IPL 2022 RCB vs PBKS live streaming: ಪ್ಲೇ ಆಫ್​ಗೇರಲು ಆರ್​ಸಿಬಿ ಗೆಲ್ಲಲೇಬೇಕು; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ

IPL 2022 RCB vs PBKS live streaming: ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ಆ ಪಂದ್ಯದಲ್ಲಿ 2 ವಿಕೆಟ್‌ಗೆ 205 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಪಂಜಾಬ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 6 ಎಸೆತಗಳು ಬಾಕಿ ಇರುವಂತೆ ಗುರಿ ಸಾಧಿಸಿತ್ತು.

IPL 2022 RCB vs PBKS live streaming: ಪ್ಲೇ ಆಫ್​ಗೇರಲು ಆರ್​ಸಿಬಿ ಗೆಲ್ಲಲೇಬೇಕು; ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ
RCB and GT vs PBKS
Follow us
| Updated By: ಪೃಥ್ವಿಶಂಕರ

Updated on:May 12, 2022 | 5:25 PM

ಐಪಿಎಲ್ 2022 (IPL 2022)ರಲ್ಲಿ ಶುಕ್ರವಾರ ನಡೆಯುವ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಈ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಬೆಂಗಳೂರು ತಂಡವು ಪ್ಲೇಆಫ್ ತಲುಪಲು ಪ್ರಬಲ ಸ್ಪರ್ಧಿ ಎನಿಸಿಕೊಂಡಿದೆ. ಆದರೆ ಪಂಜಾಬ್‌ನ (PBKS) ಭರವಸೆಯೂ ಹಾಗೇ ಇದೆ. ಅದೇ ಭರವಸೆಗೆ ರೆಕ್ಕೆಗಳನ್ನು ನೀಡಲು, ಬೆಂಗಳೂರು (RCB) ವಿರುದ್ಧ ಪಂಜಾಬ್ ಗೆಲುವಿನ ಸದ್ದು ಮಾಡಲೇಬೇಕು. ಈ ಪಂದ್ಯವನ್ನು ಪಂಜಾಬ್ ಗೆದ್ದರೆ, ಅದು ಬೆಂಗಳೂರಿನ ಲೆಕ್ಕಾಚಾರವನ್ನು ಸ್ವಲ್ಪ ವಕ್ರಗೊಳಿಸುತ್ತದೆ. ಬೆಂಗಳೂರು ಗೆದ್ದರೆ, ಪ್ಲೇ ಆಫ್​ಗೇರುವ ಅವರ ಕನಸಿಗೆ ಮತ್ತಷ್ಟು ಜೀವ ಸಿಗಲಿದೆ. ಉಭಯ ತಂಡಗಳ ನಡುವಿನ ಈ ಮಹತ್ವದ ಪಂದ್ಯ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ.

ಈ ಋತುವಿನಲ್ಲಿ ಉಭಯ ತಂಡಗಳ ಎರಡನೇ ಪಂದ್ಯ ಇದಾಗಿದೆ. ಇದಕ್ಕೂ ಮುನ್ನ ಇವರಿಬ್ಬರ ನಡುವೆ ನಡೆದ ಮೊದಲ ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಆಗಿತ್ತು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ 5 ವಿಕೆಟ್​ಗಳ ಜಯ ಸಾಧಿಸಿತ್ತು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ಆ ಪಂದ್ಯದಲ್ಲಿ 2 ವಿಕೆಟ್‌ಗೆ 205 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಪಂಜಾಬ್ ಕಿಂಗ್ಸ್ 5 ವಿಕೆಟ್ ನಷ್ಟಕ್ಕೆ 6 ಎಸೆತಗಳು ಬಾಕಿ ಇರುವಂತೆ ಗುರಿ ಸಾಧಿಸಿತ್ತು. ಪಂಜಾಬ್ ಮತ್ತೆ ಅದೇ ಆಟವನ್ನು ಮಾಡಲು ಬಯಸುತ್ತದೆ. ಮತ್ತೊಂದೆಡೆ, ಆ ಸೋಲಿಗೆ ಸೇಡು ತೀರಿಸಿಕೊಳ್ಳಬೇಕು ಎಂಬ ನಿರೀಕ್ಷೆಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವಿದೆ.

ಪಂದ್ಯದ ಬಗ್ಗೆ ಇಲ್ಲಿದೆ ಮಾಹಿತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಶುಕ್ರವಾರ, ಮೇ 13 ರಂದು ನಡೆಯಲಿದೆ.

ಇದನ್ನೂ ಓದಿ
Image
IPL 2022: ಬಲವಂತವಾಗಿ ನಾಯಕತ್ವದಿಂದ ವಜಾ! ಕೋಪದಿಂದ ತಂಡ ತೊರೆದ ಜಡೇಜಾ; ಸಿಎಸ್​ಕೆಗೆ ಆಡುವುದು ಅನುಮಾನ
Image
IPL 2022: 36 ವರ್ಷದ DK ಗೆ ತಂಡದಲ್ಲಿ ಸ್ಥಾನ ನೀಡಬೇಕಾ, ಬೇಡ್ವಾ? ಗವಾಸ್ಕರ್ ಹೇಳಿದ್ದೇನು?
Image
IPL 2022: ಮೊದಲು ರೈನಾ.. ಈಗ ಜಡೇಜಾ! ಇನ್ಸ್‌ಟಾಗ್ರಾಮ್ ಅನ್​ಫಾಲೋ; ವದಂತಿಗಳಿಗೆ ಸಿಎಸ್​ಕೆ ಸಿಇಒ ಉತ್ತರವೇನು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ? ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಯಾವಾಗ ಆರಂಭವಾಗುತ್ತದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಟಾಸ್ ರಾತ್ರಿ 7 ಗಂಟೆಗೆ ನಡೆಯಲಿದ್ದು, ಮೊದಲ ಇನಿಂಗ್ಸ್ 07:30 ಕ್ಕೆ ಆರಂಭವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ಚಾನಲ್‌ಗಳಲ್ಲಿ ವಿವಿಧ ಭಾಷೆಗಳಲ್ಲಿ ವೀಕ್ಷಿಸಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಲೈವ್ ಸ್ಟ್ರೀಮಿಂಗ್ ಅನ್ನು ಆನ್‌ಲೈನ್‌ನಲ್ಲಿ ಎಲ್ಲಿ ವೀಕ್ಷಿಸಬಹುದು? ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವನ್ನು ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಚಂದಾದಾರಿಕೆಯೊಂದಿಗೆ ಆನ್‌ಲೈನ್‌ನಲ್ಲಿ ವೀಕ್ಷಿಸಬಹುದು.

Published On - 5:25 pm, Thu, 12 May 22

ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು