AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ನಿರ್ಮಿಸಿದ RCB ಮತ್ತು PBKS

IPL 2022: 206 ರನ್​ಗಳ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಆರಂಭ ಪಡೆದಿತ್ತು. ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಮೊದಲ 6 ಓವರ್​ಗಳಲ್ಲಿ 63 ರನ್ ಬಾರಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು.

IPL 2022: ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆ ನಿರ್ಮಿಸಿದ RCB ಮತ್ತು PBKS
PBKS vs RCB
TV9 Web
| Edited By: |

Updated on:Mar 28, 2022 | 5:00 PM

Share

205 ರನ್​ಗಳ ಟಾರ್ಗೆಟ್​…19 ಓವರ್​ಗಳಲ್ಲಿ ಚೇಸಿಂಗ್…ಇದು ಐಪಿಎಲ್​ನ 3ನೇ ಪಂದ್ಯದ (IPL 2022) ಸಂಕ್ಷಿಪ್ತ ಸ್ಕೋರ್ ವರದಿ. ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)  ಹಾಗೂ ಪಂಜಾಬ್ ಕಿಂಗ್ಸ್ (PBKS) ನಡುವಣ ಮುಖಾಮುಖಿ ಎಲ್ಲಾ ರೀತಿಯಲ್ಲೂ ಮನರಂಜನೆಯ ರಸದೌತಣವಾಗಿತ್ತು. ಆರ್​ಸಿಬಿ ಪರ ನಾಯಕ ಫಾಫ್ ಡುಪ್ಲೆಸಿಸ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ ಅಬ್ಬರಿಸಿದ್ದರು. ಅದರಲ್ಲೂ 57 ಎಸೆತಗಳಲ್ಲಿ 7 ಭರ್ಜರಿ ಸಿಕ್ಸರ್​ನೊಂದಿಗೆ ಡುಪ್ಲೆಸಿಸ್ 88 ರನ್​ ಸಿಡಿಸಿದರು. ಇನ್ನು ಕೊಹ್ಲಿ 29 ಎಸೆತಗಳಲ್ಲಿ ಅಜೇಯ 41 ರನ್ ಬಾರಿಸಿದ್ರೆ, ಅಂತಿಮ ಹಂತದಲ್ಲಿ ದಿನೇಶ್ ಕಾರ್ತಿಕ್ ಕೇವಲ 14 ಎಸೆತಗಳಲ್ಲಿ 32 ರನ್ ಚಚ್ಚಿದ್ದರು. ಅಲ್ಲಿಗೆ 20 ಓವರ್​ಗಳಲ್ಲಿ ಆರ್​ಸಿಬಿ ತಂಡದ ಮೊತ್ತ 205 ಕ್ಕೆ ಬಂದು ನಿಂತಿತು. ವಿಶೇಷ ಎಂದರೆ ಇದರಲ್ಲಿ 23 ರನ್​ಗಳು ಹೆಚ್ಚುವರಿಯಾಗಿ ಬಂದಿರುವುದು. ಅಂದರೆ 5 ಬೈ ರನ್, 6 ಲೆಗ್​ ಬೈ ರನ್, 12 ವೈಡ್ ಎಸೆಯುವ ಮೂಲಕ ಪಂಜಾಬ್ ಕಿಂಗ್ಸ್​ ಬೌಲರ್​​ಗಳು ಆರ್​ಸಿಬಿ 23 ಎಕ್ಸ್​ಟ್ರಾ ರನ್ ನೀಡಿದ್ದರು.

ಅದರಂತೆ 206 ರನ್​ಗಳ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಆರಂಭ ಪಡೆದಿತ್ತು. ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಮೊದಲ 6 ಓವರ್​ಗಳಲ್ಲಿ 63 ರನ್ ಬಾರಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟರು. ಆ ಬಳಿಕ ಬಂದ ಭಾನುಕಾ ರಾಜಪಕ್ಸೆ 4 ಭರ್ಜರಿ ಸಿಕ್ಸರ್​ನೊಂದಿಗೆ ಕೇವಲ 22 ಎಸೆತಗಳಲ್ಲಿ 43 ರನ್ ಸಿಡಿಸಿದರು. ಇನ್ನು ಅಂತಿಮ ಹಂತದಲ್ಲಿ ಶಾರೂಕ್ ಖಾನ್ ಎಚ್ಚರಿಕೆಯ ಆಟವಾಡಿದ್ರೆ, ಓಡಿಯನ್ ಸ್ಮಿತ್ ಕೇವಲ 8 ಎಸೆತಗಳಲ್ಲಿ 3 ಸಿಕ್ಸರ್​ನೊಂದಿಗೆ 25 ರನ್​ ಬಾರಿಸಿದರು. ಇದರೊಂದಿಗೆ ಪಂಜಾಬ್ ಕಿಂಗ್ಸ್ ತಂಡವು ಕೇವಲ 19 ಓವರ್​ಗಳಲ್ಲಿ 208 ರನ್​ ಕಲೆಹಾಕುವ ಮೂಲಕ ಗೆಲುವಿನ ಗುರಿ ಮುಟ್ಟಿತು. ವಿಶೇಷ ಎಂದರೆ ಆರ್​ಸಿಬಿ ಬೌಲರುಗಳು ಕೂಡ ಪಂಜಾಬ್ ಕಿಂಗ್ಸ್ ತಂಡಕ್ಕೆ ಧಾರಾಳವಾಗಿ ಹೆಚ್ಚುವರಿ ರನ್ ಬಿಟ್ಟುಕೊಟ್ಟಿದ್ದರು. ಬರೋಬ್ಬರಿ 21 ವೈಡ್ ಹಾಗೂ 1 ಬೈ ರನ್ ಮೂಲಕ ಆರ್​ಸಿಬಿ ಬೌಲರುಗಳು ಒಟ್ಟು 22 ಎಕ್ಸ್​ಟ್ರಾ ರನ್ ನೀಡಿದ್ದರು.

ಹೀಗೆ ಎರಡೂ ತಂಡಗಳ ಬೌಲರ್​ಗಳು ಒಟ್ಟು 45 ಎಕ್ಸ್​ಟ್ರಾ ರನ್​ ನೀಡುವ ಮೂಲಕ ಐಪಿಎಲ್​ ಇತಿಹಾಸದಲ್ಲೇ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅಂದರೆ ಐಪಿಎಲ್​ನಲ್ಲಿ ಒಂದೇ ಪಂದ್ಯದಲ್ಲಿ ಅತ್ಯಧಿಕ ಎಕ್ಸ್​ಟ್ರಾ ರನ್ ಮೂಡಿಬಂದ ಪಂದ್ಯವೆಂಬ ಅಪಖ್ಯಾತಿ ಇದೀಗ ಆರ್​​ಸಿಬಿ-ಪಂಜಾಬ್ ಕಿಂಗ್ಸ್ ನಡುವಣ ಪಂದ್ಯಕ್ಕೆ ದಕ್ಕಿದೆ. ಇದಕ್ಕೂ ಮುನ್ನ ಈ ಕೆಟ್ಟ ದಾಖಲೆ ಡೆಕ್ಕನ್ ಚಾರ್ಜರ್ಸ್ ಹಾಗೂ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡಗಳ ಹೆಸರಿನಲ್ಲಿತ್ತು.

2008 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಕ್ಕನ್ ಚಾರ್ಜರ್ಸ್​ ತಂಡಗಳು ಒಟ್ಟು 38 ಎಕ್ಸ್​ಟ್ರಾ ರನ್​ಗಳನ್ನು ನೀಡಿದ್ದು ಇದುವರೆಗಿನ ಕಳಪೆ ದಾಖಲೆಯಾಗಿತ್ತು. ಇದೀಗ ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಬೌಲರುಗಳು ಒಟ್ಟು 45 ಎಕ್ಸ್​ಟ್ರಾ ರನ್​ಗಳನ್ನು ನೀಡುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕಳಪೆ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಈ ಪಂದ್ಯವಾಡಿದ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಹೀಗಿದೆ.

ಆರ್​ಸಿಬಿ ಪ್ಲೇಯಿಂಗ್ 11: ಫಾಫ್ ಡುಪ್ಲೆಸಿಸ್, ಅನೂಜ್ ರಾವತ್, ವಿರಾಟ್ ಕೊಹ್ಲಿ, ಶೆರ್ಫಾನ್ ರುದರ್​ಫೋರ್ಡ್​, ದಿನೇಶ್ ಕಾರ್ತಿಕ್, ಡೇವಿಡ್ ವಿಲ್ಲಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಶಾರುಖ್ ಖಾನ್, ಒಡಿಯನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಸಂದೀಪ್ ಶರ್ಮಾ, ರಾಹುಲ್ ಚಾಹರ್

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

Published On - 4:53 pm, Mon, 28 March 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?