AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡ ಕಟ್ಟಿದೆ…ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?

IPL 2022 RCB Team: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್.

IPL 2022: RCB ತಂಡ ಕಟ್ಟಿದೆ...ಆದರೆ ಆರಂಭಿಕ ಯಾರು ಎಂಬುದೇ ಈಗ ಪ್ರಶ್ನೆ..?
RCB
TV9 Web
| Edited By: |

Updated on: Feb 14, 2022 | 3:15 PM

Share

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜಿನ ಮೂಲಕ ಆರ್​ಸಿಬಿ ತಂಡವು ಒಟ್ಟು 19 ಆಟಗಾರರನ್ನು ಖರೀದಿಸಿದೆ. ಈ ಮೂಲಕ 22 ಸದಸ್ಯರ ಬಳಗದ ಹೊಸ ತಂಡವನ್ನು ರೂಪಿಸಿದೆ. ಈ ಪಟ್ಟಿಯಲ್ಲಿ ಅತ್ಯುತ್ತಮ ಆಯ್ಕೆಯಾಗಿ ಫಾಫ್ ಡುಪ್ಲೆಸಿಸ್​ ಅಗ್ರಸ್ಥಾನದಲ್ಲಿದ್ದಾರೆ. ಏಕೆಂದರೆ ಕಳೆದೆರಡು ಸೀಸನ್​ಗಳಲ್ಲಿ ಸಿಎಸ್​ಕೆ ಪರ ಅತ್ಯುತ್ತಮ ಆರಂಭಿಕನಾಗಿ ಗುರುತಿಸಿಕೊಂಡಿದ್ದ ಡುಪ್ಲೆಸಿಸ್​ ಅವರನ್ನು ಆರ್​ಸಿಬಿ 7 ಕೋಟಿ ನೀಡಿ ಖರೀದಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಆರ್​ಸಿಬಿ ಪರ ಡುಪ್ಲೆಸಿಸ್ ಆರಂಭಿಕನಾಗಿ ಆಡುವುದು ಬಹುತೇಕ ಖಚಿತ. ಆದರೆ ಇಲ್ಲಿ ಈಗ ಹುಟ್ಟಿಕೊಂಡಿರುವ ಪ್ರಶ್ನೆಯೆಂದರೆ ಮತ್ತೋರ್ವ ಆರಂಭಿಕ ಆಟಗಾರ ಯಾರು ಎಂಬುದು? ಏಕೆಂದರೆ ಅತ್ಯುತ್ತಮ ಎನಿಸಿಕೊಳ್ಳುವಂತಹ ಯಾವುದೇ ಭಾರತೀಯ ಆರಂಭಿಕ ಆಟಗಾರ ಆರ್​​ಸಿಬಿ ತಂಡದಲ್ಲಿಲ್ಲ.

ಮೆಗಾ ಹರಾಜಿನ ಪಟ್ಟಿಯಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿದ್ದ ಶಿಖರ್ ಧವನ್, ದೇವದತ್ ಪಡಿಕ್ಕಲ್, ಇಶಾನ್ ಕಿಶನ್​ನಂತನಹ ಆಟಗಾರರನ್ನು ಖರೀದಿಸುವಲ್ಲಿ ಆರ್​ಸಿಬಿ ವಿಫಲವಾಗಿದೆ. ಇದಾಗ್ಯೂ ಆರ್​ಸಿಬಿ ಆರಂಭಿಕ ಆಟಗಾರನಾಗಿ ನ್ಯೂಜಿಲೆಂಡ್​ನ ಫಿನ್ ಅಲೆನ್ ಅವರನ್ನು ಖರೀದಿಸಿದೆ. ಆದರೆ ಐಪಿಎಲ್ ನಿಯಮದ ಪ್ರಕಾರ ಒಂದು ತಂಡದಲ್ಲಿ ನಾಲ್ವರು ವಿದೇಶಿ ಆಟಗಾರರು ಆಡಬಹುದು.

ಅದರಂತೆ ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಇರಲಿದ್ದಾರೆ. ಇನ್ನು ಆರಂಭಿಕನಾಗಿ ಫಾಫ್ ಡುಪ್ಲೆಸಿಸ್ ಆಡಲಿದ್ದಾರೆ. ಜೊತೆಗೆ ವೇಗಿಯಾಗಿ ಜೋಶ್ ಹ್ಯಾಝಲ್​ವುಡ್ ಅವರನ್ನೂ ಕೂಡ ಕಣಕ್ಕಿಳಿಸಬಹುದು. ಏಕೆಂದರೆ ಹ್ಯಾಝಲ್​ವುಡ್​ ಪ್ರಸ್ತುತ ಅತ್ಯುತ್ತಮ ವೇಗಿಗಳಲ್ಲಿ ಒಬ್ಬರು. ಹೀಗಾಗಿ ಪ್ಲೇಯಿಂಗ್​ 11 ನಲ್ಲಿ ಸ್ಥಾನ ಪಡೆಯುವಂತಹ ಆಟಗಾರ. ಇನ್ನು ಆರ್​ಸಿಬಿ 10.75 ಕೋಟಿ ನೀಡಿ ಖರೀದಿಸಿದ ವನಿಂದು ಹಸರಂಗ ಅವರನ್ನು ಸ್ಪಿನ್ ಆಲ್​​ರೌಂಡರ್ ಆಗಿ ಆಡಿಸಲಿದೆ. ಅಂದರೆ ಈ ನಾಲ್ವರನ್ನು ಆಡಿಸಿದ್ರೆ ಆರ್​ಸಿಬಿ ಫಿನ್ ಅಲೆನ್ ಅವರನ್ನು ಕೈ ಬಿಡಬೇಕಾಗುತ್ತದೆ.

ಇಲ್ಲಿ ಆರ್​ಸಿಬಿ ಆರಂಭಿಕರಾಗಿ ಹೊಸ ಆಟಗಾರರನ್ನು ಕಣಕ್ಕಿಳಿಸಲು ಬಯಸಿದರೂ, ಅನುಭವದ ಕೊರತೆ ಎದ್ದು ಕಾಣುತ್ತದೆ. ಏಕೆಂದರೆ ತಂಡದಲ್ಲಿರುವ ಅನೂಜ್ ರಾವತ್, ಲವ್​ನೀತ್ ಸಿಸೋಡಿಯಾರಂತಹ ಆಟಗಾರರಿದ್ದರೂ, ಇವರು ಅಂತಾರಾಷ್ಟ್ರೀಯ ಮಟ್ಟದ ಬೌಲರುಗಳನ್ನು ಎದುರಿಸಿದ ಅನುಭವ ಹೊಂದಿಲ್ಲ. ಹೀಗಾಗಿ ಈ ಯುವ ಆಟಗಾರರನ್ನು ಬಳಸಿ ಪ್ರಯೋಗ ಮಾಡಬಹುದೇ ಹೊರತು, ಅದು ಸಕ್ಸಸ್ ಆಗಲಿದೆ ಎಂದೇಳಲಾಗುವುದಿಲ್ಲ.

ಇನ್ನು ತಂಡದಲ್ಲಿರುವ ಮಹಿಪಾಲ್ ಲೊಮ್ರೋರ್ ಮಧ್ಯಮ ಕ್ರಮಾಂಕಕ್ಕೆ ಸೂಕ್ತ ಆಟಗಾರ. ಸುಯಶ್ ಪ್ರಭುದೇಸಾಯಿ ಈ ಬಾರಿ ಕೂಡ ತಂಡದಲ್ಲಿದ್ದರೂ, ಕಳೆದ ಸೀಸನ್​ನಲ್ಲಿ ಆರ್​ಸಿಬಿ ಒಂದೇ ಒಂದು ಅವಕಾಶ ನೀಡಿರಲಿಲ್ಲ. ಅಂದರೆ ಇಲ್ಲಿ ಆರ್​ಸಿಬಿ ಭಾರತೀಯ ಆಟಗಾರರನ್ನು ಕಡಿಮೆ ಮೊತ್ತಕ್ಕೆ ಖರೀದಿಸಿ ತಂಡವನ್ನು ಕಟ್ಟಿರುವುದು ಸ್ಪಷ್ಟ. ಇದಾಗ್ಯೂ ಆರಂಭಿಕ ಸ್ಥಾನಕ್ಕೆ ಭಾರತೀಯ ಅನುಭವಿ ಆಟಗಾರರನ್ನು ಆಯ್ಕೆ ಮಾಡಿಕೊಂಡಿಲ್ಲ. ಅದರಲ್ಲೂ ಕಳೆದ ಎರಡು ಸೀಸನ್​ನಲ್ಲಿ ಆರ್​ಸಿಬಿ ಪರ ಆರಂಭಿಕರಾಗಿ ಆಡಿದ್ದ ದೇವದತ್ ಪಡಿಕ್ಕಲ್ ಅವರನ್ನೂ ಕೂಡ ಖರೀದಿಸಿಲ್ಲ.

ಒಂದು ವೇಳೆ ಆರ್​ಸಿಬಿ ಫಿನ್ ಅಲೆನ್ ಹಾಗೂ ಫಾಫ್ ಡುಪ್ಲೆಸಿಸ್ ಅವರನ್ನು ಆಡಿಸಿದ್ರೆ, ವನಿಂದು ಹಸರಂಗ ಅಥವಾ ಜೋಶ್ ಹ್ಯಾಝಲ್​ವುಡ್​, ಇಬ್ಬರಲ್ಲಿ ಒಬ್ಬರನ್ನು ಕೈ ಬಿಡಬೇಕಾಗುತ್ತದೆ. ಇನ್ನು ಆರ್​ಸಿಬಿ ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ಜೋಶ್ ಹ್ಯಾಝಲ್​ವುಡ್ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆಡಿಸುವುದಾದರೆ, ವಿರಾಟ್ ಕೊಹ್ಲಿ ಆರಂಭಿಕನಾಗಿ ಆಡಬೇಕಾದ ಅನಿವಾರ್ಯತೆ ಬರಬಹುದು. ಒಟ್ಟಿನಲ್ಲಿ ಆರ್​ಸಿಬಿ ತಂಡವೊಂದನ್ನು ಕಟ್ಟಿದೆ. ಆದರೆ ತಂಡದ ಕಟ್ಟಿದ ಬಳಿಕ ನಮ್ಮ ತಂಡದ ಆರಂಭಿಕ ಯಾರು ಎಂಬ ದೊಡ್ಡ ಪ್ರಯ್ನೆಯೊಂದು ಇದೀಗ ಆರ್​ಸಿಬಿ ಫ್ರಾಂಚೈಸಿ ಮುಂದಿದೆ.

ಆರ್​ಸಿಬಿ ಹೊಸ ತಂಡ ಹೀಗಿದೆ: ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೊಹಮ್ಮದ್ ಸಿರಾಜ್, ಫಾಫ್ ಡುಪ್ಲೆಸಿಸ್, ವನಿಂದು ಹಸರಂಗ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ ವುಡ್, ಶಹಬಾಜ್ ಅಹ್ಮದ್, ಅನೂಜ್ ರಾವತ್, ಆಕಾಶ್ ದೀಪ್, ಮಹಿಪಾಲ್ ಲೊಮ್ರೋರ್, ಫಿನ್ ಆಲೆನ್, ಶೆರ್ಫೇನ್ ರುದರ್‌ಫೋರ್ಡ್, ಜೇಸನ್ ಬೆಹ್ರೆನ್‌ಡಾರ್ಫ್, ಸುಯಶ್‌ ಪ್ರಭುದೇಸಾಯ್, ಚಮ ಮಿಲಿಂದ್, ಅನೀಶ್ವರ್‌ ಗೌತಮ್, ಕರಣ್‌ ಶರ್ಮಾ, ಸಿದ್ಧಾರ್ಥ್ ಕೌಲ್, ಡೇವಿಡ್ ವಿಲ್ಲಿ, ಲವ್ನೀತ್ ಸಿಸೋಡಿಯಾ.

ಇದನ್ನೂ ಓದಿ: IPL 2022: RCB ತಂಡದಲ್ಲಿ ಇಬ್ಬರು ಕನ್ನಡಿಗರು..! 

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ