AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virender Sehwag: ಪಂಜಾಬ್ ಕಿಂಗ್ಸ್ ತಮ್ಮ ಡಗೌಟ್‌ನಲ್ಲಿ ರಾಹುಲ್ ತೆವಾಟಿಯಾ ಪ್ರತಿಮೆ ಮಾಡಿಟ್ಟುಕೊಳ್ಳಲಿ..!

IPL 2022 : ಒಂದೇ ಓವರ್​ನಲ್ಲಿ 5 ಸಿಕ್ಸ್​ ಸಿಡಿಸುವ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಅಲ್ಲದೆ ಈ ಪಂದ್ಯದಲ್ಲೂ ಪಂಜಾಬ್ ತಂಡದ ಗೆಲುವನ್ನು ತೆವಾಟಿಯಾ ಕಸಿದುಕೊಂಡಿದ್ದರು.

Virender Sehwag: ಪಂಜಾಬ್ ಕಿಂಗ್ಸ್ ತಮ್ಮ ಡಗೌಟ್‌ನಲ್ಲಿ ರಾಹುಲ್ ತೆವಾಟಿಯಾ ಪ್ರತಿಮೆ ಮಾಡಿಟ್ಟುಕೊಳ್ಳಲಿ..!
Rahul Tewatia-Virender Sehwag
TV9 Web
| Edited By: |

Updated on: Apr 09, 2022 | 2:23 PM

Share

ಐಪಿಎಲ್​ ಸೀಸನ್​ 15 ನಲ್ಲಿ (IPL 2022) ಗುಜರಾತ್ ಟೈಟನ್ಸ್ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಈ ಗೆಲುವಿನ ನಾಗಾಲೋಟದಲ್ಲಿ ಪಂಜಾಬ್ ಕಿಂಗ್ಸ್ 2ನೇ ಸೋಲುಂಡಿದೆ. ಶುಕ್ರವಾರ ನಡೆದ ಐಪಿಎಲ್​ನ 16ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ (PBKS vs GT) ಮುಖಾಮುಖಿಯಾಗಿತ್ತು. ರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಪಂಜಾಬ್ ಮೊದಲು ಬ್ಯಾಟ್ ಮಾಡಿ 189 ರನ್​ ಕಲೆಹಾಕಿತು. 190 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಗುಜರಾತ್ ಟೈಟನ್ಸ್ ತಂಡವು ಕೊನೆಯ ಓವರ್​ ವೇಳೆಗೆ ಸೋಲಿನ ಸುಳಿಗೆ ಸಿಲುಕಿತ್ತು. ಅದರಲ್ಲೂ ಕೊನೆಯ ಎರಡು ಎಸೆತಗಳಲ್ಲಿ 12 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಓಡಿಯನ್ ಸ್ಮಿತ್ ಎಸೆತದಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸುವ ಮೂಲಕ ರಾಹುಲ್ ತೆವಾಟಿಯಾ ಗೆಲುವಿನ ರೂವಾರಿ ಎನಿಸಿಕೊಂಡರು. ಈ ಮೂಲಕ ಪಂಜಾಬ್ ಕಿಂಗ್ಸ್ ವಿರುದ್ದ ಗುಜರಾತ್ ಟೈಟನ್ಸ್ ತಂಡವು ರೋಚಕ ಜಯ ಸಾಧಿಸಿತು.

ಈ ಗೆಲುವಿನ ಬಳಿಕ ಟ್ವೀಟ್ ಮಾಡಿರುವ ಟೀಮ್ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, ಲಾರ್ಡ್ ತೆವಾಟಿಯಾ ಎಂದು ಹಾಡಿಹೊಗಳಿದ್ದಾರೆ. ಅಷ್ಟೇ ಅಲ್ಲದೆ ಪಂಜಾಬ್ ಕಿಂಗ್ಸ್ ತಂಡವು ತಮ್ಮ ಡಗೌಟ್​ನಲ್ಲಿ ರಾಹುಲ್ ತೆವಾಟಿಯಾ ಅವರ ಪ್ರತಿಮೆಯನ್ನು ಮಾಡಿಟ್ಟುಕೊಳ್ಳುವಂತೆ ಕಾಲೆಳೆದಿದ್ದಾರೆ. ಏಕೆಂದರೆ ರಾಹುಲ್ ತೆವಾಟಿಯಾ ಪಂಜಾಬ್ ಕಿಂಗ್ಸ್ ವಿರುದ್ದ ಭರ್ಜರಿ ಪ್ರದರ್ಶನದ ಮೂಲಕ ಗೆಲುವನ್ನು ಕಸಿದುಕೊಳ್ಳುತ್ತಿರುವುದು ಇದು 2ನೇ ಬಾರಿ.

2020 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ರಾಹುಲ್ ತೆವಾಟಿಯಾ ಪಂಜಾಬ್ ಕಿಂಗ್ಸ್​ ವಿರುದ್ದದ ರೋಚಕ ಪಂದ್ಯದಲ್ಲಿ ಶೆಲ್ಡನ್ ಕಾಟ್ರೆಲ್ ಓವರ್​ನಲ್ಲಿ 5 ಸಿಕ್ಸ್​ ಸಿಡಿಸುವ ಮೂಲಕ ಇಡೀ ಪಂದ್ಯದ ಚಿತ್ರಣ ಬದಲಿಸಿದ್ದರು. ಅಲ್ಲದೆ ಈ ಪಂದ್ಯದಲ್ಲೂ ಪಂಜಾಬ್ ತಂಡದ ಗೆಲುವನ್ನು ತೆವಾಟಿಯಾ ಕಸಿದುಕೊಂಡಿದ್ದರು. ಇದೀಗ ಗುಜರಾತ್ ಟೈಟನ್ಸ್ ಮೂಲಕ ಮತ್ತೊಮ್ಮೆ ಅಂತಿಮ ಓವರ್​ನಲ್ಲಿ ಪಂಜಾಬ್ ಕಿಂಗ್ಸ್​ಗೆ ಸೋಲುಣಿಸಿ ಹೀರೋ ಎನಿಸಿಕೊಂಡಿದ್ದಾರೆ.

ಹೀಗಾಗಿಯೇ ವೀರೇಂದ್ರ ಸೆಹ್ವಾಗ್, ರಾಹುಲ್ ತೆವಾಟಿಯಾರನ್ನು ಲಾರ್ಡ್​ ಎಂದು ಬಣ್ಣಿಸುವ ಮೂಲಕ ಪಂಜಾಬ್ ಕಿಂಗ್ಸ್ ಅವರ ಪ್ರತಿಮೆಯನ್ನು ಡಗೌಟ್​ನಲ್ಲಿ ಸ್ಥಾಪಿಸುವುದು ಉತ್ತಮ ಎಂದಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್​ಗೆ ಅಂತಿಮ ಓವರ್​ನಲ್ಲಿ ಸೋಲುಣಿಸುವ ತೆವಾಟಿಯಾರನ್ನು ಪೂಜೆ ಮಾಡಿ ಒಲಿಸಿಕೊಳ್ಳುವಂತೆ ಪರೋಕ್ಷವಾಗಿ ಸೆಹ್ವಾಗ್ ಕಿಚಾಯಿಸಿದ್ದಾರೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?