AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಡೆಲ್ಲಿ ಕ್ಯಾಪಿಟಲ್ಸ್-ಪಂಜಾಬ್ ಕಿಂಗ್ಸ್​ ನಡುವೆ ಕದನದಲ್ಲಿ RCB ಲೆಕ್ಕಚಾರ..!

IPL 2022 PBKS vs DC: ಗುಜರಾತ್ ಟೈಟನ್ಸ್ ವಿರುದ್ದ ಗೆಲ್ಲುವ ವಿಶ್ವಾಸದಲ್ಲಿರುವ ಆರ್​ಸಿಬಿ ತಂಡವು 16 ಪಾಯಿಂಟ್ಸ್​ ಗಳಿಸಿ ಪ್ಲೇಆಫ್ ಗೇರುವ ತವಕದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೂ 16 ಪಾಯಿಂಟ್ಸ್​ ಗಳಿಸುವ ಅವಕಾಶವಿದೆ.

IPL 2022: ಡೆಲ್ಲಿ ಕ್ಯಾಪಿಟಲ್ಸ್-ಪಂಜಾಬ್ ಕಿಂಗ್ಸ್​ ನಡುವೆ ಕದನದಲ್ಲಿ RCB ಲೆಕ್ಕಚಾರ..!
RCB
TV9 Web
| Edited By: |

Updated on: May 16, 2022 | 2:35 PM

Share

IPL 2022: ಐಪಿಎಲ್​ನ 64ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ (PBKS vs DC) ತಂಡಗಳು ಮುಖಾಮುಖಿಯಾಗಲಿದೆ. ವಿಶೇಷ ಎಂದರೆ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ ಪಂದ್ಯ. ಏಕೆಂದರೆ ಎರಡೂ ತಂಡಗಳು 12 ಪಂದ್ಯಗಳಿಂದ 12 ಪಾಯಿಂಟ್ಸ್ ಪಡೆದುಕೊಂಡಿದೆ. ಒಂದು ವೇಳೆ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡ 14 ಪಾಯಿಂಟ್ಸ್​ ಗಳಿಸಲಿದೆ. ಅಷ್ಟೇ ಅಲ್ಲದೆ ಗೆದ್ದ ತಂಡವು ಪ್ಲೇಆಫ್ ರೇಸ್​ನಲ್ಲಿ ಉಳಿಯಲಿದೆ.

ಏಕೆಂದರೆ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನದಲ್ಲಿರುವ ಆರ್​ಸಿಬಿ ತಂಡಕ್ಕೆ ಇನ್ನೂ ಒಂದು ಪಂದ್ಯವಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ 16 ಪಾಯಿಂಟ್ಸ್​ಗಳೊಂದಿಗೆ ಪ್ಲೇಆಫ್​ಗೇರಬಹುದು. ಆದರೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳಿಗೆ 2 ಪಂದ್ಯಗಳಿವೆ. ಈ ಎರಡೂ ಪಂದ್ಯಗಳನ್ನು ಗೆಲ್ಲುವ ಮೂಲಕ ಒಂದು ತಂಡವು 16 ಪಾಯಿಂಟ್ಸ್​ಗಳಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನಕ್ಕೇರಬಹುದು.

ಇದೀಗ ಈ ಅವಕಾಶ ಹೊಂದಿರುವ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳೇ ಮುಖಾಮುಖಿಯಾಗುತ್ತಿರುವ ಕಾರಣ, ಇದರಲ್ಲಿ ಒಂದು ತಂಡ ಸೋಲಲೇಬೇಕಾಗುತ್ತದೆ. ಹೀಗಾಗಿ ಒಂದು ತಂಡವು ಪ್ಲೇಆಫ್ ರೇಸ್​ನಿಂದ ಬಹುತೇಕ ಹೊರಬೀಳುವುದು ಖಚಿತ. ಇದಾಗ್ಯೂ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲದಿದ್ದರೆ ಮಾತ್ರ 14 ಪಾಯಿಂಟ್ಸ್ ಮೂಲಕ ಪ್ಲೇಆಫ್​ ಲೆಕ್ಕಚಾರ ಮಾಡಬಹುದು.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಆದರೆ ಗುಜರಾತ್ ಟೈಟನ್ಸ್ ವಿರುದ್ದ ಗೆಲ್ಲುವ ವಿಶ್ವಾಸದಲ್ಲಿರುವ ಆರ್​ಸಿಬಿ ತಂಡವು 16 ಪಾಯಿಂಟ್ಸ್​ ಗಳಿಸಿ ಪ್ಲೇಆಫ್ ಗೇರುವ ತವಕದಲ್ಲಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೂ 16 ಪಾಯಿಂಟ್ಸ್​ ಗಳಿಸುವ ಅವಕಾಶವಿದ್ದು, ಹೀಗಾಗಿ ಈ ತಂಡಗಳಲ್ಲಿ ಒಂದು ತಂಡವು ನೆಟ್​ ರನ್​ ರೇಟ್ ಮೂಲಕ ಆರ್​ಸಿಬಿಗೆ ಪೈಪೋಟಿ ನೀಡಲಿದೆ.

ಅದರಲ್ಲೂ ಇಂದಿನ ಪಂದ್ಯದಲ್ಲಿ ಗೆಲ್ಲುವ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಲಿದೆ. ಏಕೆಂದರೆ ಆರ್​ಸಿಬಿ ತಂಡದ ನೆಟ್​ ರನ್​ ರೇಟ್ ಮೈನಸ್​ನಲ್ಲಿದ್ದು, ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನೆಟ್ ರನ್​ ರೇಟ್ ಪ್ಲಸ್​ನಲ್ಲಿದೆ. ಹೀಗಾಗಿ ಗೆದ್ದ ತಂಡವು ಉತ್ತಮ ನೆಟ್​ ರನ್​ ರೇಟ್​ನೊಂದಿಗೆ 14 ಪಾಯಿಂಟ್ಸ್​ಗಳಿಸಿ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಲಿದೆ.

ಒಟ್ಟಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್​ ನಡುವಣ ಪಂದ್ಯದ ಫಲಿತಾಂಶದಿಂದ ಪ್ಲೇಆಫ್ ರೇಸ್​ನಲ್ಲಿ ಆರ್​ಸಿಬಿಗೆ ಯಾವ ತಂಡ ಪೈಪೋಟಿ ನೀಡಲಿದೆ ಎಂಬುದು ಖಚಿತವಾಗಲಿದೆ. ಮತ್ತೊಂದೆಡೆ ಸೋತ ತಂಡ ಪ್ಲೇಆಫ್ ರೇಸ್​ನಿಂದ ಬಹುತೇಕ ಹೊರಬೀಳಲಿದೆ. ಇದರಿಂದ ಮುಂದಿನ ಪಂದ್ಯದಲ್ಲಿ ಆರ್​ಸಿಬಿ ಗುಜರಾತ್ ಟೈಟನ್ಸ್ ವಿರುದ್ದ ಭರ್ಜರಿ ಜಯ ಸಾಧಿಸಿ ನೆಟ್ ರನ್​ ರೇಟ್​ ಮೂಲಕ ಪ್ಲೇಆಫ್​ಗೇರಬಹುದು. ಹೀಗಾಗಿ ಇಂದಿನ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ಆರ್​ಸಿಬಿ ತಂಡಕ್ಕೂ ಮಹತ್ವದ ಪಂದ್ಯ ಎನ್ನಬಹುದು.

ಪಂಜಾಬ್ ಕಿಂಗ್ಸ್ ತಂಡ: ಮಯಾಂಕ್ ಅಗರ್ವಾಲ್ (ನಾಯಕ) , ಜಿತೇಶ್ ಶರ್ಮಾ, ಜಾನಿ ಬೈರ್‌ಸ್ಟೋವ್ , ಶಿಖರ್ ಧವನ್ , ಭಾನುಕಾ ರಾಜಪಕ್ಸೆ , ಲಿಯಾಮ್ ಲಿವಿಂಗ್‌ಸ್ಟೋನ್ , ಹರ್‌ಪ್ರೀತ್ ಬ್ರಾರ್ , ರಿಷಿ ಧವನ್ , ರಾಹುಲ್ ಚಾಹರ್ , ಕಗಿಸೋ ರಬಾಡ , ಅರ್ಷ್‌ದೀಪ್ ಸಿಂಗ್ , ಸಂದೀಪ್ ಶರ್ಮಾ , ಶಾರುಖ್ಮಿರಾನ್ ಖಾನ್ , ಶಾರುಖ್ ಖಾನ್ , ಬೆನ್ನಿ ಹೋವೆಲ್ , ಬಲ್ತೇಜ್ ಸಿಂಗ್ , ರಿಟಿಕ್ ಚಟರ್ಜಿ , ಪ್ರೇರಕ್ ಮಂಕಡ್ , ಇಶಾನ್ ಪೊರೆಲ್ ,ಅಥರ್ವ ಟೈಡೆ , ನಾಥನ್ ಎಲ್ಲಿಸ್ , ವೈಭವ್ ಅರೋರಾ , ಅಂಶ್ ಪಟೇಲ್ , ರಾಜ್ ಬಾವಾ

ದೆಹಲಿ ಕ್ಯಾಪಿಟಲ್ಸ್ ತಂಡ: ರಿಷಭ್ ಪಂತ್ (ನಾಯಕ) , ಶ್ರೀಕರ್ ಭರತ್ , ಡೇವಿಡ್ ವಾರ್ನರ್ , ಮಿಚೆಲ್ ಮಾರ್ಷ್ , ಲಲಿತ್ ಯಾದವ್ , ರೋವ್ಮನ್ ಪೊವೆಲ್ , ಅಕ್ಷರ್ ಪಟೇಲ್ , ಶಾರ್ದೂಲ್ ಠಾಕೂರ್ , ಕುಲದೀಪ್ ಯಾದವ್ , ಚೇತನ್ ಸಕರಿಯಾ , ಅನ್ರಿಕ್ ನೋಕಿಯಾ , ಮನ್ ದೀಪ್ ಸಿಂಗ್ , ಸರ್ಫರಾಜ್ ಖಾನ್ , ರಿಪಾಲ್ ಪಟೇಲ್ , ಯಶ್ ಧುಲ್ , ಮುಸ್ತಾಫಿಜುರ್ ರೆಹಮಾನ್ , ಖಲೀಲ್ ಅಹ್ಮದ್ , ಅಶ್ವಿನ್ ಹೆಬ್ಬಾರ್ , ಪ್ರವೀಣ್ ದುಬೆ, ಕಮಲೇಶ್ ನಾಗರಕೋಟಿ , ವಿಕ್ಕಿ ಓಸ್ತ್ವಾಲ್

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ