AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs RCB Qualifier 2: ಇಂದಿನ ಪಂದ್ಯದಲ್ಲಿ RCB ತಂಡವೇ ಗೆಲ್ಲುವ ಫೇವರೇಟ್​, ಏಕೆಂದರೆ…

IPL 2022 Playoffs: ಉಭಯ ತಂಡಗಳು ಇದುವರೆಗೆ 27 ಪಂದ್ಯಗಳನ್ನು ಆಡಿದೆ. ಈ ವೇಳೆ ಆರ್​ಸಿಬಿ 13 ಬಾರಿ ಗೆದ್ದಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಗೆದ್ದಿರುವುದು 11 ಬಾರಿ ಮಾತ್ರ.

RR vs RCB Qualifier 2: ಇಂದಿನ ಪಂದ್ಯದಲ್ಲಿ RCB ತಂಡವೇ ಗೆಲ್ಲುವ ಫೇವರೇಟ್​, ಏಕೆಂದರೆ...
RR vs RCB Qualifier 2
TV9 Web
| Edited By: |

Updated on:May 27, 2022 | 3:55 PM

Share

IPL 2022: ಐಪಿಎಲ್ ಸೀಸನ್​​ 15 ರ 2ನೇ ಕ್ವಾಲಿಫೈಯರ್ ಪಂದ್ಯವು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ (RCB vs RR) ಮುಖಾಮುಖಿಯಾಗಲಿದ್ದು, ಇದರಲ್ಲಿ ಗೆದ್ದ ತಂಡ ಫೈನಲ್​ಗೆ ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯವು ಉಭಯ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯ. ಇಲ್ಲಿ ಎರಡೂ ತಂಡಗಳು ಬಲಿಷ್ಠವಾಗಿರುವ ಕಾರಣ ಯಾವ ತಂಡ ಫೈನಲ್​ ಪ್ರವೇಶಿಸಲಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಆದರೆ ಅಂಕಿಅಂಶಗಳ ಪ್ರಕಾರ ನಿರ್ಣಾಯಕ ಪಂದ್ಯದಲ್ಲಿ ಆರ್​ಆರ್​ ತಂಡಕ್ಕಿಂತ ಆರ್​ಸಿಬಿ ತಂಡವೇ ಮೇಲುಗೈ ಹೊಂದಿದೆ. ಅಂದರೆ ಆರ್‌ಸಿಬಿ ವಿರುದ್ಧದ ಪ್ಲೇಆಫ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆಲ್ಲಬೇಕಾದರೆ 7 ವರ್ಷಗಳ ಇತಿಹಾಸವನ್ನೇ ಬದಲಿಸಬೇಕಾಗುತ್ತದೆ.

ಏಕೆಂದರೆ ಉಭಯ ತಂಡಗಳು ಇದುವರೆಗೆ 27 ಪಂದ್ಯಗಳನ್ನು ಆಡಿದೆ. ಈ ವೇಳೆ ಆರ್​ಸಿಬಿ 13 ಬಾರಿ ಗೆದ್ದಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ಗೆದ್ದಿರುವುದು 11 ಬಾರಿ ಮಾತ್ರ. ಇದು ಹಳೆಯ ಅಂಕಿ ಅಂಶಗಳಾದರೆ, ಇತ್ತೀಚಿನ ಅಂಕಿ ಅಂಶದಲ್ಲೂ ಆರ್​ಸಿಬಿ ತಂಡವೇ ಮುಂದಿದೆ. ಅಂದರೆ ಕಳೆದ ಸೀಸನ್ ಹಾಗೂ ಈ ಸೀಸನ್​ನಲ್ಲಿನ ಅಂಕಿ ಅಂಶ ತೆಗೆದುಕೊಂಡರೆ, 4 ಪಂದ್ಯಗಳಲ್ಲಿ ಆರ್​ಸಿಬಿ ತಂಡ 3 ಬಾರಿ ಗೆದ್ದಿದೆ. 2021 ರ ಸೀಸನ್​ನಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ದ ಎರಡೂ ಪಂದ್ಯಗಳನ್ನು ಗೆದ್ದುಕೊಂಡುತ್ತು. ಈ ಬಾರಿ ಆಡಿದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದೆ. ಇನ್ನು 2ನೇ ಪಂದ್ಯದಲ್ಲಿ ರಾಜಸ್ಥಾನ್ ಗೆದ್ದಿದೆ.

ಅಂದರೆ ಈ ಬಾರಿ ಆಡಿದ ಪಂದ್ಯಗಳಲ್ಲಿ ಆರ್​ಸಿಬಿ ಒಂದು ಪಂದ್ಯ ಗೆದ್ದರೆ, ರಾಜಸ್ಥಾನ್ ಒಂದು ಮ್ಯಾಚ್ ಗೆದ್ದಿದೆ. ಇನ್ನು ಉಭಯ ತಂಡಗಳು ಐಪಿಎಲ್​ನ ಪ್ಲೇಆಫ್​ನಲ್ಲಿ ಒಂದು ಬಾರಿ ಮಾತ್ರ ಮುಖಾಮುಖಿಯಾಗಿದೆ. ಐಪಿಎಲ್ 2015 ರಲ್ಲಿ RCB ಮತ್ತು ರಾಜಸ್ಥಾನವು ಪ್ಲೇ ಆಫ್‌ ಪ್ರವೇಶಿಸಿತು. ಆ ಸೀಸನ್​ನ ಮೊದಲ ಎಲಿಮಿನೇಟರ್ ಪಂದ್ಯವನ್ನು 20 ಮಾರ್ಚ್ 2015 ರಂದು ಪುಣೆಯಲ್ಲಿ ಆಡಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 4 ವಿಕೆಟ್‌ಗೆ 180 ರನ್ ಗಳಿಸಿತು. ಗೆಲುವಿಗೆ 181 ರನ್‌ಗಳ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ತಂಡ 19 ಓವರ್‌ಗಳಲ್ಲಿ 109 ರನ್‌ಗಳಿಗೆ ಆಲೌಟ್ ಆಯಿತು. ಆ ಪಂದ್ಯವನ್ನು ಆರ್​ಸಿಬಿ ತಂಡವು 71 ರನ್​ಗಳಿಂದ ಗೆದ್ದಿದ್ದು ಈಗ ಇತಿಹಾಸ.

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಇದಾಗ್ಯೂ ಒಟ್ಟಾರೆ ಮುಖಾಮುಖಿ ಹಾಗೂ ಪ್ಲೇಆಫ್​ ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಆರ್​ಸಿಬಿ ತಂಡವೇ ಮೇಲುಗೈ ಹೊಂದಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಗೆಲ್ಲುವ ಫೇವರೇಟ್ ತಂಡವಾಗಿ ಆರ್​ಸಿಬಿ ಗುರುತಿಸಿಕೊಂಡಿದೆ.

ರಾಜಸ್ಥಾನ್ ರಾಯಲ್ಸ್ ತಂಡ: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಒಬೆಡ್ ಮೆಕಾಯ್, ಯುಜ್ವೇಂದ್ರ ಚಾಹಲ್, ಕರುಣ್ ನಾಯರ್, ಆರ್ ಅಶ್ವಿನ್, ಜೇಮ್ಸ್ ನೀಶಮ್, ರಸ್ಸಿ ವಂಡರ್​ ಡಸ್ಸೆನ್, ನವದೀಪ್ ಸೈನಿ, ಕೆಸಿ ಕಾರಿಯಪ್ಪ, ಡೇರಿಲ್ ಮಿಚೆಲ್, ತೇಜಸ್ ಬರೋಕಾ, ಕುಲದೀಪ್ ಯಾದವ್, ಅನುನಯ್ ಸಿಂಗ್, ಕುಲದೀಪ್ ಸೇನ್, ಧ್ರುವ್ ಜುರೆಲ್, ಶುಭಂ ಗರ್ವಾಲ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಅನೇಶ್ವರ್ ಗೌತಮ್ , ಶೆರ್ಫೇನ್ ರುದರ್‌ಫೋರ್ಡ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ಚಾಮ ಮಿಲಿಂದ್, ಜೇಸನ್ ಬೆಹ್ರೆಂಡಾರ್ಫ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಫಿನ್ ಅಲೆನ್, ಸಿದ್ದಾರ್ಥ್ ಕೌಲ್

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:54 pm, Fri, 27 May 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?