AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಸೋಲಿನ ಬೆನ್ನಲ್ಲೇ ಎಸ್​ಆರ್​ಹೆಚ್​ಗೆ ಬಿಗ್ ಶಾಕ್: ಪ್ರಮುಖ ಆಟಗಾರನಿಗೆ ಗಾಯ

IPL 2022: ಸನ್ ರೈಸರ್ಸ್ ಹೈದರಾಬಾದ್ (SRH): ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್

IPL 2022: ಸೋಲಿನ ಬೆನ್ನಲ್ಲೇ ಎಸ್​ಆರ್​ಹೆಚ್​ಗೆ ಬಿಗ್ ಶಾಕ್: ಪ್ರಮುಖ ಆಟಗಾರನಿಗೆ ಗಾಯ
SRH
TV9 Web
| Edited By: |

Updated on: May 02, 2022 | 2:45 PM

Share

IPL 2022: ಐಪಿಎಲ್ ಸೀಸನ್ 15 ನಲ್ಲಿ ಆರಂಭದ ಎರಡು ಪಂದ್ಯಗಳಲ್ಲಿ ಸೋತು ಆ ಬಳಿಕ ಭರ್ಜರಿ ಕಂಬ್ಯಾಕ್ ಮಾಡಿದ್ದ ಸನ್​ರೈಸರ್ಸ್​ ಹೈದರಾಬಾದ್​ಗೆ (SRH) ಮುಂದಿನ ಪಂದ್ಯಗಳು ನಿರ್ಣಾಯಕ. ಏಕೆಂದರೆ ಕಳೆದ ಪಂದ್ಯದಲ್ಲಿ ಸಿಎಸ್​​ಕೆ (CSK) ವಿರುದ್ದ ಸೋತಿರುವ ಎಸ್​ಆರ್​ಹೆಚ್​ಗೆ ಇನ್ನು 5 ಪಂದ್ಯಗಳು ಮಾತ್ರ ಉಳಿದಿದೆ. ಹೀಗಾಗಿ ಇದರಲ್ಲಿ ನಾಲ್ಕರಲ್ಲಿ ಗೆದ್ದರೆ ಮಾತ್ರ ಪ್ಲೇಆಫ್ ಅನ್ನು ಖಚಿತಪಡಿಸಿಕೊಳ್ಳಬಹುದು. ಆದರೆ ನಿರ್ಣಾಯಕ ಹಂತದಲ್ಲಿ ತಂಡದ ಪ್ರಮುಖ ಆಟಗಾರ ಮತ್ತೆ ಗಾಯಗೊಂಡಿರುವುದು ಇದೀಗ ಎಸ್​ಆರ್​ಹೆಚ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಹೌದು, ಎಸ್​ಆರ್​ಹೆಚ್​ ತಂಡದ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್​ ಕೈಗೆ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ವಾಷಿಂಗ್ಟನ್ ಆಡುವುದು ಅನುಮಾನ.

ವಾಷಿಂಗ್ಟನ್ ಸುಂದರ್ ಅವರು ಬೌಲಿಂಗ್ ಮಾಡುವ ಕೈಗೆ ಮತ್ತೆ ಗಾಯ ಮಾಡಿಕೊಂಡಿದ್ದಾರೆ ಎಂದು ತಂಡದ ಮುಖ್ಯ ಕೋಚ್ ಟಾಮ್ ಮೂಡಿ ಬಹಿರಂಗಪಡಿಸಿದ್ದಾರೆ. ಹೀಗಾಗಿ ಸಿಎಸ್ ಕೆ ವಿರುದ್ಧ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಕೆಲ ದಿನಗಳ ಹಿಂದೆಯಷ್ಟೇ ಗಾಯಗೊಂಡಿದ್ದ ವಾಷಿಂಗ್ಟನ್ 3 ಪಂದ್ಯಗಳಿಂದ ಹೊರಗುಳಿದಿದ್ದರು. ಇದಾದ ನಂತರ ಗುಜರಾತ್ ಟೈಟಾನ್ಸ್ ವಿರುದ್ಧ ಕಂಬ್ಯಾಕ್ ಮಾಡಿದ್ದರು. ಇದೀಗ ಮತ್ತೆ ಫೀಲ್ಡಿಂಗ್ ಮಾಡುವಾಗ ಗಾಯಗೊಂಡಿರುವ ಸುಂದರ್ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ.

ವಾಷಿಂಗ್ಟನ್ ಸುಂದರ್ ಅವರ ತೋಳು ಭಾಗಕ್ಕೆ ಗಾಯವಾಗಿರುವುದು ದುರದೃಷ್ಟಕರ ಎಂದು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಟಾಮ್ ಮೂಡಿ ಹೇಳಿದರು. ಮೊನ್ನೆಯಷ್ಟೇ ಗಾಯ ಸಂಪೂರ್ಣವಾಗಿ ವಾಸಿಯಾಗಿದ್ದರೂ ಮತ್ತೆ ಅದೇ ಕೈಗೆ ಗಾಯವಾಗಿದೆ ಎಂದರು. ಗಾಯದಿಂದಾಗಿ ವಾಷಿಂಗ್ಟನ್ ಸುಂದರ್ ಬೌಲಿಂಗ್ ಮಾಡುವ ಸ್ಥಿತಿಯಲ್ಲಿರಲಿಲ್ಲ. ಇದು ಸಿಎಸ್​ಕೆ ವಿರುದ್ದದ ನಮ್ಮ ಬೌಲಿಂಗ್ ಮೇಲೆ ಪರಿಣಾಮ ಬೀರಿತು ಎಂದು ತಿಳಿಸಿದರು.

ಅಷ್ಟೇ ಅಲ್ಲದೆ, ಸಿಎಸ್ ಕೆ ವಿರುದ್ಧದ ಪಂದ್ಯದ ಮಧ್ಯೆ ಟಿ ನಟರಾಜನ್ ಕೂಡ ಗಾಯದ ಸಮಸ್ಯೆಯಿಂದ ಮೈದಾನದಿಂದ ಹೊರಗುಳಿದಿದ್ದರು. ಇಂತಹ ಪರಿಸ್ಥಿತಿಯಲ್ಲಿ ನಾಯಕ ಕೇನ್ ವಿಲಿಯಮ್ಸನ್ ಅವರು ಏಡನ್ ಮಾರ್ಕ್ರಾಮ್ ಮತ್ತು ಶಶಾಂಕ್ ಸಿಂಗ್ ಅವರಿಂದ ಬೌಲಿಂಗ್ ಮಾಡಿಸಬೇಕಾಯಿತು. ಆದರೆ ಇಬ್ಬರೂ ನಾಲ್ಕು ಓವರ್‌ಗಳಲ್ಲಿ ಒಟ್ಟು 46 ರನ್‌ಗಳನ್ನು ಬಿಟ್ಟುಕೊಟ್ಟರು. ಅತ್ತ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 202 ರನ್​ಗಳಿಸುವ ಮೂಲಕ ಎಸ್​ಆರ್​ಹೆಚ್​ಗೆ ಬೃಹತ್ ಟಾರ್ಗೆಟ್ ನೀಡಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಎಸ್​ಆರ್​ಹೆಚ್ ತಂಡವು 189 ರನ್​ಗಳಿಸುವ ಮೂಲಕ 13 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಸನ್ ರೈಸರ್ಸ್ ಹೈದರಾಬಾದ್ (SRH): ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ಪ್ರಿಯಮ್ ಗರ್ಗ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಜೆ ಸುಚಿತ್, ಶ್ರೇಯಸ್ ಗೋಪಾಲ್, ಕಾರ್ತಿಕ್ ತ್ಯಾಗಿ, ಟಿ ನಟರಾಜನ್, ಉಮ್ರಾನ್ ಮಲಿಕ್, ಸೌರಭ್ ದುಬೆ, ಸೀನ್ ಅಬಾಟ್, ಆರ್ ಸಮರ್ಥ್, ಜೆ ಸುಚಿತ್, ರೊಮಾರಿಯೋ ಶೆಫರ್ಡ್, ವಿಷ್ಣು ವಿನೋದ್, ಗ್ಲೆನ್ ಫಿಲಿಪ್ಸ್, ಫಜಲ್ಹಕ್ ಫಾರೂಕಿ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?