Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs KKR, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ: ರೋಹಿತ್ ಪಡೆಗೆ ಕೆಕೆಆರ್ ಸವಾಲ್

GT vs RR, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ ನಡೆಯಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ರಾಜಸ್ಥಾನ್ ರಾಯಲ್ಸ್ ಸವಾಲನ್ನು ಎದುರಿಸಲಿದೆ.

MI vs KKR, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ: ರೋಹಿತ್ ಪಡೆಗೆ ಕೆಕೆಆರ್ ಸವಾಲ್
MI vs KKR and GT vs RR
Follow us
Vinay Bhat
|

Updated on: Apr 16, 2023 | 7:55 AM

16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿಂದು (IPL 2023) ಎರಡು ಪಂದ್ಯಗಳು ನಡೆಯಲಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ನಿತೀಶ್ ರಾಣ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ (MI vs KKR) ಮುಖಾಮುಖಿ ಆಗಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅವರ ಗುಜರಾತ್ ಟೈಟಾನ್ಸ್ ತಂಡ ಸಂಜು ಸ್ಯಾಮ್ಸನ್ ನಾಯಕನಾಗಿರುವ ರಾಜಸ್ಥಾನ್ ರಾಯಲ್ಸ್ (GT vs RR) ಸವಾಲನ್ನು ಎದುರಿಸಲಿದೆ. ಎರಡೂ ಪಂದ್ಯಗಳು ರೋಚಕತೆ ಸೃಷ್ಟಿಸಿದ್ದು ಐಪಿಎಲ್​ನಲ್ಲಿಂದು ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ.

ಮುಂಬೈ-ಡೆಲ್ಲಿ:

ಆಡಿದ ಮೂರು ಪಂದ್ಯಗಳಲ್ಲಿ ಸತತ ಎರಡು ಸೋಲುಂಡು ಕಳೆದ ಮ್ಯಾಚ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ವಿರುದ್ಧ ಜಯ ಸಾಧಿಸುವ ಮೂಲಕ ಮುಂಬೈ ಗೆಲುವಿನ ಲಯಕ್ಕೆ ಮರಳಿದೆ. ನಾಯಕ ರೋಹಿತ್ ಶರ್ಮಾ ಫಾರ್ಮ್​ಗೆ ಬಂದಿರುವುದು ತಂಡದ ದೊಡ್ಡ ಪ್ಲಸ್ ಪಾಯಿಂಟ್. ಇಶಾನ್ ಕಿಶನ್ ಕೂಡ ಉತ್ತಮ ಆರಂಭ ಒದಗಿಸುತ್ತಿದ್ದಾರೆ. ತಿಲಕ್ ವರ್ಮಾ ಪ್ರತಿ ಪಂದ್ಯದಲ್ಲಿ ತಂಡಕ್ಕೆ ನರವಾಗುತ್ತಿದ್ದಾರೆ. ಆದರೆ, ಸೂರ್ಯಕುಮಾರ್ ಯಾದವ್ ಅವರ ಕಳಪೆ ಪ್ರದರ್ಶನ ಮುಂದುವರೆಯುತ್ತಲೇ ಇದೆ. ಟಿಮ್ ಡೇವಿಡ್, ಕ್ಯಾಮ್ರೋನ್ ಗ್ರೀನ್, ನೇಹಲ್ ವಡೇರಾ ಅಂತಿಮ ಹಂತದಲ್ಲಿ ರನ್ ಗಳಿಸಲು ಶುರುಮಾಡಿದ್ದಾರೆ. ಜೇಸನ್ ಬೆಹ್ರೆಂಡರ್ಫ್, ರಿಲೆ ಮೆರೆದಿತ್, ಪಿಯೂಷ್ ಚಾವ್ಲಾ ಉತ್ತಮ ಬೌಲಿಂಗ್ ಮಾಡುತ್ತಿದ್ದಾರೆ.

ಇತ್ತ ಕೆಕೆಆರ್ ಆಡಿದ ನಾಲ್ಕು ಪಂದ್ಯಗಳ ಪೈಕಿ ತಲಾ ಎರಡರಲ್ಲಿ ಸೋಲು-ಗೆಲುವು ಕಂಡು ಐದನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ಸೋಲು ಕಂಡರೂ ಬ್ಯಾಟಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದೆ. ನಾಯಕ ನಿತೀಶ್ ರಾಣ ಹಾಗೂ ರಿಂಕು ಸಿಂಗ್ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಎನ್. ಜಗದೀಸನ್, ವೆಂಕಟೇಶ್ ಅಯ್ಯರ್ ಕೂಡ ಫಾರ್ಮ್​ನಲ್ಲಿದ್ದಾರೆ. ರೆಹ್ಮಾನುಲ್ಲ ಗುರ್ಬಜ್, ಶಾರ್ದೂಲ್ ಥಾಕೂರ್ ಬ್ಯಾಟಿಂಗ್​ನಲ್ಲಿ ಬಲ ತುಂಬಿದರೆ ತಂಡದ ಮೊತ್ತ ಮತ್ತೊಮ್ಮೆ 200+ ಆಗುವುದು ಖಚಿತ. ಆಂಡ್ರೆ ರಸೆಲ್ ಇಂಜುರಿಗೆ ತುತ್ತಾಗಿದ್ದು ಇವರ ಲಭ್ಯತೆ ಬಗ್ಗೆ ಸಿಕ್ಕಿಲ್ಲ. ಸುನಿಲ್ ನರೈನ್, ವರುಣ್ ಚಕ್ರವರ್ತಿ, ಲೂಕಿ ಫರ್ಗುಸನ್, ಉಮೇಶ್ ಯಾದವ್, ಸುಯೇಶ್ ಶರ್ಮಾ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.

ಇದನ್ನೂ ಓದಿ
Image
IPL 2023 Points Table: ಭರ್ಜರಿ ಜಯದೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರಿದ RCB
Image
IPL 2023: ಸೌರವ್ ಗಂಗೂಲಿಯನ್ನು ಗುರಾಯಿಸಿದ ವಿರಾಟ್ ಕೊಹ್ಲಿ..!
Image
IPL 2023: RCB ದಾಖಲೆ ಮುರಿದ SRH
Image
Virat Kohli: ಹಸ್ತಲಾಘವ ಮಾಡದ ವಿರಾಟ್ ಕೊಹ್ಲಿ-ಗಂಗೂಲಿ: ಮುಂದುವರೆದ ಮುನಿಸು..?

IPL 2023: ಸೊನ್ನೆ ಸುತ್ತಿ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ದಾಖಲೆ ಬರೆದ ದಿನೇಶ್ ಕಾರ್ತಿಕ್

ಗುಜರಾತ್- ರಾಜಸ್ಥಾನ್:

ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಜಿಟಿ ತಂಡದ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಮೂರರಲ್ಲಿ ಜಯ ಸಾಧಿಸಿದೆ. ಉತ್ತಮ ರನ್​ರೇಟ್ ಕೂಡ ಹೊಂದಿದೆ. ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟ್​ನಿಂದ ರನ್ ಬರುತ್ತಿಲ್ಲ. ಆದರೂ ತಂಡದಲ್ಲಿರುವ ಇತರೆ ಬ್ಯಾಟರ್​​ಗಳು ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ವೃದ್ದಿಮಾನ್ ಸಾಹ ಹಾಗೂ ಶುಭ್​ಮನ್ ಗಿಲ್ ಪ್ರತಿ ಪಂದ್ಯದಲ್ಲಿ ಸ್ಫೋಟಕ ಆರಂಭ ಒದಗಿಸುತ್ತಿದ್ದಾರೆ. ಸಾಯಿ ಸುದರ್ಶನ್ ಕೂಡ ನೆರವಾಗುತ್ತಿದ್ದಾರೆ. ಡೇವಿಡ್ ಮಿಲ್ಲರ್ ಹಾಗೂ ರಾಹುಲ್ ತೇವಾಟಿಯ ಫಿನಿಶರ್​ಗಳಾಗಿ ಗುರುತಿಸಿಕೊಂಡಿದ್ದಾರೆ. ಶಮಿ, ಅಲ್ಜರಿ ಜೋಸೆಫ್, ಜೋಶ್ವಾ ಲಿಟಲ್, ರಶೀದ್ ಖಾನ್ ಹಾಗೂ ಮೋಹಿತ್ ಶರ್ಮಾ ಮಾರಕವಾಗಿ ಕಾಣಿಸಿಕೊಂಡಿದ್ದಾರೆ.

ರಾಜಸ್ಥಾನ್ ತಂಡ ಟೇಬಲ್ ಟಾಪ್​ನಲ್ಲಿದೆ. ಆಡಿರುವ ನಾಲ್ಕು ಪಂದ್ಯಗಳ ಪೈಕಿ ಒಂದರಲ್ಲಿ ಮಾತ್ರ ಸೋತಿದೆ. ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್, ಶಿಮ್ರೋನ್ ಹೆಟ್ಮೇರ್ ಪ್ರಮುಖ ಬ್ಯಾಟಿಂಗ್ ಅಸ್ತ್ರ. ಜೇಸನ್ ಹೋಲ್ಡರ್ ಮತ್ತು ಆರ್. ಅಶ್ವಿನ್ ಆಲ್ರೌಂಡ್ ಪ್ರದರ್ಶನ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸುತ್ತಿದೆ. ಯುಜ್ವೇಂದ್ರ ಚಹಲ್ ವಿಕೆಟ್ ಟೇಕಿಂಗ್ ಬೌಲರ್ ಆಗಿ ಗುರುತಿಸಿಕೊಂಡಿದ್ದರೆ, ಸಂದೀಪ್ ಶರ್ಮಾ, ಕುಲ್ದೀಪ್ ಸೇನ್, ಆ್ಯಡಂ ಝಂಪಾ ಸಾಥ್ ನೀಡುತ್ತಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ