪರ ನಾಯಕ, ಆರಂಭಿಕ, ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಲಾಗಿದೆ.

ಇದನ್ನೂ ಓದಿ: IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

ಇದನ್ನೂ ಓದಿ: 8 ಫ್ರಾಂಚೈಸಿ ಉಳಿಸಿಕೊಂಡ ಆಟಗಾರರ ಪಟ್ಟಿ ಹೀಗಿದೆ

ಇದನ್ನೂ ಓದಿ: 27 ಆಟಗಾರರು ರಿಟೈನ್: ಬಿಡುಗಡೆಯಾದ ಆಟಗಾರರ ಪಟ್ಟಿ ಇಲ್ಲಿದೆ

(IPL 2022: New franchise Lucknow zero in on KL Rahul as captain)

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ