AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್

IPL 2022: RCB ತಂಡದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ
IPL 2022 RCB
TV9 Web
| Edited By: |

Updated on: Apr 25, 2022 | 5:14 PM

Share

IPL 2022: ಐಪಿಎಲ್​ ಸೀಸನ್​ 15 ನಲ್ಲಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ (RCB) 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿತ್ತು. ಆದರೆ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಕೇವಲ 68 ರನ್​ಗಳಿಗೆ ಆಲೌಟ್ ಆಗುವ ಮೂಲಕ ಅಚ್ಚರಿ ಮೂಡಿಸಿತು. ಎಸ್​ಆರ್​ಹೆಚ್ ವಿರುದ್ದದ ಹೀನಾಯ ಸೋಲಿಗೆ ಪ್ರಮುಖ ಕಾರಣ ಬ್ಯಾಟ್ಸ್​ಮನ್​ಗಳು. ಅದರಲ್ಲೂ ಆರಂಭಿಕರು ವಿಫಲರಾಗುತ್ತಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಮುಂದಿನ ಪಂದ್ಯದಿಂದ ಅನೂಜ್ ರಾವತ್​ ರನ್ನು ಕೈ ಬಿಡುವ ಸಾಧ್ಯತೆಯಿದೆ. ಏಕೆಂದರೆ ಅನೂಜ್ ರಾವತ್ ಕಳೆದ 8 ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 129 ರನ್ ಮಾತ್ರ. ಇನ್ನು ಈ 129 ರನ್​ ಬಾರಿಸಲು ತೆಗೆದುಕೊಂಡಿದ್ದು 118 ಎಸೆತಗಳನ್ನು. ಅಂದರೆ ಪವರ್​ಪ್ಲೇನಲ್ಲಿ ಅನೂಜ್ ರಾವತ್ ಸಂಪೂರ್ಣ ವಿಫಲರಾಗಿರುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ. ಅದರಲ್ಲೂ 2 ಬಾರಿ ಝೀರೋಗೆ ಔಟಾಗಿದ್ದಾರೆ.

ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲಬೇಕಿದ್ರೆ ಮೊದಲಿಗೆ ಆರಂಭಿಕನನ್ನು ಬದಲಿಸಬೇಕು. ಅದರಂತೆ ಆರ್​ಸಿಬಿ ಅನೂಜ್ ರಾತವ್ ರನ್ನು ಕೈ ಬಿಡಲಿದೆ. ಇನ್ನು ಬದಲಿ ಆರಂಭಿಕ ಆಟಗಾರರಾಗಿ ಆರ್​ಸಿಬಿ ತಂಡದಲ್ಲಿ ಅನೇಕ ಆಯ್ಕೆಗಳಿವೆ. ಮುಖ್ಯವಾಗಿ ಫಿನ್ ಅಲೆನ್ ತಂಡದಲ್ಲಿದ್ದಾರೆ. ಜೊತೆಗೆ ಮಹಿಪಾಲ್ ಲೋಮ್ರರ್ ಕೂಡ ಆರಂಭಿಕನಾಗಿ ಆಡಬಲ್ಲ ಬ್ಯಾಟ್ಸ್​ಮನ್. ಇವರಲ್ಲದೆ ಶಹಬಾಜ್ ಅಹ್ಮದ್ ಕೂಡ ಈ ಹಿಂದೆ ರಣಜಿಯಲ್ಲಿ ಆರಂಭಿಕನಾಗಿ ಆಡಿದ ಅನುಭವ ಹೊಂದಿದ್ದಾರೆ. ಅಂದರೆ ಆರ್​ಸಿಬಿ ಮುಂದೆ 3 ಆಯ್ಕೆಗಳಿವೆ. ಹೀಗಾಗಿ ಅನೂಜ್ ರಾವತ್ ಸ್ಥಾನವನ್ನು ಬೇರೆ ಆಟಗಾರರು ತುಂಬುದು ಬಹುತೇಕ ಖಚಿತ.

ಅನೂಜ್ ರಾವತ್ ಬದಲಾವಣೆ ಅನಿವಾರ್ಯ: ಆರ್​ಸಿಬಿ ತಂಡವು ಅನೂಜ್ ರಾವತ್​ಗೆ 8 ಪಂದ್ಯಗಳಲ್ಲಿ ಅವಕಾಶ ನೀಡಿದರೂ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಮತ್ತೊಂದೆಡೆ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಕೂಡ ಸತತವಾಗಿ ವಿಫಲರಾಗಿದ್ದಾರೆ. ಆಡಿದ 8 ಪಂದ್ಯಗಳಲ್ಲಿ 2 ಬಾರಿ ರನೌಟ್ ಆಗಿದ್ದರೆ, 2 ಬಾರಿ ಗೋಲ್ಡನ್ ಡಕ್​ಗೆ ಔಟಾಗಿದ್ದಾರೆ. ಒಂದೆಡೆ ಅನೂಜ್ ರಾವತ್ ಔಟ್ ಆದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ವಿಕೆಟ್ ಒಪಿಸುತ್ತಿದ್ದಾರೆ. ಅಂದರೆ ಆರ್​ಸಿಬಿ ತಂಡದ ಎರಡು ವಿಕೆಟ್​ಗಳು ಬ್ಯಾಕ್ ಟು ಬ್ಯಾಕ್ ಬೀಳುತ್ತಿರುವ ಕಾರಣ ಎದುರಾಳಿಗಳು ಮೇಲುಗೈ ಸಾಧಿಸುತ್ತಿದ್ದಾರೆ.

ಹೀಗಾಗಿ ಆರ್​ಸಿಬಿ ತಂಡವು ಆರಂಭಿಕ ಆಟಗಾರನನ್ನು ಬದಲಿಸುವ ಮೂಲಕ, ಪವರ್​ಪ್ಲೇನಲ್ಲಿ ವಿಕೆಟ್ ಬೀಳದಂತೆ ನೋಡಿಕೊಳ್ಳಬೇಕಾಗಿದೆ. ಏಕೆಂದರೆ ಆರ್​ಸಿಬಿ ತಂಡವು ಪವರ್​ಪ್ಲೇನಲ್ಲಿ ಉತ್ತಮವಾಗಿ ಆಡಿದ್ರೆ ಆ ಬಳಿಕ ಬರುವ ಗ್ಲೆನ್ ಮ್ಯಾಕ್ಸ್​ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ ತಂಡದ ಸ್ಕೋರ್​ ಅನ್ನು ದೊಡ್ಡ ಮೊತ್ತದತ್ತ ಕೊಂಡೊಯ್ಯುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿ ತಂಡವು ಆರಂಭಿಕ ಸಮಸ್ಯೆಯನ್ನು ಸರಿದೂಗಿಸುವ ಮೂಲಕ ಗೆಲುವಿನ ಲಯಕ್ಕೆ ಮರಳಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು