AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ

IPL 2022: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್

IPL 2022: RCB ತಂಡದಲ್ಲಿ ಪ್ರಮುಖ ಬದಲಾವಣೆ ಸಾಧ್ಯತೆ
IPL 2022 RCB
TV9 Web
| Edited By: |

Updated on: Apr 25, 2022 | 5:14 PM

Share

IPL 2022: ಐಪಿಎಲ್​ ಸೀಸನ್​ 15 ನಲ್ಲಿ ಮೊದಲಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಆರ್​ಸಿಬಿ (RCB) 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸಿತ್ತು. ಆದರೆ ದ್ವಿತಿಯಾರ್ಧದ ಮೊದಲ ಪಂದ್ಯದಲ್ಲೇ ಕೇವಲ 68 ರನ್​ಗಳಿಗೆ ಆಲೌಟ್ ಆಗುವ ಮೂಲಕ ಅಚ್ಚರಿ ಮೂಡಿಸಿತು. ಎಸ್​ಆರ್​ಹೆಚ್ ವಿರುದ್ದದ ಹೀನಾಯ ಸೋಲಿಗೆ ಪ್ರಮುಖ ಕಾರಣ ಬ್ಯಾಟ್ಸ್​ಮನ್​ಗಳು. ಅದರಲ್ಲೂ ಆರಂಭಿಕರು ವಿಫಲರಾಗುತ್ತಿರುವುದು ತಂಡದ ಚಿಂತೆಯನ್ನು ಹೆಚ್ಚಿಸಿದೆ. ಹೀಗಾಗಿ ಮುಂದಿನ ಪಂದ್ಯದಿಂದ ಅನೂಜ್ ರಾವತ್​ ರನ್ನು ಕೈ ಬಿಡುವ ಸಾಧ್ಯತೆಯಿದೆ. ಏಕೆಂದರೆ ಅನೂಜ್ ರಾವತ್ ಕಳೆದ 8 ಪಂದ್ಯಗಳಲ್ಲಿ ಕಲೆಹಾಕಿದ್ದು ಕೇವಲ 129 ರನ್ ಮಾತ್ರ. ಇನ್ನು ಈ 129 ರನ್​ ಬಾರಿಸಲು ತೆಗೆದುಕೊಂಡಿದ್ದು 118 ಎಸೆತಗಳನ್ನು. ಅಂದರೆ ಪವರ್​ಪ್ಲೇನಲ್ಲಿ ಅನೂಜ್ ರಾವತ್ ಸಂಪೂರ್ಣ ವಿಫಲರಾಗಿರುದಕ್ಕೆ ಈ ಅಂಕಿ ಅಂಶಗಳೇ ಸಾಕ್ಷಿ. ಅದರಲ್ಲೂ 2 ಬಾರಿ ಝೀರೋಗೆ ಔಟಾಗಿದ್ದಾರೆ.

ಹೀಗಾಗಿ ಆರ್​ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲಬೇಕಿದ್ರೆ ಮೊದಲಿಗೆ ಆರಂಭಿಕನನ್ನು ಬದಲಿಸಬೇಕು. ಅದರಂತೆ ಆರ್​ಸಿಬಿ ಅನೂಜ್ ರಾತವ್ ರನ್ನು ಕೈ ಬಿಡಲಿದೆ. ಇನ್ನು ಬದಲಿ ಆರಂಭಿಕ ಆಟಗಾರರಾಗಿ ಆರ್​ಸಿಬಿ ತಂಡದಲ್ಲಿ ಅನೇಕ ಆಯ್ಕೆಗಳಿವೆ. ಮುಖ್ಯವಾಗಿ ಫಿನ್ ಅಲೆನ್ ತಂಡದಲ್ಲಿದ್ದಾರೆ. ಜೊತೆಗೆ ಮಹಿಪಾಲ್ ಲೋಮ್ರರ್ ಕೂಡ ಆರಂಭಿಕನಾಗಿ ಆಡಬಲ್ಲ ಬ್ಯಾಟ್ಸ್​ಮನ್. ಇವರಲ್ಲದೆ ಶಹಬಾಜ್ ಅಹ್ಮದ್ ಕೂಡ ಈ ಹಿಂದೆ ರಣಜಿಯಲ್ಲಿ ಆರಂಭಿಕನಾಗಿ ಆಡಿದ ಅನುಭವ ಹೊಂದಿದ್ದಾರೆ. ಅಂದರೆ ಆರ್​ಸಿಬಿ ಮುಂದೆ 3 ಆಯ್ಕೆಗಳಿವೆ. ಹೀಗಾಗಿ ಅನೂಜ್ ರಾವತ್ ಸ್ಥಾನವನ್ನು ಬೇರೆ ಆಟಗಾರರು ತುಂಬುದು ಬಹುತೇಕ ಖಚಿತ.

ಅನೂಜ್ ರಾವತ್ ಬದಲಾವಣೆ ಅನಿವಾರ್ಯ: ಆರ್​ಸಿಬಿ ತಂಡವು ಅನೂಜ್ ರಾವತ್​ಗೆ 8 ಪಂದ್ಯಗಳಲ್ಲಿ ಅವಕಾಶ ನೀಡಿದರೂ ನಿರೀಕ್ಷಿತ ಆಟ ಮೂಡಿಬಂದಿಲ್ಲ. ಮತ್ತೊಂದೆಡೆ ಮೂರನೇ ಕ್ರಮಾಂಕದಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ ಕೂಡ ಸತತವಾಗಿ ವಿಫಲರಾಗಿದ್ದಾರೆ. ಆಡಿದ 8 ಪಂದ್ಯಗಳಲ್ಲಿ 2 ಬಾರಿ ರನೌಟ್ ಆಗಿದ್ದರೆ, 2 ಬಾರಿ ಗೋಲ್ಡನ್ ಡಕ್​ಗೆ ಔಟಾಗಿದ್ದಾರೆ. ಒಂದೆಡೆ ಅನೂಜ್ ರಾವತ್ ಔಟ್ ಆದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ವಿಕೆಟ್ ಒಪಿಸುತ್ತಿದ್ದಾರೆ. ಅಂದರೆ ಆರ್​ಸಿಬಿ ತಂಡದ ಎರಡು ವಿಕೆಟ್​ಗಳು ಬ್ಯಾಕ್ ಟು ಬ್ಯಾಕ್ ಬೀಳುತ್ತಿರುವ ಕಾರಣ ಎದುರಾಳಿಗಳು ಮೇಲುಗೈ ಸಾಧಿಸುತ್ತಿದ್ದಾರೆ.

ಹೀಗಾಗಿ ಆರ್​ಸಿಬಿ ತಂಡವು ಆರಂಭಿಕ ಆಟಗಾರನನ್ನು ಬದಲಿಸುವ ಮೂಲಕ, ಪವರ್​ಪ್ಲೇನಲ್ಲಿ ವಿಕೆಟ್ ಬೀಳದಂತೆ ನೋಡಿಕೊಳ್ಳಬೇಕಾಗಿದೆ. ಏಕೆಂದರೆ ಆರ್​ಸಿಬಿ ತಂಡವು ಪವರ್​ಪ್ಲೇನಲ್ಲಿ ಉತ್ತಮವಾಗಿ ಆಡಿದ್ರೆ ಆ ಬಳಿಕ ಬರುವ ಗ್ಲೆನ್ ಮ್ಯಾಕ್ಸ್​ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ ತಂಡದ ಸ್ಕೋರ್​ ಅನ್ನು ದೊಡ್ಡ ಮೊತ್ತದತ್ತ ಕೊಂಡೊಯ್ಯುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಆರ್​ಸಿಬಿ ತಂಡವು ಆರಂಭಿಕ ಸಮಸ್ಯೆಯನ್ನು ಸರಿದೂಗಿಸುವ ಮೂಲಕ ಗೆಲುವಿನ ಲಯಕ್ಕೆ ಮರಳಬಹುದು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB): ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ