AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಮುಂದಿನ ಪಂದ್ಯದಲ್ಲಿ RCB, ಡೆಲ್ಲಿ ಸೋತರೆ, ಯಾರಿಗೆ ಚಾನ್ಸ್​?

IPL 2022 RCB: ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡ ಸೋತರೆ ಪಾಯಿಂಟ್ಸ್ ಟೇಬಲ್​ನ ನಾಲ್ಕನೇ ಸ್ಥಾನಕ್ಕಾಗಿ 4 ತಂಡಗಳ ನಡುವೆ ಪೈಪೋಟಿ ಕಂಡು ಬರಲಿದೆ.

IPL 2022: ಮುಂದಿನ ಪಂದ್ಯದಲ್ಲಿ RCB, ಡೆಲ್ಲಿ ಸೋತರೆ, ಯಾರಿಗೆ ಚಾನ್ಸ್​?
RCB
TV9 Web
| Updated By: ಝಾಹಿರ್ ಯೂಸುಫ್|

Updated on: May 17, 2022 | 3:36 PM

Share

IPL 2022: ಐಪಿಎಲ್​ ಸೀಸನ್​ 15 ಪಾಯಿಂಟ್ಸ್​ ಟೇಬಲ್​ನ ಟಾಪ್ 4 ಸ್ಥಾನದಿಂದ ಆರ್​ಸಿಬಿ ತಂಡವು ಹೊರಬಿದ್ದಿದೆ. ಪಂಜಾಬ್ ಕಿಂಗ್ಸ್ ವಿರುದ್ದ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿದೆ. ಇಲ್ಲಿ ಆರ್​ಸಿಬಿ ಹಾಗೂ ಡೆಲ್ಲಿ ತಂಡದ ಪಾಯಿಂಟ್ಸ್ 14 ಆಗಿದ್ದರೂ, ನೆಟ್​ ರನ್​ ರೇಟ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಮುಂದಿದೆ. ಇದಾಗ್ಯೂ ಆರ್​ಸಿಬಿ ತಂಡಕ್ಕೆ ಮತ್ತೆ ನಾಲ್ಕನೇ ಸ್ಥಾನಕ್ಕೇರುವ ಅವಕಾಶವಿದೆ. ಗುಜರಾತ್ ಟೈಟನ್ಸ್ ವಿರುದ್ದದ ಕೊನೆಯ ಪಂದ್ಯದಲ್ಲಿ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿ ಉತ್ತಮ ನೆಟ್​ ರನ್ ರೇಟ್ ಪಡೆಯುವ ಮೂಲಕ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೇರಬಹುದು. ಈ ಮೂಲಕ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು.

ಆದರೆ ಇಲ್ಲಿ ಮತ್ತೊಂದು ಇಂಟ್ರೆಸ್ಟಿಂಗ್ ವಿಷಯ ಎಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೂ ಒಂದು ಪಂದ್ಯವಿದೆ. ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಗೆದ್ದರೆ, ಆರ್​ಸಿಬಿ ಗುಜರಾತ್ ಟೈಟನ್ಸ್​ ವಿರುದ್ದ ಜಯ ಸಾಧಿಸಿದರೆ ನೆಟ್ ರನ್​ ರೇಟ್​ ಲೆಕ್ಕಾಚಾರಗಳು ಮುನ್ನಲೆಗೆ ಬರಲಿದೆ. ಇಲ್ಲಿ ಉತ್ತಮ ನೆಟ್ ರನ್​ ಹೊಂದಿರುವ ಕಾರಣ ಡೆಲ್ಲಿಗೆ ಪ್ಲೇಆಫ್ ಚಾನ್ಸ್ ಹೆಚ್ಚಿದೆ. ಇದಾಗ್ಯೂ ಆರ್​ಸಿಬಿ ಗುಜರಾತ್ ಟೈಟನ್ಸ್​ ವಿರುದ್ದ ಭರ್ಜರಿ ಜಯ ಸಾಧಿಸಿದ್ರೆ ಡೆಲ್ಲಿ ತಂಡವನ್ನು ಹಿಂದಿಕ್ಕಿ ಪ್ಲೇಆಫ್​ಗೇರಬಹುದು.

ಒಂದು ವೇಳೆ ಈ ಪಂದ್ಯದಲ್ಲಿ ಡೆಲ್ಲಿ ತಂಡವು ಸೋತರೆ ಆರ್​ಸಿಬಿ ತಂಡದ ಹಾದಿ ಸುಲಭವಾಗಲಿದೆ. ಅಂದರೆ ಗುಜರಾತ್ ಟೈಟನ್ಸ್ ವಿರುದ್ದ ಆರ್​ಸಿಬಿ ಗೆದ್ದರೆ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಫಲಿತಾಂಶದಿಂದ ಪ್ಲೇಆಫ್​ ಬಹುತೇಕ ನಿರ್ಧಾರವಾಗಲಿದೆ. ಅಂದರೆ ಡೆಲ್ಲಿ ವಿರುದ್ದ ಮುಂಬೈ ಇಂಡಿಯನ್ಸ್ ಗೆದ್ದರೆ ಆರ್​ಸಿಬಿ ತಂಡದ ಪ್ಲೇಆಫ್ ಅರ್ಹತೆ ಖಚಿತವಾಗಲಿದೆ.

ಇದನ್ನೂ ಓದಿ
Image
IPL 2022: ಎಬಿಡಿ, ಕ್ರಿಸ್ ಗೇಲ್​ಗೆ RCB ಯ ಹಾಲ್ ಆಫ್ ಫೇಮ್ ಗೌರವ
Image
IPL 2022: ಇಬ್ಬರು ಯುವ ಆಟಗಾರರ ಪ್ರದರ್ಶನಕ್ಕೆ ಗಂಗೂಲಿ ಫಿದಾ..!
Image
Virat Kohli: ಕಳಪೆ ಫಾರ್ಮ್​ ನಡುವೆಯೂ 2 ದಾಖಲೆ ಬರೆದ ಕಿಂಗ್ ಕೊಹ್ಲಿ
Image
IPL 2022: RCB ತಂಡದ ಸೋಲಿಗೆ ಇವರಿಬ್ಬರೇ ಕಾರಣ..!

ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ಸೋತು, ಆರ್​ಸಿಬಿ ತಂಡ ಕೂಡ ಗುಜರಾತ್ ಟೈಟನ್ಸ್ ವಿರುದ್ದ ಸೋತರೆ, ಪ್ಲೇಆಫ್​ ಲೆಕ್ಕಾಚಾರ ಜಟಿಲವಾಗಲಿದೆ. ಏಕೆಂದರೆ ಎರಡೂ ತಂಡಗಳ ನೆಟ್​ ರನ್​ ರೇಟ್ ಮೂಲಕ ನಾಲ್ಕನೇ ಸ್ಥಾನ ನಿರ್ಧಾರವಾಗಲಿದೆ. ಅಂದರೆ ಉಭಯ ತಂಡಗಳ ಪಾಯಿಂಟ್ಸ್ 14 ಆಗಿರಲಿದ್ದು, ಉತ್ತಮ ನೆಟ್ ರನ್​ ರೇಟ್ ಹೊಂದಿರುವ ತಂಡ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು. ಇಲ್ಲಿ ಆರ್​ಸಿಬಿ ತಂಡದ ನೆಟ್​ ರನ್​ ರೇಟ್​ ಮೈನಸ್​ನಲ್ಲಿ ಇರುವ ಕಾರಣ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮುಂಬೈ ಇಂಡಿಯನ್ಸ್​ ವಿರುದ್ದ ಹೀನಾಯವಾಗಿ ಸೋಲಬೇಕಾಗುತ್ತದೆ. ಅಂದರೆ ಮಾತ್ರ ಆರ್​ಸಿಬಿ ತಂಡ ಗುಜರಾತ್ ಟೈಟನ್ಸ್ ವಿರುದ್ದ ಸೋತರೂ ಪ್ಲೇಆಫ್​ಗೆ ಅರ್ಹತೆ ಪಡೆಯಬಹುದು.

ಇಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ಮುಂದಿನ ಪಂದ್ಯಗಳಲ್ಲಿ ಸೋತರೆ, ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳಿಗೂ ಪ್ಲೇಆಫ್​ಗೆ ಎಂಟ್ರಿ ಕೊಡುವ ಅವಕಾಶ ದೊರೆಯಲಿದೆ. ಏಕೆಂದರೆ ಕೆಕೆಆರ್ (12 ಪಾಯಿಂಟ್ಸ್​) ಹಾಗೂ ಪಂಜಾಬ್ ಕಿಂಗ್ಸ್​​ (12 ಪಾಯಿಂಟ್ಸ್​) ಗೆ ಇನ್ನೂ 1 ಪಂದ್ಯವಿದ್ದು, ಈ ಪಂದ್ಯದಲ್ಲಿ ಗೆದ್ದರೆ 14 ಪಾಯಿಂಟ್ಸ್ ಆಗಲಿದೆ. ಹಾಗಾಗಿ ಉತ್ತಮ ನೆಟ್ ರನ್​ ರೇಟ್ ಮೂಲಕ ಈ ತಂಡಗಳು ಗೆದ್ದರೆ 4ನೇ ಸ್ಥಾನಕ್ಕೇರಬಹುದು.

ಒಟ್ಟಿನಲ್ಲಿ ಮುಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ತಂಡ ಸೋತರೆ ಪಾಯಿಂಟ್ಸ್ ಟೇಬಲ್​ನ ನಾಲ್ಕನೇ ಸ್ಥಾನಕ್ಕಾಗಿ 4 ತಂಡಗಳ ನಡುವೆ ಪೈಪೋಟಿ ಕಂಡು ಬರಲಿದೆ. ಈ ವೇಳೆ ಯಾರು ಉತ್ತಮ ನೆಟ್ ರನ್​ ರೇಟ್ ಹೊಂದಿರಲಿದೆಯೋ ಆ ತಂಡ ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್