AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಔಟಾ ಅಥವಾ ನಾಟೌಟಾ? ಹೊಸ ಚರ್ಚೆಗೆ ಕಾರಣವಾದ ವಿರಾಟ್ ಕೊಹ್ಲಿಯ ಔಟ್..!

IPL 2022: ಅಂಪೈರ್ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಕಿಂಗ್ ಕೊಹ್ಲಿ ಆಕ್ರೋಶಗೊಂಡಿದ್ದಾರೆ. ಮೈದಾನದಿಂದ ಹೊರನಡೆಯುವ ವೇಳೆ ಬ್ಯಾಟ್ ಬೀಸುತ್ತಾ ವಿರಾಟ್ ಕೊಹ್ಲಿ ಅಂಪೈರ್ ತೀರ್ಪಿನ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.

Virat Kohli: ಔಟಾ ಅಥವಾ ನಾಟೌಟಾ? ಹೊಸ ಚರ್ಚೆಗೆ ಕಾರಣವಾದ ವಿರಾಟ್ ಕೊಹ್ಲಿಯ ಔಟ್..!
Virat Kohli
TV9 Web
| Edited By: |

Updated on:Apr 10, 2022 | 3:09 PM

Share

ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧ RCB ಏಳು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಈ ಗೆಲುವಿನ ಬೆನ್ನಲ್ಲೇ ಇದೀಗ ಹೊಸ ಚರ್ಚೆಯೊಂದು ಶುರುವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಔಟ್ ನೀಡಿದ ಅಂಪೈರ್ ತೀರ್ಪಿನ ಬಗ್ಗೆ ಪ್ರಶ್ನೆಗಳೆದ್ದಿದೆ. ಪಂದ್ಯದ 19ನೇ ಓವರ್​ ವೇಳೆ ವಿರಾಟ್ ಕೊಹ್ಲಿ 35 ಎಸೆತಗಳಲ್ಲಿ 48 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದಿದ್ದರು. ಇನ್ನೇನು ಪಂದ್ಯ ಮುಗಿಯಲು 8 ರನ್​ಗಳ ಅವಶ್ಯಕತೆಯಿದ್ದಾಗ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಚೆಂಡನ್ನು ಯುವ ಸ್ಪಿನ್ನರ್ ಡೆವಾಲ್ಡ್ ಬ್ರೆವಿಸ್ ಕೈಗೆ ನೀಡಿದ್ದರು. ಮೊದಲ ಎಸೆತದಲ್ಲೇ ಕೊಹ್ಲಿಯನ್ನು ಎಲ್​ಬಿ ಬಲೆಗೆ ಬೀಳಿಸಿದ ಬ್ರೆವಿಸ್ ಬಲವಾದ ಮನವಿ ಮಾಡಿದ್ದರು.

ಇತ್ತ ಆನ್‌ಫೀಲ್ಡ್ ಅಂಪೈರ್ ಕೆಎನ್ ಅನಂತಪದ್ಮನಾಭನ್ ನೇರವಾಗಿ ಔಟ್ ಎಂದು ತೀರ್ಪು ನೀಡಿದ್ದರು. ತಕ್ಷಣವೇ ವಿರಾಟ್ ಕೊಹ್ಲಿ ರಿವ್ಯೂ ತೆಗೆದುಕೊಂಡರು. 3ನೇ ಅಂಪೈರ್ ಪರಿಶೀಲನೆ ವೇಳೆ ಚೆಂಡು ಬ್ಯಾಟ್‌ನ ಅಂಚು ಮತ್ತು ಪ್ಯಾಡ್‌ಗೆ ಹತ್ತಿರವಾಗಿತ್ತು. ಟಿವಿ ಅಂಪೈರ್ ಉಲ್ಲಾಸ್ ಗಂಧೆ ಅವರು ಚೆಂಡು ಬ್ಯಾಟ್ ಮತ್ತು ಪ್ಯಾಡ್‌ಗೆ ಒಂದೇ ಸಮಯದಲ್ಲಿ ತಗುಲುತ್ತಿರುವುದು ಕಂಡುಕೊಂಡಿದ್ದಾರೆ. ಇತ್ತ ಔಟ್ ಎಂದು, ಅತ್ತ ನಾಟೌಟ್ ಎಂದು ತೀರ್ಪು ನೀಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ 3ನೇ ಅಂಪೈರ್ ಇದ್ದರು.

ಸಾಮಾನ್ಯವಾಗಿ ಇಂತಹ ಸಂದರ್ಭಗಳಲ್ಲಿ ಸಾಫ್ಟ್ ಡಿಸೀಷನ್ ಮೊರೆ ಹೋಗಲಾಗುತ್ತದೆ. ಅಂದರೆ ಫೀಲ್ಡ್ ಅಂಪೈರ್ ನೀಡಿದ ತೀರ್ಪನ್ನು ಎತ್ತಿ ಹಿಡಿಯಲಾಗುತ್ತದೆ. ಹೀಗಾಗಿ ಗೊಂದಲಕ್ಕೀಡಾಗಿದ್ದ ವಿರಾಟ್ ಕೊಹ್ಲಿಯ ಎಲ್​ಬಿಡಬ್ಲ್ಯೂ ಅನ್ನು ಮೂರನೇ ಅಂಪೈರ್ ಫೀಲ್ಡ್​ ಅಂಪೈರ್​ಗೆ ತಮ್ಮ ತೀರ್ಪನ್ನು ಮುಂದುವರೆಸುವಂತೆ ಔಟ್ ನೀಡಲು ತಿಳಿಸಿದ್ದಾರೆ.

ಕ್ರಿಕೆಟ್​ ನಿಯಮದ ಪ್ರಕಾರ “ಪಾಯಿಂಟ್ 36.1.3 ಅನ್ನು ನಿರ್ಣಯಿಸುವಲ್ಲಿ, ಚೆಂಡು ಸ್ಟ್ರೈಕರ್ ವ್ಯಕ್ತಿಯ ಪ್ಯಾಡ್ ಹಾಗೂ ಬ್ಯಾಟ್​ಗೆ ಏಕಕಾಲದಲ್ಲಿ ತಾಗಿದರೆ, ಇದನ್ನು ಮೊದಲು ಬ್ಯಾಟ್ ಅನ್ನು ಮುಟ್ಟಿದ ಚೆಂಡು ಎಂದು ಪರಿಗಣಿಸಲಾಗುತ್ತದೆ”. ಹೀಗಾಗಿ ವಿರಾಟ್ ಕೊಹ್ಲಿಯನ್ನು ಔಟ್ ಎಂದು ತೀರ್ಪು ನೀಡಲಾಗಿದೆ.

ಇತ್ತ ಅಂಪೈರ್ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಕಿಂಗ್ ಕೊಹ್ಲಿ ಆಕ್ರೋಶಗೊಂಡಿದ್ದಾರೆ. ಮೈದಾನದಿಂದ ಹೊರನಡೆಯುವ ವೇಳೆ ಬ್ಯಾಟ್ ಬೀಸುತ್ತಾ ವಿರಾಟ್ ಕೊಹ್ಲಿ ಅಂಪೈರ್ ತೀರ್ಪಿನ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ.

ಇದೀಗ ವಿರಾಟ್ ಕೊಹ್ಲಿಯ ಈ ಆಕ್ರೋಶಭರಿತ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಷ್ಟೇ ಅಲ್ಲದೆ ಫೀಲ್ಡ್ ಅಂಪೈರ್ ನೀಡಿದ ತೀರ್ಪಿನ ಬಗ್ಗೆ ವಿರಾಟ್ ಕೊಹ್ಲಿ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಮೊದಲ ವಿಕೆಟ್​​ಗೆ ಅರ್ಧಶತಕದ ಜೊತೆಯಾಟ ಆಡಿದರು. ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ತಲಾ 26 ರನ್ ಗಳಿಸಿ ಔಟಾದರು. ನಂತರ ಬಂದ ಸ್ಟಾರ್ ಬ್ಯಾಟರ್​ಗಳೆಲ್ಲ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿಕೊಂಡರು. ಆದರೆ, ಏಳನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ (68*) ಜತೆ ಕೈಜೋಡಿಸಿದ ಜಯದೇವ್ ಉನಾದ್ಕಟ್ ಸಮಯೋಚಿತ ಆಟವಾಡಿ ಬೆಂಬಲವನ್ನು ನೀಡಿದರು. ಪರಿಣಾಮ ಮುಂಬೈ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 151 ರನ್ ಕಲೆಹಾಕಿತು.

ಗೆಲ್ಲಲು ಸಾಧಾರಣ ಸವಾಲು ಪಡೆದ ಆರ್‌ಸಿಬಿ ತಂಡವು ಉತ್ತಮ ಆರಂಭ ಪಡೆಯಿತು. ಆರಂಭಿಕರಾದ ನಾಯಕ ಫಾ ಡುಪ್ಲೆಸಿಸ್‌ (16) ಮತ್ತು ಅನುಜ್‌ ರಾವತ್‌ ಮೊದಲ ವಿಕೆಟಿಗೆ 8.1 ಓವರ್‌ಗಳಲ್ಲಿ 50 ರನ್‌ ಪೇರಿಸಿದರು. ನಂತರ ವಿರಾಟ್ ಕೊಹ್ಲಿ (48)-ರಾವತ್ (66) ಭರ್ಜರಿ ಆಟವಾಡಿದರು. ಇದರಿಂದ ರಾಯಲ್ ಚಾಲೆಂಜರ್ಸ್​ ಬೆಂಗಳೂರು 18.3 ಓವರ್​ನಲ್ಲೇ 152 ರನ್ ಬಾರಿಸಿ ಜಯ ಸಾಧಿಸಿತು.

ಇದನ್ನೂ ಓದಿ: Virat Kohli: ಐಪಿಎಲ್​ ಇತಿಹಾಸದಲ್ಲೇ ಯಾರೂ ಮಾಡಿರದ ದಾಖಲೆ ಬರೆದ ಕಿಂಗ್ ಕೊಹ್ಲಿ

Published On - 3:08 pm, Sun, 10 April 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್