Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಪರ ಮಿಂಚಿದ್ದು ಯಾರು? ಮುಗ್ಗರಿಸಿದ್ದು ಯಾರು?

IPL 2022 RCB top performers: ಆರ್​ಸಿಬಿ ಈ ಬಾರಿ 16 ಪಂದ್ಯಗಳನ್ನು ಆಡಿದರೂ ಪ್ರಮುಖ ಆಟಗಾರರಿಂದ ನಿರೀಕ್ಷಿತ ಆಟ ಮೂಡಿಬಂದಿಲ್ಲ ಎಂಬುದೇ ಸತ್ಯ. ಏಕೆಂದರೆ ತಂಡದಲ್ಲಿ ಕೆ.ಜಿ.ಎಫ್ ಎಂದೇ ಖ್ಯಾತರಾಗಿದ್ದ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ವಿರಾಟ್ ಕೊಹ್ಲಿ ನಿರ್ಣಾಯಕ ಪಂದ್ಯಗಳಲ್ಲಿ ಕೈಕೊಡುವ ಮೂಲಕ ನಿರಾಸೆ ಮೂಡಿಸಿದರು.

IPL 2022: RCB ಪರ ಮಿಂಚಿದ್ದು ಯಾರು? ಮುಗ್ಗರಿಸಿದ್ದು ಯಾರು?
IPL 2022 RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on:May 28, 2022 | 12:03 PM

IPL 2022: ಐಪಿಎಲ್​ ಸೀಸನ್​ 15 ಗೆ ತೆರೆಬೀಳಲು ಇನ್ನು ಒಂದು ಪಂದ್ಯ ಮಾತ್ರ ಬಾಕಿ ಇದೆ. ಆದರೆ ಆ ಫೈನಲ್​ ಪಂದ್ಯವನ್ನು ಆಡುವ ಅವಕಾಶವನ್ನು ಆರ್​ಸಿಬಿ (RCB) ತಂಡ ಕೈತಪ್ಪಿಸಿಕೊಂಡಿದೆ. ಈ ಬಾರಿ ಆಡಿದ ಲೀಗ್ ಹಂತದ 14 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಗೆದ್ದುಕೊಂಡಿದ್ದ ಆರ್​ಸಿಬಿ ಪಾಯಿಂಟ್ಸ್​ ಟೇಬಲ್​ನಲ್ಲಿ 4ನೇ ಸ್ಥಾನ ಪಡೆದುಕೊಂಡಿತ್ತು. ಈ ಮೂಲಕ ಪ್ಲೇಆಫ್ ಆಡುವ ಅವಕಾಶವನ್ನು ಗಿಟ್ಟಿಸಿಕೊಂಡಿತು. ಅದರಂತೆ ಮೊದಲ ಎಲಿಮಿನೇಟರ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೋಲುಣಿಸಿದ ಆರ್​ಸಿಬಿ 2ನೇ ಕ್ವಾಲಿಫೈಯರ್​ಗೇರಿತು. ಆದರೆ ನಿರ್ಣಾಯಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ ಮುಗ್ಗರಿಸುವ ಮೂಲಕ ಆರ್​ಸಿಬಿ ಐಪಿಎಲ್​ ಜರ್ನಿಯನ್ನು ಅಂತ್ಯಗೊಳಿಸಿದೆ. ಇದರೊಂದಿಗೆ ಆರ್​ಸಿಬಿ ತಂಡದ ಕಪ್ ಗೆಲ್ಲುವ ಕನಸು 16ನೇ ಸೀಸನ್​ಗೆ ಮುಂದುವರೆದಿದೆ.

ಇತ್ತ ಆರ್​ಸಿಬಿ ಈ ಬಾರಿ 16 ಪಂದ್ಯಗಳನ್ನು ಆಡಿದರೂ ಪ್ರಮುಖ ಆಟಗಾರರಿಂದ ನಿರೀಕ್ಷಿತ ಆಟ ಮೂಡಿಬಂದಿಲ್ಲ ಎಂಬುದೇ ಸತ್ಯ. ಏಕೆಂದರೆ ತಂಡದಲ್ಲಿ ಕೆ.ಜಿ.ಎಫ್ ಎಂದೇ ಖ್ಯಾತರಾಗಿದ್ದ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ವಿರಾಟ್ ಕೊಹ್ಲಿ ನಿರ್ಣಾಯಕ ಪಂದ್ಯಗಳಲ್ಲಿ ಕೈಕೊಡುವ ಮೂಲಕ ನಿರಾಸೆ ಮೂಡಿಸಿದರು. ಇನ್ನು ಬೌಲಿಂಗ್​ನಲ್ಲೂ ಆರ್​ಸಿಬಿ ತಂಡದ ಪ್ರದರ್ಶನ ಸಾಧಾರಣ ಮಟ್ಟದಲ್ಲಿತ್ತು. ಹಾಗಿದ್ರೆ ಈ ಬಾರಿ ಆರ್​ಸಿಬಿ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ ಯಾರು, ವಿಫಲರಾದ ಆಟಗಾರರು ಯಾರೆಲ್ಲಾ ನೋಡೋಣ…

ಅತೀ ಹೆಚ್ಚು ರನ್​ಗಳಿಸಿದ ಟಾಪ್ 5 ಬ್ಯಾಟ್ಸ್​ಮನ್​ಗಳು:

ಇದನ್ನೂ ಓದಿ
Image
Rajat Patidar: ಸೆಂಚುರಿ ಸಿಡಿಸಿ ಭರ್ಜರಿ ದಾಖಲೆ ಬರೆದ ರಜತ್ ಪಾಟಿದಾರ್
Image
IPL 2022: ಕೊನೆಯ ಓವರ್​ನಲ್ಲಿ ಚೇಸ್ ಮಾಡಿಯೇ ದಾಖಲೆ ಬರೆದ ಗುಜರಾತ್ ಟೈಟಾನ್ಸ್
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
  1. ಫಾಫ್ ಡುಪ್ಲೆಸಿಸ್​: 468 ರನ್ (16 ಇನಿಂಗ್ಸ್​)
  2. ವಿರಾಟ್ ಕೊಹ್ಲಿ: 341 ರನ್​ (16 ಇನಿಂಗ್ಸ್​)
  3. ರಜತ್ ಪಾಟಿದಾರ್: 333 ರನ್ (7 ಇನಿಂಗ್ಸ್​)
  4. ದಿನೇಶ್ ಕಾರ್ತಿಕ್: 330 ರನ್ (16 ಇನಿಂಗ್ಸ್​)
  5. ಗ್ಲೆನ್ ಮ್ಯಾಕ್ಸ್​ವೆಲ್: 301 ರನ್​ (13 ಇನಿಂಗ್ಸ್​)

ವಿಫಲರಾದ ಬ್ಯಾಟ್ಸ್​ಮನ್​​ಗಳು:

  1. ಅನೂಜ್ ರಾವತ್: 129 ರನ್​ (8 ಇನಿಂಗ್ಸ್​)
  2. ಸುಯಶ್ ಪ್ರಭುದೇಸಾಯಿ: 67 ರನ್​ (5 ಇನಿಂಗ್ಸ್​)
  3. ಮಹಿಪಾಲ್ ಲೋಮ್ರರ್: 86 ರನ್​ ( 5 ಇನಿಂಗ್ಸ್​)

ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳು:

  1. ವನಿಂದು ಹಸರಂಗ: 26 ವಿಕೆಟ್ (16 ಪಂದ್ಯಗಳು)
  2. ಜೋಶ್ ಹ್ಯಾಝಲ್​ವುಡ್​: 20 ವಿಕೆಟ್ (12 ಪಂದ್ಯಗಳು)
  3. ಹರ್ಷಲ್ ಪಟೇಲ್: 19 ವಿಕೆಟ್ (15 ಪಂದ್ಯಗಳು)

ವಿಫಲರಾದ ಬೌಲರ್​ಗಳು:

  1. ಮೊಹಮ್ಮದ್ ಸಿರಾಜ್: 9 ವಿಕೆಟ್ (15 ಪಂದ್ಯಗಳು)
  2. ಆಕಾಶ್ ದೀಪ್: 5 ವಿಕೆಟ್​ (5 ಪಂದ್ಯಗಳು)
  3. ಶಹಬಾಜ್ ಅಹ್ಮದ್: 4 ವಿಕೆಟ್ (16 ಪಂದ್ಯಗಳು)

ಇಲ್ಲಿ ಆರ್​ಸಿಬಿ ಪರ ಡುಪ್ಲೆಸಿಸ್ ಹೊರತುಪಡಿಸಿ ಯಾವುದೇ ಬ್ಯಾಟ್ಸ್​ಮನ್ 400 ರನ್​ಗಳ ಗಡಿದಾಟಿಲ್ಲ. ಹಾಗೆಯೇ ಹಸರಂಗ, ಹ್ಯಾಝಲ್​ವುಡ್ ಹಾಗೂ ಹರ್ಷಲ್ ಪಟೇಲ್ ಹೊರತುಪಡಿಸಿ ಆರ್​ಸಿಬಿ ತಂಡದ ಯಾವುದೇ ಬೌಲರ್ 10 ವಿಕೆಟ್ ಪಡೆದಿಲ್ಲ ಎಂಬುದನ್ನು ಗಮನಿಸಬೇಕು. ಅಂದರೆ ಆರ್​ಸಿಬಿ ಒಂದೆಡೆ ಬೌಲಿಂಗ್​ನಲ್ಲಿ ತುಸು ಉತ್ತಮ ಪ್ರದರ್ಶನ ನೀಡಿದರೂ, ಬ್ಯಾಟ್ಸ್​ಮನ್​ಗಳು ಸಂಪೂರ್ಣ ಕೈಕೊಟ್ಟಿರುವುದು ಸ್ಪಷ್ಟ. ಏಕೆಂದರೆ ಈ ಬಾರಿ ಆರ್​ಸಿಬಿ ಪರ ಯಾವುದೇ ಆಟಗಾರ 500 ರನ್ ಬಾರಿಸಿಲ್ಲ. ಅದರಲ್ಲೂ 400 ರನ್​ಗಳ ಗಡಿದಾಟಿದ್ದು ಏಕೈಕ ಆಟಗಾರ. ಇದರಲ್ಲೇ ಆರ್​ಸಿಬಿ ತಂಡದ ಬ್ಯಾಟಿಂಗ್ ವೈಫಲ್ಯವನ್ನು ಊಹಿಸಬಹುದು. ಇನ್ನು ಈ ಬಾರಿ ಆರ್​ಸಿಬಿ ರಿಟೈನ್ ಮಾಡಿಕೊಂಡಿದ್ದ ಬೌಲರ್ ಮೊಹಮ್ಮದ್ ಸಿರಾಜ್ ಕೇವಲ 9 ವಿಕೆಟ್ ಪಡೆದರೆ ನೀಡಿದ್ದು 514 ರನ್​ಗಳು ಎಂದರೆ ನಂಬಲೇಬೇಕು.

ಇಲ್ಲಿ ಆರ್​ಸಿಬಿ ತಂಡವು ಸಾಂಘಿಕ ಪ್ರದರ್ಶನ ನೀಡುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಸ್ಪಷ್ಟ. ಇದಾಗ್ಯೂ ಹಸರಂಗ, ಹ್ಯಾಝಲ್​ವುಡ್​, ಹರ್ಷಲ್ ಪಟೇಲ್ ಅವರ ಬೌಲಿಂಗ್ ಪ್ರದರ್ಶನ ಹಾಗೂ ರಜತ್ ಪಾಟಿದಾರ್ ಹಾಗೂ ಫಿನಿಶರ್ ಆಗಿ ದಿನೇಶ್ ಕಾರ್ತಿಕ್ ಅವರ ಅದ್ಭುತ ಬ್ಯಾಟಿಂಗ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಕಂಡು ಬಂದ ಸಕರಾತ್ಮಕ ವಿಷಯಗಳು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಅನೇಶ್ವರ್ ಗೌತಮ್ , ಶೆರ್ಫೇನ್ ರುದರ್‌ಫೋರ್ಡ್, ಅನುಜ್ ರಾವತ್, ಸುಯಶ್ ಪ್ರಭುದೇಸಾಯಿ, ಚಾಮ ಮಿಲಿಂದ್, ಜೇಸನ್ ಬೆಹ್ರೆಂಡಾರ್ಫ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಫಿನ್ ಅಲೆನ್, ಸಿದ್ದಾರ್ಥ್ ಕೌಲ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:03 pm, Sat, 28 May 22

ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
Babar Azam: 0, 1, 2... ಬಂದ ಬಾಬರ್, ಹೋದ ಬಾಬರ್
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಕುಟುಂಬದ ಜೊತೆ ಉಡುಪಿಗೆ ಬಂದ ಸುನೀಲ್ ಶೆಟ್ಟಿ; ಮಾರಿಗುಡಿಗೆ ಭೇಟಿ
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಜೀಪ್​ ಅಡ್ಡಗಟ್ಟಿದ ಹುಲಿರಾಯ: ಆತಂಕದಿಂದ ಚಿರಾಡಿದ ಪ್ರವಾಸಿಗರು!
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಕಾರಿನ ಮೇಲೆ ಕಾಡಾನೆ ದಾಳಿ ಯತ್ನ, ಎದೆ ಝಲ್​ ಎನ್ನಿಸುವ ವಿಡಿಯೋ ವೈರಲ್
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ
ಮದುವೆ ಯಾಕಾಗಬೇಕು? ರವಿಚಂದ್ರನ್ ಮಾತಿಗೆ ಚಪ್ಪಾಳೆಯ ಸುರಿಮಳೆ