Rishabh Pant: ರಿಷಬ್ ಪಂತ್ ದುರಹಂಕಾರಿ! ಅವರ ನಾಯಕತ್ವ ನನ್ನ ತಲೆ ಕೆರೆದುಕೊಳ್ಳುವಂತೆ ಮಾಡಿತು; ಆಕಾಶ ವಾಣಿ

Rishabh Pant: ಈ ಆಟಗಾರ ತನ್ನ ದುರಹಂಕಾರದಿಂದಲೇ ಹಲವು ಬಾರಿ ಔಟಾಗಿದ್ದಾನೆ. ಬೌಲರ್‌ಗೆ ಲಾಂಗ್‌ ಶಾಟ್‌ಗಳನ್ನು ಹೊಡೆಯುವ ಭರದಲ್ಲಿ ವಿಕೆಟ್‌ ಕಳೆದುಕೊಂಡಿದ್ದಾನೆ.

Rishabh Pant: ರಿಷಬ್ ಪಂತ್ ದುರಹಂಕಾರಿ! ಅವರ ನಾಯಕತ್ವ ನನ್ನ ತಲೆ ಕೆರೆದುಕೊಳ್ಳುವಂತೆ ಮಾಡಿತು; ಆಕಾಶ ವಾಣಿ
ರಿಷಬ್ ಪಂತ್
Follow us
| Updated By: ಪೃಥ್ವಿಶಂಕರ

Updated on:Jun 01, 2022 | 6:25 PM

ಐಪಿಎಲ್ 2022 (IPL 2022)ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಪ್ರದರ್ಶನ ವಿಶೇಷವಾಗಿರಲಿಲ್ಲ. ಕೇವಲ ಒಂದು ಗೆಲುವನ್ನು ಪಡೆಯದ ಕಾರಣ ತಂಡವು ಪ್ಲೇ ಆಫ್ ರೇಸ್‌ನಿಂದ ಹೊರಗುಳಿಯಿತು. ಮುಂಬೈ ವಿರುದ್ಧದ ಸೋಲಿನಿಂದಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಪ್ಲೇ ಆಫ್ ತಲುಪಿತು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ನಿರಾಸೆಯನ್ನು ಎದುರಿಸಬೇಕಾಯಿತು. ಈಗ ತಂಡವು ಕಳಪೆ ಪ್ರದರ್ಶನ ನೀಡಿರುವುದರಿಂದ ನಾಯಕನ ಮೇಲೆ ಹಲವು ಪ್ರಶ್ನೆಗಳು ಎದ್ದಿವೆ. ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ರಿಷಬ್ ಪಂತ್ (Rishabh Pant) ನಾಯಕತ್ವದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಆಕಾಶ್ ಚೋಪ್ರಾ, ಪಂತ್ ನಾಯಕತ್ವ, ಬ್ಯಾಟಿಂಗ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಚೋಪ್ರಾ ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪಂತ್ ವಿರುದ್ಧ ಹರಿಹಾಯ್ದಿದ್ದಾರೆ.

ಪಂತ್ ನಾಯಕತ್ವದ ಬಗ್ಗೆ ಛೋಪ್ರಾ ಹಲವು ಪ್ರಶ್ನೆಗಳು

ಆಕಾಶ್ ಚೋಪ್ರಾ, ‘ರಿಷಬ್ ಪಂತ್ ಆಟಗಾರನಾಗಿ ನನ್ನ ನೆಚ್ಚಿನ ಆಟಗಾರ, ನಾನು ಅವರನ್ನು ತುಂಬಾ ಇಷ್ಟಪಡುತ್ತೇನೆ. ನಾವು ಕೂಡ ಅದೇ ಕ್ಲಬ್‌ನಲ್ಲಿ ಆಡಿದ್ದೇವೆ, ಆದರೆ ಅವರ ನಾಯಕತ್ವ ಚೆನ್ನಾಗಿರಲಿಲ್ಲ. ಹಲವಾರು ಸಂದರ್ಭಗಳಲ್ಲಿ ಅವರ ನಾಯಕತ್ವ ನನ್ನ ತಲೆ ಕೆರೆದುಕೊಳ್ಳುವಂತೆ ಮಾಡಿತು. ಕುಲದೀಪ್ ಯಾದವ್ 3 ಓವರ್‌ಗಳಲ್ಲಿ 4 ವಿಕೆಟ್ ಕಬಳಿಸಿದ ಪಂದ್ಯವಿತ್ತು ಆದರೆ ಪಂತ್ ಅವರಿಗೆ ನಾಲ್ಕನೇ ಓವರ್ ನೀಡಗಲಿಲ್ಲ. ಡೆಲ್ಲಿ ಕ್ಯಾಪಿಟಲ್ಸ್‌ನ ಪ್ರಮುಖ ಬೌಲರ್‌ಗಳು ನಾಲ್ಕು ಓವರ್‌ಗಳನ್ನು ಬೌಲ್ ಮಾಡಲು ಸಾಧ್ಯವಾಗದ ಅನೇಕ ಸಂದರ್ಭಗಳಲ್ಲಿ ಇದು ಸಂಭವಿಸಿತು.

ಇದನ್ನೂ ಓದಿ
Image
ಧೋನಿಯ ಆ ನಿರ್ಧಾರದಿಂದಾಗಿ ನಾನು ಏಕದಿನ ಕ್ರಿಕೆಟ್​ಗೆ ಗುಡ್​ ಬೈ ಹೇಳಲು ಬಯಸಿದ್ದೆ! ಸೆಹ್ವಾಗ್ ಶಾಕಿಂಗ್ ಹೇಳಿಕೆ
Image
IND vs SA: ರಾಹುಲ್ ಪಡೆಗೆ ಸಿಹಿ ಸುದ್ದಿ; ಬಯೋ ಬಬಲ್​ ನಿಯಮಗಳಿಂದ ಟೀಂ ಇಂಡಿಯಾ ಆಟಗಾರರು ಮುಕ್ತ!
Image
ಭಾರತದ ವಿರುದ್ಧ 23 ರನ್‌ಗಳಿಗೆ 5 ವಿಕೆಟ್ ಪಡೆದಿದ್ದ ವೆಸ್ಟ್ ಇಂಡೀಸ್ ಮಾಜಿ ಕ್ರಿಕೆಟರ್ ಡೇವಿಡ್ ಹೋಲ್ಫೋರ್ಡ್ ನಿಧನ

ಇದನ್ನೂ ಓದಿ: IPL 2022: ಈ ಐಪಿಎಲ್ ಮೂಲಕ ಟೀಂ ಇಂಡಿಯಾಗೆ ಸಿಕ್ಕ ಐವರು ಪ್ರತಿಭಾವಂತ ಬೌಲರ್​ಗಳಿವರು

ಬ್ಯಾಟ್‌ನಲ್ಲೂ ಪಂತ್ ವಿಫಲ

ಬ್ಯಾಟ್‌ನೊಂದಿಗೆ ಪಂತ್ ಅವರ ಸ್ಥಿರ ಪ್ರದರ್ಶನವು ಡೆಲ್ಲಿ ಕ್ಯಾಪಿಟಲ್ಸ್‌ಗೆ ಸಾಕಷ್ಟು ಹಾನಿ ಮಾಡಿದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಆಕಾಶ್ ಚೋಪ್ರಾ, ‘ರಿಷಬ್ ಪಂತ್ ಅವರ ಬ್ಯಾಟಿಂಗ್‌ನ ಕಳಪೆ ಫಾರ್ಮ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ದೊಡ್ಡ ಸಮಸ್ಯೆಯಾಗಿದೆ. ಅವರ ರನ್ ಗೆಲುವಿನಲ್ಲಿ ಕೆಲಸ ಮಾಡಲಿಲ್ಲ. ಪಂತ್ ಉತ್ತಮ ಸರಾಸರಿ ಹೊಂದಿದ್ದಾರೆ ಆದರೆ ಅವರು ರನ್ ಗಳಿಸಿದ ಹೆಚ್ಚಿನ ಪಂದ್ಯಗಳಲ್ಲಿ ತಂಡ ಸೋಲನುಭವಿಸಿತು.

ಪಂತ್ ತಮ್ಮ ವಿಕೆಟ್ ಅನ್ನು ಹಲವು ಬಾರಿ ಕೈಚೆಲ್ಲಿದ್ದಾರೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಕೆಟ್ಟ ಹೊಡೆತದಿಂದ ಪಂತ್ ಹಲವು ಬಾರಿ ಬೇಗನೆ ಪೆವಿಲಿಯನ್‌ಗೆ ಮರಳಬೇಕಾಯಿತು. ಚೋಪ್ರಾ ಇದನ್ನು ಪಂತ್ ದುರಹಂಕಾರ ಎಂದು ಕರೆದಿದ್ದಾರೆ. ಆಕಾಶ್ ಚೋಪ್ರಾ, ‘ಈ ಆಟಗಾರ ತನ್ನ ದುರಹಂಕಾರದಿಂದಲೇ ಹಲವು ಬಾರಿ ಔಟಾಗಿದ್ದಾನೆ. ಬೌಲರ್‌ಗೆ ಲಾಂಗ್‌ ಶಾಟ್‌ಗಳನ್ನು ಹೊಡೆಯುವ ಭರದಲ್ಲಿ ವಿಕೆಟ್‌ ಕಳೆದುಕೊಂಡಿದ್ದಾನೆ. ಆದರೆ ನನ್ನ ನಂತರ ತಂಡದಲ್ಲಿ ಹೆಚ್ಚು ಬ್ಯಾಟಿಂಗ್ ಇಲ್ಲ ಎಂಬುದು ಪಂತ್​ಗೆ ಗೊತ್ತಿದ್ದರು ಅವರು ನಿರ್ಲಕ್ಷ್ಯ ವಹಿಸಿದರು ಎಂದಿದ್ದಾರೆ. ಆದಾಗ್ಯೂ, ಕುಲದೀಪ್ ಯಾದವ್ ಅವರ ಉತ್ತಮ ಪ್ರದರ್ಶನಕ್ಕಾಗಿ ಆಕಾಶ್ ಚೋಪ್ರಾ ರಿಷಬ್ ಪಂತ್ಗೆ ಸಂಪೂರ್ಣ ಕ್ರೆಡಿಟ್ ನೀಡಿದ್ದು, ಪಂತ್ ನೀಡಿದ ಧೈರ್ಯದಿಂದ ಕುಲದೀಪ್ ಅದ್ಭುತ ಪ್ರದರ್ಶನ ನೀಡಿದರು ಎಂದು ಛೋಪ್ರಾ ಹೇಳಿದ್ದಾರೆ.

Published On - 6:25 pm, Wed, 1 June 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು