AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: KKR ಸ್ಟಾರ್ ಆಟಗಾರ ಎಂಟ್ರಿ: ಮುಂಬೈಗೆ ಚಿಂತೆ ಶುರು

IPL 2022: ಪ್ಯಾಟ್ ಕಮಿನ್ಸ್ ಆಗಮನ ಇದೀಗ ಪ್ಲೇಯಿಂಗ್ 11 ಆಯ್ಕೆಯ ತಲೆನೋವು ಹೆಚ್ಚಿಸಲಿದೆ. ಏಕೆಂದರೆ ಈಗ ನಾವು ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡಲು ಹೆಚ್ಚಿನ ಆಟಗಾರರನ್ನು ಹೊಂದಿದ್ದೇವೆ.

IPL 2022: KKR ಸ್ಟಾರ್ ಆಟಗಾರ ಎಂಟ್ರಿ: ಮುಂಬೈಗೆ ಚಿಂತೆ ಶುರು
KKR
TV9 Web
| Edited By: |

Updated on: Apr 04, 2022 | 8:43 PM

Share

ಕೋಲ್ಕತ್ತಾ ನೈಟ್ ರೈಡರ್ಸ್ (KKR) ಐಪಿಎಲ್ 2022 ರಲ್ಲಿ ಉತ್ತಮ ಆರಂಭ ಪಡೆದಿದೆ. ಮೊದಲ 3 ಪಂದ್ಯಗಳಲ್ಲಿ ಎರಡನ್ನು ಗೆದ್ದುಕೊಂಡಿರುವ ಕೆಕೆಆರ್ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ತಂಡಕ್ಕೆ ಸ್ಟಾರ್ ಆಟಗಾರರ ಆಗಮನವಾಗಿರುವುದು ತಂಡದ ಬಲವನ್ನು ಹೆಚ್ಚಿಸಿದೆ. ಹೌದು, ಕೆಕೆಆರ್ ತಂಡದ ಮ್ಯಾಚ್ ವಿನ್ನರ್ ಆಲ್​ರೌಂಡರ್ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಕ್ವಾರಂಟೈನ್ ಅವಧಿ ಸೋಮವಾರ ಕೊನೆಗೊಳ್ಳಲಿದ್ದು, ಅದರಂತೆ ಏಪ್ರಿಲ್ 6 ರಿಂದ ಆಯ್ಕೆಗೆ ಲಭ್ಯರಿರಲಿದ್ದಾರೆ. ಅಂದರೆ KKRನ ಮುಂದಿನ ಪಂದ್ಯವು ಮುಂಬೈ ಇಂಡಿಯನ್ಸ್ ವಿರುದ್ಧ ಏಪ್ರಿಲ್ 6 ರಂದು ನಡೆಯಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ವಿರುದ್ದ ಪ್ಯಾಟ್ ಕಮಿನ್ಸ್ ಕಣಕ್ಕಿಳಿಯುವ ಸಾಧ್ಯತೆಯಿದೆ.

ಪ್ಯಾಟ್ ಕಮ್ಮಿನ್ಸ್ ಆಗಮನದಿಂದ ಕೋಚ್ ಬ್ರೆಂಡನ್ ಮೆಕಲಮ್ ಫುಲ್ ಖುಷಿಯಾಗಿದ್ದಾರೆ. ಏಕೆಂದರೆ ಕಮ್ಮಿನ್ಸ್ ಅಂತಹ ಆಟಗಾರ, ತಂಡದ ವಾತಾವರಣಕ್ಕೆ ಸುಲಭವಾಗಿ ಹೊಂದಿಕೊಳ್ಳುತ್ತಾರೆ. ಅವರು ಪ್ರಬಲ ನಾಯಕರೂ ಹೌದು. ಇಂತಹ ಪರಿಸ್ಥಿತಿಯಲ್ಲಿ ನಾಯಕನಾಗಿ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿರುವ ಶ್ರೇಯಸ್ ಅಯ್ಯರ್​ಗೆ ಕಮಿನ್ಸ್ ಉಪಸ್ಥಿತಿಯೂ ಲಾಭವಾಗಲಿದೆ ಎಂದು ಮೆಕಲಮ್ ತಿಳಿಸಿದ್ದಾರೆ.

ಮತ್ತೊಂದೆಡೆ ಪ್ಯಾಟ್ ಕಮಿನ್ಸ್ ಆಗಮನ ಇದೀಗ ಪ್ಲೇಯಿಂಗ್ 11 ಆಯ್ಕೆಯ ತಲೆನೋವು ಹೆಚ್ಚಿಸಲಿದೆ. ಏಕೆಂದರೆ ಈಗ ನಾವು ಪ್ಲೇಯಿಂಗ್ XI ಅನ್ನು ಆಯ್ಕೆ ಮಾಡಲು ಹೆಚ್ಚಿನ ಆಟಗಾರರನ್ನು ಹೊಂದಿದ್ದೇವೆ. ಇವರಿಂದ 11 ಆಟಗಾರರನ್ನು ಆಯ್ಕೆ ಮಾಡುವುದು ಕೂಡ ಸವಾಲಾಗಲಿದೆ. ಇದರಿಂದ ತಂಡವು ಮತ್ತಷ್ಟು ಬಲಿಷ್ಠವಾಗುವುದು ಸ್ಪಷ್ಟ ಎಂದು ಮೆಕಲಂ ತಿಳಿಸಿದ್ದಾರೆ.

ಈ ವರ್ಷ ಪ್ಯಾಟ್ ಕಮ್ಮಿನ್ಸ್ ಅತ್ಯುತ್ತಮ ಫಾರ್ಮ್‌ನಲ್ಲಿರುವುದರಿಂದ ಕಮ್ಮಿನ್ಸ್ ಮರಳುವಿಕೆ ಕೆಕೆಆರ್​ಗೆ ಪ್ಲಸ್ ಪಾಯಿಂಟ್ ಆಗಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕಮ್ಮಿನ್ಸ್ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದರು. 3 ಟೆಸ್ಟ್‌ಗಳಲ್ಲಿ 22.50 ಸರಾಸರಿಯಲ್ಲಿ 12 ವಿಕೆಟ್‌ಗಳನ್ನು ಪಡೆದಿದ್ದರು. ಇನ್ನು ಕಮಿನ್ಸ್ ಐಪಿಎಲ್‌ನ 37 ಪಂದ್ಯಗಳಲ್ಲಿ 38 ವಿಕೆಟ್‌ಗಳನ್ನು ಪಡೆದಿದ್ದಾರೆ.

MI ವಿರುದ್ಧ KKR ನ ಮುಂದಿನ ಪಂದ್ಯ: KKR ಇದುವರೆಗೆ IPL 2022 ರಲ್ಲಿ 3 ಪಂದ್ಯಗಳನ್ನು ಆಡಿದೆ. ಇದರಲ್ಲಿ ತಂಡ 2 ರಲ್ಲಿ ಜಯ ಸಾಧಿಸಿದೆ. ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕೆಕೆಆರ್ 6 ವಿಕೆಟ್ ಗಳ ಜಯ ಸಾಧಿಸಿತ್ತು. ಇದೀಗ ಬುಧವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿಯೂ ಈ ಗೆಲುವಿನ ನಾಗಾಲೋಟವನ್ನು ಮುಂದುವರೆಸಲು ಕೆಕೆಆರ್ ಬಯಸಿದೆ. ಇತ್ತ ಕೆಕೆಆರ್ ತಂಡಕ್ಕೆ ಪ್ಯಾಟ್ ಕಮಿನ್ಸ್ ಆಗಮನ, ಸತತ 2 ಸೋಲುಗಳಿಂದ ಕಂಗೆಟ್ಟಿರುವ ಮುಂಬೈ ಇಂಡಿಯನ್ಸ್ ಚಿಂತೆಯನ್ನು ಹೆಚ್ಚಿಸಲಿದೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?