AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ತಂಡದಿಂದ ಸ್ಟಾರ್ ಆಟಗಾರ ಔಟ್: ಕಂಬ್ಯಾಕ್ ಮಾಡ್ತಾರಾ ಸುರೇಶ್ ರೈನಾ?

IPL 2022 Suresh Raina: ಸುರೇಶ್ ರೈನಾ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಏಕೆಂದರೆ ಐಪಿಎಲ್​ ಲೀಗ್‌ನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ರೈನಾ ಕೂಡ ಒಬ್ಬರು.

IPL 2022: CSK ತಂಡದಿಂದ ಸ್ಟಾರ್ ಆಟಗಾರ ಔಟ್: ಕಂಬ್ಯಾಕ್ ಮಾಡ್ತಾರಾ ಸುರೇಶ್ ರೈನಾ?
Suresh Raina
TV9 Web
| Edited By: |

Updated on: Apr 16, 2022 | 2:21 PM

Share

IPL 2022: ಐಪಿಎಲ್​ ಸೀಸನ್​ 15 ನಿಂದ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ಆಟಗಾರ ದೀಪಕ್ ಚಹರ್ (Deepak Chahar) ಹೊರಬಿದ್ದಿದ್ದಾರೆ. ಈ ಬಾರಿ ಮೆಗಾ ಹರಾಜಿನಲ್ಲಿ 14 ಕೋಟಿಗೆ ಬಿಕರಿಯಾಗಿದ್ದ ಚಹರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಈ ಬಾರಿಯ ಐಪಿಎಲ್​ನಿಂದ (IPL) ಹೊರಗುಳಿಯಲು ನಿರ್ಧರಿಸಿದ್ದಾರೆ. ದೀಪಕ್ ಚಹರ್ ಐಪಿಎಲ್​ನಿಂದ ಹಿಂದೆ ಸರಿಯುತ್ತಿದ್ದಂತೆ ಸಿಎಸ್​ಕೆ (CSK) ಯಾವ ಆಟಗಾರನನ್ನು ಬದಲಿಯಾಗಿ ಆಯ್ಕೆ ಮಾಡಲಿದೆ ಎಂಬ ಚರ್ಚೆಗಳು ಶುರುವಾಗಿದೆ. ಈ ಪಟ್ಟಿಯಲ್ಲಿ ಇದೀಗ ಸುರೇಶ್ ರೈನಾ (Suresh Raina) ಹೆಸರು ಕೂಡ ಕೇಳಿ ಬರುತ್ತಿದೆ. ಈ ಬಾರಿಯ ಮೆಗಾ ಹರಾಜಿನಲ್ಲಿ 2 ಕೋಟಿ ರೂ. ಮೂಲ ಬೆಲೆ ಹೊಂದಿದ್ದ ರೈನಾ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಹೀಗಾಗಿ ರೈನಾ ಐಪಿಎಲ್​ನಲ್ಲೇ ಹೊಸ ಇನಿಂಗ್ಸ್ ಆರಂಭಿಸಿದ್ದರು.

ಅದರಂತೆ ಐಪಿಎಲ್ ಕಾಮೆಂಟರಿ ಪ್ಯಾನಲ್​ನಲ್ಲಿ ಸುರೇಶ್ ರೈನಾ ಕಾಣಿಸಿಕೊಂಡಿದ್ದರು. ಇದೀಗ ದೀಪಕ್ ಚಹರ್ ಸಿಎಸ್​ಕೆ ತಂಡದಿಂದ ಹೊರಬೀಳುತ್ತಿದ್ದಂತೆ ರೈನಾ ಅವರ ಆಯ್ಕೆಗೆ ಅವಕಾಶವಿದೆ. ಹೀಗಾಗಿ ಸಿಎಸ್​ಕೆ ಫ್ರಾಂಚೈಸಿ ಮತ್ತೆ ಸುರೇಶ್ ರೈನಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಹರಿದಾಡುತ್ತಿದೆ.

ಸುರೇಶ್ ರೈನಾ ಆಯ್ಕೆಗೆ ಇದು ಒಂದು ಕಾರಣ: ಸುರೇಶ್ ರೈನಾ ಅವರ ಅವಶ್ಯಕತೆ ಸಿಎಸ್​ಕೆ ತಂಡಕ್ಕಿದೆ. ಏಕೆಂದರೆ ಕಳೆದ 5 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ 4 ರಲ್ಲಿ ಸೋಲನುಭವಿಸಿದೆ. ಅದರಲ್ಲೂ ತಂಡದ ಮಧ್ಯಮ ಕ್ರಮಾಂಕವು ಕೈ ಕೊಡುತ್ತಿರುವುದು ಚಿಂತೆಗೆ ಕಾರಣವಾಗಿದೆ. ತಂಡದಲ್ಲಿರುವ ಅಂಬಟಿ ರಾಯುಡು ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. 5 ಪಂದ್ಯಗಳಲ್ಲಿ 21ಕ್ಕಿಂತ ಕಡಿಮೆ ಸರಾಸರಿಯಲ್ಲಿ 81 ರನ್ ಗಳಿಸಿದ್ದಾರೆ. ರಾಯುಡು ಅವರ ಈ ವೈಫಲ್ಯವು ಸುರೇಶ್ ರೈನಾಗೆ ಅವಕಾಶ ಕಲ್ಪಿಸಲಿದೆ ಎಂದು ಹೇಳಲಾಗುತ್ತಿದೆ.

ಒಟ್ಟಿನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಸಿಎಸ್​ಕೆ ತಂಡವು ಆರ್​​ಸಿಬಿ ವಿರುದ್ದದ ಗೆಲುವಿನೊಂದಿಗೆ ಜಯದ ಖಾತೆ ತೆರೆದಿದೆ. ಇದಾಗ್ಯೂ ತಂಡದ ಪ್ರದರ್ಶನ ಉತ್ತಮಗೊಂಡಿಲ್ಲ ಎಂಬುದಕ್ಕೆ ಆರ್​ಸಿಬಿ ವಿರುದ್ದದ ಬೌಲಿಂಗ್ ಪ್ರದರ್ಶನವೇ ಸಾಕ್ಷಿ. ಇದೀಗ ದೀಪಕ್ ಚಹರ್ ಹೊರಗುಳಿಯುತ್ತಿರುವ ಕಾರಣ ಸಿಎಸ್​ಕೆ ಬೌಲರ್​ನ ಆಯ್ಕೆ ಮಾಡಲಿದೆಯಾ ಅಥವಾ ಬ್ಯಾಟ್ಸ್​ಮನ್​ ಆಗಿ ಸುರೇಶ್ ರೈನಾಗೆ ಅವಕಾಶ ನೀಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಶೀಘ್ರದಲ್ಲೇ ಉತ್ತರವಂತು ಸಿಗಲಿದೆ.

ಸುರೇಶ್ ರೈನಾ ಅವರ ಐಪಿಎಲ್ ವೃತ್ತಿಜೀವನ: ಸುರೇಶ್ ರೈನಾ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಏಕೆಂದರೆ ಐಪಿಎಲ್​ ಲೀಗ್‌ನ ಅತ್ಯಂತ ಯಶಸ್ವಿ ಬ್ಯಾಟ್ಸ್‌ಮನ್‌ಗಳಲ್ಲಿ ರೈನಾ ಕೂಡ ಒಬ್ಬರು. ಈಗಲೂ ಅವರು ಚೆನ್ನೈ ಸೂಪರ್ ಕಿಂಗ್ಸ್ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿದೆ. ಹಾಗೆಯೇ ಐಪಿಎಲ್​ ಇತಿಹಾಸದಲ್ಲಿ ನಾಲ್ಕನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಸುರೇಶ್ ರೈನಾ 205 ಪಂದ್ಯಗಳಲ್ಲಿ 32.51 ಸರಾಸರಿಯಲ್ಲಿ 5228 ರನ್ ಗಳಿಸಿದ್ದಾರೆ. ಈ ವೇಳೆ ಒಂದು ಶತಕ ಮತ್ತು 39 ಅರ್ಧ ಶತಕಗಳನ್ನು ಬಾರಿಸಿದ್ದಾರೆ. ವಿಶೇಷ ಎಂದರೆ ಸುರೇಶ್ ರೈನಾ ಐಪಿಎಲ್‌ನಲ್ಲಿ 506 ಬೌಂಡರಿ ಹಾಗೂ 203 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ಅಂದರೆ ರೈನಾ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟ್ಸ್​ಮನ್ ಆಗಿ ಗುರುತಿಸಿಕೊಂಡಿದ್ದರು. ಇದೀಗ ದೀಪಕ್ ಚಹರ್ ಅಲಭ್ಯತೆಯಲ್ಲಿ ಸಿಎಸ್​ಕೆ ತಂಡವು ಸುರೇಶ್ ರೈನಾಗೆ ಮಣೆ ಹಾಕಲಿದೆಯಾ ಕಾದು ನೋಡಬೇಕಿದೆ.

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?