AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಈ ಆವೃತ್ತಿಯಲ್ಲಿ ಹೊಸ ನಾಯಕರೊಂದಿಗೆ ಕಣಕ್ಕಿಳಿಯುತ್ತಿರುವ 5 ಐಪಿಎಲ್ ತಂಡಗಳಿವು

IPL 2022: ಐಪಿಎಲ್ 2022 ಹರಾಜಿನಲ್ಲಿ ತಂಡಗಳ ನೋಟ ಬದಲಾಗಿದೆ. ಈ ಬಾರಿ 5 ತಂಡಗಳು ಹೊಸ ನಾಯಕನೊಂದಿಗೆ ಟೂರ್ನಿಗೆ ಪ್ರವೇಶಿಸಲಿವೆ.

IPL 2022: ಈ ಆವೃತ್ತಿಯಲ್ಲಿ ಹೊಸ ನಾಯಕರೊಂದಿಗೆ ಕಣಕ್ಕಿಳಿಯುತ್ತಿರುವ 5 ಐಪಿಎಲ್ ತಂಡಗಳಿವು
ಐಪಿಎಲ್ ಟ್ರೋಫಿ
TV9 Web
| Edited By: |

Updated on: Mar 16, 2022 | 9:21 AM

Share

ಇಂಡಿಯನ್ ಪ್ರೀಮಿಯರ್ ಲೀಗ್ (IPL 2022) ನ ಮುಂದಿನ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗುತ್ತದೆ. ಈ ಬಾರಿಯ ಪಂದ್ಯಾವಳಿಯಲ್ಲಿ ಕ್ರಿಕೆಟ್ ಅಭಿಮಾನಿಗಳು ಅನೇಕ ದೊಡ್ಡ ಬದಲಾವಣೆಗಳನ್ನು ನೋಡುತ್ತಾರೆ. ಎರಡು ಹೊಸ ಫ್ರಾಂಚೈಸಿಗಳಾದ ಗುಜರಾತ್ ಟೈಟಾನ್ಸ್ (Gujarat Titans) ಮತ್ತು ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ಸೇರ್ಪಡೆಯೊಂದಿಗೆ ಪ್ರಸಕ್ತ ಐಪಿಎಲ್ ಸೀಸನ್​ನಲ್ಲಿ ತಂಡಗಳ ಸಂಖ್ಯೆ 10ಕ್ಕೆ ತಲುಪಿದೆ. ಕಳೆದ ಸೀಸನ್ ವರೆಗೆ ಕೇವಲ 8 ತಂಡಗಳು ಕಣಕ್ಕೆ ಇಳಿದಿದ್ದವು. ಐಪಿಎಲ್ 2022 ಹರಾಜಿನಲ್ಲಿ ತಂಡಗಳ ನೋಟ ಬದಲಾಗಿದೆ. ಈ ಬಾರಿ 5 ತಂಡಗಳು ಹೊಸ ನಾಯಕನೊಂದಿಗೆ ಟೂರ್ನಿಗೆ ಪ್ರವೇಶಿಸಲಿವೆ. ಆ ತಂಡಗಳು ಯಾವು ಎಂಬುದನ್ನು ಈಗ ನೋಡೋಣ.

1. ಗುಜರಾತ್ ಟೈಟಾನ್ಸ್: ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ಹೊಸ ಫ್ರಾಂಚೈಸಿಯಾಗಿ ಸೇರಿಕೊಂಡಿರುವುದು ಗೊತ್ತೇ ಇದೆ. ತಂಡದ ನಾಯಕತ್ವವನ್ನು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರಿಗೆ ಹಸ್ತಾಂತರಿಸಲಾಗಿದೆ. ಪಾಂಡ್ಯ ನೇತೃತ್ವದ ತಂಡ ಟೂರ್ನಿಯಲ್ಲಿ ಶುಭಾರಂಭ ಮಾಡಲಿದೆ. ಮೊದಲ ಸೀಸನ್​ನಲ್ಲಿ ಗುಜರಾತ್ ತಂಡ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

2. ಲಕ್ನೋ ಸೂಪರ್ ಜೈಂಟ್ಸ್: ಲಕ್ನೋ ಸೂಪರ್ ಜೈಂಟ್ಸ್ ತಂಡವೂ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡಲಿದೆ. ತಂಡದ ನಾಯಕತ್ವವನ್ನು ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರಿಗೆ ಹಸ್ತಾಂತರಿಸಲಾಗಿದೆ. ರಾಹುಲ್ ಐಪಿಎಲ್‌ನಲ್ಲಿ ನಾಯಕತ್ವದಲ್ಲಿ ಉತ್ತಮ ಅನುಭವ ಹೊಂದಿದ್ದಾರೆ. ರನ್‌ಗಳ ವಿಷಯದಲ್ಲಿಯೂ ಸಾಕಷ್ಟು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆ ತಂಡವು ಮೆಗಾ ಹರಾಜಿನಲ್ಲಿ ಸಾಕಷ್ಟು ಶ್ರೇಷ್ಠ ಆಟಗಾರರನ್ನು ಖರೀದಿಸಿತು. ಅಂತಹ ಪರಿಸ್ಥಿತಿಯಲ್ಲಿ, ಈ ತಂಡವು ತುಂಬಾ ಪ್ರಬಲವಾಗಿದೆ ಎಂದು ಸಾಬೀತುಪಡಿಸುತ್ತದೆ.

3. ಕೋಲ್ಕತ್ತಾ ನೈಟ್ ರೈಡರ್ಸ್: ಕೋಲ್ಕತ್ತಾ ನೈಟ್ ರೈಡರ್ಸ್ ಕಳೆದ ವರ್ಷ ತಮ್ಮ ನಾಯಕನನ್ನು ಬಿಡುಗಡೆ ಮಾಡಲು ನಿರ್ಧರಿಸಿತು. ನಂತರ ಕೆಕೆಆರ್ ತಂಡವು ಶ್ರೇಯಸ್ ಅಯ್ಯರ್ ಅವರನ್ನು ಹರಾಜಿನಲ್ಲಿ ನಾಯಕನನ್ನಾಗಿ ಖರೀದಿಸಿತು. ಅಯ್ಯರ್ ದೀರ್ಘ ಕಾಲದಿಂದ ದೆಹಲಿ ತಂಡದ ನಾಯಕರಾಗಿದ್ದರು. ಸದ್ಯ ಅವರು ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ.

4. ಪಂಜಾಬ್ ಕಿಂಗ್ಸ್: ಪಂಜಾಬ್ ಕಿಂಗ್ಸ್ ನಾಯಕತ್ವವು ದೀರ್ಘಕಾಲದವರೆಗೆ ಕೆಎಲ್ ರಾಹುಲ್ ಕೈಯಲ್ಲಿತ್ತು. ಆದರೆ, ಕಳೆದ ಋತುವಿನ ನಂತರ ಕೆಎಲ್ ರಾಹುಲ್ ತಂಡವನ್ನು ತೊರೆದಿದ್ದರು. ಇದರ ಬೆನ್ನಲ್ಲೇ ಫ್ರಾಂಚೈಸಿ ತಂಡದ ನಾಯಕತ್ವವನ್ನು ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್‌ಗೆ ಹಸ್ತಾಂತರಿಸಿತ್ತು. ನಾಯಕನ ಬದಲಾವಣೆ ತಂಡದ ಭವಿಷ್ಯವನ್ನೇ ಬದಲಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

5. ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಇತ್ತೀಚೆಗೆ ತಂಡದ ನಾಯಕತ್ವವನ್ನು ಫಾಫ್ ಡು ಪ್ಲೆಸಿಸ್‌ಗೆ ವರ್ಗಾಯಿಸುವುದಾಗಿ ಘೋಷಿಸಿತು. ವಿರಾಟ್ ಕೊಹ್ಲಿ ಕಳೆದ ಋತುವಿನಲ್ಲಿ ತಂಡದ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದರು. ಇದರ ನಂತರ ಸುದೀರ್ಘ ಆಲೋಚನೆಗಳು ನಡೆದವು. ಅಂತಿಮವಾಗಿ ಡು ಪ್ಲೆಸಿಸ್‌ಗೆ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಲಾಯಿತು.

ಇದನ್ನೂ ಓದಿ:IPL 2022: ಐಪಿಎಲ್​ನಿಂದ ಸ್ಟಾರ್ ಬೌಲರ್ ಅನ್ರಿಕ್ ನೋಕಿಯಾ ಔಟ್! ಬದಲಿಯಾಗಿ ಯಾರು ಬರಬಹುದು?

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?