AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಪಂಜಾಬ್ ಕಿಂಗ್ಸ್ ತಮ್ಮ ಡಗೌಟ್‌ನಲ್ಲಿ ರಾಹುಲ್ ತೆವಾಟಿಯಾ ಪ್ರತಿಮೆ ಮಾಡಿಟ್ಟುಕೊಳ್ಳಲಿ..!

IPL 2022 : ಒಂದೇ ಓವರ್​ನಲ್ಲಿ 5 ಸಿಕ್ಸ್​ ಸಿಡಿಸುವ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಅಲ್ಲದೆ ಈ ಪಂದ್ಯದಲ್ಲೂ ಪಂಜಾಬ್ ತಂಡದ ಗೆಲುವನ್ನು ತೆವಾಟಿಯಾ ಕಸಿದುಕೊಂಡಿದ್ದರು.

Virender Sehwag: ಪಂಜಾಬ್ ಕಿಂಗ್ಸ್ ತಮ್ಮ ಡಗೌಟ್‌ನಲ್ಲಿ ರಾಹುಲ್ ತೆವಾಟಿಯಾ ಪ್ರತಿಮೆ ಮಾಡಿಟ್ಟುಕೊಳ್ಳಲಿ..!
Rahul Tewatia-Virender Sehwag
TV9 Web
| Edited By: |

Updated on: Apr 09, 2022 | 2:23 PM

Share

ಐಪಿಎಲ್​ ಸೀಸನ್​ 15 ನಲ್ಲಿ (IPL 2022) ಗುಜರಾತ್ ಟೈಟನ್ಸ್ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಗೆಲುವಿನ ನಾಗಾಲೋಟದಲ್ಲಿ ಪಂಜಾಬ್ ಕಿಂಗ್ಸ್ 2ನೇ ಸೋಲುಂಡಿದೆ. ಶುಕ್ರವಾರ ನಡೆದ ಐಪಿಎಲ್​ನ 16ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ (PBKS vs GT) ಮುಖಾಮುಖಿಯಾಗಿತ್ತು. ರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಪಂಜಾಬ್ ಮೊದಲು ಬ್ಯಾಟ್ ಮಾಡಿ 189 ರನ್​ ಕಲೆಹಾಕಿತು. 190 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟನ್ಸ್ ತಂಡವು ಕೊನೆಯ ಓವರ್​ ವೇಳೆಗೆ ಸೋಲಿನ ಸುಳಿಗೆ ಸಿಲುಕಿತ್ತು. ಅದರಲ್ಲೂ ಕೊನೆಯ ಎರಡು ಎಸೆತಗಳಲ್ಲಿ 12 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಓಡಿಯನ್ ಸ್ಮಿತ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುವ ಮೂಲಕ ರಾಹುಲ್ ತೆವಾಟಿಯಾ ಗೆಲುವಿನ ರೂವಾರಿ ಎನಿಸಿಕೊಂಡರು. ಈ ಮೂಲಕ ಪಂಜಾಬ್ ಕಿಂಗ್ಸ್ ವಿರುದ್ದ ಗುಜರಾತ್ ಟೈಟನ್ಸ್ ತಂಡವು ರೋಚಕ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಟ್ವೀಟ್ ಮಾಡಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ಲಾರ್ಡ್ ತೆವಾಟಿಯಾ ಎಂದು ಹಾಡಿಹೊಗಳಿದ್ದಾರೆ. ಅಷ್ಟೇ ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ತಮ್ಮ ಡಗೌಟ್​ನಲ್ಲಿ ರಾಹುಲ್ ತೆವಾಟಿಯಾ ಅವರ ಪ್ರತಿಮೆಯನ್ನು ಮಾಡಿಟ್ಟುಕೊಳ್ಳುವಂತೆ ಕಾಲೆಳೆದಿದ್ದಾರೆ. ಏಕೆಂದರೆ ರಾಹುಲ್ ತೆವಾಟಿಯಾ ಪಂಜಾಬ್ ಕಿಂಗ್ಸ್ ವಿರುದ್ದ ಭರ್ಜರಿ ಪ್ರದರ್ಶನದ ಮೂಲಕ ಗೆಲುವನ್ನು ಕಸಿದುಕೊಳ್ಳುತ್ತಿರುವುದು ಇದು 2ನೇ ಬಾರಿ.

2020 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ರಾಹುಲ್ ತೆವಾಟಿಯಾ ಪಂಜಾಬ್ ಕಿಂಗ್ಸ್​ ವಿರುದ್ದದ ರೋಚಕ ಪಂದ್ಯದಲ್ಲಿ ಶೆಲ್ಡನ್ ಕಾಟ್ರೆಲ್ ಓವರ್​ನಲ್ಲಿ 5 ಸಿಕ್ಸ್​ ಸಿಡಿಸುವ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಅಲ್ಲದೆ ಈ ಪಂದ್ಯದಲ್ಲೂ ಪಂಜಾಬ್ ತಂಡದ ಗೆಲುವನ್ನು ತೆವಾಟಿಯಾ ಕಸಿದುಕೊಂಡಿದ್ದರು. ಇದೀಗ ಗುಜರಾತ್ ಟೈಟನ್ಸ್ ಮೂಲಕ ಮತ್ತೊಮ್ಮೆ ಅಂತಿಮ ಓವರ್​ನಲ್ಲಿ ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿ ಹೀರೋ ಎನಿಸಿಕೊಂಡಿದ್ದಾರೆ.

ಹೀಗಾಗಿಯೇ ವೀರೇಂದ್ರ ಸೆಹ್ವಾಗ್, ರಾಹುಲ್ ತೆವಾಟಿಯಾರನ್ನು ಲಾರ್ಡ್​ ಎಂದು ಬಣ್ಣಿಸುವ ಮೂಲಕ ಪಂಜಾಬ್ ಕಿಂಗ್ಸ್ ಅವರ ಪ್ರತಿಮೆಯನ್ನು ಡಗೌಟ್​ನಲ್ಲಿ ಸ್ಥಾಪಿಸುವುದು ಉತ್ತಮ ಎಂದಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್​ಗೆ ಅಂತಿಮ ಓವರ್​ನಲ್ಲಿ ಸೋಲುಣಿಸುವ ತೆವಾಟಿಯಾರನ್ನು ಪೂಜೆ ಮಾಡಿ ಒಲಿಸಿಕೊಳ್ಳುವಂತೆ ಪರೋಕ್ಷವಾಗಿ ಸೆಹ್ವಾಗ್ ಕಿಚಾಯಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್