AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RR vs KKR: ಐಪಿಎಲ್​ನಲ್ಲಿಂದು ಹೈವೋಲ್ಟೇಜ್ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಜಸ್ತಾನ್-ಕೋಲ್ಕತ್ತಾ

Rajasthan Royals vs Kolkata Knight Riders: ಐಪಿಎಲ್​​ನಲ್ಲಿಂದು ಸೋಲಿನ ಮುಖಮಾಡಿರುವ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ಮುಖಾಮುಖಿ ಆಗಲಿದೆ.

RR vs KKR: ಐಪಿಎಲ್​ನಲ್ಲಿಂದು ಹೈವೋಲ್ಟೇಜ್ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿ ರಾಜಸ್ತಾನ್-ಕೋಲ್ಕತ್ತಾ
RR vs KKR IPL 2022
TV9 Web
| Edited By: |

Updated on: Apr 18, 2022 | 8:48 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL) ಬಹುಮುಖ್ಯ ಪಂದ್ಯ ನಡೆಯಲಿದೆ. ಸೋಲಿನ ಮುಖಮಾಡಿರುವ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಹಾಗೂ ಶ್ರೇಯಸ್ ಅಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ (RR vs KKR)​ ತಂಡ ಮುಖಾಮುಖಿ ಆಗಲಿದೆ. ಪಾಯಿಂಟ್ ಪಟ್ಟಿಯಲ್ಲಿ ಮೇಲೇಳಲು ಉಭಯ ತಂಡಗಳು ಗೆಲ್ಲಲೇ ಬೇಕಾದ ಒತ್ತದಡದಲ್ಲಿರುವ ಕಾರಣ ಮುಂಬೈನ ಬ್ರಬೌರ್ನ್ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ರಾಜಸ್ಥಾನ್ ರಾಯಲ್ಸ್ (Rajastan Royals) ತಂಡ ಆಡಿದ ಐದು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು ಎರಡರಲ್ಲಿ ಸೋಲುಂಡು ಒಟ್ಟು 6 ಅಂಕದೊಂದಿಗೆ ಐದನೇ ಸ್ಥಾನದಲ್ಲಿದೆ. ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರನೇ ಸ್ಥಾನದಲ್ಲಿದೆ. ಆಡಿದ ಆರು ಪಂದ್ಯಗಳ ಪೈಕಿ ಮೂರರಲ್ಲಿ ಗೆಲುವು, ಮೂರರಲ್ಲಿ ಸೋಲು ಕಂಡು ಒಟ್ಟು 6 ಅಂಕ ಹೊಂದಿದೆ. ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರಿದ್ದರೂ ಲಕ್ ಕೈ ಹಿಡಿಯುತ್ತಿಲ್ಲ.

ಕೋಲ್ಕತ್ತಾದ ಬ್ಯಾಟರ್‌ಗಳ ಪೈಕಿ ಆ್ಯಂಡ್ರೆ ರಸೆಲ್ ಅವರನ್ನು ಹೊರತುಪಡಿಸಿದರೆ ಉಳಿದ ಯಾರಿಗೂ ಸ್ಥಿರ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಸೀಸ್ ಬ್ಯಾಟರ್ ಆರನ್ ಫಿಂಚ್ ಸಿಕ್ಕ ಮೊದಲ ಅವಕಾಶವನ್ನು ಕೈಚೆಲ್ಲಿದ್ದಾರೆ. ಸ್ವತಃ ನಾಯಕ ಶ್ರೇಯಸ್ ಅಯ್ಯರ್ ಅವರೇ ಫಾರ್ಮ್‌ನಲ್ಲಿ ಇಲ್ಲದಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ನಿತೇಶ್ ರಾಣಾ, ವೆಂಕಟೇಶ್ ಅಯ್ಯರ್ ಮತ್ತು ಸ್ಯಾಮ್ ಬಿಲಿಂಗ್ಸ್ ಅವರಿಗೂ ನಿರೀಕ್ಷೆಗೆ ತಕ್ಕಂತೆ ಆಡಲು ಆಗಲಿಲ್ಲ. ಬೌಲಿಂಗ್ ವಿಭಾಗದಲ್ಲಿ ಉಮೇಶ್ ಯಾದವ್ ಆರಂಭಿಕ ಮುನ್ನಡೆ ತಂದುಕೊಡುತ್ತಿದ್ದರೆ, ಮಿಸ್ಟ್ರಿ ಸ್ಪಿನ್ನರ್ ಖ್ಯಾತಿಯ ವರುಣ್ ಚಕ್ರವರ್ತಿ, ಸುನೀಲ್ ನಾರಾಯಣ್, ಪ್ಯಾಟ್ ಕಮ್ಮಿನ್ಸ್ ಏರಿಳಿತ ಮುಂದುವರಿದಿದೆ.

ಇತ್ತ ರಾಜಸ್ಥಾನ್ ಪರ ಬ್ಯಾಟಿಂಗ್ ವಿಭಾಗದಲ್ಲಿ ಜೋಸ್ ಬಟ್ಲರ್ (272ರನ್) ಹಾಗೂ ಬೌಲಿಂಗ್‌ನಲ್ಲಿ ಯುಜ್ವೇಂದ್ರ ಚಾಹಲ್ (12 ವಿಕೆಟ್) ಹೊರತುಪಡಿಸಿ ಇತರರಿಂದ ನಿರೀಕ್ಷಿತ ನಿರ್ವಹಣೆ ಬರುತ್ತಿಲ್ಲ. ರವಿಚಂದ್ರನ್ ಅಶ್ವಿನ್ ಫಾರ್ಮ್‌ನಲ್ಲಿಲ್ಲದೆ ಇರುವುದು ತಂಡದ ಚಿಂತೆ ಹೆಚ್ಚಿಸಿದೆ. ಈವರೆಗೆ ಅವರ ಖಾತೆಗೆ ಒಂದು ವಿಕೆಟ್ ಮಾತ್ರ ಸೇರಿದೆ. ನಾಯಕ ಸಂಜು ಸ್ಯಾಮ್ಸನ್ ಮತ್ತು ಕರ್ನಾಟಕದ ದೇವದತ್ತ ಪಡಿಕ್ಕಲ್ ಅವರ ಮೇಲೆ ತಂಡ ನಿರೀಕ್ಷೆ ಇರಿಸಿಕೊಂಡಿದೆ. ಶಿಮ್ರೋನ್ ಹೆಟ್ಮೇರ್ ತಮ್ಮ ಕೈಲಾದಷ್ಟು ಕೊಡುಗೆ ನೀಡುತ್ತಿದ್ದಾರೆ. ರಿಯಾನ್ ಪರಾಗ್ ಯಾವ ವಿಭಾಗದಲ್ಲೂ ಮಿಂಚುತ್ತಿಲ್ಲ.

ಸಂಭಾವ್ಯ ಪ್ಲೇಯಿಂಗ್ XI:

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕುಲದೀಪ್ ಸೇನ್, ಯುಜ್ವೇಂದ್ರ ಚಾಹಲ್, ಪ್ರಸಿದ್ಧ್ ಕೃಷ್ಣ, ರಾಸಿ ವ್ಯಾನ್ ಡೆರ್ ಡುಸ್ಸೆನ್.

ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್ (ನಾಯಕ), ಆರೋನ್ ಫಿಂಚ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಆಂಡ್ರೆ ರಸೆಲ್, ಶೆಲ್ಡನ್ ಜಾಕ್ಸನ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಅಮನ್ ಖಾನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

ಉಭಯ ತಂಡಗಳು ಐಪಿಎಲ್​ನಲ್ಲಿ ಇದುವರೆಗೆ 25 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಕೆಕೆಆರ್ 13 ಪಂದ್ಯವನ್ನು ಗೆದ್ದರೆ ರಾಜಸ್ಥಾನ ರಾಯಲ್ಸ್ 11 ಪಂದ್ಯ ಗೆದ್ದ ಇತಿಹಾಸವಿದೆ. ಒಂದು ಪಂದ್ಯ ರದ್ದಾಗಿದೆ.

GT vs CSK: ಸಿಎಸ್​ಕೆ ಗೆಲುವಿಗೆ ಕಿಲ್ಲರ್ ಆದ ಮಿಲ್ಲರ್: ಈ ಥ್ರಿಲ್ಲರ್ ಪಂದ್ಯ ಹೇಗಿತ್ತು ನೋಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ