AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 3 ಬಾರಿ ಫೈನಲ್​ಗೇರಿದರೂ ಆರ್​ಸಿಬಿಗೆ ಕಪ್​ ಗೆಲ್ಲಲಾಗಲಿಲ್ಲ! ಆ 3 ಫೈನಲ್​ಗಳ ರೋಚಕ ಇತಿಹಾಸ ಇಲ್ಲಿದೆ

IPL 2022: ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ನಾಲ್ಕನೇ ಬಾರಿಗೆ ಐಪಿಎಲ್‌ ಫೈನಲ್‌ ಪ್ರವೇಶಿಸಲಿದೆ. ಈ ತಂಡ ಈ ಹಿಂದೆ 3 ಬಾರಿ ಫೈನಲ್ ತಲುಪಿದರೂ ಪ್ರತಿ ಬಾರಿಯೂ ಸೋಲನ್ನು ಎದುರಿಸಿದೆ.

IPL 2022: 3 ಬಾರಿ ಫೈನಲ್​ಗೇರಿದರೂ ಆರ್​ಸಿಬಿಗೆ ಕಪ್​ ಗೆಲ್ಲಲಾಗಲಿಲ್ಲ! ಆ 3 ಫೈನಲ್​ಗಳ ರೋಚಕ ಇತಿಹಾಸ ಇಲ್ಲಿದೆ
ಆರ್​ಸಿಬಿ ತಂಡ
TV9 Web
| Updated By: ಪೃಥ್ವಿಶಂಕರ|

Updated on:May 27, 2022 | 6:41 PM

Share

ಐಪಿಎಲ್ 2022 (IPL 2022)ರ ಕ್ವಾಲಿಫೈಯರ್ 2 ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ (Narendra Modi Stadium)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (Royal Challengers Bangalore and Rajasthan Royals) ನಡುವೆ ನಡೆಯಲಿದೆ. ಇಲ್ಲಿ ವಿಜೇತ ತಂಡವು ಕ್ವಾಲಿಫೈಯರ್ 1ರ ವಿಜೇತ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಫೈನಲ್‌ನಲ್ಲಿ ಎದುರಿಸಲಿದೆ. ಇಲ್ಲಿಗೆ ಸೋತ ತಂಡದ ಪಯಣ ಮುಗಿಯಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದರೆ ನಾಲ್ಕನೇ ಬಾರಿಗೆ ಐಪಿಎಲ್‌ ಫೈನಲ್‌ ಪ್ರವೇಶಿಸಲಿದೆ. ಈ ತಂಡ ಈ ಹಿಂದೆ 3 ಬಾರಿ ಫೈನಲ್ ತಲುಪಿದರೂ ಪ್ರತಿ ಬಾರಿಯೂ ಸೋಲನ್ನು ಎದುರಿಸಿದೆ.

2009ರಲ್ಲಿ ಬೆಂಗಳೂರು ಮೊದಲ ಬಾರಿಗೆ ಫೈನಲ್ ತಲುಪಿತ್ತು

ಐಪಿಎಲ್ 2009 ರ ಎರಡನೇ ಸೀಸನ್​ನಲ್ಲಿ ಡೆಕ್ಕನ್ ಚಾರ್ಜರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಅಂತಿಮ ಪಂದ್ಯ ನಡೆದಿತ್ತು. ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್​ನಲ್ಲಿ ಈ ಪಂದ್ಯ ನಡೆದಿತ್ತು. ಟಾಸ್ ಗೆದ್ದ ಬೆಂಗಳೂರು ತಂಡ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಡೆಕ್ಕನ್ ಚಾರ್ಜರ್ಸ್ 6 ವಿಕೆಟ್ ನಷ್ಟಕ್ಕೆ 143 ರನ್ ಗಳಿಸಿತು. ಉತ್ತರವಾಗಿ ಬೆಂಗಳೂರು 9 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು. ಡೆಕ್ಕನ್ ಚಾರ್ಜರ್ಸ್ ಪಂದ್ಯವನ್ನು 6 ರನ್‌ಗಳಿಂದ ಗೆದ್ದುಕೊಂಡಿತು. ಅನಿಲ್ ಕುಂಬ್ಳೆ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇದನ್ನೂ ಓದಿ
Image
RR vs RCB Qualifier 2: 49 ಬೌಂಡರಿ, 17 ಸಿಕ್ಸರ್‌! ರಾಜಸ್ಥಾನ ವಿರುದ್ಧ ಕೊಹ್ಲಿ ಪ್ರದರ್ಶನ ಹೇಗಿದೆ ಗೊತ್ತಾ?
Image
IPL 2022 Qualifier 2: ಕ್ರೀಡಾಂಗಣಕ್ಕೆ ಏನೆಲ್ಲ ನಿಷಿದ್ಧ, ಎಷ್ಟು ಗಂಟೆಗೆ ಎಂಟ್ರಿ.. ಪಾರ್ಕಿಂಗ್ ವ್ಯವಸ್ಥೆ ಹೇಗಿದೆ? ಇಲ್ಲಿದೆ ಮಾಹಿತಿ
Image
IPL 2022: ಆರ್​ಸಿಬಿಗೆ ಕಹಿ ಸುದ್ದಿ; ಐಪಿಎಲ್​ ನಿಯಮ ಉಲ್ಲಂಘಿಸಿದ ಕಾರ್ತಿಕ್​ಗೆ ಆಡಳಿತ ಮಂಡಳಿಯಿಂದ ವಾಗ್ದಂಡನೆ!

ಇದನ್ನೂ ಓದಿ:RR vs RCB Qualifier 2: 49 ಬೌಂಡರಿ, 17 ಸಿಕ್ಸರ್‌! ರಾಜಸ್ಥಾನ ವಿರುದ್ಧ ಕೊಹ್ಲಿ ಪ್ರದರ್ಶನ ಹೇಗಿದೆ ಗೊತ್ತಾ?

ಬೆಂಗಳೂರು 2011ರಲ್ಲಿ ಎರಡನೇ ಬಾರಿ ಫೈನಲ್ ತಲುಪಿತ್ತು

ಐಪಿಎಲ್ 2011 ರ ನಾಲ್ಕನೇ ಸೀಸನ್​ನಲ್ಲಿ, ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಿತು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಚೆನ್ನೈ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಉತ್ತರವಾಗಿ ಬೆಂಗಳೂರು 8 ವಿಕೆಟ್‌ಗೆ 147 ರನ್ ಗಳಿಸಲಷ್ಟೇ ಶಕ್ತವಾಯಿತು. ಚೆನ್ನೈ 58 ರನ್‌ಗಳಿಂದ ಫೈನಲ್‌ನಲ್ಲಿ ಜಯಗಳಿಸಿತು. ಮುರಳಿ ವಿಜಯ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಬೆಂಗಳೂರು 2016ರಲ್ಲಿ ಮೂರನೇ ಬಾರಿ ಫೈನಲ್ ತಲುಪಿತ್ತು ಐಪಿಎಲ್ 2016 ರ ಅಂತಿಮ ಪಂದ್ಯವು ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಬೆಂಗಳೂರಿನ  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 7 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು. ಉತ್ತರವಾಗಿ ಬೆಂಗಳೂರು 7 ವಿಕೆಟ್ ಗೆ 200 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯವನ್ನು ಹೈದರಾಬಾದ್ 8 ರನ್‌ಗಳಿಂದ ಗೆದ್ದುಕೊಂಡಿತು. ಬೆನ್ ಕಟ್ಟಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Published On - 6:14 pm, Fri, 27 May 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?