AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: CSK ಪ್ಲೇಆಫ್​ ಪ್ರವೇಶಿಸಲ್ಲ ಎಂದ ಧೋನಿ ಫ್ರೆಂಡ್..!

IPL 2022: ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ,  ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ

IPL 2022: CSK ಪ್ಲೇಆಫ್​ ಪ್ರವೇಶಿಸಲ್ಲ ಎಂದ ಧೋನಿ ಫ್ರೆಂಡ್..!
csk
TV9 Web
| Edited By: |

Updated on: Apr 04, 2022 | 7:38 PM

Share

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅತ್ಯಂತ ಕಳಪೆ ಆರಂಭ ಪಡೆದಿದೆ. ಮೊದಲ ಮೂರು ಪಂದ್ಯಗಳಲ್ಲಿ ಸೋತಿರುವ ಸಿಎಸ್​ಕೆ ತಂಡವು ಇದೀಗ ಪಾಯಿಂಟ್ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಸೋತರೆ, 2ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ದ ಪರಾಜಯಗೊಂಡಿತು. ಇನ್ನು ಭಾನುವಾರ ನಡೆದ ಪಂಜಾಬ್ ಕಿಂಗ್ಸ್‌ ವಿರುದ್ದದ ಪಂದ್ಯದಲ್ಲೂ ಸೋಲನುಭವಿಸಬೇಕಾಯಿತು. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲೇ ಸಿಎಸ್​ಕೆ ತಂಡವು ಮೊದಲ ಬಾರಿಗೆ ಮೊದಲ ಪಂದ್ಯಗಳಲ್ಲಿ ಪರಾಜಯಗೊಂಡು ಮುಖಭಂಗ ಅನುಭವಿಸಿದೆ. ಚೆನ್ನೈ ತಂಡದ ಈ ಹೀನಾಯ ಪ್ರದರ್ಶನದ ಬಗ್ಗೆ ಮಾತನಾಡಿರುವ ಮಹೇಂದ್ರ ಸಿಂಗ್ ಧೋನಿ ಅವರ ಆಪ್ತ, ಮಾಜಿ ಕ್ರಿಕೆಟಿಗ ಆರ್​.ಪಿ ಸಿಂಗ್ ಸಿಎಸ್​ಕೆ ತಂಡದ ಪ್ರದರ್ಶನದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಯಾವುದೇ ಪ್ಲ್ಯಾನ್ ಕಾಣಿಸುತ್ತಿಲ್ಲ. ಅವರ ಬ್ಯಾಟ್ಸ್‌ಮನ್‌ಗಳು ಸಹ ಕಾರ್ಯನಿರ್ವಹಿಸುತ್ತಿಲ್ಲ. ಇನ್ನೊಂದು ಸೋಲು ಅವರನ್ನು ಪ್ಲೇಆಫ್‌ನ ರೇಸ್‌ನಿಂದ ಹೊರಹಾಕಲಿದೆ ಎಂದು ಆರ್‌ಪಿ ಸಿಂಗ್ ಹೇಳಿದ್ದಾರೆ. ಅಲ್ಲದೆ ತಂಡದ ಪ್ರದರ್ಶನ ನೋಡಿದರೆ ಈ ಬಾರಿ ಸಿಎಸ್​ಕೆ ಪ್ಲೇಆಫ್ ಪ್ರವೇಶಿಸುವುದು ಕೂಡ ಅನುಮಾನ ಎಂದಿದ್ದಾರೆ.

‘ಸತತ ಮೂರು ಪಂದ್ಯಗಳನ್ನು ಸೋತಿರುವುದು ತಂಡದ ಪಾಲಿಗೆ ತುಂಬಾ ಕೆಟ್ಟ ಸಮಯ. ಹೀಗೆ ಪಂದ್ಯ ಸೋತ ನಂತರ ಅಗ್ರ 4ರೊಳಗೆ ಬರುವುದು ಕಷ್ಟ. ಏಕೆಂದರೆ ಇದರ ನಂತರ ನೀವು ತುಂಬಾ ಹಿಂದೆ ಉಳಿಯುತ್ತೀರಿ. ನಿಮ್ಮ ನೆಟ್ ರನ್ ರೇಟ್ ಕೂಡ ಕೆಟ್ಟದಾಗಿರುತ್ತದೆ. ಹಾಗಾಗಿ ಪ್ಲೇ ಆಫ್​ನಲ್ಲಿ ಸ್ಥಾನ ಸಿಗುವುದು ಕಷ್ಟ ಎಂದು ಆರ್​.ಪಿ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಸಮಸ್ಯೆ ಏನು? ಪವರ್‌ಪ್ಲೇಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಆರಂಭವನ್ನು ಪಡೆಯುತ್ತಿಲ್ಲ. ರುತುರಾಜ್ ಗಾಯಕ್ವಾಡ್ 4-5 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದ್ದಾರೆ. ಇದಲ್ಲದೇ ಜಡೇಜಾ, ರಾಯುಡು ಕೂಡ ಮಧ್ಯಮ ಕ್ರಮಾಂಕದಲ್ಲಿ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಾಗುತ್ತಿಲ್ಲ. ಬೌಲಿಂಗ್‌ನಲ್ಲಿ ದೀಪಕ್ ಚಹರ್ ಅವರ ಅನುಪಸ್ಥಿತಿ ಕಾಡುತ್ತಿದೆ. ಮುಂಬರುವ ಪಂದ್ಯಗಳಲ್ಲಿ ಚೆನ್ನೈ ತನ್ನ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಆರ್ ಪಿ ಸಿಂಗ್ ಅವರ ಮಾತು ನಿಜವಾಗಲಿದೆ.

ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡ ಹೀಗಿದೆ: ರವೀಂದ್ರ ಜಡೇಜಾ (ನಾಯಕ), ಎಂಎಸ್ ಧೋನಿ, ರುತುರಾಜ್ ಗಾಯಕ್‌ವಾಡ್, ಅಂಬಟಿ ರಾಯುಡು, ಮೊಯಿನ್ ಅಲಿ,  ಶಿವಂ ದುಬೆ, ದೀಪಕ್ ಚಹರ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಕೆಎಂ ಆಸಿಫ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಎನ್ ಜಗದೀಶನ್, ಹರಿ ನಿಶಾಂತ್, ಸುಭ್ರಂಶು ಸೇನಾಪತಿ , ರಾಜವರ್ಧನ್ ಹಂಗರ್ಗೇಕರ್, ಭಗತ್ ವರ್ಮಾ, ಪ್ರಶಾಂತ್ ಸೋಲಂಕಿ, ಕ್ರಿಸ್ ಜೋರ್ಡನ್, ಡ್ವೈನ್ ಪ್ರಿಟೋರಿಯಸ್, ಡೆವೊನ್ ಕಾನ್ವೇ, ಆಡಮ್ ಮಿಲ್ನೆ, ಮಿಚೆಲ್ ಸ್ಯಾಂಟ್ನರ್.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!