AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಧೋನಿ ವಿಕೆಟ್ ಉರುಳಿದ ನಂತರ ವಿರಾಟ್ ಸಂಭ್ರಮ ಹೇಗಿತ್ತು? ವಿಡಿಯೋ ವೈರಲ್

Virat Kohli | CSK vs RCB | IPL 2022: ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ವಿಕೆಟ್ ಉರುಳಿದಾಗ ಕೊಹ್ಲಿ ಸಂಭ್ರಮಾಚರಣೆಯ ದೃಶ್ಯಗಳು ಈಗ ವೈರಲ್ ಆಗಿವೆ.

MS Dhoni: ಧೋನಿ ವಿಕೆಟ್ ಉರುಳಿದ ನಂತರ ವಿರಾಟ್ ಸಂಭ್ರಮ ಹೇಗಿತ್ತು? ವಿಡಿಯೋ ವೈರಲ್
ಎಂಎಸ್ ಧೋನಿ, ವಿರಾಟ್ ಕೊಹ್ಲಿ
TV9 Web
| Edited By: |

Updated on: May 05, 2022 | 12:38 PM

Share

ವಿರಾಟ್ ಕೊಹ್ಲಿ (Virat Kohli) ಮೈದಾನದಲ್ಲಿ ತಮ್ಮ ಆಕ್ರಮಣಕಾರಿ ನಡವಳಿಕೆಯಿಂದ ಗುರುತಿಸಿಕೊಂಡವರು. ಮೈದಾನದ ಹೊರಗೆ ಸ್ನೇಹಭಾವದಿಂದ ಹೆಸರಾದ ಅವರು, ಪಂದ್ಯದ ವೇಳೆ ಸಂಪೂರ್ಣವಾಗಿ ಆಟದತ್ತ ಮಾತ್ರ ಗಮನ ನೆಟ್ಟಿರುತ್ತಾರೆ. ಸ್ನೇಹ, ಹಿರಿತನ ಇದ್ಯಾವುದನ್ನೂ ಅವರು ಲೆಕ್ಕಿಸುವುದಿಲ್ಲ. ಭಾರತ ಹಾಗೂ ಆರ್​ಸಿಬಿ ತಂಡವನ್ನು ಮುನ್ನಡೆಸುತ್ತಿದ್ದಾಗಲೂ ಅವರು ಇದೇ ಕಾರಣಕ್ಕೆ ಸಖತ್ ಸುದ್ದಿಯಾಗುತ್ತಿದ್ದರು. ಅವರ ವ್ಯಕ್ತಿತ್ವ ತಂಡದ ಇತರ ಆಟಗಾರರಿಗೆ ಮತ್ತಷ್ಟು ಹುರುಪು ನೀಡುತ್ತಿತ್ತು. ಎದುರಾಳಿ ತಂಡದ ವಿಕೆಟ್ ಬಿದ್ದಾಗ ಕೊಹ್ಲಿಯ ಸಂಭ್ರಮಾಚರಣೆ ಅವರ ಟ್ರೇಡ್​ಮಾರ್ಕ್​ಗಳಲ್ಲೊಂದು. ವಿರಾಟ್ ನಾಯಕತ್ವದಿಂದ ಇಳಿದಿದ್ದರೂ ಅವರ ಸಂಭ್ರಮಾಚರಣೆಯಲ್ಲಿ ತುಸುವೂ ಬದಲಾಗಿಲ್ಲ. ಇದಕ್ಕೆ ಇತ್ತೀಚಿನ ದೃಷ್ಟಾಂತವೇ ಸಾಕ್ಷಿ. ಆರ್​ಸಿಬಿ (RCB) ಹಾಗೂ ಸಿಎಸ್​ಕೆ (CSK) ನಡುವಿನ ಪಂದ್ಯದಲ್ಲಿ ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ವಿಕೆಟ್ ಉರುಳಿದಾಗ ಕೊಹ್ಲಿ ಸಂಭ್ರಮಾಚರಣೆಯ ದೃಶ್ಯಗಳು ವೈರಲ್ ಆಗಿವೆ.

ವಿರಾಟ್ ಈ ಹಿಂದೆ ಮಾತನಾಡುತ್ತಾ ಧೋನಿ ಯಾವತ್ತಿಗೂ ತಮ್ಮ ಕ್ಯಾಪ್ಟನ್ ಎಂದು ಹೇಳಿಕೊಂಡಿದ್ದರು. ಆದರೆ ಕೊಹ್ಲಿ ಮೈದಾನದಲ್ಲಿ ಈ ಎಲ್ಲಾ ಭಾವನೆಗಳನ್ನು ಬದಿಗಿಡುತ್ತಾರೆ. ಇದಕ್ಕೆ ಧೋನಿ ವಿಕೆಟ್ ಪಡೆದಾಗ ಕೊಹ್ಲಿಯವರ ಆಕ್ರಮಣಕಾರಿ ಸಂಭ್ರಮವೇ ಸಾಕ್ಷಿ.

ಇದನ್ನೂ ಓದಿ
Image
Rashid Khan: ರಶೀದ್ ಖಾನ್ ಫ್ಲೈಯಿಂಗ್ ಕಿಸ್ ಕೊಟ್ಟಿದ್ದು ಯಾರಿಗೆ? ವೈರಲ್ ಆಯ್ತು ವಿಡಿಯೋ
Image
IPL 2022: ಆರೆಂಜ್ ಕ್ಯಾಪ್ ಬಟ್ಲರ್ ಬಳಿ ಭದ್ರ; ಪರ್ಪಲ್ ಕ್ಯಾಪ್ ರೇಸ್​ನಲ್ಲಿ ಇರೋರು ಯಾರೆಲ್ಲಾ?
Image
ಬೆಂಗಳೂರು- ಚೆನ್ನೈ ಪಂದ್ಯದ ವೇಳೆ ವಿಶೇಷ ಕ್ಷಣ; ಆರ್​ಸಿಬಿ ಜೆರ್ಸಿ ತೊಟ್ಟ ಗೆಳೆಯನಿಗೆ ಪ್ರೇಮ ನಿವೇದನೆ ಮಾಡಿದ ಯುವತಿ- ವಿಡಿಯೋ ಇಲ್ಲಿದೆ

ಬುಧವಾರ ನಡೆದ ಸಿಎಸ್​ಕೆ ಹಾಗೂ ಆರ್​ಸಿಬಿ ನಡುವಿನ ಪಂದ್ಯದಲ್ಲಿ ಧೋನಿ ಬೆಂಗಳೂರು ತಂಡದ ಗೆಲುವಿಗೆ ಅಡ್ಡಗಾಲಾಗುವ ಸಾಧ್ಯತೆ ಇತ್ತು. ಹೀಗಾಗಿ ಅವರ ವಿಕೆಟ್ ಬಹಳ ಮುಖ್ಯವಾಗಿತ್ತು. ಜೋಶ್ ಹೇಜಲ್​ವುಡ್ ಎಸೆತದಲ್ಲಿ ಧೋನಿ ವಿಕೆಟ್ ಒಪ್ಪಿಸಿದರು. ಆಗ ಅವರು 3 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿದ್ದರು. ಇದರಿಂದ ಆರ್​ಸಿಬಿ ಗೆಲುವು ಬಹುತೇಕ ಖಚಿತವಾಯಿತು. ಧೋನಿ ವಿಕೆಟ್ ಮಹತ್ವದ ಅರಿವಿದ್ದ ಕೊಹ್ಲಿ ಖುಷಿಯಿಂದ ತಮ್ಮ ಟ್ರೇಡ್​ಮಾರ್ಕ್ ಸಂಭ್ರಮಾಚರಣೆ ನಡೆಸಿದರು.

ವಿರಾಟ್ ಸಂಭ್ರಮಾಚರಣೆ; ನೆಟ್ಟಿಗರಿಂದ ಚರ್ಚೆ:

ವಿರಾಟ್ ಸಂಭ್ರಮಾಚರಣೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಧೋನಿ ಅಭಿಮಾನಿಗಳು ಈ ಸಂಭ್ರಮಾಚರಣೆ ಅತಿಯಾಯಿತು ಎಂದೂ ಅಭಿಪ್ರಾಯಪಟ್ಟಿದ್ದಾರೆ. ಆದರೆ ಆರ್​ಸಿಬಿ ಹಾಗೂ ಕೊಹ್ಲಿ ಫ್ಯಾನ್ಸ್ ಅದನ್ನು ಸಮರ್ಥನೆ ಮಾಡಿದ್ದಾರೆ. ಜತೆಗೆ ಅದು ವಿರಾಟ್ ಕೊಹ್ಲಿ ಎಂದಿನಂತೆ ಮಾಡುವ ಸೆಲೆಬ್ರೇಷನ್ ಅಷ್ಟೆ, ಅದು ಮೈದಾನದಲ್ಲಿ ಮಾತ್ರ ಎಂದು ಹೇಳಿದ್ದಾರೆ.

ವಿರಾಟ್ ಸಂಭ್ರಮಾಚರಣೆಯ ವಿಡಿಯೋ ಇಲ್ಲಿದೆ:

ಕೊಹ್ಲಿ ಸಂಭ್ರಮಾಚರಣೆ ಬಗ್ಗೆ ನೆಟ್ಟಿಗರ ಕೆಲವು ಅಭಿಪ್ರಾಯಗಳು:

ಚೆನ್ನೈ ವಿರುದ್ಧದ ಗೆಲುವಿನಿಂದ ಆರ್​ಸಿಬಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಲಗ್ಗೆಇಟ್ಟಿದೆ. ಅದಾಗ್ಯೂ ಪ್ಲೇ ಆಫ್ ಖಚಿತಗೊಳ್ಳಲು ಮುಂದಿನ ಎಲ್ಲಾ ಪಂದ್ಯಗಳಲ್ಲಿ ಗೆಲುವು ಸಾಧಿಸಲೇಬೇಕಾದ ಒತ್ತಡದಲ್ಲಿದೆ ಫಾಫ್ ಬಳಗ. ಧೋನಿ ನಾಯಕತ್ವದ ಸಿಎಸ್​ಕೆ ಕೂಡ ಮುಂದಿನ ಎಲ್ಲಾ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕಿದೆ. ಅದಾಗ್ಯೂ ಉಳಿದ ತಂಡಗಳ ಫಲಿತಾಂಶದಿಂದ ಸಿಎಸ್​ಕೆ ಭವಿಷ್ಯ ನಿರ್ಧಾರವಾಗಲಿದೆ.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ