AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: SRH ತಂಡ ಉಳಿಸಿಕೊಳ್ಳುವ ಆಟಗಾರ ಯಾರೆಂದು ತಿಳಿಸಿದ ಮಾಜಿ ನಾಯಕ

Sunrisers Hyderabad: ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು. ಅದರಂತೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರ ಅಥವಾ ಇಬ್ಬರು ಭಾರತೀಯ ಆಟಗಾರ+ಇಬ್ಬರು ವಿದೇಶಿ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು.

IPL 2022: SRH ತಂಡ ಉಳಿಸಿಕೊಳ್ಳುವ ಆಟಗಾರ ಯಾರೆಂದು ತಿಳಿಸಿದ ಮಾಜಿ ನಾಯಕ
IPL 2022
TV9 Web
| Edited By: |

Updated on: Nov 16, 2021 | 5:30 PM

Share

ಇಂಡಿಯನ್ ಪ್ರೀಮಿಯರ್ ಲೀಗ್ 2022ರ ಸಿದ್ದತೆಗಳು ಶುರುವಾದ ಬೆನ್ನಲ್ಲೇ, ಯಾವ ತಂಡ ಯಾರನ್ನು ರಿಟೈನ್ ಮಾಡಿಕೊಳ್ಳಲಿದೆ ಎಂಬ ಚರ್ಚೆಗಳು ಕೂಡ ಆರಂಭವಾಗಿದೆ. ಅದರಲ್ಲೂ ಎಲ್ಲರ ಕಣ್ಣು ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿಯತ್ತ ನೆಟ್ಟಿದೆ. ಏಕೆಂದರೆ ಕಳೆದ ಸೀಸನ್​ನಲ್ಲಿ ಡೇವಿಡ್ ವಾರ್ನರ್ ಅವರನ್ನು ನಾಯಕನ ಸ್ಥಾನದಿಂದ ಕೆಳಗಿಸಿ, ತಂಡದಿಂದ ಕೈಬಿಟ್ಟಿದ್ದ ಎಸ್​ಆರ್​ಹೆಚ್​ ಫ್ರಾಂಚೈಸಿ ಇದೀಗ ಇಕ್ಕಟಿಗೆ ಸಿಲುಕಿದೆ. ಡೇವಿಡ್ ವಾರ್ನರ್ ಐಪಿಎಲ್​ನಲ್ಲಿ ವಿಫಲರಾದರೂ, ಅತ್ತ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಎಸ್​ಆರ್​​ಹೆಚ್​ ಫ್ರಾಂಚೈಸಿ ಅವರನ್ನು ಮತ್ತೊಮ್ಮೆ ತಂಡದಲ್ಲಿ ಉಳಿಸಿಕೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಆದರೆ ಈ ಪ್ರಶ್ನೆಗೆ ಡೇವಿಡ್ ವಾರ್ನರ್ ಅವರೇ ಉತ್ತರ ನೀಡುವ ಮೂಲಕ ತಾನು ಸನ್​ರೈಸರ್ಸ್​ ಹೈದರಾಬಾದ್ ಪರ ಆಡುವುದಿಲ್ಲ ಎಂಬುದನ್ನು ಮತ್ತೊಮ್ಮೆ ಪರೋಕ್ಷವಾಗಿ ತಿಳಿಸಿದ್ದಾರೆ.

ಹೌದು, ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಯೊಬ್ಬರು ನೀವು ಮುಂದಿನ ಸೀಸನ್​ನಲ್ಲೂ ಎಸ್​ಆರ್​ಹೆಚ್​ ಪರ ಆಡುತ್ತೀರಲ್ಲವೇ ಎಂದು ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ ಎಸ್​ಆರ್​​ಹೆಚ್​ ತಂಡದ ಮಾಜಿ ನಾಯಕ ವಾರ್ನರ್, ದಯವಿಟ್ಟು ನನ್ನ ಸ್ನೇಹಿತ ಕೇನ್ ಅಲ್ಲಿಯೇ ಇರುತ್ತಾರೆ. ನೀವು ಅವರನ್ನು ಬೆಂಬಲಿಸಿ ಎಂಬಾರ್ಥದಲ್ಲಿ ಉತ್ತರ ನೀಡಿದ್ದಾರೆ. ಇದರೊಂದಿಗೆ ಸನ್​ರೈಸರ್ಸ್​ ಹೈದರಾಬಾದ್​ ತಂಡವು ಕೇನ್ ವಿಲಿಯಮ್ಸನ್ ಅವರನ್ನು ಮೆಗಾ ಹರಾಜಿಗೂ ಮುನ್ನ ರಿಟೈನ್ ಮಾಡಿಕೊಳ್ಳುವುದು ಬಹುತೇಕ ಖಚಿತ ಎಂಬುದು ಬಹಿರಂಗವಾಗಿದೆ. ಅಷ್ಟೇ ಅಲ್ಲದೆ ಡೇವಿಡ್ ವಾರ್ನರ್ ಎಸ್​ಆರ್​ಹೆಚ್​ ತಂಡದಿಂದ ಹೊರಬರಲಿದ್ದಾರೆ ಎಂಬುದು ಸಹ ಸ್ಪಷ್ಟವಾಗಿದೆ.

ಮೆಗಾ ಹರಾಜಿಗೂ ಮುನ್ನ ಪ್ರತಿ ತಂಡಗಳಿಗೆ ನಾಲ್ವರು ಆಟಗಾರರನ್ನು ಉಳಿಸಿಕೊಳ್ಳಬಹುದು. ಅದರಂತೆ ಮೂವರು ಭಾರತೀಯ ಆಟಗಾರರು ಹಾಗೂ ಒಬ್ಬ ವಿದೇಶಿ ಆಟಗಾರ ಅಥವಾ ಇಬ್ಬರು ಭಾರತೀಯ ಆಟಗಾರ+ಇಬ್ಬರು ವಿದೇಶಿ ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಪ್ರಸ್ತುತ ಮಾಹಿತಿ ಪ್ರಕಾರ ಸನ್​ರೈಸರ್ಸ್​ ಹೈದರಾಬಾದ್ ತಂಡವು ಕೇನ್ ವಿಲಿಯಮ್ಸನ್ ಹಾಗೂ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ಅವರನ್ನು ವಿದೇಶಿ ಕೋಟಾದಲ್ಲಿ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಇದನ್ನೂ ಓದಿ: T20 World Cup 2021: ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾಗೆ ಸಿಕ್ಕ ಪ್ರಶಸ್ತಿ ಮೊತ್ತವೆಷ್ಟು ಗೊತ್ತಾ?

ಇದನ್ನೂ ಓದಿ: T20 World Cup Winners: 7 ಟಿ20 ವಿಶ್ವಕಪ್​: ಚಾಂಪಿಯನ್​ ಪಟ್ಟಕ್ಕೇರಿದ 6 ತಂಡಗಳು

ಇದನ್ನೂ ಓದಿ:  Sourav Ganguly: ದ್ರಾವಿಡ್ ಅವರ ಮಗ ಕರೆ ಮಾಡಿ ಅಪ್ಪ ತುಂಬಾ ಕಟ್ಟುನಿಟ್ಟು, ನೀವು ಅವರನ್ನು ಕರ್ಕೊಂಡು ಹೋಗಿ ಎಂದರು..!

(IPL 2022: ‘Sunrisers Hyderabad to retain Kane Willamson’ hints good friend David Warner)

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ