AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Qualifier 1: ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಬಲಿಷ್ಠ ತಂಡಗಳ ಎಂಟ್ರಿ

IPL 2022 Qualifier 1: GT vs RR:- 2008 ರಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ರಾಜಸ್ಥಾನ್ ರಾಯಲ್ಸ್ ಮತ್ತೆ ಪ್ರಶಸ್ತಿ ಮುಡಿಗೇರಿಸಿಕೊಂಡಿಲ್ಲ. ಅದರಲ್ಲೂ 2018 ರಲ್ಲಿ ಕೊನೆಯ ಬಾರಿಗೆ ಪ್ಲೇಆಫ್ ಪ್ರವೇಶಿಸಿದ್ದ ಆರ್​ಆರ್ ಇದೀಗ ಬರೋಬ್ಬರಿ 4 ವರ್ಷಗಳ ಬಳಿಕ ಮತ್ತೆ ನಿರ್ಣಾಯಕ ಪಂದ್ಯಗಳ ಸುತ್ತಿಗೆ ಪ್ರವೇಶಿಸಿದೆ.

IPL 2022 Qualifier 1: ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಬಲಿಷ್ಠ ತಂಡಗಳ ಎಂಟ್ರಿ
IPL 2022 Qualifier 1
TV9 Web
| Edited By: |

Updated on: May 21, 2022 | 2:32 PM

Share

IPL 2022: ಐಪಿಎಲ್ ಸೀಸನ್​ 15 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಪ್ಲೇಆಫ್ ಆಡುವ ಮೂರು ತಂಡಗಳು ಫೈನಲ್ ಆಗಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (MI vs DC) ನಡುವಣ ಪಂದ್ಯದ ಬಳಿಕ ಪ್ಲೇಆಫ್​ಗೆ ಅರ್ಹತೆ ಪಡೆಯುವ ನಾಲ್ಕನೇ ತಂಡ ಯಾವುದೆಂದು ನಿರ್ಧಾರವಾಗಲಿದೆ. ಇದಾಗ್ಯೂ ನಾಲ್ಕನೇ ತಂಡದ ಎಂಟ್ರಿಯೊಂದಿಗೆ ಪಾಯಿಂಟ್ಸ್ ಟೇಬಲ್​​ನಲ್ಲಿ ಬದಲಾವಣೆಯಾಗುವುದಿಲ್ಲ. ಹೀಗಾಗಿ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಎರಡು ತಂಡಗಳು ಫೈನಲ್ ಆಗಿವೆ. ಅದರಂತೆ ಮೊದಲ ಕ್ವಾಲಿಫೈಯರ್ ಮುಖಾಮುಖಿಯಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಲಿದೆ.

ಕೊನೆಯ ಲೀಗ್ ಪಂದ್ಯಕ್ಕೂ ಮುನ್ನ ಪಾಯಿಂಟ್ ಟೇಬಲ್​ನಲ್ಲಿ 3ನೇ ಸ್ಥಾನದಲ್ಲಿದ್ದ ರಾಜಸ್ಥಾನ್ ರಾಯಲ್ಸ್ ತಂಡವು ಸಿಎಸ್​ಕೆ ತಂಡವನ್ನು ಮಣಿಸಿ 18 ಪಾಯಿಂಟ್ಸ್​ ಕಲೆಹಾಕಿದೆ. ಈ ಮೂಲಕ 18 ಪಾಯಿಂಟ್ಸ್​ಗಳಿಸಿ 2ನೇ ಸ್ಥಾನದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ನೆಟ್​ ರನ್​ ರೇಟ್ ಮೂಲಕ ಹಿಂದಿಕ್ಕಿದೆ. ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್​ +0.251 ನೆಟ್ ರನ್​ ರೇಟ್ ಹೊಂದಿದ್ದರೆ, ರಾಜಸ್ಥಾನ್ ರಾಯಲ್ಸ್ +0.298 ನೆಟ್​ ರನ್ ರೇಟ್ ಪಡೆದುಕೊಂಡಿದೆ. ಈ ಮೂಲಕ ಲಕ್ನೋಗಿಂತ 0.047 ತುಸು ಹೆಚ್ಚು ನೆಟ್​ ರನ್ ರೇಟ್ ಪಡೆದು ರಾಜಸ್ಥಾನ್ ರಾಯಲ್ಸ್​ ಸೇಫ್ ಝೋನ್​ಗೇರಿದೆ.

ಅದರಂತೆ ಮೇ 24 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೇರಲಿದೆ. ಇತ್ತ ಕೂದಳೆಲೆಯ ಅಂತರದಿಂದ ನೆಟ್​ ರನ್​ ರೇಟ್​ನಲ್ಲಿ ಹಿಂದುಳಿಯುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡವು ಎಲಿಮಿನೇಟರ್ ಪಂದ್ಯವಾಡಬೇಕಾಗಿ ಬಂದಿದೆ.

ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ಲಾಭವೇನು? ಪಾಯಿಂಟ್ಸ್​ ಟೇಬಲ್​ನಲ್ಲಿ ಮೊದಲೆರಡು ಸ್ಥಾನದಲ್ಲಿರುವ ತಂಡಗಳು ಮೊದಲ ಕ್ವಾಲಿಫೈಯರ್ ಪಂದ್ಯವಾಡಲಿದೆ. ಈ ಪಂದ್ಯವಾಡುವ ಮುಖ್ಯ ಲಾಭವೆಂದರೆ ಗೆದ್ದರೆ ನೇರವಾಗಿ ಫೈನಲ್​ಗೆ ಪ್ರವೇಶಿಸಬಹುದು. ಒಂದು ವೇಳೆ ಸೋತರೆ 2ನೇ ಕ್ವಾಲಿಫೈಯರ್ ಪಂದ್ಯವಾಡುವ ಅವಕಾಶ ದೊರೆಯಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೋತ ತಂಡದೊಡನೆ ಪಂದ್ಯವಾಡಬೇಕಾಗುತ್ತದೆ.

ಇಲ್ಲಿ ಮೊದಲ ಅವಕಾಶದಲ್ಲಿ ಸೋತರೂ, 2ನೇ ಕ್ವಾಲಿಫೈಯರ್ ಪಂದ್ಯದ ಮೂಲಕ ಫೈನಲ್​ಗೆ ಎಂಟ್ರಿ ಕೊಡುವ ಚಾನ್ಸ್ ಮೊದಲ ಕ್ವಾಲಿಫೈಯರ್​ ಪಂದ್ಯವಾಡುವ ತಂಡಗಳಿಗೆ ಇರಲಿದೆ. ಅಂದರೆ ಮೊದಲ ಕ್ವಾಲಿಫೈಯರ್ ಪಂದ್ಯವಾಡುವ ತಂಡಗಳಿಗೆ ಫೈನಲ್​ ಪ್ರವೇಶಿಸಲು ಎರಡು ಅವಕಾಶ ಸಿಗಲಿದೆ. ಮತ್ತೊಂದೆಡೆ ಎಲಿಮಿನೇಟರ್ ಪಂದ್ಯವಾಡುವ ತಂಡಗಳಲ್ಲಿ ಸೋತ ತಂಡ ನೇರವಾಗಿ ಐಪಿಎಲ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಕೊನೆಯ ಲೀಗ್ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲ ಕ್ವಾಲಿಫೈಯರ್​ನಲ್ಲಿ ಅವಕಾಶ ಪಡೆದು ಸೇಫ್ ಝೋನ್​ನಲ್ಲಿದೆ.

ಅಂದಹಾಗೆ 2008 ರಲ್ಲಿ ಚೊಚ್ಚಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ರಾಜಸ್ಥಾನ್ ರಾಯಲ್ಸ್ ಮತ್ತೆ ಪ್ರಶಸ್ತಿ ಮುಡಿಗೇರಿಸಿಕೊಂಡಿಲ್ಲ. ಅದರಲ್ಲೂ 2018 ರಲ್ಲಿ ಕೊನೆಯ ಬಾರಿಗೆ ಪ್ಲೇಆಫ್ ಪ್ರವೇಶಿಸಿದ್ದ ಆರ್​ಆರ್ ಇದೀಗ ಬರೋಬ್ಬರಿ 4 ವರ್ಷಗಳ ಬಳಿಕ ಮತ್ತೆ ನಿರ್ಣಾಯಕ ಪಂದ್ಯಗಳ ಸುತ್ತಿಗೆ ಪ್ರವೇಶಿಸಿದೆ. ಈ ಮೂಲಕ ಈ ಬಾರಿ ತನ್ನ ಪ್ರಶಸ್ತಿ ಬರವನ್ನು ನೀಗಿಸಿಕೊಳ್ಳುವ ತವಕದಲ್ಲಿದೆ ರಾಜಸ್ಥಾನ್ ರಾಯಲ್ಸ್​. ಮತ್ತೊಂದೆಡೆ ಚೊಚ್ಚಲ ಸೀಸನ್​ನಲ್ಲಿ ಗುಜರಾತ್ ಟೈಟನ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆದು ಮೊದಲ ಸೀಸನ್​ನಲ್ಲೇ ಚಾಂಪಿಯನ್ ಪಟ್ಟ ಅಲಂಕರಿಸುವ ಇರಾದೆಯಲ್ಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್