AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs SRH Playing 11: ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನ ಕಣಕ್ಕಿಳಿಸಿದ ಆರ್​ಸಿಬಿ

IPL 2022 SRH vs RCB playing XI: ಉಭಯ ತಂಡಗಳು 21 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಸನ್​ರೈಸರ್ಸ್​​ ಹೈದರಾಬಾದ್ ತಂಡವು 12 ಬಾರಿ ಗೆದ್ದಿದೆ. ಮತ್ತೊಂದೆಡೆ ಆರ್​ಸಿಬಿ ತಂಡ ಗೆದ್ದಿರುವುದು 8 ಬಾರಿ ಮಾತ್ರ.

RCB vs SRH Playing 11: ಬಲಿಷ್ಠ ಪ್ಲೇಯಿಂಗ್ ಇಲೆವೆನ್​ನ ಕಣಕ್ಕಿಳಿಸಿದ ಆರ್​ಸಿಬಿ
RCB Playing 11
TV9 Web
| Edited By: |

Updated on: May 08, 2022 | 3:30 PM

Share

IPL 2022: ಐಪಿಎಲ್​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಆರ್​​ಸಿಬಿ ನಾಯಕ ಫಾಫ್ ಡುಪ್ಲೆಸಿಸ್​ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯವು ಉಭಯ ತಂಡಗಳಿಗೂ ಮಹತ್ವದ ಮ್ಯಾಚ್ ಆಗಿದ್ದು, ಪ್ಲೇಆಫ್​ ಗೇರಲು ಎರಡೂ ತಂಡಗಳೂ ಈ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಹಳೆಯ ಫಾರ್ಮ್​ಗೆ ಮರಳುವ ನಿರೀಕ್ಷೆಯಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಅರ್ಧಶತಕ ಬಾರಿಸುವ ಮೂಲಕ ಕೊಹ್ಲಿ ಫಾರ್ಮ್‌ಗೆ ಮರಳಿರುವುದನ್ನು ಸೂಚಿಸಿದರು. ಆದರೆ ಕಳೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅದ್ಭುತ ಆಟವಾಡಲು ಸಾಧ್ಯವಾಗಲಿಲ್ಲ.

ಹಾಗೆಯೇ ಎಸ್​ಆರ್​ಹೆಚ್​ ನಾಯಕ ಕೇನ್ ವಿಲಿಯಮ್ಸನ್ ಉತ್ತಮ ಆರಂಭವನ್ನು ದೊಡ್ಡ ಇನ್ನಿಂಗ್ಸ್ ಆಗಿ ಪರಿವರ್ತಿಸಲು ಸಾಧ್ಯವಾಗಲಿಲ್ಲ. ಇನ್ನೊಂದೆಡೆ ಕ್ಯಾಪ್ಟನ್ ಆಗಿರುವ ಕಾರಣ ಸತತ ಸೋಲುಗಳ ಒತ್ತಡ ಕೂಡ ವಿಲಿಯಮ್ಸನ್ ಮೇಲಿದೆ. ಏಕೆಂದರೆ ಸತತ ಐದು ಪಂದ್ಯಗಳನ್ನು ಗೆದ್ದ ನಂತರ, ಸನ್‌ರೈಸರ್ಸ್ ಸತತ ಮೂರು ಪಂದ್ಯಗಳಲ್ಲಿ ಸೋತಿದೆ. ಮುಖ್ಯವಾಗಿ ತಮ್ಮ ಸ್ಟಾರ್ ಬೌಲರ್‌ಗಳ ಗಾಯದಿಂದಾಗಿ ಬೌಲಿಂಗ್ ಲೈನಪ್ ಕೂಡ ಹಳಿತಪ್ಪಿದೆ. ಈ ಸೋಲುಗಳಿಂದಾಗಿ ಎಸ್​ಆರ್​ಹೆಚ್ ಸದ್ಯ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. ಇನ್ನು ಈ ಪಂದ್ಯವು ಮತ್ತಷ್ಟು ವಿಶೇಷವಾಗಲು ಮುಖ್ಯ ಕಾರಣ ಕಳೆದ ಬಾರಿ ಆರ್‌ಸಿಬಿಯನ್ನು ಎಸ್​ಆರ್​ಹೆಚ್ ತಂಡವು ಕೇವಲ 68 ರನ್‌ಗಳಿಗೆ ಆಲೌಟ್ ಮಾಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ತಮ್ಮ ಹೀನಾಯ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ ಆರ್​ಸಿಬಿ.

ಇನ್ನು ಉಭಯ ತಂಡಗಳು 21 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಸನ್​ರೈಸರ್ಸ್​​ ಹೈದರಾಬಾದ್ ತಂಡವು 12 ಬಾರಿ ಗೆದ್ದಿದೆ. ಮತ್ತೊಂದೆಡೆ ಆರ್​ಸಿಬಿ ತಂಡ ಗೆದ್ದಿರುವುದು 8 ಬಾರಿ ಮಾತ್ರ. ಅದರಲ್ಲೂ ಕಳೆದ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ದ ಆರ್​ಸಿಬಿ ಹೀನಾಯವಾಗಿ ಸೋತಿದೆ. ಹೀಗಾಗಿ ಈ ಬಾರಿ ಕೂಡ ಎಸ್​ಆರ್​ಹೆಚ್​ ತಂಡವೇ ಮೇಲುಗೈ ಹೊಂದಿದೆ ಎನ್ನಬಹುದು. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ.

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (ನಾಯಕ), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಫಜಲ್ಹಕ್ ಫಾರೂಕಿ, ಉಮ್ರಾನ್ ಮಲಿಕ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಝಲ್‌ವುಡ್

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು