AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ವಿರುದ್ದ ಸೋತರೂ ವಿಶೇಷ ದಾಖಲೆ ಬರೆದ RCB

IPL 2022: ಮೂರನೇ ವಿಕೆಟ್​ಗೆ ಶಿವಂ ದುಬೆ ಹಾಗೂ ರಾಬಿನ್ ಉತ್ತಪ್ಪ ಜೋಡಿ 165 ರನ್​ಗಳ ಜೊತೆಯಾಟವಾಡಿದರು. ಈ ವೇಳೆ 50 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 88 ರನ್​ ಬಾರಿಸಿದ್ದ ರಾಬಿನ್ ಉತ್ತಪ್ಪ ಔಟಾದರು.

IPL 2022: CSK ವಿರುದ್ದ ಸೋತರೂ ವಿಶೇಷ ದಾಖಲೆ ಬರೆದ RCB
RCB
TV9 Web
| Updated By: ಝಾಹಿರ್ ಯೂಸುಫ್|

Updated on: Apr 13, 2022 | 3:56 PM

Share

IPL 2022: ಐಪಿಎಲ್​ನ 22 ಪಂದ್ಯದಲ್ಲಿ ಆರ್​ಸಿಬಿ ತಂಡ ಸಿಎಸ್​ಕೆ (RCB vs CSK) ವಿರುದ್ದ ಸೋತಿದೆ. ಆದರೆ ಸೋಲಿನ ಹೊರತಾಗಿಯೂ ಆರ್​ಸಿಬಿ ತಂಡವು ವಿಶೇಷ ದಾಖಲೆಯೊಂದನ್ನು ಬರೆದಿದೆ. ಸಿಎಸ್​ಕೆ ನೀಡಿದ 217 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಆರ್​ಸಿಬಿ ಉತ್ತಮ ಪೈಪೋಟಿ ನೀಡಿತ್ತು. ಅದರಲ್ಲೂ ದಿನೇಶ್ ಕಾರ್ತಿಕ್ ಇರುವವರೆಗೂ ಪಂದ್ಯ ಆರ್​ಸಿಬಿ ಕೈಯಲ್ಲಿತ್ತು. ಆದರೆ ಡಿಕೆ ಔಟಾಗುತ್ತಿದ್ದಂತೆ ಸಿಎಸ್​ಕೆ ತಂಡವು ಗೆಲುವನ್ನು ಖಚಿತಪಡಿಸಿದರು. ಇದಾಗ್ಯೂ ಆರ್​ಸಿಬಿ ತಂಡವು 9 ವಿಕೆಟ್ ನಷ್ಟಕ್ಕೆ 193 ರನ್​ಗಳಿಸಿ ವಿಶೇಷ ದಾಖಲೆ ಬರೆದಿದೆ. ಅಂದರೆ ಸಿಎಸ್​ಕೆ ವಿರುದ್ದ ಚೇಸಿಂಗ್​ನಲ್ಲಿ ಇದುವರೆಗೆ ಆರ್​ಸಿಬಿ 170 ಕ್ಕಿಂತ ಅಧಿಕ ಮೊತ್ತಗಳಿಸಿರಲಿಲ್ಲ.

ಕಳೆದ 14 ಸೀಸನ್ ಐಪಿಎಲ್​ನಲ್ಲಿ ಆರ್​ಸಿಬಿ ಸಿಎಸ್​ಕೆ ವಿರುದ್ದ ಚೇಸಿಂಗ್​ನಲ್ಲಿ ಗಳಿಸಿದ ಅತ್ಯಧಿಕ ಸ್ಕೋರ್ ಎಂದರೆ 165. ಆದರೆ ಈ ಬಾರಿ 193 ರನ್​ಗಳಿಸುವ ಭರ್ಜರಿ ಪೈಪೋಟಿ ನೀಡಿದೆ. ಅಲ್ಲದೆ ಈ ಹಿಂದಿನ ದಾಖಲೆಯನ್ನು ಅಳಿಸಿ ಹಾಕಿ ಸಿಎಸ್​ಕೆಗೆ ಕಠಿಣ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕಳೆದ 14 ಸೀಸನ್ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು ಚೇಸಿಂಗ್​ನಲ್ಲಿ ಇದೇ ಮೊದಲ ಬಾರಿಗೆ ಅತ್ಯಧಿಕ ರನ್ ಗಳಿಸಿ ಗಮನ ಸೆಳೆದಿದೆ.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್​ ಬೌಲಿಂಗ್ ಆಯ್ದುಕೊಂಡರು. ಆರಂಭದಲ್ಲಿ ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಬೌಲರ್​ಗಳು ಬೌಲಿಂಗ್ ಮಾಡಿದ್ದರು. ಆದರೆ 10 ಓವರ್​ಗಳ ಬಳಿಕ ಎಲ್ಲವೂ ಬದಲಾಯಿತು. ಸಿಎಸ್​ಕೆ ತಂಡದ ಆರಂಭಿಕ ಆಟಗಾರ ರಾಬಿನ್ ಉತ್ತಪ್ಪ ಹಾಗೂ ಆಲ್​ರೌಂಡರ್ ಶಿವಂ ದುಬೆ ಅಬ್ಬರಿಸಲಾರಂಭಿಸಿದರು. ಅದು ಅಂತಿಂಥ ಅಬ್ಬರವಲ್ಲ. ಸಿಕ್ಸ್​-ಫೋರ್​ಗಳ ಸುರಿಮಳೆಗೈದರು. ಇತ್ತ ನಾಯಕ ಫಾಫ್ ಡುಪ್ಲೆಸಿಸ್ ಬೌಲರ್​ಗಳನ್ನು ಬದಲಿಸಿದರೂ ಫಲಿತಾಂಶ ಮಾತ್ರ ಒಂದೇ ಆಗಿತ್ತು. ಸಿಕ್ಸ್ ಇಲ್ಲಾ ಫೋರ್.

ಪರಿಣಾಮ ಮೂರನೇ ವಿಕೆಟ್​ಗೆ ಶಿವಂ ದುಬೆ ಹಾಗೂ ರಾಬಿನ್ ಉತ್ತಪ್ಪ ಜೋಡಿ 165 ರನ್​ಗಳ ಜೊತೆಯಾಟವಾಡಿದರು. ಈ ವೇಳೆ 50 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 4 ಫೋರ್​ನೊಂದಿಗೆ 88 ರನ್​ ಬಾರಿಸಿದ್ದ ರಾಬಿನ್ ಉತ್ತಪ್ಪ ಔಟಾದರು. ಆದರೆ ದುಬೆಯ ಆರ್ಭಟ ಮಾತ್ರ ಮುಂದುವರೆದಿತ್ತು. ಕೊನೆಯ ಓವರ್​ವರೆಗೂ ಬ್ಯಾಟ್ ಬೀಸಿದ ದುಬೆ 8 ಸಿಕ್ಸ್​ ಹಾಗೂ 5 ಬೌಂಡರಿಯೊಂದಿಗೆ ಕೇವಲ 45 ಎಸೆತಗಳಲ್ಲಿ ಅಜೇಯ 95 ರನ್​ಗಳಿಸಿತ್ತು. ಅಲ್ಲಿಗೆ ಸಿಎಸ್​ಕೆ ತಂಡದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 216 ಕ್ಕೆ ಬಂದು ನಿಂತಿತು.

217 ರನ್​ಗಳ ಟಾರ್ಗೆಟ್ ನೀಡಿದ ಸಿಎಸ್​ಕೆ ಗೆಲುವಿನ ವಿಶ್ವಾಸದಲ್ಲೇ ಮೈದಾನಕ್ಕಿಳಿಯಿತು. ಮೂರನೇ ಓವರ್​ನಲ್ಲಿ ಫಾಫ್ ಡುಪ್ಲೆಸಿಸ್, 5ನೇ ಓವರ್​ನಲ್ಲಿ ವಿರಾಟ್ ಕೊಹ್ಲಿ ಹಾಗೂ 6ನೇ ಓವರ್​ನಲ್ಲಿ ಅನೂಜ್ ರಾವತ್ ವಿಕೆಟ್ ಪಡೆಯುವ ಮೂಲಕ ಸಿಎಸ್​ಕೆ ಪವರ್​ಪ್ಲೇನಲ್ಲೇ ಆರ್​ಸಿಬಿಗೆ ಆಘಾತ ನೀಡಿದರು. ಅಷ್ಟೇ ಅಲ್ಲದೆ ಪವರ್​ಪ್ಲೇನಲ್ಲಿ ನೀಡಿದ್ದು ಕೇವಲ 42 ರನ್​ ಮಾತ್ರ. ಇನ್ನು 11 ಎಸೆತಗಳಲ್ಲಿ 26 ರನ್ ಬಾರಿಸಿ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಔಟಾಗಿದ್ದರು. ಈ ಹಂತದಲ್ಲಿ ಜೊತೆಗೂಡಿದ ಶಹಬಾಜ್ ಅಹ್ಮದ್ ಹಾಗೂ ಸುಯಶ್ ಪ್ರಭುದೇಸಾಯಿ ಅರ್ಧಶತಕದ ಜೊತೆಯಾಟವಾಡಿದರು. ಅದರಲ್ಲೂ ಚೊಚ್ಚಲ ಪಂದ್ಯವಾಡಿದ ಸುಯಶ್ 18 ಎಸೆತಗಳಲ್ಲಿ 34 ರನ್ ಬಾರಿಸುವ ಮೂಲಕ ತಮ್ಮ ಪಾತ್ರ ನಿರ್ವಹಿಸಿದ್ದರು. ಮತ್ತೊಂದೆಡೆ 27 ಎಸೆತಗಳಲ್ಲಿ 41 ರನ್ ಬಾರಿಸಿ ಶಹಬಾಜ್ ಕೂಡ ಅಬ್ಬರಿಸಿದರು.

ಈ ಇಬ್ಬರ ವಿಕೆಟ್ ಬೀಳುತ್ತಿದ್ದಂತೆ ಸಿಎಸ್​ಕೆ ತಂಡವು ಮೇಲುಗೈ ಸಾಧಿಸಿತು. ಇದರ ಬೆನ್ನಲ್ಲೇ ವನಿಂದು ಹಸರಂಗ ಹಾಗೂ ಆಕಾಶ್ ದೀಪ್ ಬಂದ ವೇಗದಲ್ಲೇ ವಿಕೆಟ್ ಕೈಚೆಲ್ಲಿ ಹಿಂತಿರುಗಿದರು. ಈ ವೇಳೆ ಆರ್​ಸಿಬಿ ತಂಡದ ಸ್ಕೋರ್ 8 ವಿಕೆಟ್​ ನಷ್ಟಕ್ಕೆ 146 ರನ್​. ಈ ಹಂತದಲ್ಲಿ ದಿನೇಶ್ ಕಾರ್ತಿಕ್ ಅಬ್ಬರಿಸಿದರು. ಕೇವಲ 13 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್​ನೊಂದಿಗೆ 34 ರನ್ ಬಾರಿಸಿದರು. ಡಿಕೆ ಅಬ್ಬರ ಶುರುವಾಗುತ್ತಿದ್ದಂತೆ ಇತ್ತ ಆರ್​ಸಿಬಿ ಅಭಿಮಾನಿಗಳಿಗೆ ಗೆಲುವಿನ ನಿರೀಕ್ಷೆ ಹೆಚ್ಚಾಯ್ತು. ಅತ್ತ ಸಿಎಸ್​ಕೆ ತಂಡವು ಸೋಲಿನ ಭೀತಿಯನ್ನು ಎದುರಿಸಿತ್ತು. ಆದರೆ ದುರಾದೃಷ್ಟವಶಾತ್ ಬ್ರಾವೊ ಅವರ ಮ್ಯಾಜಿಕ್ ಬಾಲ್​ಗೆ ಭರ್ಜರಿ ಉತ್ತರ ನೀಡಲು ಹೋದ ಡಿಕೆಗೆ ಬೌಂಡರಿ ಲೈನ್​ನಲ್ಲಿ ಕ್ಯಾಚ್ ಆದರು. ಬೌಂಡರಿಯಲ್ಲಿ ಫೀಲ್ಡಿಂಗ್​ನಲ್ಲಿದ್ದ ಸಿಎಸ್​ಕೆ ನಾಯಕ ರವೀಂದ್ರ ಜಡೇಜಾ ಅತ್ಯುತ್ತಮ ನಿಯಂತ್ರಣ ಸಾಧಿಸುವ ಮೂಲಕ ಕ್ಯಾಚ್ ಹಿಡಿದರು. ಅಂತಿಮವಾಗಿ ಆರ್​ಸಿಬಿ ತಂಡವು 9 ವಿಕೆಟ್ ನಷ್ಟಕ್ಕೆ 193 ರನ್​ಗಳಿಸುವ ಮೂಲಕ 23 ರನ್​ಗಳಿಂದ ವಿರೋಚಿತವಾಗಿ ಸೋಲೊಪ್ಪಿಕೊಂಡಿದೆ.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ