AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 5 ತಿಂಗಳುಗಳಿಂದ ಅನ್​ಫಿಟ್ ಆಗಿದ್ದ ಮಾರಕ ವೇಗಿ ಐಪಿಎಲ್​ಗಾಗಿ ಮುಂಬೈನಲ್ಲಿ ಪ್ರತ್ಯಕ್ಷ

ಐಪಿಎಲ್ 2022 ಟೂರ್ನಿ ಆರಂಭಕ್ಕೆ ಒಂದು ವಾರ ಇರುವಾಗ ದಿಢೀರ್ ಎಂದು ವಿದೇಶಿ ಆಟಗಾರರು ಭಾರತಕ್ಕೆ ಆಗಮನಿಸುತ್ತಿದ್ದಾರೆ. ಇದರಲ್ಲಿ ಅಚ್ಚರಿ ಎಂಬಂತೆ ಕಳೆದ 5 ತಿಂಗಳುಗಳಿಂದ ಫಿಟ್ನೆಸ್ ತೊಂದರೆಯಿಂದ ರಾಷ್ಟ್ರೀಯ ತಂಡದಿಂದ ಹೊರಬಿದ್ದ ಅನ್ರಿಚ್ ನಾರ್ಟ್ಜೆ ಇದೀಗ ಐಪಿಎಲ್​ಗಾಗಿ ಭಾರತಕ್ಕೆ ಕಾಲಿಟ್ಟಿದ್ದಾರೆ.

IPL 2022: 5 ತಿಂಗಳುಗಳಿಂದ ಅನ್​ಫಿಟ್ ಆಗಿದ್ದ ಮಾರಕ ವೇಗಿ ಐಪಿಎಲ್​ಗಾಗಿ ಮುಂಬೈನಲ್ಲಿ ಪ್ರತ್ಯಕ್ಷ
Anrich Nortje IPL 2022
TV9 Web
| Updated By: Vinay Bhat|

Updated on: Mar 20, 2022 | 11:42 AM

Share

ಐಪಿಎಲ್ 2022 (IPL 2022) ಟೂರ್ನಿ ಹತ್ತಿರವಾಗುತ್ತಿದ್ದಂತೆ ಎಲ್ಲ ಆಟಗಾರರು ಒಬ್ಬೊಬ್ಬರಾಗಿ ಫ್ರಾಂಚೈಸಿ ಸೇರಿಕೊಳ್ಳುತ್ತಿದ್ದಾರೆ. ಬಯೋ ಬಬಲ್​ನಿಂದ ನೇರವಾಗಿ ಆಗಮಿಸುವ ಆಟಗಾರರಿಗೆ ಎರಡು ದಿನಗಳ ಕ್ವಾರಂಟೈನ್ ನಿಯಮವಿದ್ದರೆ, ಹೊಸದಾಗಿ ತಂಡ ಸೇರಿಕೊಳ್ಳುವ ಪ್ಲೇಯರ್ಸ್​ ಕಡ್ಡಾಯ ಒಂದು ವಾರಗಳ ಕ್ವಾರಂಟೈನ್​ನಲ್ಲಿ ಇರಬೇಕಾಗಿದೆ. ಇದೀಗ ಟೂರ್ನಿ ಆರಂಭಕ್ಕೆ ಒಂದು ವಾರ ಇರುವಾಗ ದಿಢೀರ್ ಎಂದು ವಿದೇಶಿ ಆಟಗಾರರು ಭಾರತಕ್ಕೆ ಆಗಮನಿಸುತ್ತಿದ್ದಾರೆ. ಇದರಲ್ಲಿ ಅಚ್ಚರಿ ಎಂಬಂತೆ ಕಳೆದ ಐದು ತಿಂಗಳುಗಳಿಂದ ಫಿಟ್ನೆಸ್ ತೊಂದರೆ ಅನುಭವಿಸಿ ತನ್ನ ರಾಷ್ಟ್ರೀಯ ತಂಡದಿಂದ ಹೊರಬಿದ್ದ ಆಟಗಾರ ಇದೀಗ ಐಪಿಎಲ್​ಗಾಗಿ ಭಾರತಕ್ಕೆ ಕಾಲಿಟ್ಟಿದ್ದಾರೆ. ಹೌದು, ದಕ್ಷಿಣ ಆಫ್ರಿಕಾದ ಮಾರಕ ವೇಗಿ ಅನ್ರಿಚ್ ನಾರ್ಟ್ಜೆ (Anrich Nortje) 15ನೇ ಆವೃತ್ತಿಯ ಐಪಿಎಲ್​ಗಾಗಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಸೇರಿಕೊಳ್ಳಲು ಮುಂಬೈಗೆ ತಲುಪಿದ್ದಾರೆ. ಐಪಿಎಲ್​​ನಿಂದ ಹೊರ ನಡೆದಿದ್ದಾರೆ ಎಂದು ಹೇಳಲಾಗಿದ್ದ ಅನ್ರಿಚ್ ಇದೀಗ ದಿಢೀರ್ ಆಗಿ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಕಣಕ್ಕಿಳಿಯಲು ತೀರ್ಮಾನಿಸಿದ್ದಾರೆ.

ಅನ್ರಿಚ್ ನಾರ್ಟ್ಜೆ ಅವರು ಕಳೆದ ಭಾರತ ವಿರುದ್ಧದ ಪ್ರವಾಸಕ್ಕೂ ಮುನ್ನ ಇಂಜುರಿಗೆ ತುತ್ತಾದರು. ಸೊಂಟದ ಗಾಯದಿಂದಾಗಿ ಅವರು ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಆಗಿರಲಿಲ್ಲ. ಅಲ್ಲದೆ ಸದ್ಯ ಸಾಗುತ್ತಿರುವ ಬಾಂಗ್ಲಾದೇಶ ವಿರುದ್ಧದ ಸರಣಿಯಿಂದಲೂ ಹೊರಗುಳಿದಿದ್ದಾರೆ. ಹೀಗೆ ಕಳೆದ ಐದು ತಿಂಗಳುಗಳಿಂದ ಕ್ರಿಕೆಟ್ ಅಂಗಳಕ್ಕೆ ಕಾಲಿಡದ ನಾರ್ಟ್ಜೆ ಇದೀಗ ಐಪಿಎಲ್​ಗಾಗಿ ಭಾರತಕ್ಕೆ ಆಗಮಿಸಿದ್ದು ಅಚ್ಚರಿ ಮೂಡಿಸಿದೆ. ಇತ್ತ ಡೆಲ್ಲಿ ತಂಡಕ್ಕೆ ಇವರ ಕಮ್​ಬ್ಯಾಕ್ ಆನೆಬಲ ಬಂದಂತಾಗಿದೆ.

ಮೆಗಾ ಹರಾಜಿಗೂ ಮುನ್ನ ಡೆಲ್ಲಿ ಫ್ರಾಂಚೈಸಿ ಇವರನ್ನು 6.5 ಕೋಟಿ ರೂ. ಗೆ ತನ್ನಲ್ಲೇ ಉಳಿಸಿಕೊಂಡಿತ್ತು. ಯಾಕೆಂದರೆ ಅನ್ರಿಚ್ ನಾರ್ಟ್ಜೆ ಕಳೆದ ವರ್ಷ ಅಮೋಘ ಪ್ರದರ್ಶನ ನೀಡಿದ್ದರು ಮತ್ತು ತಂಡದ ಯಶಸ್ಸಿನಲ್ಲಿ ಪ್ರಮುಖ ಅಂಶವಾಗಿದ್ದರು. ಆದರೆ ಈ ಋತುವಿನಲ್ಲಿ ಅವರು ಇಂಜುರಿಯಿಂದಾಗಿ ಆಡುವುದಿಲ್ಲ. ಡೆಲ್ಲಿ ಈಗ ಹೊಸ ವೇಗಿಯನ್ನು ಹುಡುಕುವತ್ತ ಗಮನ ಹರಿಸುತ್ತಿದೆ ಎಂದು ವರದಿಯಾಗಿತ್ತು. ಆದರೀಗ ಅನ್ರಿಚ್ ಅವರು ಶಾರ್ದೂಲ್ ಠಾಕೂರ್ ಮತ್ತು ಖಲೀಲ್ ಅಹ್ಮದ್ ಜೊತೆ ಬೆಂಕಿಯ ಚೆಂಡು ಉಗುಳಲು ತಯಾರಾಗಿದ್ದಾರೆ.

ರಾಷ್ಟ್ರೀಯ ತಂಡದಿಂದ 5 ಆಟಗಾರರು ಔಟ್:

ಬಾಂಗ್ಲಾದೇಶ ವಿರುದ್ಧ ಮಾರ್ಚ್ 31ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟವಾಗಿದ್ದು ಐಪಿಎಲ್​ನಲ್ಲಿ ಆಡಲಿರುವ ಆಟಗಾರರನ್ನು ಕೈಬಿಡಲಾಗಿದೆ. ಹರಿಣಗಳ ತಂಡದ ಪ್ರಮುಖ ವೇಗದ ಬೌಲರ್ ಗಳಾದ ಕಗಿಸೋ ರಬಾಡ, ಲುಂಗಿ ಎನ್ ಗಿಡಿ ಮತ್ತು ಮಾಕ್ರೋ ಜೆನ್ಸನ್ ಗೆ ಟೆಸ್ಟ್ ತಂಡದಲ್ಲಿ ಜಾಗ ನೀಡಲಾಗಿಲ್ಲ. ಐಪಿಎಲ್ ನಲ್ಲಿ ಆಡುವ ಆ್ಯಡನ್ ಮಾಕ್ರಮ್ ಮತ್ತು ರಸ್ಸಿ ವ್ಯಾನ್ ಡರ್ ಡ್ಯುಸನ್ ಕೂಡಾ ಬಾಂಗ್ಲಾ ಸರಣಿಗೆ ಆಯ್ಕೆಯಾಗಿಲ್ಲ. ಐಪಿಎಲ್‌ ನಲ್ಲಿ ಆಡಬೇಕೆ ಅಥವಾ ದೇಶದ ಸರಣಿಯಲ್ಲಿ ಆಡಬೇಕೆ ಎಂಬ ನಿರ್ಧಾರವನ್ನು ಆಟಗಾರರಿಗೆ ಬಿಡಲಾಗಿತ್ತು ಎಂದು ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ ಹೇಳಿದೆ.

ಸಿಎಸ್​ಕೆಗೆ ಡಬಲ್ ಶಾಕ್:

ಐಪಿಎಲ್ 2022 ಆರಂಭಕ್ಕೂ ಮುನ್ನ ಚೆನ್ನೈ ಸೂಪರ್‌ಕಿಂಗ್ಸ್​ಗೆ ಡಬಲ್ ಶಾಕ್ ಉಂಟಾಗಿದೆ. ತಂಡದ ಇಬ್ಬರು ಪ್ರಮುಖ ಆಟಗಾರರು ಗಾಯದ ಸಮಸ್ಯೆಯಿಂದ ಇನ್ನೂ ಹೊರಬಂದಿಲ್ಲ. 6 ಕೋಟಿ ರೂ.ಗೆ ರಿಟೇನ್ ಆಗಿದ್ದ ಆರಂಭಿಕ ಋತುರಾಜ್ ಗಾಯಕ್ವಾಡ್ ಜತೆಗೆ ಮೆಗಾ ಹರಾಜಿನಲ್ಲಿ ಬರೋಬ್ಬರಿ 14 ಕೋಟಿ ರೂ. ಗೆ ತಂಡಕ್ಕೆ ಮರಳಿರುವ ಆಲ್ರೌಂಡರ್ ದೀಪಕ್ ಚಹರ್ ಫಿಟ್ನೆಸ್ ಕೂಡ ತಲೆನೋವು ತಂದಿದೆ. ಕೈ ನೋವಿನಿಂದ ಬಳಲುತ್ತಿದ್ದ ಋತುರಾಜ್ ಸಿಎಸ್‌ಕೆ ಶಿಬಿರ ಕೂಡಿಕೊಂಡಿದ್ದರೂ, ಆರಂಭಿಕ ಕೆಲ ಪಂದ್ಯಕ್ಕೆ ಅಲಭ್ಯರಾಗುವ ಭೀತಿ ಇದೆ. ಇದರ ನಡುವೆ ಗಂಭೀರವಾದ ಸ್ನಾಯು ಸೆಳೆತದಿಂದ ಬಳಲುತ್ತಿರುವ ದೀಪಕ್ ಚಹರ್ ಇನ್ನೂ ತಂಡ ಸೇರಿಕೊಂಡಿಲ್ಲ ಹೀಗಾಗಿ ಟೂರ್ನಿಯಿಂದಲೇ ಹೊರಬಿದ್ದರೆ ಧೋನಿ ಪಡೆಗೆ ದೊಡ್ಡ ಹಿನ್ನಡೆಯಾಗಲಿದೆ.

Virat Kohli: ಕೊಹ್ಲಿ ಅಲ್ಲ: ಆರ್​ಸಿಬಿ ಪರ ಫಾಫ್ ಡುಪ್ಲೆಸಿಸ್ ಜೊತೆ ಇನ್ನಿಂಗ್ಸ್ ಆರಂಭಿಸುವುದು ಯಾರು ಗೊತ್ತೇ?

Lakshya Sen: ಫೈನಲ್ ಹಾದಿ ಸುಗಮವಾಗಿರಲಿಲ್ಲ; ಒಲಂಪಿಕ್, ವಿಶ್ವ ಚಾಂಪಿಯನ್​ಗಳಿಗೆ ಮಣ್ಣು ಮುಕ್ಕಿಸಿದ ಲಕ್ಷ್ಯ ಸೇನ್!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ