AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸತತ ಸೋಲಿನೊಂದಿಗೆ ಸಂಕಷ್ಟಕ್ಕೆ ಸಿಲುಕಿದ ಕೆಎಲ್ ರಾಹುಲ್ ಪಡೆ

IPL 2022 Playoffs Scenario: ಒಂದು ವೇಳೆ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಸೋತರೆ ನೆಟ್​ ರನ್​ ರೇಟ್ ಕಾರಣದಿಂದ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿಯಬಹುದು.

IPL 2022: ಸತತ ಸೋಲಿನೊಂದಿಗೆ ಸಂಕಷ್ಟಕ್ಕೆ ಸಿಲುಕಿದ ಕೆಎಲ್ ರಾಹುಲ್ ಪಡೆ
Lucknow Super Giants
TV9 Web
| Edited By: |

Updated on: May 16, 2022 | 5:17 PM

Share

IPL 2022: ಈ ಬಾರಿಯ ಐಪಿಎಲ್​ ರೋಚಕ ತಿರುವುಗಳಿಗೆ ಸಾಕ್ಷಿಯಾಗುತ್ತಿದೆ. ಏಕೆಂದರೆ ವಾರದ ಹಿಂದೆಯಷ್ಟೇ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದ ತಂಡವೊಂದು ಇದೀಗ ಪ್ಲೇಆಫ್​ ಪ್ರವೇಶಿಸಲು ಮಾಡು ಇಲ್ಲವೇ ಮಡಿ ಪಂದ್ಯವಾಡಬೇಕಾಗಿ ಬಂದಿದೆ. ಹೌದು, ಈ ಬಾರಿಯ ಐಪಿಎಲ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು 11 ಪಂದ್ಯಗಳಲ್ಲಿ 9 ಗೆಲುವು ದಾಖಲಿಸಿ 16 ಪಾಯಿಂಟ್ಸ್ ಕಲೆಹಾಕಿತ್ತು. ಈ ಮೂಲಕ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್ ಗೇರುವ ಸನಿಹದಲ್ಲಿತ್ತು. ಆದರೆ ಆ ಬಳಿಕ ನಡೆದ ಪಂದ್ಯಗಳಲ್ಲಿ ಲಕ್ನೋ ತಂಡದ ಲೆಕ್ಕಚಾರಗಳು ತಲೆಕೆಳಗಾಗಿದೆ. ಆಡಿದ 2 ಪಂದ್ಯಗಳಲ್ಲೂ ಸೋಲುವ ಮೂಲಕ ಇದೀಗ 13 ಪಂದ್ಯಗಳಿಂದ 16 ಪಾಯಿಂಟ್ಸ್ ಗಳಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.

ಪ್ಲೇಆಫ್​ಗೆ ಪ್ರವೇಶಿಸಲು ಬೇಕಿದ್ದ ಒಂದು ಗೆಲುವಿನ ಹುಡುಕಾಟದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ದ ಕೇವಲ 82 ರನ್​ಗಳಿಗೆ ಆಲೌಟ್ ಆಗುವ ಮೂಲಕ ನಿರಾಸೆ ಮೂಡಿಸಿತು. ಇದಾಗ್ಯೂ ರಾಜಸ್ಥಾನ್ ರಾಯಲ್ಸ್ ವಿರುದ್ದ ಗೆದ್ದು ಪ್ಲೇಆಫ್ ಪ್ರವೇಶಿಸಲಿದೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿದೆ. ಆರ್​ಆರ್​ ವಿರುದ್ದದ ಪಂದ್ಯದಲ್ಲೂ 24 ರನ್​ಗಳಿಂದ ಸೋಲನುಭವಿಸಿದೆ. ಇತ್ತ ಕಳೆದ 2 ಪಂದ್ಯಗಳಲ್ಲಿ ಸೋಲನುಭವಿಸುವ ಮೂಲಕ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಪ್ಲೇಆಫ್​ ಪ್ರವೇಶಿಸಲು ತನ್ನ ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಬಂದಿದೆ. ಕೆಕೆಆರ್ ವಿರುದ್ದ ಉತ್ತಮ ನೆಟ್​ ರನ್​​ ರೇಟ್​ನೊಂದಿಗೆ ಗೆದ್ದರೆ ಮಾತ್ರ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ಲೇಆಫ್ ಪ್ರವೇಶಿಸಬಹುದು.

ಒಂದು ವೇಳೆ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಸೋತರೆ ನೆಟ್​ ರನ್​ ರೇಟ್ ಕಾರಣದಿಂದ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿಯಬಹುದು. ಅಂದರೆ ಇಲ್ಲಿ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ದ ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್​ ಪ್ರವೇಶಿಸಬಹುದು. ಸೋತರೆ 16 ಪಾಯಿಂಟ್ಸ್​ನೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ 3ನೇ ಅಥವಾ4ನೇ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದೆ. ಇತ್ತ ಪಂಜಾಬ್ ಕಿಂಗ್ಸ್​ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳಿಗೂ 16 ಪಾಯಿಂಟ್ಸ್​ಗಳಿಸುವ ಅವಕಾಶವಿದೆ. ಹಾಗೆಯೇ ಆರ್​ಸಿಬಿ ತಂಡವು ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ದ ಗೆದ್ದರೆ 16 ಪಾಯಿಂಟ್ಸ್ ಆಗಲಿದೆ.

ಇದನ್ನೂ ಓದಿ
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!
Image
IPL 2022: ಸೋಲುತ್ತೆ ನಿಜ, ಆದರೆ ಇದು?, LSG ಆಟಗಾರರ ವಿರುದ್ದ ಗಂಭೀರ್ ಗರಂ
Image
IPL 2022: ಅಂದು ಲಯನ್ಸ್, ಇಂದು ಟೈಟನ್ಸ್: ಗುಜರಾತ್ ತಂಡದ ಫ್ಯಾನ್ಸ್​ಗೆ ಹೊಸ ಚಿಂತೆ ಶುರು..!

ಹೀಗಾಗಿ ಕೆಕೆಆರ್ ವಿರುದ್ದ ಲಕ್ನೋ ಸೂಪರ್ ಜೈಂಟ್ಸ್ ಸೋತರೆ, ಲೀಗ್ ಹಂತದ ಕೊನೆಯ ಆರ್​ಸಿಬಿ, ಪಂಜಾಬ್ ಕಿಂಗ್ಸ್ ಅಥವಾ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ರನ್​ ರೇಟ್​ ಲೆಕ್ಕಾಚಾರಗಳು ಬರಲಿದೆ. ಇಲ್ಲಿ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಅಥವಾ ಪಂಜಾಬ್ ಕಿಂಗ್ಸ್​ ಉತ್ತಮ ನೆಟ್ ರನ್​ ರೇಟ್ ಪಡೆದರೆ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಪ್ಲೇಆಫ್​ನಿಂದ ಹೊರಬೀಳಬಹುದು.

ಏಕೆಂದರೆ ಗುಜರಾತ್ ಟೈಟನ್ಸ್ ವಿರುದ್ದ ಆರ್​ಸಿಬಿ ಭರ್ಜರಿ ಜಯ ಸಾಧಿಸಿದ್ರೆ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಅಥವಾ ಪಂಜಾಬ್ ಕಿಂಗ್ಸ್ ತಂಡಗಳು ಮುಂದಿನ 2 ಪಂದ್ಯಗಳಲ್ಲಿ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ಗೆಲುವು ದಾಖಲಿಸಿದರೆ ಪಾಯಿಂಟ್ಸ್​ ಟೇಬಲ್​ನಲ್ಲಿ ಬದಲಾವಣೆ ಆಗಲಿದೆ. ಇದರಿಂದ ನೆಟ್ ರನ್ ರೇಟ್ ಕಾರಣದಿಂದ ಲಕ್ನೋ ಸೂಪರ್ ಜೈಂಟ್ಸ್​ ತಂಡವು 5ನೇ ಸ್ಥಾನಕ್ಕೆ ಕುಸಿಯಬಹುದು. ಹೀಗಾಗಿ ಕೆಕೆಆರ್​ ವಿರುದ್ದದ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲುವ ಮೂಲಕ ಪ್ಲೇಆಫ್ ಪ್ರವೇಶಿಸಬೇಕಾದ ಅನಿವಾರ್ಯತೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಮುಂದಿದೆ.

ಒಟ್ಟಿನಲ್ಲಿ ಸತತ ಗೆಲುವಿನ ಮೂಲಕ ನಾಗಾಲೋಟ ಮುಂದುವರೆಸಿದ್ದ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಬ್ಯಾಕ್ ಟು ಬ್ಯಾಕ್ ಸೋಲುವ ಮೂಲಕ ಇದೀಗ ಮಾಡು ಇಲ್ಲವೇ ಮಡಿ ಎಂಬ ಸ್ಥಿತಿಯಲ್ಲಿದೆ. ಅದರಂತೆ ಕೆಕೆಆರ್ ವಿರುದ್ದ ಗೆಲ್ಲುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ