AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಡೆನ್ ಮಾರ್ಕ್ರಾಮ್​ಗೆ ಸನ್​ರೈಸರ್ಸ್​ ಹೈದರಾಬಾದ್ ನಾಯಕತ್ವ; ಕನ್ನಡಿಗನಿಗೆ ಕೈತಪ್ಪಿದ ಅವಕಾಶ

IPL 2023 SRH Captain: ಸನ್​ರೈಸರ್ಸ್​ ಹೈದರಾಬಾದ್ ಫ್ರಾಂಚೈಸಿಯೂ 16ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ತನ್ನ ತಂಡಕ್ಕೆ ನೂತನ ನಾಯಕನನ್ನಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಐಡೆನ್ ಮಾರ್ಕ್ರಾಮ್ ಅವರನ್ನು ಆಯ್ಕೆ ಮಾಡಿದೆ.

IPL 2023: ಐಡೆನ್ ಮಾರ್ಕ್ರಾಮ್​ಗೆ ಸನ್​ರೈಸರ್ಸ್​ ಹೈದರಾಬಾದ್ ನಾಯಕತ್ವ; ಕನ್ನಡಿಗನಿಗೆ ಕೈತಪ್ಪಿದ ಅವಕಾಶ
ಐಡೆನ್ ಮಾರ್ಕ್ರಾಮ್- ಸನ್​ರೈಸರ್ಸ್​ ಹೈದರಾಬಾದ್Image Credit source: insidesport
ಪೃಥ್ವಿಶಂಕರ
|

Updated on:Feb 23, 2023 | 11:58 AM

Share

ಐಪಿಎಲ್​ನಲ್ಲಿ (IPL) ಒಂದು ಬಾರಿ ಚಾಂಪಿಯನ್ ಪಟ್ಟಕ್ಕೇರಿರುವ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad) ಫ್ರಾಂಚೈಸಿಯೂ 16ನೇ ಆವೃತ್ತಿಯ ಐಪಿಎಲ್ (IPL 2023) ಆರಂಭಕ್ಕೂ ಮುನ್ನ ತನ್ನ ತಂಡಕ್ಕೆ ನೂತನ ನಾಯಕನನ್ನಾಗಿ ದಕ್ಷಿಣ ಆಫ್ರಿಕಾದ ಸ್ಟಾರ್ ಬ್ಯಾಟರ್ ಐಡೆನ್ ಮಾರ್ಕ್ರಾಮ್ (Aiden Markaram) ಅವರನ್ನು ಆಯ್ಕೆ ಮಾಡಿದೆ. ಈ ಹಿಂದೆ ಎಸ್​ಆರ್​ಹೆಚ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನ್ಯೂಜಿಲೆಂಡ್​ ತಂಡದ ನಾಯಕ ಕೇನ್ ವಿಲಿಯಮ್ಸನ್​ ಅವರನ್ನು ಫ್ರಾಂಚೈಸಿಯೂ ಮಿನಿ ಹರಾಜಿಗೂ ಮುನ್ನವೇ ತಂಡದಿಂದ ಬಿಡುಗಡೆ ಮಾಡಿತ್ತು. ಹೀಗಾಗಿ ಸನ್​ರೈಸರ್ಸ್​ ತಂಡ ನೂತನ ನಾಯಕನ ಹುಡುಕಾಟದಲ್ಲಿತ್ತು. ಮಿನಿ ಹರಾಜು ಮುಗಿದ ಬಳಿಕ ಸನ್‌ರೈಸರ್ಸ್ ಹೈದರಾಬಾದ್ ನಾಯಕತ್ವದ ರೇಸ್‌ನಲ್ಲಿ ದಕ್ಷಿಣ ಆಫ್ರಿಕಾದ ಆಲ್‌ರೌಂಡರ್ ಐಡನ್ ಮಾರ್ಕ್ರಾಮ್ ಹೆಸರಿತ್ತು. ಅಲ್ಲದೆ ಇತ್ತೀಚೆಗೆ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾದ ಟಿ20 ಲೀಗ್‌ನ ಮೊದಲ ಸೀಸನ್​ನಲ್ಲಿಯೇ ಸನ್‌ರೈಸರ್ಸ್ ಈಸ್ಟರ್ನ್ ತಂಡವನ್ನು ಮಾರ್ಕ್ರಾಮ್ ಚಾಂಪಿಯನ್ ಮಾಡಿದ್ದರು.

ಇದಲ್ಲದೆ ಮಾರ್ಕ್ರಾಮ್ ನಾಯಕತ್ವದಲ್ಲಿ 2014ರಲ್ಲಿ ದಕ್ಷಿಣ ಆಫ್ರಿಕಾ ಅಂಡರ್-19 ತಂಡ ವಿಶ್ವಕಪ್ ಗೆದ್ದಿತ್ತು. ಈ ಮೂಲಕ ದಕ್ಷಿಣ ಆಫ್ರಿಕಾ ಪರ ವಿಶ್ವಕಪ್ ಗೆದ್ದ ಏಕೈಕ ನಾಯಕ ಎಂಬ ಹೆಗ್ಗಳಿಕೆಗೂ ಮಾರ್ಕ್ರಾಮ್ ಪಾತ್ರರಾಗಿದ್ದಾರೆ. ಹೀಗಾಗಿ ಸನ್​ರೈಸರ್ಸ್​ ಫ್ರಾಂಚೈಸ್ ಅವರನ್ನು ತನ್ನ ತಂಡಕ್ಕೆ ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದೆ. ಹಾಗೆಯೇ ಸನ್​ರೈಸರ್ಸ್​ ತಂಡದ ನಾಯಕತ್ವವಹಿಸಿಕೊಳ್ಳುವುದರೊಂದಿಗೆ ಐಪಿಎಲ್ ತಂಡವನ್ನು ಮುನ್ನಡೆಸುವ ಐದನೇ ದಕ್ಷಿಣ ಆಫ್ರಿಕಾದ ಆಟಗಾರ ಎಂಬ ಹೆಗ್ಗಳಿಕೆಗೂ ಮಾರ್ಕ್ರಾಮ್ ಪಾತ್ರರಾಗಿದ್ದಾರೆ.

IPL 2023: ಸಿಎಸ್​ಕೆಗೆ ಆನೆ ಬಲ; ಐಪಿಎಲ್ ಅಖಾಡಕ್ಕೆ ಎಂಟ್ರಿಕೊಟ್ಟ 14 ಕೋಟಿ ಬೆಲೆಯ ಆಲ್​ರೌಂಡರ್!

ಐಪಿಎಲ್​ನಲ್ಲಿ ತಂಡವನ್ನು ಮುನ್ನಡೆಸಿದ ದಕ್ಷಿಣ ಆಫ್ರಿಕಾದ ಆಟಗಾರರು

  1. ಜೆಪಿ ಡುಮಿನಿ (ಡೆಲ್ಲಿ ಡೇರ್​ಡೆವಿಲ್ಸ್)
  2. ಫಾಫ್ ಡು ಪ್ಲೆಸಿಸ್ (ಆರ್​ಸಿಬಿ)
  3. ಡೇವಿಡ್ ಮಿಲ್ಲರ್ (ಪಂಜಾಬ್ ಕಿಂಗ್ಸ್)
  4. ಶಾನ್ ಪೊಲಾಕ್ (ಮುಂಬೈ ಇಂಡಿಯನ್ಸ್)
  5. ಐಡೆನ್ ಮಾರ್ಕ್ರಾಮ್ (ಸನ್​ರೈಸರ್ಸ್​ ಹೈದರಾಬಾದ್)*

ಕನ್ನಡಿಗನಿಗೆ ಕೈತಪ್ಪಿದ ಅವಕಾಶ

ವಾಸ್ತವವಾಗಿ ಈ ಹಿಂದೆ ಸನ್​ರೈಸರ್ಸ್​ ಹೈದರಾಬಾದ್ ತಂಡದ ನಾಯಕತ್ವಕ್ಕಾಗಿ ಮಾರ್ಕ್ರಾಮ್ ಸೇರಿದಂತೆ ಮೂವರು ಆಟಗಾರರ ನಡುವೆ ಫೈಪೋಟಿ ಏರ್ಪಟ್ಟಿತ್ತು. ಅವರಲ್ಲಿ ಒಬ್ಬರು ವೇಗಿ ಭುವನೇಶ್ವರ್ ಕುಮಾರ್ ಆಗಿದ್ದರೆ, ಇನ್ನೊಬ್ಬರು ಕನ್ನಡಿಗ ಮಯಾಂಕ್ ಅಗರ್ವಾಲ್. ಮಿನಿ ಹರಾಜಿಗೂ ಮುನ್ನ ಪಂಜಾಬ್ ತಂಡ ಮಯಾಂಕ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದಲ್ಲದೆ, ತಂಡದಿಂದಲೇ ಹೊರ ಹಾಕಿತ್ತು. ಹೀಗಾಗಿ ಮಿನಿ ಹರಾಜಿನಲ್ಲಿ ಮಯಾಂಕ್ ಅವರನ್ನು ರೂ.8.25 ಕೋಟಿಗೆ ಸನ್​​ರೈಸರ್ಸ್​ ಫ್ರಾಂಚೈಸಿ ಖರೀದಿಸಿತ್ತು. ಆಗಿನಿಂದ ಈ ತಂಡಕ್ಕೆ ಮಯಾಂಕ್ ಅವರೇ ನಾಯಕ ಎಂದು ಹೇಳಲಾಗುತ್ತಿತ್ತು. ಆದರೆ ಇದೆಲ್ಲ ಊಹಾಪೋಹಗಳಿಗೆ ಫುಲ್​ಸ್ಟಾಪ್ ಇಟ್ಟಿರುವ ಫ್ರಾಂಚೈಸಿ, ಚಾಂಪಿಯನ್ ನಾಯಕನಿಗೆ ತಂಡದ ನಾಯಕತ್ವ ನೀಡಿದೆ.

ಸನ್​ರೈಸರ್ಸ್​ ಹೈದರಾಬಾದ್ ತಂಡ ಹೀಗಿದೆ

ಅಬ್ದುಲ್ ಸಮದ್, ಐಡೆನ್ ಮಾರ್ಕ್ರಾಮ್ (ನಾಯಕ), ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಉಮ್ರಾನ್ ಮಲಿಕ್, ಹ್ಯಾರಿ ಬ್ರೂಕ್, ನಿತೀಶ್ ಕುಮಾರ್ ರೆಡ್ಡಿ, ಅನ್ಮೋಲ್‌ಪ್ರೀತ್ ಸಿಂಗ್, ಅಕೇಲ್ ಹೊಸೈನ್, ಅಭಿಷೇಕ್ ಶರ್ಮಾ, ಮಾರ್ಕೊ ಯಾನ್ಸೆನ್, ವಾಷಿಂಗ್ಟನ್ ಸುಂದರ್, ಫಜಲ್‌ಹಕ್ ಫಾರೂಕಿ, ಮಯಾಂಕ್ ಅಗರ್ವಾಲ್, ಹೆನ್ರಿಚ್ ಕ್ಲಾಸೆನ್, ಆದಿಲ್ ರಶೀದ್, ಮಯಾಂಕ್ ಮಾರ್ಕಂಡೆ, ವಿವ್ರಾಂತ್ ಶರ್ಮಾ, ಸಮರ್ಥ ವ್ಯಾಸ್, ಸನ್ವಿರ್ ಸಿಂಗ್, ಉಪೇಂದ್ರ ಯಾದವ್, ಮಯಾಂಕ್ ದಾಗರ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:31 am, Thu, 23 February 23

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್