AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಪ್ಲೇಆಫ್​ಗೇರಲು RCB ಇನ್ನು ಎಷ್ಟು ಪಂದ್ಯ ಗೆಲ್ಲಬೇಕು..?

IPL 2022: ಈಗಾಗಲೇ ಗುಜರಾತ್ ಟೈಟನ್ಸ್ 16 ಪಾಯಿಂಟ್ಸ್ ಪಡೆದಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ 16 ಪಾಯಿಂಟ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ 14 ಪಾಯಿಂಟ್ಸ್​ ಹೊಂದಿದೆ.

IPL 2022: ಪ್ಲೇಆಫ್​ಗೇರಲು RCB ಇನ್ನು ಎಷ್ಟು ಪಂದ್ಯ ಗೆಲ್ಲಬೇಕು..?
RCB
TV9 Web
| Edited By: |

Updated on:May 09, 2022 | 10:22 AM

Share

IPL 2022: ಐಪಿಎಲ್​ ಸೀಸನ್​ 15 ನ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಆರ್​ಸಿಬಿ (RCB) ತಂಡ ದ್ವಿತಿಯಾರ್ಧದಲ್ಲಿ 5 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್​ಸಿಬಿ ತಂಡವು 12 ಪಂದ್ಯಗಳಲ್ಲಿ 7 ಜಯ ಸಾಧಿಸಿ 14 ಪಾಯಿಂಟ್ಸ್ ಕಲೆಹಾಕಿದೆ. ಇನ್ನು ಆರ್​ಸಿಬಿ ತಂಡಕ್ಕೆ ಎರಡು ಪಂದ್ಯಗಳು ಮಾತ್ರ ಉಳಿದಿದ್ದು, ಈ 2 ಮ್ಯಾಚ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ನಿರ್ಣಾಯಕ.

ಏಕೆಂದರೆ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಕನ್​​ಫರ್ಮ್ ಮಾಡಿಕೊಳ್ಳಬಹುದು. ಅಂದರೆ ಒಟ್ಟು 18 ಪಾಯಿಂಟ್​ಗಳಿಸಿ ಪ್ಲೇಆಫ್​ ಪ್ರವೇಶಿಸಬಹುದು. ಇನ್ನು ಒಂದರಲ್ಲಿ ಮಾತ್ರ ಗೆದ್ದರೆ ಒಟ್ಟು 16 ಪಾಯಿಂಟ್ ಆಗಲಿದೆ. ಆದರೆ ಈಗಾಗಲೇ ಗುಜರಾತ್ ಟೈಟನ್ಸ್ 16 ಪಾಯಿಂಟ್ಸ್ ಪಡೆದಿದೆ. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್​ 16 ಪಾಯಿಂಟ್ಸ್​ನೊಂದಿಗೆ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ 14 ಪಾಯಿಂಟ್ಸ್​ ಹೊಂದಿದೆ. ಆದರೆ ರಾಜಸ್ಥಾನ್​ ರಾಯಲ್ಸ್ ಇನ್ನೂ 3 ಮ್ಯಾಚ್ ಉಳಿದಿದೆ. ಹೀಗಾಗಿ ಆರ್​ಆರ್ ಕೂಡ 16 ಪಾಯಿಂಟ್ಸ್​ ಗಳಿಸುವ ಸಾಧ್ಯತೆಯಿದೆ.

ಮತ್ತೊಂದೆಡೆ ಡೆಲ್ಲಿ ಕ್ಯಾಪಿಟಲ್ಸ್​ 10 ಮ್ಯಾಚ್ ಆಡಿ 10 ಪಾಯಿಂಟ್ಸ್ ಪಡೆದುಕೊಂಡಿದೆ. ಅಂದರೆ ನಾಲ್ಕು ಮ್ಯಾಚ್​ನಲ್ಲಿ ಮೂರು ಗೆದ್ದರೆ 16 ಪಾಯಿಂಟ್ಸ್ ಆಗಲಿದೆ. ಹಾಗೆಯೇ ಎಸ್​ಆರ್​ಹೆಚ್ ಹಾಗೂ ಪಂಜಾಬ್ ಕಿಂಗ್ಸ್​ ತಂಡಗಳಿಗೂ 3 ಮ್ಯಾಚ್​ಗಳು ಉಳಿದಿದ್ದು, ಈ ಪಂದ್ಯಗಳಲ್ಲಿ ಈ ಎರಡು ತಂಡಗಳು ಗೆದ್ದರೆ ಆ ತಂಡಗಳ ಪಾಯಿಂಟ್ಸ್ ಕೂಡ 16 ಆಗಲಿದೆ.

ಹಾಗಾಗಿ ಆರ್​ಸಿಬಿ ಮುಂದಿನ 2 ಪಂದ್ಯಗಳನ್ನೂ ಗೆಲ್ಲುವ ಮೂಲಕ ಪ್ಲೇ ಆಫ್ ಅನ್ನು ಖಚಿತಪಡಿಸಿಕೊಳ್ಳಬೇಕಿದೆ. ಒಂದು ವೇಳೆ 2 ರಲ್ಲಿ 1 ಮ್ಯಾಚ್ ಗೆದ್ದರೆ 16 ಪಾಯಿಂಟ್ಸ್ ಸಿಗಲಿದೆ. ಹಾಗೆಯೇ ಉಳಿದ ತಂಡಗಳು ಕೂಡ 16 ಪಾಯಿಂಟ್ಸ್​ಗಳಿಸಿ 3ನೇ ಮತ್ತು ನಾಲ್ಕನೇ ಸ್ಥಾನ ಪಡೆದರೆ ಆರ್​ಸಿಬಿ ಪ್ಲೇ ಆಫ್​ ಪ್ರವೇಶಿಸಲು ನೆಟ್​ ರನ್​ ರೇಟ್​ನ ಮೊರೆ ಹೋಗಬೇಕಾಗುತ್ತದೆ. ಹೀಗಾಗಿ ಆರ್​ಸಿಬಿ ತಂಡವು ಮುಂದಿನ 2 ನಪಂದ್ಯಗಳನ್ನು ಗೆದ್ದರೆ ಮಾತ್ರ ನೇರವಾಗಿ ಪ್ಲೇಆಫ್ ಪ್ರವೇಶಿಸಬಹುದು.

ಹೀಗಾಗಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ತಂಡವು ಪಾಯಿಂಟ್ಸ್ ಟೇಬಲ್​ನಲ್ಲಿ 1ನೇ ಅಥವಾ 2ನೇ ಸ್ಥಾನ ಅಲಂಕರಿಸಬಹುದು. ಅಲ್ಲದೆ ನೇರವಾಗಿ ಪ್ಲೇಆಫ್ ಎಂಟ್ರಿಯನ್ನು ಖಚಿತಪಡಿಸಿಕೊಳ್ಳಬಹುದಾಗಿದೆ.

RCB ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:37 pm, Sun, 8 May 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್