IPL 2022: ಬಲಿಷ್ಠ ತಂಡವಾಗಿದ್ದರೂ RCB ಎಡವಿದೆಲ್ಲಿ?

IPL 2022 Playoffs, RR vs RCB: ಇದೇ ಪಿಚ್​ನಲ್ಲಿ ಕಳೆದ ವರ್ಷ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 2 ವಿಕೆಟ್ ನಷ್ಟಕ್ಕೆ 224 ರನ್​ ಕಲೆಹಾಕಿತ್ತು. ಈ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಇಂಗ್ಲೆಂಡ್ 188 ರನ್ ಬಾರಿಸಿತ್ತು.

IPL 2022: ಬಲಿಷ್ಠ ತಂಡವಾಗಿದ್ದರೂ RCB ಎಡವಿದೆಲ್ಲಿ?
RCB
Follow us
| Updated By: ಝಾಹಿರ್ ಯೂಸುಫ್

Updated on: May 27, 2022 | 11:02 PM

ಐಪಿಎಲ್​ 2022ರ 2ನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಸೋಲುವ ಆರ್​ಸಿಬಿ ತಂಡವು ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದೆ. ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದರೂ ಆರ್​​ಸಿಬಿ ನಿರ್ಣಾಯಕ ಪಂದ್ಯ ಎಡವಿತ್ತು. ಅದರಲ್ಲೂ ಬ್ಯಾಟಿಂಗ್​ ಪಿಚ್​ನಲ್ಲಿ ಮುಗ್ಗರಿಸುವ ಮೂಲಕ ಸೋಲೊಪ್ಪಿಕೊಂಡಿರುವುದೇ ಅಚ್ಚರಿ. ಏಕೆಂದರೆ ಆರ್​ಸಿಬಿ ತಂಡದಲ್ಲಿ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿದ್ದರೂ ರಾಜಸ್ಥಾನ್ ರಾಯಲ್ಸ್​ಗೆ ಸ್ಪರ್ಧಾತ್ಮಕ ಗುರಿ ನೀಡುವಲ್ಲಿ ವಿಫಲವಾಯಿತು. ಹಾಗಿದ್ರೆ ಆರ್​ಸಿಬಿ ತಂಡವು ಎಡವಿದ್ದೆಲ್ಲಿ ಎಂದು ನೋಡೋಣ…

ಅಹಮದಾಬಾದ್ ಪಿಚ್​ ಬ್ಯಾಟ್ಸ್​ಮನ್​ಗಳಿಗೆ ಸ್ವರ್ಗ. ಇದಾಗ್ಯೂ ಈ ಪಿಚ್​ನಲ್ಲಿ ಆರ್​ಸಿಬಿ ಬ್ಯಾಟ್ಸ್​ಮನ್​ಗಳು ರನ್​ಗಳಿಸಲು ಪರದಾಡಿದರು. ಅದರಲ್ಲೂ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ 7 ರನ್​ಗಳಿಸಿ ಪವರ್​ಪ್ಲೇನಲ್ಲೇ ಹೊರನಡೆದರು. ಇನ್ನು ಪವರ್​ಪ್ಲೇನಲ್ಲಿ ಬ್ಯಾಟ್ ಬೀಸಿದ ಫಾಫ್ ಡುಪ್ಲೆಸಿಸ್ ಬರೋಬ್ಬರಿ 27 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 25 ರನ್ ಮಾತ್ರ.

ಇದಾಗ್ಯೂ ಮತ್ತೊಂದೆಡೆ ರಜತ್ ಪಾಟಿದಾರ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ಅಹಮದಾಬಾದ್​ ಪಿಚ್​ನಲ್ಲಿ ಅದು ನಿಧಾನಗತಿಯ ಬ್ಯಾಟಿಂಗ್ ಎಂದೇ ಹೇಳಬಹುದು. ಏಕೆಂದರೆ ಪಾಟಿದಾರ್ ಅರ್ಧಶತಕ ಪೂರೈಸಲು ತೆಗೆದುಕೊಂಡಿದ್ದು ಬರೋಬ್ಬರಿ 40 ಎಸೆತಗಳನ್ನು ಎಂಬುದು ಉಲ್ಲೇಖಾರ್ಹ.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಒಂದೆಡೆ ಫಾಫ್ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ರೆ, ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಮಾಡಿದರೂ ರಜತ್ ಪಾಟಿದಾರ್ ಹೆಚ್ಚಿನ ಡಾಟ್​ ಬಾಲ್​ಗಳನ್ನು ಆಡಿದರು. ಪರಿಣಾಮ ಆರ್​ಸಿಬಿ ಪವರ್​ಪ್ಲೇನಲ್ಲಿ ಕಲೆಹಾಕಿದ್ದು ಕೇವಲ 46 ರನ್​ ಮಾತ್ರ. ಇನ್ನು ಇದಾದ ಬಳಿಕ ಕೂಡ ಆರ್​ಸಿಬಿ ಬ್ಯಾಟ್ಸ್​ಮನ್​ಗಳು ವೇಗದ ಎಸೆತಗಳಲ್ಲಿ ರನ್​ಗಳಿಸಲು ಪರದಾಡಿದರು. ಪರಿಣಾಮ ವೇಗದ ಬೌಲರ್​ಗಳ 12 ಓವರ್​ಗಳಲ್ಲಿ ಆರ್​ಸಿಬಿ ಕಲೆಹಾಕಿದ್ದು ಕೇವಲ 73 ರನ್​ ಮಾತ್ರ.

ಇತ್ತ ಸ್ಪಿನ್ನರ್​ಗಳ ವಿರುದ್ದ ಅಬ್ಬರಿಸಿದ್ದ ಆರ್​ಸಿಬಿ ಬ್ಯಾಟ್ಸ್​ಮನ್​ಗಳು 8 ಓವರ್​ಗಳಲ್ಲಿ 76 ರನ್​ ಬಾರಿಸಿದ್ದರು. ಅಂದರೆ ಇಲ್ಲಿ ವೇಗಿಗಳನ್ನು ಎದುರಿಸುವಲ್ಲಿ ಆರ್​ಸಿಬಿ ಬ್ಯಾಟ್ಸ್​ಮನ್​ಗಳು ಎಡವಿದ್ದರು. ಅದರಲ್ಲೂ ಪವರ್​ಪ್ಲೇನಲ್ಲಿ ವೇಗಿಗಳ ಎದುರು ಆರ್​ಸಿಬಿ ಆಟಗಾರರಾದ ಫಾಫ್ ಡುಪ್ಲೆಸಿಸ್ ಹಾಗೂ ರಜತ್ ಪಾಟಿದಾರ್ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದು ಆರ್​ಸಿಬಿಗೆ ಮುಳುವಾಯಿತು.

ಮೊದಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ರಾಜಸ್ಥಾನ್ ರಾಯಲ್ಸ್ ವೇಗಿಗಳು ಅಂತಿಮ 5 ಓವರ್​ಗಳಲ್ಲಿ ಆರ್​ಸಿಬಿ ಮಧ್ಯಮ ಕ್ರಮಾಂಕವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಪರಿಣಾಮ ಆರ್​ಸಿಬಿ 8 ವಿಕೆಟ್ ನಷ್ಟಕ್ಕೆ 158 ರನ್​ಗಳಿಸಲಷ್ಟೇ ಶಕ್ತರಾದರು. ಈ ಸಾಧಾರಣ ಸ್ಕೋರ್​ಗಳಿಸುವ ಮೂಲಕ ಆರ್​ಸಿಬಿ ಅದಾಗಲೇ ಅರ್ಧ ಪಂದ್ಯವನ್ನು ಸೋತಿತ್ತು ಎನ್ನಬಹುದು.

ಏಕೆಂದರೆ ಅಹಮದಾಬಾದ್ ಪಿಚ್​​ನಲ್ಲಿನ ಅವರೇಜ್ ಸ್ಕೋರ್ 160. ಅಂದರೆ ಈ ಪಿಚ್​ನಲ್ಲಿ ಚೇಸಿಂಗ್ ತುಂಬಾ ಸುಲಭ. ಗೆಲ್ಲಬೇಕಿದ್ದರೆ ಕನಿಷ್ಠ 180 ಕ್ಕಿಂತ ಹೆಚ್ಚಿನ ರನ್​ಗಳಿಸಲೇಬೇಕು. ಇತ್ತ ಸಾಧಾರಣ ಸವಾಲು ಪಡೆದ ರಾಜಸ್ಥಾನ್ ರಾಯಲ್ಸ್​ಗೆ ಪವರ್​ಪ್ಲೇನಲ್ಲೇ ಪವರ್​ ತುಂಬುವ ಮೂಲಕ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಪವರ್ ತುಂಬಿದರು. ಆ ಮೂಲಕ ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಇತ್ತ ಬಟ್ಲರ್ ಅಬ್ಬರಕ್ಕೆ ನಲುಗಿದ ಆರ್​ಸಿಬಿ ಬೌಲರ್​ಗಳು ಲಯ ತಪ್ಪಿದರು.

ಇಲ್ಲಿ ಆರ್​ಸಿಬಿ ಬೌಲರ್​ಗಳು ಉತ್ತಮ ಪ್ರದರ್ಶನ ನೀಡದಿದ್ದರೂ, ಸೋಲಿಗೆ ಪ್ರಮುಖ ಕಾರಣ ಬ್ಯಾಟ್ಸ್​ಮನ್​ಗಳು ಎನ್ನಬಹುದು. ಏಕೆಂದರೆ ಬ್ಯಾಟ್ಸ್​ಮನ್​ಗಳಿಗೆ ಸ್ವರ್ಗದಂತಿದ್ದ ಪಿಚ್​ನಲ್ಲಿ ರನ್​ಗಳಿಸಲು ಪರದಾಡಿದ್ದು ಆರ್​ಸಿಬಿಗೆ ಮುಳುವಾಯಿತು. ಅದರಲ್ಲೂ ಅವರೇಜ್ ಸ್ಕೋರ್​ಗಳಿಸಲು ಕೂಡ ಸಾಧ್ಯವಾಗದೇ ಮೊದಲ ಇನಿಂಗ್ಸ್ ಮುಕ್ತಾಯದ ವೇಳೆಗೆ ಅರ್ಧ ಸೋಲೊಪ್ಪಿಕೊಂಡಿತು.

ಆದರೆ ರಾಜಸ್ಥಾನ್ ರಾಯಲ್ಸ್ ಆರಂಭಿಕರಾದ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಆರ್​ಸಿಬಿ ಪವರ್​ಪ್ಲೇನಲ್ಲಿ ಹೇಗೆ ಬ್ಯಾಟಿಂಗ್ ಮಾಡಬೇಕೆಂಬುದನ್ನು ತೋರಿಸಿ ಕೊಡುವಂತೆ ಬ್ಯಾಟ್ ಬೀಸಿದ್ದರು. ಅಲ್ಲದೆ ಮೊದಲ 6 ಓವರ್​ಗಳಲ್ಲಿ ರಾಜಸ್ಥಾನ್ ರಾಯಲ್ಸ್​ 67 ರನ್​ ಬಾರಿಸಿ ಉತ್ತಮ ಆರಂಭವನ್ನು ಪಡೆಯಿತು. ಈ ಮೂಲಕ ಗೆದ್ದು ಇದೀಗ 2008 ರ ಬಳಿಕ ಮತ್ತೊಮ್ಮೆ ಫೈನಲ್​ಗೆ ಲಗ್ಗೆಯಿಟ್ಟಿದೆ.

ಅಂದಹಾಗೆ ಇದೇ ಪಿಚ್​ನಲ್ಲಿ ಕಳೆದ ವರ್ಷ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 2 ವಿಕೆಟ್ ನಷ್ಟಕ್ಕೆ 224 ರನ್​ ಕಲೆಹಾಕಿತ್ತು. ಈ ಬೃಹತ್ ಟಾರ್ಗೆಟ್ ಅನ್ನು ಬೆನ್ನತ್ತಿದ ಇಂಗ್ಲೆಂಡ್ 188 ರನ್ ಬಾರಿಸಿತ್ತು. ಹಾಗೆಯೇ ಕಳೆದ ಸೀಸನ್ ಐಪಿಎಲ್​ನಲ್ಲಿ ಆರ್​ಸಿಬಿ ಈ ಪಿಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಒಂದು ಮ್ಯಾಚ್ ಆಡಿದೆ. ಆ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡ 171 ರನ್​ ಕಲೆಹಾಕಿತ್ತು. ಆದರೆ ಈ ಟಾರ್ಗೆಟ್ ಅನ್ನು ಚೇಸ್ ಮಾಡುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡ ಬಹುತೇಕ ಯಶಸ್ವಿಯಾಗಿತ್ತು. ಇದಾಗ್ಯೂ ಕೊನೆಯ ಓವರ್​ನಲ್ಲಿ 1 ರನ್​ನಿಂದ ಆರ್​ಸಿಬಿ ಆ ಪಂದ್ಯವನ್ನು ಗೆದ್ದುಕೊಂಡಿತ್ತು.  ಈ ಎರಡು ಪಂದ್ಯಗಳ ಫಲಿತಾಂಶವನ್ನು ಮತ್ತು ಆರ್​ಸಿಬಿ ತಂಡದ ಇಂದಿನ ಬ್ಯಾಟಿಂಗ್​ ಅನ್ನು ಹೋಲಿಸಿದರೆ, ಆರ್​ಸಿಬಿ ಎಡವಿದೆಲ್ಲಿ ಎಂಬುದರ ಸ್ಪಷ್ಟ ಚಿತ್ರಣ ಸಿಗುತ್ತೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ